Homeರಾಷ್ಟ್ರೀಯಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

- Advertisement -
- Advertisement -

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು.

ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ ತಮ್ಮನ್ನು ಮತದಾರರು ದುರ್ಬಲರು ಎಂದು ತಿಳಿಯುತ್ತಾರೆ… ತಾನು ಸಹ ಅಮೇರಿಕಾ-ಇಸ್ರೇಲ್ ತರಹ ತೋಳ್ಬಲ ಪ್ರದರ್ಶಿಸುವ ವಿಶ್ವಗುರು ಎನ್ನುವ ಪ್ರಚಾರ ಮುಕ್ಕಾಗದಂತೆ ನೋಡಿಕೊಳ್ಳಬೇಕು..
ಇಸ್ರೇಲ್ ಹಾಗೂ ನೇತನ್ಯಾಹು ನಮ್ಮ ರೀತಿ, ಇಲ್ಲಿನ ಹಿಂದುತ್ವ ರಾಜಕಾರಣ ಅಲ್ಲಿನ ಜುಡಾಯಿಸಂ… ಇಬ್ಬರಿಗೂ ಇಸ್ಲಾಂ ಸಮಾನ ಶತೃ ಎನ್ನುವ ಕಥನ ಸೃಷ್ಟಿಸಲಾಗಿದೆ.. ಈಗ ಅದನ್ನು ಉಳಿಸಿಕೊಳ್ಳುವ ಅನಿವಾರ್ಯತೆಯಿದೆ.. ಇದಕ್ಕಾಗಿ ಇಸ್ರೇಲ್ ನ ಭಯೋತ್ಪಾದನೆ ಧೋರಣೆಯನ್ನು ಬೆಂಬಲಿಸುವಂತಹ ಸ್ಥಿತಿಯಲ್ಲಿದ್ದಾರೆ…
ಇಲ್ಲಿ ಮುಸ್ಲಿಂರ ವಿರುದ್ಧ ನೆರೇಶನ್ ಸೃಷ್ಟಿಸಿ ಜಾಗತಿಕವಾಗಿ ಇಸ್ಲಾಂ ದೇಶದ ಪರವಾಗಿ ಮಾತನಾಡಿದರೆ ತಮ್ಮ ಮತಬ್ಯಾಂಕ್ ಮೇಲೆ ಪರಿಣಾಮ ಬೀರುತ್ತದೆ…
ಒಂದುವೇಳೆ ಕಾಂಗ್ರೆಸ್ ಪಕ್ಷ, ಚಿಂತಕರು, ಸಂಘಟನೆಗಳು ಏನಾದರೂ ಇರಾನ್ ಪರ ನಿಲುವು ತಾಳಿದರೆ ಅವರನ್ನು ದೇಶದ್ರೋಹಿಗಳು ಎಂದು ಪ್ರಚಾರ ಮಾಡಲು ಮತ್ತು ಮುಂಬರುವ ಪ.ಬಂಗಾಳ, ಅಸ್ಸಾಂ ಚುನಾವಣೆಗಳಲ್ಲಿ ಇದನ್ನು ಬಳಸಿಕೊಳ್ಳಲು ಅನುಕೂಲವಾಗುತ್ತದೆ…
ಪ್ರಚಾರದ ಸಂದರ್ಭದಲ್ಲಿ ಮೋದಿ ‘ನಾವು ದೇಶದ ಹಿತಕ್ಕಾಗಿ, ಅವರು ಇರಾನ್ ಹಿತಕ್ಕಾಗಿ’ ಎಂದು ಭಾಷಣ ಮಾಡುವುದರಲ್ಲಿ ಅನುಮಾನವೇ ಇರಲಿಲ್ಲ…
ಒಟ್ಟಿನಲ್ಲಿ ಪ.ಬಂಗಾಳ, ಕೇರಳ, ಅಸ್ಸಾಂ ರಾಜ್ಯದ ಚುನಾವಣಾ ಪ್ರಚಾರದ ಹೊತ್ತಿಗೆ ಇರಾನ್ – ಮುಸ್ಲಿಂ ವಿರುದ್ಧ ನೆರೇಶನ್ ನ ರೆಸಿಪಿ ತಯಾರಿಸುವ ಕೆಲಸ ಶುರುವಾಗಿತ್ತು…

ಆದರೆ ಎರಡು ವಾರಗಳಲ್ಲಿ ಎಲ್ಲವೂ ತಲೆಕೆಳಗಾಗಿ ಮೋದಿ ‘ಇಂಡಿಯಾ ದೇಶ ಇರಾನ್ ನ ಸ್ನೇಹಿತರು’ ಎನ್ನುವ ಸ್ಥಿತಿ ನಿರ್ಮಾಣವಾಗಿದೆ…

ಅತ್ತ ಸರ್ಕಾರದ ಮಟ್ಟದಲ್ಲಿ

ಈ ಯುದ್ಧ ಬಹು ದಿನಗಳ ಕಾಲ ನಡೆಯುವುದಿಲ್ಲ. ನಾಲ್ಕೈದು ದಿನಗಳಲ್ಲಿ ಮುಗಿದು ಇರಾಕ್, ಈಜಿಪ್ಟ್ ರೀತಿ ಇರಾನ್ ಶರಣಾಗುತ್ತದೆ, ಆಂತರಿಕವಾಗಿ ಅಲ್ಲಿನ ಜನ ಬೀದಿಗೆ ಬರುತ್ತಾರೆ.. ಹೀಗಾಗಿ ಆರಂಭದಿಂದಲೂ ಅಮೇರಿಕಾ -ಇಸ್ರೇಲ್ ಪರವಾಗಿದ್ದರೆ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ.. ಇದು ಈ ಸರ್ಕಾರದ ಯೋಚನಾ ಲಹರಿ.. ಇದು ಸಂಭವಿಸಿದರೆ ‘ಮೋದಿ ಅಂದರೆ ಸಾಮಾನ್ಯವೇ’ ಎನ್ನುವ ಪ್ರಚಾರ…
ಆದರೆ ಎಲ್ಲಾ ತಲೆಕೆಳಗಾಗಿ ಇಂದು ಯುದ್ಧ ಆರಂಭಿಸಿದ ಟ್ರಂಪ್ ಗೆ ಮುಂದಿನ ದಾರಿ ಏನು? ಯುದ್ಧ ನಿಲ್ಲಿಸುವುದು ಹೇಗೆ? ಇದರಿಂದ ಹೊರಬರಲು ದಾರಿಗಳೇನು? ಒಂದೂ ಗೊತ್ತಾಗದೆ ದಿಗ್ಮೂಢಗೊಂಡಿದ್ದರೆ ಇವರನ್ನು ನಂಬಿ ರಾಜತಾಂತ್ರಿಕ ವ್ಯವಹಾರ ಮಾಡಿ ದೇಶದ ಘನತೆ ಹಾಳುಗೆಡವಿದ್ದು ಮೋದಿಯವರ ಸಾಧನೆ…

ಮೋದಿಯವರು ಯುದ್ಧ ನಡೆಯುವ ಎರಡು ದಿನಗಳ ಮುಂಚೆ ಇಸ್ರೇಲ್ ದೇಶಕ್ಕೆ ಹೋಗಿದ್ದು ಯಾಕೆ? ನೇತನ್ಯಾಹುನ್ನು ಹೊಗಳಿದ್ದು ಯಾಕೆ? ಇದು ಅವರ ವೈಯಕ್ತಿಕ ನಿಲುವೇ? ಅಥವಾ ವಿದೇಶಾಂಗ ಇಲಾಖೆಯದೇ?
ಇವರಿಗೆ ತಮ್ಮ ಭೇಟಿಯ ನಂತರ ಕೆಲವೇ ದಿನಗಳಲ್ಲಿ ಯುದ್ಧ ಪ್ರಾರಂಭವಾಗುತ್ತದೆ ಎಂದು ಗೊತ್ತಿರಲಿಲ್ಲವೇ? ಅದರ ಮುನ್ಸೂಚನೆ ಇರಲಿಲ್ಲವೇ? ಹೌದಾದರೆ ಅಮೆರಿಕ -ಇಸ್ರೇಲ್ ದೇಶಗಳು ಭಾರತದ ಜಿಗ್ರಿ ದೋಸ್ತ್ ಎನ್ನುವ ಮಾತಿಗೆ ಬೆಲೆಯಿಲ್ಲದಂತಾಯಿತೇ?
ಟ್ರಂಪ್, ನೇತಾನ್ಯಾಹು ನನಗೆ ತೀರಾ ಹತ್ತಿರ ಎಂದು ಹೇಳಿಕೊಳ್ಳುವ ಮೋದಿಯವರ ವಿಶ್ವಾಸಾರ್ಹತೆ ಪ್ರಶ್ನಾರ್ಹವಲ್ಲವೇ?
ದೇಶದ ಹಿತಾಸಕ್ತಿಯನ್ನು ಈ ರೀತಿ ವೈಯಕ್ತಿಕ ವೈಭವೀಕರಣಕ್ಕೆ ಬಲಿ ಕೊಟ್ಟಂತಲ್ಲವೇ?
ಅಥವಾ ಗೊತ್ತಿದ್ದರೆ ಕೊಲ್ಲಿ ರಾಷ್ಟ್ರಗಳಲ್ಲಿರುವ ಭಾರತೀಯರನ್ನು ಎಚ್ಚರಿಸುವ, ಅಲ್ಲಿಂದ ಕರೆತರುವ ಪ್ರಯತ್ನ ಯಾಕೆ ಮಾಡಲಿಲ್ಲ?

ಅಮೇರಿಕಾ-ಇಸ್ರೇಲ್ ದಾಳಿಯನ್ನು, ಖಮೇನಿ ಹತ್ಯೆಯನ್ನು ಇದುವರೆಗೂ ಖಂಡಿಸಿಲ್ಲ.. ಯುದ್ಧ ಪ್ರಾರಂಭವಾಗಿ ಒಂದು ವಾರದ ನಂತರ ವಿದೇಶಾಂಗ ಕಾರ್ಯದರ್ಶಿ ಇರಾನಿನಲ್ಲಿನ ಸಾವುಗಳಿಗೆ ಒಂದು ಸಾಲಿನಲ್ಲಿ ಖೇದ ವ್ಯಕ್ತಪಡಿಸುತ್ತಾರೆ.
ಆದರೆ ಈ ಸಾವಿರಾರು ಸಾವುಗಳಿಗೆ ಕಾರಣರಾದವರ ಕುರಿತು ಹೇಳಿಕೆ ನೀಡುವುದಿಲ್ಲ
ಆದರೆ ವಿಶ್ವಸಂಸ್ಥೆಯಲ್ಲಿ ಗಲ್ಫ್ ದೇಶಗಳ ಮೇಲಿನ ಇರಾನ್ ದಾಳಿಯನ್ನು ಖಂಡಿಸುವ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿ ಸಹಿ ಹಾಕುತ್ತಾರೆ..
ಇದು ತಟಸ್ಥ ನೀತಿಯೇ?

ಭಾರತ ಬ್ರಿಕ್ಸ್ ಒಕ್ಕೂಟದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದೆ. ಆದರೆ ಈ ಒಕ್ಕೂಟದ ಸದಸ್ಯ ದೇಶವಾದ ಇರಾನ್ ಪರ ಮಾತನಾಡುತ್ತಿಲ್ಲ..
ಮುಂದಿನ ನವೆಂಬರ್ ತಿಂಗಳಲ್ಲಿ ಬ್ರಿಕ್ಸ್ ಶೃಂಗಸಭೆ ಇದೆ. ಆಗ ಯಾವ ಮುಖ ಹೊತ್ತು ಭಾಗವಹಿಸುತ್ತದೆ?
ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಜೊತೆಗೆ ಮೋದಿಯವರು ಫೋನ್ ಮೂಲಕ ಮಾತನಾಡಿ ‘ಹೊರ್ಮೂಜ್ ಜಲಸಂಧಿ’ ಮೂಲಕ ತೈಲ ನೌಕೆಗಳು ಹಾದು ಹೋಗಲು ಕುರಿತು ಚರ್ಚೆ ನಡೆಸಿದರು ಎಂದು ವರದಿಯಾಗಿದೆ. ನಿಜ ಇದು ಅಗತ್ಯವಿದೆ.
ಆದರೆ ಇರಾನ್ ‘ಭಾರತದಿಂದ ರಾಜತಾಂತ್ರಿಕವಾಗಿ ಮರಳಿ ನಮಗೇನು ಸಿಗುತ್ತಿದೆ’ ಎಂದು ಕೇಳುತ್ತಿದೆ.. ಇದಕ್ಕೆ ಭಾರತದ ಬಳಿ ಉತ್ತರವಿಲ್ಲ..
ಹೊರ್ಮೂಜ್ ಜಲಸಂಧಿ ಮೂಲಕ ಭಾರತದ ಹತ್ತಾರು ತೈಲ ನೌಕೆಗಳು ಹಾದು ಬರಬೇಕು ಎಂದು ಗೊತ್ತಿದ್ದರೂ ಇರಾನ್ ಜೊತೆಗೆ ಮಾತುಕತೆ ನಡೆಸುವ ಗೋಜಿಗೆ ಹೋಗದೆ ಅದರ ವಿರೋಧಿ ಪಾಳ್ಯದಲ್ಲಿ ಗುರುತಿಸಿಕೊಂಡಿದ್ದು ಅನೈತಿಕತೆ ಮತ್ತು ರಾಜತಾಂತ್ರಿಕ ವೈಫಲ್ಯ.

ಜೂನ್ 2025ರಲ್ಲಿಯೇ ಅಮೇರಿಕಾ ಏಕಪಕ್ಷೀಯವಾಗಿ ಇರಾನ್ ಮೇಲೆ ದಾಳಿ ಮಾಡಿದಾಗ ಎಚ್ಚೆತ್ತುಕೊಂಡು ಸುರಕ್ಷಿತ ಪ್ರಮಾಣದ ತೈಲ ಸಂಗ್ರಹದ ಕಡೆ ಯಾಕೆ ಗಮನ ಹರಿಸದೆ ವ್ಯರ್ಥವಾಗಿ ಕಾಲ ಕಳೆದರು? ಇಂದಿನ ಗಂಭೀರ ಪರಿಸ್ಥಿತಿ ತಂದುಕೊಂಡಿದ್ಯಾಕೆ?
ಇದನ್ನು ‘ಉತ್ತಮ ಆಡಳಿತ ‘ ಎಂದು ಕರೆಯಲು ಸಾಧ್ಯವೇ?

ರಷ್ಯಾ ಜೊತೆಗೆ ತೈಲ ಖರೀದಿ ಸಂಬಂಧದ ವ್ಯವಹಾರ ಒಪ್ಪಂದ ಕುರಿತು ಸರ್ಕಾರದ ನಡೆ ಅವಮಾನಕರವಾಗಿದೆ. ಉತ್ತಮ ರಾಜತಾಂತ್ರಿಕತೆಯ ಕೊರತೆ ಮತ್ತು ಆ ಕುರಿತು ಅಜ್ಞಾನದ ಕಾರಣ ಇಡೀ ದೇಶವೇ ಸಂದಿಗ್ಧತೆಯಲ್ಲಿದೆ.
ರಷ್ಯಾ ಜೊತೆಗೆ ತೈಲ ಖರೀದಿ ವ್ಯವಹಾರವನ್ನು ಸಮರ್ಥವಾಗಿ ನಿರ್ವಹಿಸಿದ್ದರೆ ಇಂದಿನ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ…

ಇದಕ್ಕೆ ಮೋದಿ ನೇತೃತ್ವದ ಸರ್ಕಾರ ಜವಾಬ್ದಾರಿ ಹೊರಬೇಕು.. ಉತ್ತರ ಕೊಡಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....