Homeಮುಖಪುಟಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶದ ಸಚಿವರಾದ ಗುಲಾಬ್ ದೇವಿ ಅವರು ಅಕ್ಟೋಬರ್ 26ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. “ಪ್ರಧಾನಿ ಮೋದಿಯವರು ದೇವರ ಅವತಾರ. ಅವರು ಇಚ್ಛಿಸಿದರೆ ತಮ್ಮ ಜೀವನಪೂರ್ತಿ ಪ್ರಧಾನಿಯಾಗಿರಬಹುದು” ಎಂದಿದ್ದಾರೆ ಗುಲಾಬ್‌ ದೇವಿ.

“ಪ್ರಧಾನಿ ನರೇಂದ್ರ ಮೋದಿಯವರನ್ನು ಭೂಮಿಯ ಮೇಲಿನ ದೇವರ ಅವತಾರ ಎಂದು ಕರೆದಿರುವ ಬಗ್ಗೆ ಕ್ಷಮೆಯಾಚಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಜೊತೆ ಮಾತನಾಡಿರುವ ಅವರು, “ಜನರ ಮನೆಗಳಿಗೆ ನೀರು ತಲುಪಬೇಕು ಎಂದು ಅವರು (ಮೋದಿ) ಬಯಸಿದರೆ, ನೀರು ತಲುಪಲು ಪ್ರಾರಂಭಿಸುತ್ತದೆ. ಬಡವರಿಗೆ ಮನೆ ಸಿಗಬೇಕು ಎಂದು ಅವರು ಬಯಸಿದಾಗ, ಮನೆಗಳ ನಿರ್ಮಾಣ ಆರಂಭವಾಗುತ್ತದೆ. ಜನರು ಗ್ಯಾಸ್ ಸಂಪರ್ಕವನ್ನು ಪಡೆಯಬೇಕು ಎಂದು ಅವರು ಬಯಸಿದಾಗ, ಸಂಪರ್ಕಗಳು ಪ್ರಾರಂಭವಾಗುತ್ತವೆ. ಶೌಚಾಲಯಗಳು ನಿರ್ಮಾಣವಾಗುತ್ತವೆ. ಇದು ಮೋದಿಯವರನ್ನು ದೇವರ ಅವತಾರವನ್ನಾಗಿ ಮಾಡಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಲಾಬ್ ದೇವಿ ಅವರು ಅಕ್ಟೋಬರ್ 26‘ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಅವರು ಮೋದಿಯನ್ನು ದೇವರಿಗೆ ಸಮೀಕರಿಸುವ ಹೇಳಿಕೆಯನ್ನು ಅಂದು ನೀಡಿದರು. “ಮೋದಿ ಬಯಸಿದರೆ ತಮ್ಮ ಜೀವಿತಾವಧಿಯವರೆಗೆ ಪ್ರಧಾನಿಯಾಗಿರುತ್ತಾರೆ” ಎಂದಿದ್ದರು.

ಸಚಿವೆಯ ಹೇಳಿಕೆಗೆ ಸಮಾಜ ಪಕ್ಷದ ಸಂಸದ ಶಫಿಕೂರ್ ರೆಹಮಾನ್ ಬಾರ್ಕ್ ಪ್ರತಿಕ್ರಿಯಿಸಿ, “ಪಿಎಂ ನಿಜಕ್ಕೂ ದೇವರ ಅವತಾರವಾಗಿದ್ದರೆ, ಅವರು ರಾಜಕೀಯದಲ್ಲಿ ಏನು ಮಾಡುತ್ತಿದ್ದರು?” ಎಂದು ಕೇಳಿದ್ದಾರೆ. “ಮೋದಿ ಅವರು ರಾಜೀನಾಮೆ ನೀಡಬೇಕು. ಗುಲಾಬ್ ದೇವಿ ಅವರು ಕುತಂತ್ರದ ಮಿತಿಯನ್ನು ದಾಟಿದ್ದಾರೆ” ಎಂದು ಅವರು ಟೀಕಿಸಿದ್ದಾರೆ.

ಗುಲಾಬ್‌ ದೇವಿ, “ತಮ್ಮ ವೈಯಕ್ತಿಕ ನಂಬಿಕೆ ಏನೆಂಬುದರ ಬಗ್ಗೆ ಯಾರಿಗೂ ಸಮಸ್ಯೆಯಾಗಬಾರದು. ಪ್ರತಿಪಕ್ಷಗಳಿಗೆ ತನಗೆ ಅನಿಸಿದ್ದನ್ನು ಮಾತನಾಡಲು ಎಲ್ಲ ಹಕ್ಕಿದೆ. ಹಿಂದೂ ಧರ್ಮದಲ್ಲಿ ದೇವರನ್ನು ಮರಗಳಲ್ಲಿ, ಹಸುಗಳಲ್ಲಿ, ತಂದೆ-ತಾಯಿಗಳಲ್ಲಿ, ಗುರುಗಳಲ್ಲಿ ಕಾಣಲಾಗುತ್ತದೆ. ಹಾಗಾದರೆ ದೇಶದ ರಾಜನನ್ನು ದೇವರ ಪ್ರತಿನಿಧಿ (ಪ್ರತಿನಿಧಿ) ಎಂದು ನೋಡುವುದರಲ್ಲಿ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿಯವರು ಗುಲಾಬ್ ದೇವಿಯವರ ಮಾತುಗಳನ್ನು ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ಗೌರವಿಸುವ ವ್ಯಕ್ತಿಯನ್ನು ಈ ರೀತಿ ಕರೆಯುತ್ತೇವೆ. ನಾವು ಸಾರ್ವಜನಿಕರನ್ನು ದೇವರೆಂದು ಸಹ ಉಲ್ಲೇಖಿಸುತ್ತೇವೆ. ಅದೇ ರೀತಿ ಸಚಿವರು ಪ್ರಧಾನಿಯ ಬಗ್ಗೆ ತಮ್ಮ ವೈಯಕ್ತಿಕ ಗೌರವವನ್ನು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

67 ವರ್ಷದ ಗುಲಾಬ್ ದೇವಿ ಅವರು ಸಂಭಾಲ್‌ನ ಚಂದೌಸಿ ಅಸೆಂಬ್ಲಿ ಕ್ಷೇತ್ರದಿಂದ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿರುವ ಐವರು ಮಹಿಳಾ ಸಚಿವರಲ್ಲಿ ಇವರು ಹಿರಿಯವರಾಗಿದ್ದಾರೆ. ರಾಜಕೀಯಕ್ಕೆ ಬರುವ ಮೊದಲು ರಾಜಕೀಯ ವಿಜ್ಞಾನ ಉಪನ್ಯಾಸಕಿಯಾಗಿದ್ದ ಗುಲಾಬ್ ದೇವಿಯವರು, ದಲಿತ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಆದಿತ್ಯನಾಥ್ ಅವರ ಅಧಿಕಾರದ ಮೊದಲ ಅವಧಿಯಲ್ಲಿ ಗುಲಾಬ್ ದೇವಿ ಅವರು ಸಮಾಜ ಕಲ್ಯಾಣ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಈಗ ಪ್ರೌಢ ಶಿಕ್ಷಣ ಇಲಾಖೆಯ ಸ್ವತಂತ್ರ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

ಇಂಗ್ಲೆಡ್ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬರನ್ನು ಭಾರತದ ಪ್ರಧಾನಿಯನ್ನಾಗಿ ಮಾಡಬೇಕೆಂದು ಪ್ರತಿಪಕ್ಷಗಳ ನಾಯಕರು ಹೇಳಿದ್ದರು. ಈ ಕುರಿತು ಕೆಲವು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾ ಗುಲಾಬ್‌ ದೇವಿಯವರು, “ಮೋದಿಜಿ ದೇವರ ಅವತಾರ” ಎಂದು ಬಣ್ಣಿಸಿದ್ದರು.

“ಭಾರತೀಯ ಮೂಲದ ಹಿಂದೂವಾಗಿರುವ ರಿಷಿ ಸುನಕ್ ಇಂಗ್ಲೆಡ್‌ನಲ್ಲಿ ಪ್ರಧಾನಿಯಾಗಿದ್ದಾರೆ. ಆ ದೇಶದ ನಡೆಯಿಂದ ಭಾರತ ಪಾಠ ಕಲಿಯಬೇಕು. ಅಲ್ಪಸಂಖ್ಯಾತ ಸಮುದಾಯದ ಜನರು ದೇಶವನ್ನು ಮುನ್ನಡೆಸಲು ಅವಕಾಶ ನೀಡಬೇಕು” ಎಂದು ಹೇಳಿದವರಲ್ಲಿ ಎಸ್‌ಪಿ ಸಂಸದರಾದ ಬಾರ್ಕ್ ಕೂಡ ಒಬ್ಬರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮೋದಿ ದೇವರ ಅವತಾರವಲ್ಲಾ… ದೆವ್ವದ ಅವತಾರ… ಈ ದೇಶಕ್ಕೆ ಹಿಡಿದ ಕೊಳ್ಳಿ ದೆವ್ವ ಅದು

  2. ಗೋಧ್ರಾದಲ್ಲಿ ತಾನು ರಾಕ್ಷಸನ ಅವತಾರ ಎಂದು ಈತನೇ ಸಾಬೀತು ಮಾಡಿದ್ದಾನೆ ಪಾಪ !!!😢😢😢😢😢

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...