Homeಕರ್ನಾಟಕಸುಮಲತಾರವರಿಗೆ ಓಟು ಕೇಳಿ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತರೇಕೆ ಮೋದಿ?

ಸುಮಲತಾರವರಿಗೆ ಓಟು ಕೇಳಿ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತರೇಕೆ ಮೋದಿ?

- Advertisement -
- Advertisement -

ಮೈಸೂರಿನಲ್ಲಿ ನಿನ್ನೆ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಸಮಾವೇಶಕ್ಕೆ ಸಾಕ್ಷಾತ್ ಪ್ರಧಾನ ಮಂತ್ರಿಗಳೇ ಬಂದಿದ್ದರು. ಪ್ರಧಾನಿಗಳು ತಮ್ಮ ಭಾಷಣದಲ್ಲಿ ಎಂದಿನಂತೆಯೇ ದೇಶದ ಜನಸಾಮನ್ಯರ ಸಮಸ್ಯೆಗಳನ್ನು ಪ್ರಸ್ತಾಪಿಸಲು ಹೋಗಲಿಲ್ಲ. ಬದಲಿಗೆ ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದರು. ಆಶ್ಚರ್ಯಕರವೆಂಬಂತೆ ದೇವೆಗೌಡರು ಮತ್ತು ಕುಮಾರಸ್ವಾಮಿಯವರ ಮೇಲೆ ಹೆಚ್ಚಿನ ದಾಳಿ ನಡೆಸಲು ಹೋಗಲಿಲ್ಲ. ಬದಲಿಗೆ ಅವರು ಕುಮಾರಸ್ವಾಮಿಯವರು ಕಾಂಗ್ರೆಸ್‍ನಿಂದ ಬಾಧಿತರಾಗಿದ್ದೆಂಬ ಮಾತುಗಳನ್ನು ಆಡಿದರು. ರಾಹುಲ್ ಗಾಂಧಿ ದೇವೇಗೌಡರಿಗೆ ಹೆದರಿಕೊಂಡು ಕರ್ನಾಟಕದಲ್ಲಿ ಸ್ಪರ್ಧಿಸುತ್ತಿಲ್ಲವೆಂದೂ ಹೇಳಿದರು.

ಆದರೆ ಎಲ್ಲಕ್ಕಿಂತ ಆಶ್ಚರ್ಯಕರ ಸಂಗತಿ ಏನೆಂದರೆ ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಅಭ್ಯರ್ಥಿಗಳ ಕುರಿತಾಗಿ ಮತ್ತು ಅಲ್ಲಿನ ಚುನಾವಣೆಯ ಬಗ್ಗೆ ಬಿಜೆಪಿಯ ಕುರಿತು ಅವರು ಮಾತನಾಡಿದರು. ಆದರೆ ಭಾಷಣ ಮುಗಿಯುತ್ತಾ ಬಂದಂತೆ ಅವರು ಅಂಬರೀಶ್‍ರವರನ್ನು ನೆನೆಸಿಕೊಂಡು ಅವರ ಪತ್ನಿ ಸುಮಲತಾ ಪರ ಮತ ಚಲಾಯಿಸುವಂತೆ ಮತದಾರರಿಗೆ ಮನವಿ ಮಾಡಿದರು. ಆದರೆ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರ ಕುರಿತು ಪ್ರಸ್ತಾಪ ಮಾಡಲೇ ಇಲ್ಲ. ಇದು ಹಲವರ ಹುಬ್ಬೇರಿಸಿದೆ

ಏಕೆಂದರೆ ಸಾಮಾನ್ಯವಾಗಿ ರಾಷ್ಟ್ರೀಯ ನಾಯಕರು ಬಂದಾಗ ಸ್ಥಳೀಯ ಅಭ್ಯರ್ಥಿಗಳನ್ನು ಮುಂದೆ ನಿಂತು ಪರಿಚಯಿಸಿ ಅವರ ಪರ ಮತ ಹಾಕಿ ಎಂದು ಅವರ ಬಾಯಲ್ಲಿ ಹೇಳಿಸುವುದು ಸಾಮಾನ್ಯ. ಆದರೆ ಇಲ್ಲಿ ವೇದಿಕೆಯ ಮೇಲೆ ಇದ್ದ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ್ ಪ್ರಸಾದ್‍ರನ್ನು ಮರೆತು ವೇದಿಕೆಯ ಮೇಲೆ ಇಲ್ಲದ ಸುಮಲತಾ ಅವರ ಪಕ್ಷದ ಅಭ್ಯರ್ಥಿಯು ಅಲ್ಲದೇ ಬಿಜೆಪಿ ಬೆಂಬಲಿಸಿರುವ ಸುಮಲತಾರವರ ಪರ ಮೋದಿ ಬ್ಯಾಟಿಂಗ್ ಮಾಡಿದ್ದಾರೆ.

ಮಂಡ್ಯದ ಚುಣಾವಣೆಯ ಕುರಿತು ಬಿಜೆಪಿ ಎಷ್ಟರ ಮಟ್ಟಿಗೆ ತಲೆಕೆಡಿಸಿಕೊಂಡಿದೆ ಎಂಬುದಕ್ಕೆ ಇದು ಕೂಡ ಸಾಕ್ಷಿ. ಮೋದಿಯವರಿಗೆ ಬಹುಶಃ ವೇದಿಕೆಯ ಮೇಲೆ ಮಾತನಾಡುತ್ತಿರುವಾಗ ತಮಗೆ ಸಂಬಂಧಿಸಿದ ಬಿಜೆಪಿ ಅಭ್ಯರ್ಥಿಗಳಿಗಿಂತ ಸುಮಲತಾರನ್ನೇ ಗೆಲ್ಲಿಸುವ ಕುರಿತು ಹೆಚ್ಚು ಕಾಳಜಿಯಿರುವಂತೆ ಕಾಣಿಸುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಮಂಡ್ಯ ಕ್ಷೇತ್ರದ ರಾಜಕೀಯದ ಕುರಿತು ಬಿಜೆಪಿ ನಿಲುವನ್ನು ಅರ್ಥೈಸಿಕೊಳ್ಳಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....