Homeಮುಖಪುಟಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶದ ಸಚಿವರಾದ ಗುಲಾಬ್ ದೇವಿ ಅವರು ಅಕ್ಟೋಬರ್ 26ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. “ಪ್ರಧಾನಿ ಮೋದಿಯವರು ದೇವರ ಅವತಾರ. ಅವರು ಇಚ್ಛಿಸಿದರೆ ತಮ್ಮ ಜೀವನಪೂರ್ತಿ ಪ್ರಧಾನಿಯಾಗಿರಬಹುದು” ಎಂದಿದ್ದಾರೆ ಗುಲಾಬ್‌ ದೇವಿ.

“ಪ್ರಧಾನಿ ನರೇಂದ್ರ ಮೋದಿಯವರನ್ನು ಭೂಮಿಯ ಮೇಲಿನ ದೇವರ ಅವತಾರ ಎಂದು ಕರೆದಿರುವ ಬಗ್ಗೆ ಕ್ಷಮೆಯಾಚಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಜೊತೆ ಮಾತನಾಡಿರುವ ಅವರು, “ಜನರ ಮನೆಗಳಿಗೆ ನೀರು ತಲುಪಬೇಕು ಎಂದು ಅವರು (ಮೋದಿ) ಬಯಸಿದರೆ, ನೀರು ತಲುಪಲು ಪ್ರಾರಂಭಿಸುತ್ತದೆ. ಬಡವರಿಗೆ ಮನೆ ಸಿಗಬೇಕು ಎಂದು ಅವರು ಬಯಸಿದಾಗ, ಮನೆಗಳ ನಿರ್ಮಾಣ ಆರಂಭವಾಗುತ್ತದೆ. ಜನರು ಗ್ಯಾಸ್ ಸಂಪರ್ಕವನ್ನು ಪಡೆಯಬೇಕು ಎಂದು ಅವರು ಬಯಸಿದಾಗ, ಸಂಪರ್ಕಗಳು ಪ್ರಾರಂಭವಾಗುತ್ತವೆ. ಶೌಚಾಲಯಗಳು ನಿರ್ಮಾಣವಾಗುತ್ತವೆ. ಇದು ಮೋದಿಯವರನ್ನು ದೇವರ ಅವತಾರವನ್ನಾಗಿ ಮಾಡಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಲಾಬ್ ದೇವಿ ಅವರು ಅಕ್ಟೋಬರ್ 26‘ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಅವರು ಮೋದಿಯನ್ನು ದೇವರಿಗೆ ಸಮೀಕರಿಸುವ ಹೇಳಿಕೆಯನ್ನು ಅಂದು ನೀಡಿದರು. “ಮೋದಿ ಬಯಸಿದರೆ ತಮ್ಮ ಜೀವಿತಾವಧಿಯವರೆಗೆ ಪ್ರಧಾನಿಯಾಗಿರುತ್ತಾರೆ” ಎಂದಿದ್ದರು.

ಸಚಿವೆಯ ಹೇಳಿಕೆಗೆ ಸಮಾಜ ಪಕ್ಷದ ಸಂಸದ ಶಫಿಕೂರ್ ರೆಹಮಾನ್ ಬಾರ್ಕ್ ಪ್ರತಿಕ್ರಿಯಿಸಿ, “ಪಿಎಂ ನಿಜಕ್ಕೂ ದೇವರ ಅವತಾರವಾಗಿದ್ದರೆ, ಅವರು ರಾಜಕೀಯದಲ್ಲಿ ಏನು ಮಾಡುತ್ತಿದ್ದರು?” ಎಂದು ಕೇಳಿದ್ದಾರೆ. “ಮೋದಿ ಅವರು ರಾಜೀನಾಮೆ ನೀಡಬೇಕು. ಗುಲಾಬ್ ದೇವಿ ಅವರು ಕುತಂತ್ರದ ಮಿತಿಯನ್ನು ದಾಟಿದ್ದಾರೆ” ಎಂದು ಅವರು ಟೀಕಿಸಿದ್ದಾರೆ.

ಗುಲಾಬ್‌ ದೇವಿ, “ತಮ್ಮ ವೈಯಕ್ತಿಕ ನಂಬಿಕೆ ಏನೆಂಬುದರ ಬಗ್ಗೆ ಯಾರಿಗೂ ಸಮಸ್ಯೆಯಾಗಬಾರದು. ಪ್ರತಿಪಕ್ಷಗಳಿಗೆ ತನಗೆ ಅನಿಸಿದ್ದನ್ನು ಮಾತನಾಡಲು ಎಲ್ಲ ಹಕ್ಕಿದೆ. ಹಿಂದೂ ಧರ್ಮದಲ್ಲಿ ದೇವರನ್ನು ಮರಗಳಲ್ಲಿ, ಹಸುಗಳಲ್ಲಿ, ತಂದೆ-ತಾಯಿಗಳಲ್ಲಿ, ಗುರುಗಳಲ್ಲಿ ಕಾಣಲಾಗುತ್ತದೆ. ಹಾಗಾದರೆ ದೇಶದ ರಾಜನನ್ನು ದೇವರ ಪ್ರತಿನಿಧಿ (ಪ್ರತಿನಿಧಿ) ಎಂದು ನೋಡುವುದರಲ್ಲಿ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿಯವರು ಗುಲಾಬ್ ದೇವಿಯವರ ಮಾತುಗಳನ್ನು ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ಗೌರವಿಸುವ ವ್ಯಕ್ತಿಯನ್ನು ಈ ರೀತಿ ಕರೆಯುತ್ತೇವೆ. ನಾವು ಸಾರ್ವಜನಿಕರನ್ನು ದೇವರೆಂದು ಸಹ ಉಲ್ಲೇಖಿಸುತ್ತೇವೆ. ಅದೇ ರೀತಿ ಸಚಿವರು ಪ್ರಧಾನಿಯ ಬಗ್ಗೆ ತಮ್ಮ ವೈಯಕ್ತಿಕ ಗೌರವವನ್ನು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

67 ವರ್ಷದ ಗುಲಾಬ್ ದೇವಿ ಅವರು ಸಂಭಾಲ್‌ನ ಚಂದೌಸಿ ಅಸೆಂಬ್ಲಿ ಕ್ಷೇತ್ರದಿಂದ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿರುವ ಐವರು ಮಹಿಳಾ ಸಚಿವರಲ್ಲಿ ಇವರು ಹಿರಿಯವರಾಗಿದ್ದಾರೆ. ರಾಜಕೀಯಕ್ಕೆ ಬರುವ ಮೊದಲು ರಾಜಕೀಯ ವಿಜ್ಞಾನ ಉಪನ್ಯಾಸಕಿಯಾಗಿದ್ದ ಗುಲಾಬ್ ದೇವಿಯವರು, ದಲಿತ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಆದಿತ್ಯನಾಥ್ ಅವರ ಅಧಿಕಾರದ ಮೊದಲ ಅವಧಿಯಲ್ಲಿ ಗುಲಾಬ್ ದೇವಿ ಅವರು ಸಮಾಜ ಕಲ್ಯಾಣ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಈಗ ಪ್ರೌಢ ಶಿಕ್ಷಣ ಇಲಾಖೆಯ ಸ್ವತಂತ್ರ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

ಇಂಗ್ಲೆಡ್ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬರನ್ನು ಭಾರತದ ಪ್ರಧಾನಿಯನ್ನಾಗಿ ಮಾಡಬೇಕೆಂದು ಪ್ರತಿಪಕ್ಷಗಳ ನಾಯಕರು ಹೇಳಿದ್ದರು. ಈ ಕುರಿತು ಕೆಲವು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾ ಗುಲಾಬ್‌ ದೇವಿಯವರು, “ಮೋದಿಜಿ ದೇವರ ಅವತಾರ” ಎಂದು ಬಣ್ಣಿಸಿದ್ದರು.

“ಭಾರತೀಯ ಮೂಲದ ಹಿಂದೂವಾಗಿರುವ ರಿಷಿ ಸುನಕ್ ಇಂಗ್ಲೆಡ್‌ನಲ್ಲಿ ಪ್ರಧಾನಿಯಾಗಿದ್ದಾರೆ. ಆ ದೇಶದ ನಡೆಯಿಂದ ಭಾರತ ಪಾಠ ಕಲಿಯಬೇಕು. ಅಲ್ಪಸಂಖ್ಯಾತ ಸಮುದಾಯದ ಜನರು ದೇಶವನ್ನು ಮುನ್ನಡೆಸಲು ಅವಕಾಶ ನೀಡಬೇಕು” ಎಂದು ಹೇಳಿದವರಲ್ಲಿ ಎಸ್‌ಪಿ ಸಂಸದರಾದ ಬಾರ್ಕ್ ಕೂಡ ಒಬ್ಬರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮೋದಿ ದೇವರ ಅವತಾರವಲ್ಲಾ… ದೆವ್ವದ ಅವತಾರ… ಈ ದೇಶಕ್ಕೆ ಹಿಡಿದ ಕೊಳ್ಳಿ ದೆವ್ವ ಅದು

  2. ಗೋಧ್ರಾದಲ್ಲಿ ತಾನು ರಾಕ್ಷಸನ ಅವತಾರ ಎಂದು ಈತನೇ ಸಾಬೀತು ಮಾಡಿದ್ದಾನೆ ಪಾಪ !!!😢😢😢😢😢

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...