Homeಮುಖಪುಟಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಪ್ರಧಾನಮಂತ್ರಿ ತನಗಾಗಿ 8,400 ಕೋಟಿ ಮೌಲ್ಯದ ವಿಮಾನವನ್ನು ಖರೀದಿಸಿದ್ದಾರೆ. ಈ ದುಡ್ಡಿನಲ್ಲಿ ಸಿಯಾಚಿನ್-ಲಡಾಕ್ ಗಡಿಯಲ್ಲಿರುವ ನಮ್ಮ ಸೈನಿಕರಿಗೆ ಏನೆಲ್ಲಾ ಖರೀದಿಸಬಹುದು? ಪ್ರಧಾನಿಯವರು ಕೇವಲ ತನ್ನ ಬಗ್ಗೆ ಮಾತ್ರ ಯೋಚಿಸುತ್ತಾರೆ

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣಕ್ಕೆಂದು ಸುಮಾರು 8,400 ಕೋಟಿ ವ್ಯಯಿಸಿ ಐಷಾರಾಮಿ ವಿಮಾನದ ವ್ಯವಸ್ಥೆ ಮಾಡಿರುವ ಸರ್ಕಾರ, ನಮ್ಮ ದೇಶದ ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ಟ್ರಕ್ ಒದಗಿಸಲು ನಿರಾಕರಿಸಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಈ ಕುರಿತು ಮಾಡಿರುವ ಟ್ವೀಟ್‌ನಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಸೈನಿಕರು ಮಾತನಾಡುತ್ತಿರುವುದ ದಾಖಲಾಗಿದೆ.

ಇದನ್ನೂ ಓದಿ: ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ಸಮವಸ್ತ್ರದಲ್ಲಿರುವ ಸೈನಿಕರು, “ಇಂದಿನ ಸಂದರ್ಭದಲ್ಲಿ ಬುಲ್ಲೆಟ್‌ಪ್ರೂಫ್ ವಾಹನದಲ್ಲಿ ಚಲಿಸುವುದೇ ಅಪಾಯವಾಗಿದೆ. ಆದರೆ ನಾವು ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್‌ನಲ್ಲಿ ಚಲಿಸುತ್ತಿದ್ದೇವೆ. ಅವರು ನಮ್ಮ ಜೀವದೊಂದಿಗೆ ಆಟವಾಡುತ್ತಿದ್ದಾರೆ. ನಾವು ನಮ್ಮ ಜೀವನವನ್ನು ವ್ಯರ್ಥ ಮಾಡುತ್ತಿದ್ದೇವೆ” ಎಂದು ಮಾತನಾಡಿರುವುದು ವೀಡಿಯೋದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

“ಇದು ಕಳಪೆ ವ್ಯವಸ್ಥೆಯಾಗಿದೆ. ನಮಗೆ ಅತ್ಯಂತ ಕೆಟ್ಟ ಟ್ರಕ್ ಅನ್ನು ಒದಗಿಸಲಾಗಿದೆ. ಹಿರಿಯ ಅಧಿಕಾರಿಗಳು ಬುಲ್ಲೆಟ್‌ಪ್ರೂಫ್ ವಾಹನದಲ್ಲಿ ಸಂಚರಿಸುತ್ತಾರೆ. ಆದರೆ ನಮಗೆ ಮಾತ್ರ ಬುಲ್ಲೆಟ್‌ಪ್ರೂಫ್ ರಹಿತ ವಾಹನ ಒದಗಿಸಿದ್ದಾರೆ” ಎಂದು ಮತ್ತೊಬ್ಬ ಸೈನಿಕ ಹೇಳಿರುವುದನ್ನು ಕೇಳಬಹುದು.

ಮತ್ತೊಂದು ಟ್ವೀಟ್‌ನಲ್ಲಿ, “ಪ್ರಧಾನಮಂತ್ರಿ ತನಗಾಗಿ 8,400 ಕೋಟಿ ಮೌಲ್ಯದ ವಿಮಾನವನ್ನು ಖರೀದಿಸಿದ್ದಾರೆ. ಈ ದುಡ್ಡಿನಲ್ಲಿ ಸಿಯಾಚಿನ್-ಲಡಾಕ್ ಗಡಿಯಲ್ಲಿರುವ ನಮ್ಮ ಸೈನಿಕರಿಗೆ ಏನೆಲ್ಲಾ ಖರೀದಿಸಬಹುದು? ಪ್ರಧಾನಿಯವರು ಕೇವಲ ತನ್ನ ಬಗ್ಗೆ ಮಾತ್ರ ಯೋಚಿಸುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಕುರಿತು ಪ್ರಧಾನಿ ಒಂದೂ ಮಾತಾಡಲಿಲ್ಲ ಏಕೆ? : ರಾಹುಲ್ ಗಾಂಧಿ ಪ್ರಶ್ನೆ

ಈ ಹಿಂದೆಯೂ ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು “ಪ್ರಧಾನಿಗಾಗಿ ಅಷ್ಟು ದೊಡ್ಡ ಮೊತ್ತದ ವಿಮಾನ ಖರೀದಿಸಲಾಗಿದೆ. ಆದರೂ ಯಾವುದೇ ಮಾಧ್ಯಮದವರೂ ಇದನ್ನು ಪ್ರಶ್ನಿಸುವುದಿಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...