Homeಮುಖಪುಟಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶದ ಸಚಿವರಾದ ಗುಲಾಬ್ ದೇವಿ ಅವರು ಅಕ್ಟೋಬರ್ 26ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. “ಪ್ರಧಾನಿ ಮೋದಿಯವರು ದೇವರ ಅವತಾರ. ಅವರು ಇಚ್ಛಿಸಿದರೆ ತಮ್ಮ ಜೀವನಪೂರ್ತಿ ಪ್ರಧಾನಿಯಾಗಿರಬಹುದು” ಎಂದಿದ್ದಾರೆ ಗುಲಾಬ್‌ ದೇವಿ.

“ಪ್ರಧಾನಿ ನರೇಂದ್ರ ಮೋದಿಯವರನ್ನು ಭೂಮಿಯ ಮೇಲಿನ ದೇವರ ಅವತಾರ ಎಂದು ಕರೆದಿರುವ ಬಗ್ಗೆ ಕ್ಷಮೆಯಾಚಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಜೊತೆ ಮಾತನಾಡಿರುವ ಅವರು, “ಜನರ ಮನೆಗಳಿಗೆ ನೀರು ತಲುಪಬೇಕು ಎಂದು ಅವರು (ಮೋದಿ) ಬಯಸಿದರೆ, ನೀರು ತಲುಪಲು ಪ್ರಾರಂಭಿಸುತ್ತದೆ. ಬಡವರಿಗೆ ಮನೆ ಸಿಗಬೇಕು ಎಂದು ಅವರು ಬಯಸಿದಾಗ, ಮನೆಗಳ ನಿರ್ಮಾಣ ಆರಂಭವಾಗುತ್ತದೆ. ಜನರು ಗ್ಯಾಸ್ ಸಂಪರ್ಕವನ್ನು ಪಡೆಯಬೇಕು ಎಂದು ಅವರು ಬಯಸಿದಾಗ, ಸಂಪರ್ಕಗಳು ಪ್ರಾರಂಭವಾಗುತ್ತವೆ. ಶೌಚಾಲಯಗಳು ನಿರ್ಮಾಣವಾಗುತ್ತವೆ. ಇದು ಮೋದಿಯವರನ್ನು ದೇವರ ಅವತಾರವನ್ನಾಗಿ ಮಾಡಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಲಾಬ್ ದೇವಿ ಅವರು ಅಕ್ಟೋಬರ್ 26‘ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಅವರು ಮೋದಿಯನ್ನು ದೇವರಿಗೆ ಸಮೀಕರಿಸುವ ಹೇಳಿಕೆಯನ್ನು ಅಂದು ನೀಡಿದರು. “ಮೋದಿ ಬಯಸಿದರೆ ತಮ್ಮ ಜೀವಿತಾವಧಿಯವರೆಗೆ ಪ್ರಧಾನಿಯಾಗಿರುತ್ತಾರೆ” ಎಂದಿದ್ದರು.

ಸಚಿವೆಯ ಹೇಳಿಕೆಗೆ ಸಮಾಜ ಪಕ್ಷದ ಸಂಸದ ಶಫಿಕೂರ್ ರೆಹಮಾನ್ ಬಾರ್ಕ್ ಪ್ರತಿಕ್ರಿಯಿಸಿ, “ಪಿಎಂ ನಿಜಕ್ಕೂ ದೇವರ ಅವತಾರವಾಗಿದ್ದರೆ, ಅವರು ರಾಜಕೀಯದಲ್ಲಿ ಏನು ಮಾಡುತ್ತಿದ್ದರು?” ಎಂದು ಕೇಳಿದ್ದಾರೆ. “ಮೋದಿ ಅವರು ರಾಜೀನಾಮೆ ನೀಡಬೇಕು. ಗುಲಾಬ್ ದೇವಿ ಅವರು ಕುತಂತ್ರದ ಮಿತಿಯನ್ನು ದಾಟಿದ್ದಾರೆ” ಎಂದು ಅವರು ಟೀಕಿಸಿದ್ದಾರೆ.

ಗುಲಾಬ್‌ ದೇವಿ, “ತಮ್ಮ ವೈಯಕ್ತಿಕ ನಂಬಿಕೆ ಏನೆಂಬುದರ ಬಗ್ಗೆ ಯಾರಿಗೂ ಸಮಸ್ಯೆಯಾಗಬಾರದು. ಪ್ರತಿಪಕ್ಷಗಳಿಗೆ ತನಗೆ ಅನಿಸಿದ್ದನ್ನು ಮಾತನಾಡಲು ಎಲ್ಲ ಹಕ್ಕಿದೆ. ಹಿಂದೂ ಧರ್ಮದಲ್ಲಿ ದೇವರನ್ನು ಮರಗಳಲ್ಲಿ, ಹಸುಗಳಲ್ಲಿ, ತಂದೆ-ತಾಯಿಗಳಲ್ಲಿ, ಗುರುಗಳಲ್ಲಿ ಕಾಣಲಾಗುತ್ತದೆ. ಹಾಗಾದರೆ ದೇಶದ ರಾಜನನ್ನು ದೇವರ ಪ್ರತಿನಿಧಿ (ಪ್ರತಿನಿಧಿ) ಎಂದು ನೋಡುವುದರಲ್ಲಿ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿಯವರು ಗುಲಾಬ್ ದೇವಿಯವರ ಮಾತುಗಳನ್ನು ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ಗೌರವಿಸುವ ವ್ಯಕ್ತಿಯನ್ನು ಈ ರೀತಿ ಕರೆಯುತ್ತೇವೆ. ನಾವು ಸಾರ್ವಜನಿಕರನ್ನು ದೇವರೆಂದು ಸಹ ಉಲ್ಲೇಖಿಸುತ್ತೇವೆ. ಅದೇ ರೀತಿ ಸಚಿವರು ಪ್ರಧಾನಿಯ ಬಗ್ಗೆ ತಮ್ಮ ವೈಯಕ್ತಿಕ ಗೌರವವನ್ನು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

67 ವರ್ಷದ ಗುಲಾಬ್ ದೇವಿ ಅವರು ಸಂಭಾಲ್‌ನ ಚಂದೌಸಿ ಅಸೆಂಬ್ಲಿ ಕ್ಷೇತ್ರದಿಂದ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿರುವ ಐವರು ಮಹಿಳಾ ಸಚಿವರಲ್ಲಿ ಇವರು ಹಿರಿಯವರಾಗಿದ್ದಾರೆ. ರಾಜಕೀಯಕ್ಕೆ ಬರುವ ಮೊದಲು ರಾಜಕೀಯ ವಿಜ್ಞಾನ ಉಪನ್ಯಾಸಕಿಯಾಗಿದ್ದ ಗುಲಾಬ್ ದೇವಿಯವರು, ದಲಿತ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಆದಿತ್ಯನಾಥ್ ಅವರ ಅಧಿಕಾರದ ಮೊದಲ ಅವಧಿಯಲ್ಲಿ ಗುಲಾಬ್ ದೇವಿ ಅವರು ಸಮಾಜ ಕಲ್ಯಾಣ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಈಗ ಪ್ರೌಢ ಶಿಕ್ಷಣ ಇಲಾಖೆಯ ಸ್ವತಂತ್ರ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

ಇಂಗ್ಲೆಡ್ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬರನ್ನು ಭಾರತದ ಪ್ರಧಾನಿಯನ್ನಾಗಿ ಮಾಡಬೇಕೆಂದು ಪ್ರತಿಪಕ್ಷಗಳ ನಾಯಕರು ಹೇಳಿದ್ದರು. ಈ ಕುರಿತು ಕೆಲವು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾ ಗುಲಾಬ್‌ ದೇವಿಯವರು, “ಮೋದಿಜಿ ದೇವರ ಅವತಾರ” ಎಂದು ಬಣ್ಣಿಸಿದ್ದರು.

“ಭಾರತೀಯ ಮೂಲದ ಹಿಂದೂವಾಗಿರುವ ರಿಷಿ ಸುನಕ್ ಇಂಗ್ಲೆಡ್‌ನಲ್ಲಿ ಪ್ರಧಾನಿಯಾಗಿದ್ದಾರೆ. ಆ ದೇಶದ ನಡೆಯಿಂದ ಭಾರತ ಪಾಠ ಕಲಿಯಬೇಕು. ಅಲ್ಪಸಂಖ್ಯಾತ ಸಮುದಾಯದ ಜನರು ದೇಶವನ್ನು ಮುನ್ನಡೆಸಲು ಅವಕಾಶ ನೀಡಬೇಕು” ಎಂದು ಹೇಳಿದವರಲ್ಲಿ ಎಸ್‌ಪಿ ಸಂಸದರಾದ ಬಾರ್ಕ್ ಕೂಡ ಒಬ್ಬರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮೋದಿ ದೇವರ ಅವತಾರವಲ್ಲಾ… ದೆವ್ವದ ಅವತಾರ… ಈ ದೇಶಕ್ಕೆ ಹಿಡಿದ ಕೊಳ್ಳಿ ದೆವ್ವ ಅದು

  2. ಗೋಧ್ರಾದಲ್ಲಿ ತಾನು ರಾಕ್ಷಸನ ಅವತಾರ ಎಂದು ಈತನೇ ಸಾಬೀತು ಮಾಡಿದ್ದಾನೆ ಪಾಪ !!!😢😢😢😢😢

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...