Homeಮುಖಪುಟಅದಾನಿಗೆ ಅನುಕೂಲ ಮಾಡಿಕೊಡಲು ವಿದ್ಯುತ್ ರಫ್ತು ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರ : ವರದಿ

ಅದಾನಿಗೆ ಅನುಕೂಲ ಮಾಡಿಕೊಡಲು ವಿದ್ಯುತ್ ರಫ್ತು ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರ : ವರದಿ

- Advertisement -
- Advertisement -

ಬಾಂಗ್ಲಾದೇಶಕ್ಕೆ ಪೂರೈಸುವುದಾಗಿ ಒಪ್ಪಂದ ಮಾಡಿಕೊಂಡಿರುವ ವಿದ್ಯುತ್ ಅನ್ನು ಭಾರತದೊಳಗೆ ಮಾರಾಟ ಮಾಡಲು ಅದಾನಿ ಪವರ್‌ಗೆ ಅವಕಾಶ ನೀಡುವ ಸಲುವಾಗಿ ಕೇಂದ್ರ ಸರ್ಕಾರವು ವಿದ್ಯುತ್ ರಫ್ತು ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಿದೆ ಎಂದು ರಾಯಿಟರ್ಸ್ ಬುಧವಾರ ವರದಿ ಮಾಡಿದೆ.

ಈ ಕ್ರಮವು ಬಾಂಗ್ಲಾದೇಶದ ರಾಜಕೀಯ ಬಿಕ್ಕಟ್ಟಿನಿಂದ ಉಂಟಾಗುವ ಸಂಭವನೀಯ ಸಮಸ್ಯೆಗಳಿಂದ ಅದಾನಿ ಪವರ್ ಅನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದು ವರದಿ ತಿಳಿಸಿದೆ.

ಬಾಂಗ್ಲಾದೇಶಕ್ಕೆ ಪ್ರತ್ಯೇಕವಾಗಿ ವಿದ್ಯುತ್ ಸರಬರಾಜು ಮಾಡುವ ಜನರೇಟರ್‌ಗಳ ಕುರಿತು 2018ರಲ್ಲಿ ಕೇಂದ್ರ ಸರ್ಕಾರವು ಮಾರ್ಗಸೂಚಿಗಳನ್ನು ರೂಪಿಸಿತ್ತು. ಅದರನ್ವಯ ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿರುವ ಅದಾನಿ ಪವರ್‌ನ 1,600-ಮೆಗಾವ್ಯಾಟ್ ವಿದ್ಯುತ್ ಸ್ಥಾವರವು ಪ್ರಸ್ತುತ ಅದು ಉತ್ಪಾದಿಸುವ ಎಲ್ಲಾ ವಿದ್ಯುಚ್ಛಕ್ತಿಯನ್ನು ಮತ್ತೊಂದು ದೇಶಕ್ಕೆ ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು ಬಾಂಗ್ಲಾದೇಶಕ್ಕೆ ವಿದ್ಯುತ್ ಪೂರೈಸುತ್ತಿದೆ.

ಆಗಸ್ಟ್ 12ರಂದು ಕೇಂದ್ರ ವಿದ್ಯುತ್ ಸಚಿವಾಲಯವು ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಿದ್ದು, ಇದರಿಂದ ಭಾರತದೊಳಗೆ ವಿದ್ಯುತ್ ಮಾರಾಟಕ್ಕೆ ಅನುಕೂಲವಾಗುವಂತೆ ವಿದ್ಯುತ್ ಉತ್ಪಾದನಾ ಕೇಂದ್ರವನ್ನು ಭಾರತೀಯ ಗ್ರಿಡ್‌ಗೆ ಸಂಪರ್ಕಿಸಲು ಸರ್ಕಾರವು ಅನುಮತಿ ನೀಡಬಹುದು ರಾಯಿಟರ್ಸ್ ಹೇಳಿದೆ.

ರಾಯಿಟರ್ಸ್ ಪ್ರಕಾರ, ಹೊರ ದೇಶದಿಂದ ಪಾವತಿ ವಿಳಂಬವಾದರೆ ಭಾರತೀಯ ಗ್ರಿಡ್‌ಗೆ ವಿದ್ಯುತ್ ಮಾರಾಟ ಮಾಡಲು ತಿದ್ದುಪಡಿ ಅನುಮತಿಸುತ್ತದೆ. ಮಾರ್ಗಸೂಚಿಗಳ ತಿದ್ದಪಡಿ ಭಾರತದಲ್ಲಿ ಒಟ್ಟಾರೆ ವಿದ್ಯುತ್ ಲಭ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅದಾನಿ ಗ್ರೂಪ್ ಸಮರ್ಥಿಸಿಕೊಂಡಿದೆ. ಆದರೆ, ಇದು ಅದಾನಿಯನ್ನು ರಕ್ಷಿಸುವ ಪ್ರಯತ್ನ ಎಂದು ವರದಿಗಳು ಹೇಳಿವೆ.

ಬಾಂಗ್ಲಾದೇಶದಲ್ಲಿ ಅದಾನಿ ಪವರ್‌ನ ವಿದ್ಯುಚ್ಛಕ್ತಿ ರಫ್ತು ವಿವಾದದ ಕೇಂದ್ರವಾಗಿದೆ. ಅದಾನಿ ಹೆಚ್ಚಿನ ಬೆಲೆಗೆ ವಿದ್ಯುತ್ ಮಾರುತ್ತಿದೆ ಎಂದು ಬಾಂಗ್ಲಾದ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅದಾನಿ ಸಮೂಹ ಸಂಸ್ಥೆಯು 2017ರಲ್ಲಿ ಸಹಿ ಮಾಡಿದ ಒಪ್ಪಂದದ ಪ್ರಕಾರ, ಅದು ನೆರೆಯ ಬಾಂಗ್ಲಾದೇಶಕ್ಕೆ ವಿದ್ಯುತ್ ಮಾರಾಟ ಮಾಡುತ್ತಿದೆ. ಆದರೆ, ಕಳೆದ ವರ್ಷ, ಬಾಂಗ್ಲಾದೇಶದ ವಿದ್ಯುತ್ ಅಭಿವೃದ್ಧಿ ಮಂಡಳಿಯು ಒಪ್ಪಂದವನ್ನು ಪರಿಷ್ಕರಿಸುವಂತೆ ಕೋರಿ ಕಂಪನಿಗೆ ಪತ್ರ ಬರೆದಿತ್ತು. ಆದರೆ, ಪರಿಷ್ಕರಣೆಯ ಬಗ್ಗೆ ಇದುವರೆಗೆ ಯಾವುದೇ ವರದಿಯಾಗಿಲ್ಲ.

ಇದನ್ನೂ ಓದಿ : ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿಯಿಂದ 100ಕ್ಕೂ ಹೆಚ್ಚು ‘ಇಸ್ಲಾಮೋಫೋಬಿಕ್’ ಹೇಳಿಕೆ: ಹ್ಯೂಮನ್ ರೈಟ್ಸ್ ವಾಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...