Homeಮುಖಪುಟಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶದ ಸಚಿವರಾದ ಗುಲಾಬ್ ದೇವಿ ಅವರು ಅಕ್ಟೋಬರ್ 26ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. “ಪ್ರಧಾನಿ ಮೋದಿಯವರು ದೇವರ ಅವತಾರ. ಅವರು ಇಚ್ಛಿಸಿದರೆ ತಮ್ಮ ಜೀವನಪೂರ್ತಿ ಪ್ರಧಾನಿಯಾಗಿರಬಹುದು” ಎಂದಿದ್ದಾರೆ ಗುಲಾಬ್‌ ದೇವಿ.

“ಪ್ರಧಾನಿ ನರೇಂದ್ರ ಮೋದಿಯವರನ್ನು ಭೂಮಿಯ ಮೇಲಿನ ದೇವರ ಅವತಾರ ಎಂದು ಕರೆದಿರುವ ಬಗ್ಗೆ ಕ್ಷಮೆಯಾಚಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಜೊತೆ ಮಾತನಾಡಿರುವ ಅವರು, “ಜನರ ಮನೆಗಳಿಗೆ ನೀರು ತಲುಪಬೇಕು ಎಂದು ಅವರು (ಮೋದಿ) ಬಯಸಿದರೆ, ನೀರು ತಲುಪಲು ಪ್ರಾರಂಭಿಸುತ್ತದೆ. ಬಡವರಿಗೆ ಮನೆ ಸಿಗಬೇಕು ಎಂದು ಅವರು ಬಯಸಿದಾಗ, ಮನೆಗಳ ನಿರ್ಮಾಣ ಆರಂಭವಾಗುತ್ತದೆ. ಜನರು ಗ್ಯಾಸ್ ಸಂಪರ್ಕವನ್ನು ಪಡೆಯಬೇಕು ಎಂದು ಅವರು ಬಯಸಿದಾಗ, ಸಂಪರ್ಕಗಳು ಪ್ರಾರಂಭವಾಗುತ್ತವೆ. ಶೌಚಾಲಯಗಳು ನಿರ್ಮಾಣವಾಗುತ್ತವೆ. ಇದು ಮೋದಿಯವರನ್ನು ದೇವರ ಅವತಾರವನ್ನಾಗಿ ಮಾಡಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಲಾಬ್ ದೇವಿ ಅವರು ಅಕ್ಟೋಬರ್ 26‘ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಅವರು ಮೋದಿಯನ್ನು ದೇವರಿಗೆ ಸಮೀಕರಿಸುವ ಹೇಳಿಕೆಯನ್ನು ಅಂದು ನೀಡಿದರು. “ಮೋದಿ ಬಯಸಿದರೆ ತಮ್ಮ ಜೀವಿತಾವಧಿಯವರೆಗೆ ಪ್ರಧಾನಿಯಾಗಿರುತ್ತಾರೆ” ಎಂದಿದ್ದರು.

ಸಚಿವೆಯ ಹೇಳಿಕೆಗೆ ಸಮಾಜ ಪಕ್ಷದ ಸಂಸದ ಶಫಿಕೂರ್ ರೆಹಮಾನ್ ಬಾರ್ಕ್ ಪ್ರತಿಕ್ರಿಯಿಸಿ, “ಪಿಎಂ ನಿಜಕ್ಕೂ ದೇವರ ಅವತಾರವಾಗಿದ್ದರೆ, ಅವರು ರಾಜಕೀಯದಲ್ಲಿ ಏನು ಮಾಡುತ್ತಿದ್ದರು?” ಎಂದು ಕೇಳಿದ್ದಾರೆ. “ಮೋದಿ ಅವರು ರಾಜೀನಾಮೆ ನೀಡಬೇಕು. ಗುಲಾಬ್ ದೇವಿ ಅವರು ಕುತಂತ್ರದ ಮಿತಿಯನ್ನು ದಾಟಿದ್ದಾರೆ” ಎಂದು ಅವರು ಟೀಕಿಸಿದ್ದಾರೆ.

ಗುಲಾಬ್‌ ದೇವಿ, “ತಮ್ಮ ವೈಯಕ್ತಿಕ ನಂಬಿಕೆ ಏನೆಂಬುದರ ಬಗ್ಗೆ ಯಾರಿಗೂ ಸಮಸ್ಯೆಯಾಗಬಾರದು. ಪ್ರತಿಪಕ್ಷಗಳಿಗೆ ತನಗೆ ಅನಿಸಿದ್ದನ್ನು ಮಾತನಾಡಲು ಎಲ್ಲ ಹಕ್ಕಿದೆ. ಹಿಂದೂ ಧರ್ಮದಲ್ಲಿ ದೇವರನ್ನು ಮರಗಳಲ್ಲಿ, ಹಸುಗಳಲ್ಲಿ, ತಂದೆ-ತಾಯಿಗಳಲ್ಲಿ, ಗುರುಗಳಲ್ಲಿ ಕಾಣಲಾಗುತ್ತದೆ. ಹಾಗಾದರೆ ದೇಶದ ರಾಜನನ್ನು ದೇವರ ಪ್ರತಿನಿಧಿ (ಪ್ರತಿನಿಧಿ) ಎಂದು ನೋಡುವುದರಲ್ಲಿ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿಯವರು ಗುಲಾಬ್ ದೇವಿಯವರ ಮಾತುಗಳನ್ನು ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ಗೌರವಿಸುವ ವ್ಯಕ್ತಿಯನ್ನು ಈ ರೀತಿ ಕರೆಯುತ್ತೇವೆ. ನಾವು ಸಾರ್ವಜನಿಕರನ್ನು ದೇವರೆಂದು ಸಹ ಉಲ್ಲೇಖಿಸುತ್ತೇವೆ. ಅದೇ ರೀತಿ ಸಚಿವರು ಪ್ರಧಾನಿಯ ಬಗ್ಗೆ ತಮ್ಮ ವೈಯಕ್ತಿಕ ಗೌರವವನ್ನು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

67 ವರ್ಷದ ಗುಲಾಬ್ ದೇವಿ ಅವರು ಸಂಭಾಲ್‌ನ ಚಂದೌಸಿ ಅಸೆಂಬ್ಲಿ ಕ್ಷೇತ್ರದಿಂದ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿರುವ ಐವರು ಮಹಿಳಾ ಸಚಿವರಲ್ಲಿ ಇವರು ಹಿರಿಯವರಾಗಿದ್ದಾರೆ. ರಾಜಕೀಯಕ್ಕೆ ಬರುವ ಮೊದಲು ರಾಜಕೀಯ ವಿಜ್ಞಾನ ಉಪನ್ಯಾಸಕಿಯಾಗಿದ್ದ ಗುಲಾಬ್ ದೇವಿಯವರು, ದಲಿತ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಆದಿತ್ಯನಾಥ್ ಅವರ ಅಧಿಕಾರದ ಮೊದಲ ಅವಧಿಯಲ್ಲಿ ಗುಲಾಬ್ ದೇವಿ ಅವರು ಸಮಾಜ ಕಲ್ಯಾಣ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಈಗ ಪ್ರೌಢ ಶಿಕ್ಷಣ ಇಲಾಖೆಯ ಸ್ವತಂತ್ರ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

ಇಂಗ್ಲೆಡ್ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬರನ್ನು ಭಾರತದ ಪ್ರಧಾನಿಯನ್ನಾಗಿ ಮಾಡಬೇಕೆಂದು ಪ್ರತಿಪಕ್ಷಗಳ ನಾಯಕರು ಹೇಳಿದ್ದರು. ಈ ಕುರಿತು ಕೆಲವು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾ ಗುಲಾಬ್‌ ದೇವಿಯವರು, “ಮೋದಿಜಿ ದೇವರ ಅವತಾರ” ಎಂದು ಬಣ್ಣಿಸಿದ್ದರು.

“ಭಾರತೀಯ ಮೂಲದ ಹಿಂದೂವಾಗಿರುವ ರಿಷಿ ಸುನಕ್ ಇಂಗ್ಲೆಡ್‌ನಲ್ಲಿ ಪ್ರಧಾನಿಯಾಗಿದ್ದಾರೆ. ಆ ದೇಶದ ನಡೆಯಿಂದ ಭಾರತ ಪಾಠ ಕಲಿಯಬೇಕು. ಅಲ್ಪಸಂಖ್ಯಾತ ಸಮುದಾಯದ ಜನರು ದೇಶವನ್ನು ಮುನ್ನಡೆಸಲು ಅವಕಾಶ ನೀಡಬೇಕು” ಎಂದು ಹೇಳಿದವರಲ್ಲಿ ಎಸ್‌ಪಿ ಸಂಸದರಾದ ಬಾರ್ಕ್ ಕೂಡ ಒಬ್ಬರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮೋದಿ ದೇವರ ಅವತಾರವಲ್ಲಾ… ದೆವ್ವದ ಅವತಾರ… ಈ ದೇಶಕ್ಕೆ ಹಿಡಿದ ಕೊಳ್ಳಿ ದೆವ್ವ ಅದು

  2. ಗೋಧ್ರಾದಲ್ಲಿ ತಾನು ರಾಕ್ಷಸನ ಅವತಾರ ಎಂದು ಈತನೇ ಸಾಬೀತು ಮಾಡಿದ್ದಾನೆ ಪಾಪ !!!😢😢😢😢😢

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...