Homeರಾಷ್ಟ್ರೀಯಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

- Advertisement -
- Advertisement -

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು.

ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ ತಮ್ಮನ್ನು ಮತದಾರರು ದುರ್ಬಲರು ಎಂದು ತಿಳಿಯುತ್ತಾರೆ… ತಾನು ಸಹ ಅಮೇರಿಕಾ-ಇಸ್ರೇಲ್ ತರಹ ತೋಳ್ಬಲ ಪ್ರದರ್ಶಿಸುವ ವಿಶ್ವಗುರು ಎನ್ನುವ ಪ್ರಚಾರ ಮುಕ್ಕಾಗದಂತೆ ನೋಡಿಕೊಳ್ಳಬೇಕು..
ಇಸ್ರೇಲ್ ಹಾಗೂ ನೇತನ್ಯಾಹು ನಮ್ಮ ರೀತಿ, ಇಲ್ಲಿನ ಹಿಂದುತ್ವ ರಾಜಕಾರಣ ಅಲ್ಲಿನ ಜುಡಾಯಿಸಂ… ಇಬ್ಬರಿಗೂ ಇಸ್ಲಾಂ ಸಮಾನ ಶತೃ ಎನ್ನುವ ಕಥನ ಸೃಷ್ಟಿಸಲಾಗಿದೆ.. ಈಗ ಅದನ್ನು ಉಳಿಸಿಕೊಳ್ಳುವ ಅನಿವಾರ್ಯತೆಯಿದೆ.. ಇದಕ್ಕಾಗಿ ಇಸ್ರೇಲ್ ನ ಭಯೋತ್ಪಾದನೆ ಧೋರಣೆಯನ್ನು ಬೆಂಬಲಿಸುವಂತಹ ಸ್ಥಿತಿಯಲ್ಲಿದ್ದಾರೆ…
ಇಲ್ಲಿ ಮುಸ್ಲಿಂರ ವಿರುದ್ಧ ನೆರೇಶನ್ ಸೃಷ್ಟಿಸಿ ಜಾಗತಿಕವಾಗಿ ಇಸ್ಲಾಂ ದೇಶದ ಪರವಾಗಿ ಮಾತನಾಡಿದರೆ ತಮ್ಮ ಮತಬ್ಯಾಂಕ್ ಮೇಲೆ ಪರಿಣಾಮ ಬೀರುತ್ತದೆ…
ಒಂದುವೇಳೆ ಕಾಂಗ್ರೆಸ್ ಪಕ್ಷ, ಚಿಂತಕರು, ಸಂಘಟನೆಗಳು ಏನಾದರೂ ಇರಾನ್ ಪರ ನಿಲುವು ತಾಳಿದರೆ ಅವರನ್ನು ದೇಶದ್ರೋಹಿಗಳು ಎಂದು ಪ್ರಚಾರ ಮಾಡಲು ಮತ್ತು ಮುಂಬರುವ ಪ.ಬಂಗಾಳ, ಅಸ್ಸಾಂ ಚುನಾವಣೆಗಳಲ್ಲಿ ಇದನ್ನು ಬಳಸಿಕೊಳ್ಳಲು ಅನುಕೂಲವಾಗುತ್ತದೆ…
ಪ್ರಚಾರದ ಸಂದರ್ಭದಲ್ಲಿ ಮೋದಿ ‘ನಾವು ದೇಶದ ಹಿತಕ್ಕಾಗಿ, ಅವರು ಇರಾನ್ ಹಿತಕ್ಕಾಗಿ’ ಎಂದು ಭಾಷಣ ಮಾಡುವುದರಲ್ಲಿ ಅನುಮಾನವೇ ಇರಲಿಲ್ಲ…
ಒಟ್ಟಿನಲ್ಲಿ ಪ.ಬಂಗಾಳ, ಕೇರಳ, ಅಸ್ಸಾಂ ರಾಜ್ಯದ ಚುನಾವಣಾ ಪ್ರಚಾರದ ಹೊತ್ತಿಗೆ ಇರಾನ್ – ಮುಸ್ಲಿಂ ವಿರುದ್ಧ ನೆರೇಶನ್ ನ ರೆಸಿಪಿ ತಯಾರಿಸುವ ಕೆಲಸ ಶುರುವಾಗಿತ್ತು…

ಆದರೆ ಎರಡು ವಾರಗಳಲ್ಲಿ ಎಲ್ಲವೂ ತಲೆಕೆಳಗಾಗಿ ಮೋದಿ ‘ಇಂಡಿಯಾ ದೇಶ ಇರಾನ್ ನ ಸ್ನೇಹಿತರು’ ಎನ್ನುವ ಸ್ಥಿತಿ ನಿರ್ಮಾಣವಾಗಿದೆ…

ಅತ್ತ ಸರ್ಕಾರದ ಮಟ್ಟದಲ್ಲಿ

ಈ ಯುದ್ಧ ಬಹು ದಿನಗಳ ಕಾಲ ನಡೆಯುವುದಿಲ್ಲ. ನಾಲ್ಕೈದು ದಿನಗಳಲ್ಲಿ ಮುಗಿದು ಇರಾಕ್, ಈಜಿಪ್ಟ್ ರೀತಿ ಇರಾನ್ ಶರಣಾಗುತ್ತದೆ, ಆಂತರಿಕವಾಗಿ ಅಲ್ಲಿನ ಜನ ಬೀದಿಗೆ ಬರುತ್ತಾರೆ.. ಹೀಗಾಗಿ ಆರಂಭದಿಂದಲೂ ಅಮೇರಿಕಾ -ಇಸ್ರೇಲ್ ಪರವಾಗಿದ್ದರೆ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ.. ಇದು ಈ ಸರ್ಕಾರದ ಯೋಚನಾ ಲಹರಿ.. ಇದು ಸಂಭವಿಸಿದರೆ ‘ಮೋದಿ ಅಂದರೆ ಸಾಮಾನ್ಯವೇ’ ಎನ್ನುವ ಪ್ರಚಾರ…
ಆದರೆ ಎಲ್ಲಾ ತಲೆಕೆಳಗಾಗಿ ಇಂದು ಯುದ್ಧ ಆರಂಭಿಸಿದ ಟ್ರಂಪ್ ಗೆ ಮುಂದಿನ ದಾರಿ ಏನು? ಯುದ್ಧ ನಿಲ್ಲಿಸುವುದು ಹೇಗೆ? ಇದರಿಂದ ಹೊರಬರಲು ದಾರಿಗಳೇನು? ಒಂದೂ ಗೊತ್ತಾಗದೆ ದಿಗ್ಮೂಢಗೊಂಡಿದ್ದರೆ ಇವರನ್ನು ನಂಬಿ ರಾಜತಾಂತ್ರಿಕ ವ್ಯವಹಾರ ಮಾಡಿ ದೇಶದ ಘನತೆ ಹಾಳುಗೆಡವಿದ್ದು ಮೋದಿಯವರ ಸಾಧನೆ…

ಮೋದಿಯವರು ಯುದ್ಧ ನಡೆಯುವ ಎರಡು ದಿನಗಳ ಮುಂಚೆ ಇಸ್ರೇಲ್ ದೇಶಕ್ಕೆ ಹೋಗಿದ್ದು ಯಾಕೆ? ನೇತನ್ಯಾಹುನ್ನು ಹೊಗಳಿದ್ದು ಯಾಕೆ? ಇದು ಅವರ ವೈಯಕ್ತಿಕ ನಿಲುವೇ? ಅಥವಾ ವಿದೇಶಾಂಗ ಇಲಾಖೆಯದೇ?
ಇವರಿಗೆ ತಮ್ಮ ಭೇಟಿಯ ನಂತರ ಕೆಲವೇ ದಿನಗಳಲ್ಲಿ ಯುದ್ಧ ಪ್ರಾರಂಭವಾಗುತ್ತದೆ ಎಂದು ಗೊತ್ತಿರಲಿಲ್ಲವೇ? ಅದರ ಮುನ್ಸೂಚನೆ ಇರಲಿಲ್ಲವೇ? ಹೌದಾದರೆ ಅಮೆರಿಕ -ಇಸ್ರೇಲ್ ದೇಶಗಳು ಭಾರತದ ಜಿಗ್ರಿ ದೋಸ್ತ್ ಎನ್ನುವ ಮಾತಿಗೆ ಬೆಲೆಯಿಲ್ಲದಂತಾಯಿತೇ?
ಟ್ರಂಪ್, ನೇತಾನ್ಯಾಹು ನನಗೆ ತೀರಾ ಹತ್ತಿರ ಎಂದು ಹೇಳಿಕೊಳ್ಳುವ ಮೋದಿಯವರ ವಿಶ್ವಾಸಾರ್ಹತೆ ಪ್ರಶ್ನಾರ್ಹವಲ್ಲವೇ?
ದೇಶದ ಹಿತಾಸಕ್ತಿಯನ್ನು ಈ ರೀತಿ ವೈಯಕ್ತಿಕ ವೈಭವೀಕರಣಕ್ಕೆ ಬಲಿ ಕೊಟ್ಟಂತಲ್ಲವೇ?
ಅಥವಾ ಗೊತ್ತಿದ್ದರೆ ಕೊಲ್ಲಿ ರಾಷ್ಟ್ರಗಳಲ್ಲಿರುವ ಭಾರತೀಯರನ್ನು ಎಚ್ಚರಿಸುವ, ಅಲ್ಲಿಂದ ಕರೆತರುವ ಪ್ರಯತ್ನ ಯಾಕೆ ಮಾಡಲಿಲ್ಲ?

ಅಮೇರಿಕಾ-ಇಸ್ರೇಲ್ ದಾಳಿಯನ್ನು, ಖಮೇನಿ ಹತ್ಯೆಯನ್ನು ಇದುವರೆಗೂ ಖಂಡಿಸಿಲ್ಲ.. ಯುದ್ಧ ಪ್ರಾರಂಭವಾಗಿ ಒಂದು ವಾರದ ನಂತರ ವಿದೇಶಾಂಗ ಕಾರ್ಯದರ್ಶಿ ಇರಾನಿನಲ್ಲಿನ ಸಾವುಗಳಿಗೆ ಒಂದು ಸಾಲಿನಲ್ಲಿ ಖೇದ ವ್ಯಕ್ತಪಡಿಸುತ್ತಾರೆ.
ಆದರೆ ಈ ಸಾವಿರಾರು ಸಾವುಗಳಿಗೆ ಕಾರಣರಾದವರ ಕುರಿತು ಹೇಳಿಕೆ ನೀಡುವುದಿಲ್ಲ
ಆದರೆ ವಿಶ್ವಸಂಸ್ಥೆಯಲ್ಲಿ ಗಲ್ಫ್ ದೇಶಗಳ ಮೇಲಿನ ಇರಾನ್ ದಾಳಿಯನ್ನು ಖಂಡಿಸುವ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿ ಸಹಿ ಹಾಕುತ್ತಾರೆ..
ಇದು ತಟಸ್ಥ ನೀತಿಯೇ?

ಭಾರತ ಬ್ರಿಕ್ಸ್ ಒಕ್ಕೂಟದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದೆ. ಆದರೆ ಈ ಒಕ್ಕೂಟದ ಸದಸ್ಯ ದೇಶವಾದ ಇರಾನ್ ಪರ ಮಾತನಾಡುತ್ತಿಲ್ಲ..
ಮುಂದಿನ ನವೆಂಬರ್ ತಿಂಗಳಲ್ಲಿ ಬ್ರಿಕ್ಸ್ ಶೃಂಗಸಭೆ ಇದೆ. ಆಗ ಯಾವ ಮುಖ ಹೊತ್ತು ಭಾಗವಹಿಸುತ್ತದೆ?
ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಜೊತೆಗೆ ಮೋದಿಯವರು ಫೋನ್ ಮೂಲಕ ಮಾತನಾಡಿ ‘ಹೊರ್ಮೂಜ್ ಜಲಸಂಧಿ’ ಮೂಲಕ ತೈಲ ನೌಕೆಗಳು ಹಾದು ಹೋಗಲು ಕುರಿತು ಚರ್ಚೆ ನಡೆಸಿದರು ಎಂದು ವರದಿಯಾಗಿದೆ. ನಿಜ ಇದು ಅಗತ್ಯವಿದೆ.
ಆದರೆ ಇರಾನ್ ‘ಭಾರತದಿಂದ ರಾಜತಾಂತ್ರಿಕವಾಗಿ ಮರಳಿ ನಮಗೇನು ಸಿಗುತ್ತಿದೆ’ ಎಂದು ಕೇಳುತ್ತಿದೆ.. ಇದಕ್ಕೆ ಭಾರತದ ಬಳಿ ಉತ್ತರವಿಲ್ಲ..
ಹೊರ್ಮೂಜ್ ಜಲಸಂಧಿ ಮೂಲಕ ಭಾರತದ ಹತ್ತಾರು ತೈಲ ನೌಕೆಗಳು ಹಾದು ಬರಬೇಕು ಎಂದು ಗೊತ್ತಿದ್ದರೂ ಇರಾನ್ ಜೊತೆಗೆ ಮಾತುಕತೆ ನಡೆಸುವ ಗೋಜಿಗೆ ಹೋಗದೆ ಅದರ ವಿರೋಧಿ ಪಾಳ್ಯದಲ್ಲಿ ಗುರುತಿಸಿಕೊಂಡಿದ್ದು ಅನೈತಿಕತೆ ಮತ್ತು ರಾಜತಾಂತ್ರಿಕ ವೈಫಲ್ಯ.

ಜೂನ್ 2025ರಲ್ಲಿಯೇ ಅಮೇರಿಕಾ ಏಕಪಕ್ಷೀಯವಾಗಿ ಇರಾನ್ ಮೇಲೆ ದಾಳಿ ಮಾಡಿದಾಗ ಎಚ್ಚೆತ್ತುಕೊಂಡು ಸುರಕ್ಷಿತ ಪ್ರಮಾಣದ ತೈಲ ಸಂಗ್ರಹದ ಕಡೆ ಯಾಕೆ ಗಮನ ಹರಿಸದೆ ವ್ಯರ್ಥವಾಗಿ ಕಾಲ ಕಳೆದರು? ಇಂದಿನ ಗಂಭೀರ ಪರಿಸ್ಥಿತಿ ತಂದುಕೊಂಡಿದ್ಯಾಕೆ?
ಇದನ್ನು ‘ಉತ್ತಮ ಆಡಳಿತ ‘ ಎಂದು ಕರೆಯಲು ಸಾಧ್ಯವೇ?

ರಷ್ಯಾ ಜೊತೆಗೆ ತೈಲ ಖರೀದಿ ಸಂಬಂಧದ ವ್ಯವಹಾರ ಒಪ್ಪಂದ ಕುರಿತು ಸರ್ಕಾರದ ನಡೆ ಅವಮಾನಕರವಾಗಿದೆ. ಉತ್ತಮ ರಾಜತಾಂತ್ರಿಕತೆಯ ಕೊರತೆ ಮತ್ತು ಆ ಕುರಿತು ಅಜ್ಞಾನದ ಕಾರಣ ಇಡೀ ದೇಶವೇ ಸಂದಿಗ್ಧತೆಯಲ್ಲಿದೆ.
ರಷ್ಯಾ ಜೊತೆಗೆ ತೈಲ ಖರೀದಿ ವ್ಯವಹಾರವನ್ನು ಸಮರ್ಥವಾಗಿ ನಿರ್ವಹಿಸಿದ್ದರೆ ಇಂದಿನ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ…

ಇದಕ್ಕೆ ಮೋದಿ ನೇತೃತ್ವದ ಸರ್ಕಾರ ಜವಾಬ್ದಾರಿ ಹೊರಬೇಕು.. ಉತ್ತರ ಕೊಡಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...