Homeಮುಖಪುಟಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶದ ಸಚಿವರಾದ ಗುಲಾಬ್ ದೇವಿ ಅವರು ಅಕ್ಟೋಬರ್ 26ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. “ಪ್ರಧಾನಿ ಮೋದಿಯವರು ದೇವರ ಅವತಾರ. ಅವರು ಇಚ್ಛಿಸಿದರೆ ತಮ್ಮ ಜೀವನಪೂರ್ತಿ ಪ್ರಧಾನಿಯಾಗಿರಬಹುದು” ಎಂದಿದ್ದಾರೆ ಗುಲಾಬ್‌ ದೇವಿ.

“ಪ್ರಧಾನಿ ನರೇಂದ್ರ ಮೋದಿಯವರನ್ನು ಭೂಮಿಯ ಮೇಲಿನ ದೇವರ ಅವತಾರ ಎಂದು ಕರೆದಿರುವ ಬಗ್ಗೆ ಕ್ಷಮೆಯಾಚಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಜೊತೆ ಮಾತನಾಡಿರುವ ಅವರು, “ಜನರ ಮನೆಗಳಿಗೆ ನೀರು ತಲುಪಬೇಕು ಎಂದು ಅವರು (ಮೋದಿ) ಬಯಸಿದರೆ, ನೀರು ತಲುಪಲು ಪ್ರಾರಂಭಿಸುತ್ತದೆ. ಬಡವರಿಗೆ ಮನೆ ಸಿಗಬೇಕು ಎಂದು ಅವರು ಬಯಸಿದಾಗ, ಮನೆಗಳ ನಿರ್ಮಾಣ ಆರಂಭವಾಗುತ್ತದೆ. ಜನರು ಗ್ಯಾಸ್ ಸಂಪರ್ಕವನ್ನು ಪಡೆಯಬೇಕು ಎಂದು ಅವರು ಬಯಸಿದಾಗ, ಸಂಪರ್ಕಗಳು ಪ್ರಾರಂಭವಾಗುತ್ತವೆ. ಶೌಚಾಲಯಗಳು ನಿರ್ಮಾಣವಾಗುತ್ತವೆ. ಇದು ಮೋದಿಯವರನ್ನು ದೇವರ ಅವತಾರವನ್ನಾಗಿ ಮಾಡಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಲಾಬ್ ದೇವಿ ಅವರು ಅಕ್ಟೋಬರ್ 26‘ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಅವರು ಮೋದಿಯನ್ನು ದೇವರಿಗೆ ಸಮೀಕರಿಸುವ ಹೇಳಿಕೆಯನ್ನು ಅಂದು ನೀಡಿದರು. “ಮೋದಿ ಬಯಸಿದರೆ ತಮ್ಮ ಜೀವಿತಾವಧಿಯವರೆಗೆ ಪ್ರಧಾನಿಯಾಗಿರುತ್ತಾರೆ” ಎಂದಿದ್ದರು.

ಸಚಿವೆಯ ಹೇಳಿಕೆಗೆ ಸಮಾಜ ಪಕ್ಷದ ಸಂಸದ ಶಫಿಕೂರ್ ರೆಹಮಾನ್ ಬಾರ್ಕ್ ಪ್ರತಿಕ್ರಿಯಿಸಿ, “ಪಿಎಂ ನಿಜಕ್ಕೂ ದೇವರ ಅವತಾರವಾಗಿದ್ದರೆ, ಅವರು ರಾಜಕೀಯದಲ್ಲಿ ಏನು ಮಾಡುತ್ತಿದ್ದರು?” ಎಂದು ಕೇಳಿದ್ದಾರೆ. “ಮೋದಿ ಅವರು ರಾಜೀನಾಮೆ ನೀಡಬೇಕು. ಗುಲಾಬ್ ದೇವಿ ಅವರು ಕುತಂತ್ರದ ಮಿತಿಯನ್ನು ದಾಟಿದ್ದಾರೆ” ಎಂದು ಅವರು ಟೀಕಿಸಿದ್ದಾರೆ.

ಗುಲಾಬ್‌ ದೇವಿ, “ತಮ್ಮ ವೈಯಕ್ತಿಕ ನಂಬಿಕೆ ಏನೆಂಬುದರ ಬಗ್ಗೆ ಯಾರಿಗೂ ಸಮಸ್ಯೆಯಾಗಬಾರದು. ಪ್ರತಿಪಕ್ಷಗಳಿಗೆ ತನಗೆ ಅನಿಸಿದ್ದನ್ನು ಮಾತನಾಡಲು ಎಲ್ಲ ಹಕ್ಕಿದೆ. ಹಿಂದೂ ಧರ್ಮದಲ್ಲಿ ದೇವರನ್ನು ಮರಗಳಲ್ಲಿ, ಹಸುಗಳಲ್ಲಿ, ತಂದೆ-ತಾಯಿಗಳಲ್ಲಿ, ಗುರುಗಳಲ್ಲಿ ಕಾಣಲಾಗುತ್ತದೆ. ಹಾಗಾದರೆ ದೇಶದ ರಾಜನನ್ನು ದೇವರ ಪ್ರತಿನಿಧಿ (ಪ್ರತಿನಿಧಿ) ಎಂದು ನೋಡುವುದರಲ್ಲಿ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿಯವರು ಗುಲಾಬ್ ದೇವಿಯವರ ಮಾತುಗಳನ್ನು ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ಗೌರವಿಸುವ ವ್ಯಕ್ತಿಯನ್ನು ಈ ರೀತಿ ಕರೆಯುತ್ತೇವೆ. ನಾವು ಸಾರ್ವಜನಿಕರನ್ನು ದೇವರೆಂದು ಸಹ ಉಲ್ಲೇಖಿಸುತ್ತೇವೆ. ಅದೇ ರೀತಿ ಸಚಿವರು ಪ್ರಧಾನಿಯ ಬಗ್ಗೆ ತಮ್ಮ ವೈಯಕ್ತಿಕ ಗೌರವವನ್ನು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

67 ವರ್ಷದ ಗುಲಾಬ್ ದೇವಿ ಅವರು ಸಂಭಾಲ್‌ನ ಚಂದೌಸಿ ಅಸೆಂಬ್ಲಿ ಕ್ಷೇತ್ರದಿಂದ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿರುವ ಐವರು ಮಹಿಳಾ ಸಚಿವರಲ್ಲಿ ಇವರು ಹಿರಿಯವರಾಗಿದ್ದಾರೆ. ರಾಜಕೀಯಕ್ಕೆ ಬರುವ ಮೊದಲು ರಾಜಕೀಯ ವಿಜ್ಞಾನ ಉಪನ್ಯಾಸಕಿಯಾಗಿದ್ದ ಗುಲಾಬ್ ದೇವಿಯವರು, ದಲಿತ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಆದಿತ್ಯನಾಥ್ ಅವರ ಅಧಿಕಾರದ ಮೊದಲ ಅವಧಿಯಲ್ಲಿ ಗುಲಾಬ್ ದೇವಿ ಅವರು ಸಮಾಜ ಕಲ್ಯಾಣ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಈಗ ಪ್ರೌಢ ಶಿಕ್ಷಣ ಇಲಾಖೆಯ ಸ್ವತಂತ್ರ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

ಇಂಗ್ಲೆಡ್ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬರನ್ನು ಭಾರತದ ಪ್ರಧಾನಿಯನ್ನಾಗಿ ಮಾಡಬೇಕೆಂದು ಪ್ರತಿಪಕ್ಷಗಳ ನಾಯಕರು ಹೇಳಿದ್ದರು. ಈ ಕುರಿತು ಕೆಲವು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾ ಗುಲಾಬ್‌ ದೇವಿಯವರು, “ಮೋದಿಜಿ ದೇವರ ಅವತಾರ” ಎಂದು ಬಣ್ಣಿಸಿದ್ದರು.

“ಭಾರತೀಯ ಮೂಲದ ಹಿಂದೂವಾಗಿರುವ ರಿಷಿ ಸುನಕ್ ಇಂಗ್ಲೆಡ್‌ನಲ್ಲಿ ಪ್ರಧಾನಿಯಾಗಿದ್ದಾರೆ. ಆ ದೇಶದ ನಡೆಯಿಂದ ಭಾರತ ಪಾಠ ಕಲಿಯಬೇಕು. ಅಲ್ಪಸಂಖ್ಯಾತ ಸಮುದಾಯದ ಜನರು ದೇಶವನ್ನು ಮುನ್ನಡೆಸಲು ಅವಕಾಶ ನೀಡಬೇಕು” ಎಂದು ಹೇಳಿದವರಲ್ಲಿ ಎಸ್‌ಪಿ ಸಂಸದರಾದ ಬಾರ್ಕ್ ಕೂಡ ಒಬ್ಬರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮೋದಿ ದೇವರ ಅವತಾರವಲ್ಲಾ… ದೆವ್ವದ ಅವತಾರ… ಈ ದೇಶಕ್ಕೆ ಹಿಡಿದ ಕೊಳ್ಳಿ ದೆವ್ವ ಅದು

  2. ಗೋಧ್ರಾದಲ್ಲಿ ತಾನು ರಾಕ್ಷಸನ ಅವತಾರ ಎಂದು ಈತನೇ ಸಾಬೀತು ಮಾಡಿದ್ದಾನೆ ಪಾಪ !!!😢😢😢😢😢

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...