Homeರಾಷ್ಟ್ರೀಯಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

- Advertisement -
- Advertisement -

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು.

ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ ತಮ್ಮನ್ನು ಮತದಾರರು ದುರ್ಬಲರು ಎಂದು ತಿಳಿಯುತ್ತಾರೆ… ತಾನು ಸಹ ಅಮೇರಿಕಾ-ಇಸ್ರೇಲ್ ತರಹ ತೋಳ್ಬಲ ಪ್ರದರ್ಶಿಸುವ ವಿಶ್ವಗುರು ಎನ್ನುವ ಪ್ರಚಾರ ಮುಕ್ಕಾಗದಂತೆ ನೋಡಿಕೊಳ್ಳಬೇಕು..
ಇಸ್ರೇಲ್ ಹಾಗೂ ನೇತನ್ಯಾಹು ನಮ್ಮ ರೀತಿ, ಇಲ್ಲಿನ ಹಿಂದುತ್ವ ರಾಜಕಾರಣ ಅಲ್ಲಿನ ಜುಡಾಯಿಸಂ… ಇಬ್ಬರಿಗೂ ಇಸ್ಲಾಂ ಸಮಾನ ಶತೃ ಎನ್ನುವ ಕಥನ ಸೃಷ್ಟಿಸಲಾಗಿದೆ.. ಈಗ ಅದನ್ನು ಉಳಿಸಿಕೊಳ್ಳುವ ಅನಿವಾರ್ಯತೆಯಿದೆ.. ಇದಕ್ಕಾಗಿ ಇಸ್ರೇಲ್ ನ ಭಯೋತ್ಪಾದನೆ ಧೋರಣೆಯನ್ನು ಬೆಂಬಲಿಸುವಂತಹ ಸ್ಥಿತಿಯಲ್ಲಿದ್ದಾರೆ…
ಇಲ್ಲಿ ಮುಸ್ಲಿಂರ ವಿರುದ್ಧ ನೆರೇಶನ್ ಸೃಷ್ಟಿಸಿ ಜಾಗತಿಕವಾಗಿ ಇಸ್ಲಾಂ ದೇಶದ ಪರವಾಗಿ ಮಾತನಾಡಿದರೆ ತಮ್ಮ ಮತಬ್ಯಾಂಕ್ ಮೇಲೆ ಪರಿಣಾಮ ಬೀರುತ್ತದೆ…
ಒಂದುವೇಳೆ ಕಾಂಗ್ರೆಸ್ ಪಕ್ಷ, ಚಿಂತಕರು, ಸಂಘಟನೆಗಳು ಏನಾದರೂ ಇರಾನ್ ಪರ ನಿಲುವು ತಾಳಿದರೆ ಅವರನ್ನು ದೇಶದ್ರೋಹಿಗಳು ಎಂದು ಪ್ರಚಾರ ಮಾಡಲು ಮತ್ತು ಮುಂಬರುವ ಪ.ಬಂಗಾಳ, ಅಸ್ಸಾಂ ಚುನಾವಣೆಗಳಲ್ಲಿ ಇದನ್ನು ಬಳಸಿಕೊಳ್ಳಲು ಅನುಕೂಲವಾಗುತ್ತದೆ…
ಪ್ರಚಾರದ ಸಂದರ್ಭದಲ್ಲಿ ಮೋದಿ ‘ನಾವು ದೇಶದ ಹಿತಕ್ಕಾಗಿ, ಅವರು ಇರಾನ್ ಹಿತಕ್ಕಾಗಿ’ ಎಂದು ಭಾಷಣ ಮಾಡುವುದರಲ್ಲಿ ಅನುಮಾನವೇ ಇರಲಿಲ್ಲ…
ಒಟ್ಟಿನಲ್ಲಿ ಪ.ಬಂಗಾಳ, ಕೇರಳ, ಅಸ್ಸಾಂ ರಾಜ್ಯದ ಚುನಾವಣಾ ಪ್ರಚಾರದ ಹೊತ್ತಿಗೆ ಇರಾನ್ – ಮುಸ್ಲಿಂ ವಿರುದ್ಧ ನೆರೇಶನ್ ನ ರೆಸಿಪಿ ತಯಾರಿಸುವ ಕೆಲಸ ಶುರುವಾಗಿತ್ತು…

ಆದರೆ ಎರಡು ವಾರಗಳಲ್ಲಿ ಎಲ್ಲವೂ ತಲೆಕೆಳಗಾಗಿ ಮೋದಿ ‘ಇಂಡಿಯಾ ದೇಶ ಇರಾನ್ ನ ಸ್ನೇಹಿತರು’ ಎನ್ನುವ ಸ್ಥಿತಿ ನಿರ್ಮಾಣವಾಗಿದೆ…

ಅತ್ತ ಸರ್ಕಾರದ ಮಟ್ಟದಲ್ಲಿ

ಈ ಯುದ್ಧ ಬಹು ದಿನಗಳ ಕಾಲ ನಡೆಯುವುದಿಲ್ಲ. ನಾಲ್ಕೈದು ದಿನಗಳಲ್ಲಿ ಮುಗಿದು ಇರಾಕ್, ಈಜಿಪ್ಟ್ ರೀತಿ ಇರಾನ್ ಶರಣಾಗುತ್ತದೆ, ಆಂತರಿಕವಾಗಿ ಅಲ್ಲಿನ ಜನ ಬೀದಿಗೆ ಬರುತ್ತಾರೆ.. ಹೀಗಾಗಿ ಆರಂಭದಿಂದಲೂ ಅಮೇರಿಕಾ -ಇಸ್ರೇಲ್ ಪರವಾಗಿದ್ದರೆ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ.. ಇದು ಈ ಸರ್ಕಾರದ ಯೋಚನಾ ಲಹರಿ.. ಇದು ಸಂಭವಿಸಿದರೆ ‘ಮೋದಿ ಅಂದರೆ ಸಾಮಾನ್ಯವೇ’ ಎನ್ನುವ ಪ್ರಚಾರ…
ಆದರೆ ಎಲ್ಲಾ ತಲೆಕೆಳಗಾಗಿ ಇಂದು ಯುದ್ಧ ಆರಂಭಿಸಿದ ಟ್ರಂಪ್ ಗೆ ಮುಂದಿನ ದಾರಿ ಏನು? ಯುದ್ಧ ನಿಲ್ಲಿಸುವುದು ಹೇಗೆ? ಇದರಿಂದ ಹೊರಬರಲು ದಾರಿಗಳೇನು? ಒಂದೂ ಗೊತ್ತಾಗದೆ ದಿಗ್ಮೂಢಗೊಂಡಿದ್ದರೆ ಇವರನ್ನು ನಂಬಿ ರಾಜತಾಂತ್ರಿಕ ವ್ಯವಹಾರ ಮಾಡಿ ದೇಶದ ಘನತೆ ಹಾಳುಗೆಡವಿದ್ದು ಮೋದಿಯವರ ಸಾಧನೆ…

ಮೋದಿಯವರು ಯುದ್ಧ ನಡೆಯುವ ಎರಡು ದಿನಗಳ ಮುಂಚೆ ಇಸ್ರೇಲ್ ದೇಶಕ್ಕೆ ಹೋಗಿದ್ದು ಯಾಕೆ? ನೇತನ್ಯಾಹುನ್ನು ಹೊಗಳಿದ್ದು ಯಾಕೆ? ಇದು ಅವರ ವೈಯಕ್ತಿಕ ನಿಲುವೇ? ಅಥವಾ ವಿದೇಶಾಂಗ ಇಲಾಖೆಯದೇ?
ಇವರಿಗೆ ತಮ್ಮ ಭೇಟಿಯ ನಂತರ ಕೆಲವೇ ದಿನಗಳಲ್ಲಿ ಯುದ್ಧ ಪ್ರಾರಂಭವಾಗುತ್ತದೆ ಎಂದು ಗೊತ್ತಿರಲಿಲ್ಲವೇ? ಅದರ ಮುನ್ಸೂಚನೆ ಇರಲಿಲ್ಲವೇ? ಹೌದಾದರೆ ಅಮೆರಿಕ -ಇಸ್ರೇಲ್ ದೇಶಗಳು ಭಾರತದ ಜಿಗ್ರಿ ದೋಸ್ತ್ ಎನ್ನುವ ಮಾತಿಗೆ ಬೆಲೆಯಿಲ್ಲದಂತಾಯಿತೇ?
ಟ್ರಂಪ್, ನೇತಾನ್ಯಾಹು ನನಗೆ ತೀರಾ ಹತ್ತಿರ ಎಂದು ಹೇಳಿಕೊಳ್ಳುವ ಮೋದಿಯವರ ವಿಶ್ವಾಸಾರ್ಹತೆ ಪ್ರಶ್ನಾರ್ಹವಲ್ಲವೇ?
ದೇಶದ ಹಿತಾಸಕ್ತಿಯನ್ನು ಈ ರೀತಿ ವೈಯಕ್ತಿಕ ವೈಭವೀಕರಣಕ್ಕೆ ಬಲಿ ಕೊಟ್ಟಂತಲ್ಲವೇ?
ಅಥವಾ ಗೊತ್ತಿದ್ದರೆ ಕೊಲ್ಲಿ ರಾಷ್ಟ್ರಗಳಲ್ಲಿರುವ ಭಾರತೀಯರನ್ನು ಎಚ್ಚರಿಸುವ, ಅಲ್ಲಿಂದ ಕರೆತರುವ ಪ್ರಯತ್ನ ಯಾಕೆ ಮಾಡಲಿಲ್ಲ?

ಅಮೇರಿಕಾ-ಇಸ್ರೇಲ್ ದಾಳಿಯನ್ನು, ಖಮೇನಿ ಹತ್ಯೆಯನ್ನು ಇದುವರೆಗೂ ಖಂಡಿಸಿಲ್ಲ.. ಯುದ್ಧ ಪ್ರಾರಂಭವಾಗಿ ಒಂದು ವಾರದ ನಂತರ ವಿದೇಶಾಂಗ ಕಾರ್ಯದರ್ಶಿ ಇರಾನಿನಲ್ಲಿನ ಸಾವುಗಳಿಗೆ ಒಂದು ಸಾಲಿನಲ್ಲಿ ಖೇದ ವ್ಯಕ್ತಪಡಿಸುತ್ತಾರೆ.
ಆದರೆ ಈ ಸಾವಿರಾರು ಸಾವುಗಳಿಗೆ ಕಾರಣರಾದವರ ಕುರಿತು ಹೇಳಿಕೆ ನೀಡುವುದಿಲ್ಲ
ಆದರೆ ವಿಶ್ವಸಂಸ್ಥೆಯಲ್ಲಿ ಗಲ್ಫ್ ದೇಶಗಳ ಮೇಲಿನ ಇರಾನ್ ದಾಳಿಯನ್ನು ಖಂಡಿಸುವ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿ ಸಹಿ ಹಾಕುತ್ತಾರೆ..
ಇದು ತಟಸ್ಥ ನೀತಿಯೇ?

ಭಾರತ ಬ್ರಿಕ್ಸ್ ಒಕ್ಕೂಟದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದೆ. ಆದರೆ ಈ ಒಕ್ಕೂಟದ ಸದಸ್ಯ ದೇಶವಾದ ಇರಾನ್ ಪರ ಮಾತನಾಡುತ್ತಿಲ್ಲ..
ಮುಂದಿನ ನವೆಂಬರ್ ತಿಂಗಳಲ್ಲಿ ಬ್ರಿಕ್ಸ್ ಶೃಂಗಸಭೆ ಇದೆ. ಆಗ ಯಾವ ಮುಖ ಹೊತ್ತು ಭಾಗವಹಿಸುತ್ತದೆ?
ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಜೊತೆಗೆ ಮೋದಿಯವರು ಫೋನ್ ಮೂಲಕ ಮಾತನಾಡಿ ‘ಹೊರ್ಮೂಜ್ ಜಲಸಂಧಿ’ ಮೂಲಕ ತೈಲ ನೌಕೆಗಳು ಹಾದು ಹೋಗಲು ಕುರಿತು ಚರ್ಚೆ ನಡೆಸಿದರು ಎಂದು ವರದಿಯಾಗಿದೆ. ನಿಜ ಇದು ಅಗತ್ಯವಿದೆ.
ಆದರೆ ಇರಾನ್ ‘ಭಾರತದಿಂದ ರಾಜತಾಂತ್ರಿಕವಾಗಿ ಮರಳಿ ನಮಗೇನು ಸಿಗುತ್ತಿದೆ’ ಎಂದು ಕೇಳುತ್ತಿದೆ.. ಇದಕ್ಕೆ ಭಾರತದ ಬಳಿ ಉತ್ತರವಿಲ್ಲ..
ಹೊರ್ಮೂಜ್ ಜಲಸಂಧಿ ಮೂಲಕ ಭಾರತದ ಹತ್ತಾರು ತೈಲ ನೌಕೆಗಳು ಹಾದು ಬರಬೇಕು ಎಂದು ಗೊತ್ತಿದ್ದರೂ ಇರಾನ್ ಜೊತೆಗೆ ಮಾತುಕತೆ ನಡೆಸುವ ಗೋಜಿಗೆ ಹೋಗದೆ ಅದರ ವಿರೋಧಿ ಪಾಳ್ಯದಲ್ಲಿ ಗುರುತಿಸಿಕೊಂಡಿದ್ದು ಅನೈತಿಕತೆ ಮತ್ತು ರಾಜತಾಂತ್ರಿಕ ವೈಫಲ್ಯ.

ಜೂನ್ 2025ರಲ್ಲಿಯೇ ಅಮೇರಿಕಾ ಏಕಪಕ್ಷೀಯವಾಗಿ ಇರಾನ್ ಮೇಲೆ ದಾಳಿ ಮಾಡಿದಾಗ ಎಚ್ಚೆತ್ತುಕೊಂಡು ಸುರಕ್ಷಿತ ಪ್ರಮಾಣದ ತೈಲ ಸಂಗ್ರಹದ ಕಡೆ ಯಾಕೆ ಗಮನ ಹರಿಸದೆ ವ್ಯರ್ಥವಾಗಿ ಕಾಲ ಕಳೆದರು? ಇಂದಿನ ಗಂಭೀರ ಪರಿಸ್ಥಿತಿ ತಂದುಕೊಂಡಿದ್ಯಾಕೆ?
ಇದನ್ನು ‘ಉತ್ತಮ ಆಡಳಿತ ‘ ಎಂದು ಕರೆಯಲು ಸಾಧ್ಯವೇ?

ರಷ್ಯಾ ಜೊತೆಗೆ ತೈಲ ಖರೀದಿ ಸಂಬಂಧದ ವ್ಯವಹಾರ ಒಪ್ಪಂದ ಕುರಿತು ಸರ್ಕಾರದ ನಡೆ ಅವಮಾನಕರವಾಗಿದೆ. ಉತ್ತಮ ರಾಜತಾಂತ್ರಿಕತೆಯ ಕೊರತೆ ಮತ್ತು ಆ ಕುರಿತು ಅಜ್ಞಾನದ ಕಾರಣ ಇಡೀ ದೇಶವೇ ಸಂದಿಗ್ಧತೆಯಲ್ಲಿದೆ.
ರಷ್ಯಾ ಜೊತೆಗೆ ತೈಲ ಖರೀದಿ ವ್ಯವಹಾರವನ್ನು ಸಮರ್ಥವಾಗಿ ನಿರ್ವಹಿಸಿದ್ದರೆ ಇಂದಿನ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ…

ಇದಕ್ಕೆ ಮೋದಿ ನೇತೃತ್ವದ ಸರ್ಕಾರ ಜವಾಬ್ದಾರಿ ಹೊರಬೇಕು.. ಉತ್ತರ ಕೊಡಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...