Homeಕರ್ನಾಟಕಸುಮಲತಾರವರಿಗೆ ಓಟು ಕೇಳಿ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತರೇಕೆ ಮೋದಿ?

ಸುಮಲತಾರವರಿಗೆ ಓಟು ಕೇಳಿ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತರೇಕೆ ಮೋದಿ?

- Advertisement -
- Advertisement -

ಮೈಸೂರಿನಲ್ಲಿ ನಿನ್ನೆ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಸಮಾವೇಶಕ್ಕೆ ಸಾಕ್ಷಾತ್ ಪ್ರಧಾನ ಮಂತ್ರಿಗಳೇ ಬಂದಿದ್ದರು. ಪ್ರಧಾನಿಗಳು ತಮ್ಮ ಭಾಷಣದಲ್ಲಿ ಎಂದಿನಂತೆಯೇ ದೇಶದ ಜನಸಾಮನ್ಯರ ಸಮಸ್ಯೆಗಳನ್ನು ಪ್ರಸ್ತಾಪಿಸಲು ಹೋಗಲಿಲ್ಲ. ಬದಲಿಗೆ ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದರು. ಆಶ್ಚರ್ಯಕರವೆಂಬಂತೆ ದೇವೆಗೌಡರು ಮತ್ತು ಕುಮಾರಸ್ವಾಮಿಯವರ ಮೇಲೆ ಹೆಚ್ಚಿನ ದಾಳಿ ನಡೆಸಲು ಹೋಗಲಿಲ್ಲ. ಬದಲಿಗೆ ಅವರು ಕುಮಾರಸ್ವಾಮಿಯವರು ಕಾಂಗ್ರೆಸ್‍ನಿಂದ ಬಾಧಿತರಾಗಿದ್ದೆಂಬ ಮಾತುಗಳನ್ನು ಆಡಿದರು. ರಾಹುಲ್ ಗಾಂಧಿ ದೇವೇಗೌಡರಿಗೆ ಹೆದರಿಕೊಂಡು ಕರ್ನಾಟಕದಲ್ಲಿ ಸ್ಪರ್ಧಿಸುತ್ತಿಲ್ಲವೆಂದೂ ಹೇಳಿದರು.

ಆದರೆ ಎಲ್ಲಕ್ಕಿಂತ ಆಶ್ಚರ್ಯಕರ ಸಂಗತಿ ಏನೆಂದರೆ ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಅಭ್ಯರ್ಥಿಗಳ ಕುರಿತಾಗಿ ಮತ್ತು ಅಲ್ಲಿನ ಚುನಾವಣೆಯ ಬಗ್ಗೆ ಬಿಜೆಪಿಯ ಕುರಿತು ಅವರು ಮಾತನಾಡಿದರು. ಆದರೆ ಭಾಷಣ ಮುಗಿಯುತ್ತಾ ಬಂದಂತೆ ಅವರು ಅಂಬರೀಶ್‍ರವರನ್ನು ನೆನೆಸಿಕೊಂಡು ಅವರ ಪತ್ನಿ ಸುಮಲತಾ ಪರ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದರು. ಆದರೆ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರ ಕುರಿತು ಪ್ರಸ್ತಾಪ ಮಾಡಲೇ ಇಲ್ಲ. ಇದು ಹಲವರ ಹುಬ್ಬೇರಿಸಿದೆ

ಏಕೆಂದರೆ ಸಾಮಾನ್ಯವಾಗಿ ರಾಷ್ಟ್ರೀಯ ನಾಯಕರು ಬಂದಾಗ ಸ್ಥಳೀಯ ಅಭ್ಯರ್ಥಿಗಳನ್ನು ಮುಂದೆ ನಿಂತು ಪರಿಚಯಿಸಿ ಅವರ ಪರ ಮತ ಹಾಕಿ ಎಂದು ಅವರ ಬಾಯಲ್ಲಿ ಹೇಳಿಸುವುದು ಸಾಮಾನ್ಯ. ಆದರೆ ಇಲ್ಲಿ ವೇದಿಕೆಯ ಮೇಲೆ ಇದ್ದ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತು ವೇದಿಕೆಯ ಮೇಲೆ ಇಲ್ಲದ ಸುಮಲತಾ ಅವರ ಪಕ್ಷದ ಅಭ್ಯರ್ಥಿಯು ಅಲ್ಲದೇ ಬಿಜೆಪಿ ಬೆಂಬಲಿಸಿರುವ ಸುಮಲತಾರವರ ಪರ ಮೋದಿ ಬ್ಯಾಟಿಂಗ್ ಮಾಡಿದ್ದಾರೆ.

ಮಂಡ್ಯದ ಚುಣಾವಣೆಯ ಕುರಿತು ಬಿಜೆಪಿ ಎಷ್ಟರ ಮಟ್ಟಿಗೆ ತಲೆಕೆಡಿಸಿಕೊಂಡಿದೆ ಎಂಬುದಕ್ಕೆ ಇದು ಕೂಡ ಸಾಕ್ಷಿ. ಮೋದಿಯವರಿಗೆ ಬಹುಶಃ ವೇದಿಕೆಯ ಮೇಲೆ ಮಾತನಾಡುತ್ತಿರುವಾಗ ತಮಗೆ ಸಂಬಂಧಿಸಿದ ಬಿಜೆಪಿ ಅಭ್ಯರ್ಥಿಗಳಿಗಿಂತ ಸುಮಲತಾರನ್ನೇ ಗೆಲ್ಲಿಸುವ ಕುರಿತು ಹೆಚ್ಚು ಕಾಳಜಿಯಿರುವಂತೆ ಕಾಣಿಸುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಮಂಡ್ಯ ಕ್ಷೇತ್ರದ ರಾಜಕೀಯದ ಕುರಿತು ಬಿಜೆಪಿ ನಿಲುವನ್ನು ಅರ್ಥೈಸಿಕೊಳ್ಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...