Homeಮುಖಪುಟಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಇಂದಿನ ಪತ್ರಿಕೆಗಳಲ್ಲಿ ಬಂದ ವರದಿಯಲ್ಲಿ ೧೪ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ ಎಂದು ಹೇಳಲಾಗಿದೆ. ಆದರೆ ಶಿವಸುಂದರ್‌ ಅವರು ಅದು ಸುಳ್ಳು ಎನ್ನುತ್ತಿದ್ದಾರೆ.

- Advertisement -
- Advertisement -

ನಿನ್ನೆ ಮೋದಿ ಸರ್ಕಾರ ರೈತರ 14 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (MSP) ಯನ್ನು ಘೋಷಿಸಿದೆ. ಹಾಗೂ ಈ ಮೂಲಕ ಕೋವಿಡ್ ಕಷ್ಟದ ಕಾಲದಲ್ಲಿ ರೈತರ ಆದಾಯ ದ್ವಿಗುಣಗೊಳಿಸಿ ರೈತರನ್ನು ಕಾಪಾಡಲಾಗಿದೆ ಎಂದು ಮೋದಿ ಸರ್ಕಾರ ಘೋಷಿಸಿದೆ.

ಆದರೆ ಮೋದಿ ಸರ್ಕಾರ ಘೋಷಿರುವ MSP ದರಗಳು, ಹೆಚ್ಚಾಗಿರುವುದಿರಲಿ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ ಎಂದು ಚಿಂತಕ ಶಿವಸುಂದರ್‌ ಟೀಕಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ರೈತರ ಆದಾಯ ದ್ವಿಗುಣಗೊಳ್ಳುವುದಿರಲಿ ಕನಿಷ್ಟ ಸ್ಥಿರವಾಗಿರಬೇಕೆಂದರೂ ರೈತನ ಉತ್ಪಾದಕ ವೆಚ್ಚಕ್ಕೆ ೧.೫ ಪಟ್ಟು ಹೆಚ್ಚು ಬೆಲೆಯನ್ನು ಒದಗಿಸಬೇಕು. ಆದರೆ ಆ ಉತ್ಪಾದಕ ವೆಚ್ಚವನ್ನು ಲೆಕ್ಕ ಹಾಕುವಾಗ ಸ್ವಾಮಿನಾಥನ್ ವರದಿಯ ಪ್ರಕಾರ ರೈತನ ಇತರ ಮೂಲಭೂತ ಸರಕು ವೆಚ್ಚಗಳ ಜೊತೆಗೆ ಭೂಮಿಯ ಸವಕಳಿ ವೆಚ್ಚ ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಸೇರಿಸಿಕೊಳ್ಳಬೇಕು. ಅದನ್ನೇ C-2 ಉತ್ಪಾದಕ ವೆಚ್ಚ ಎಂದು ಕರೆಯುತ್ತಾರೆ.

ಸ್ವಾಮಿನಾಥನ್ ವರದಿಯ ಪ್ರಕಾರ ರೈತರ ಆದಾಯ ಸ್ಥಿರವಾಗಬೇಕೆಂದರೂ ಸರ್ಕಾರ ಕೊಡುವ ಎಂಎಸ್‌ಪಿ ದರ ಈ C-2 ವೆಚ್ಚಕ್ಕಿಂತ ಎರಡು ಪಟ್ಟು ಹೆಚ್ಚಿರಬೇಕಿತ್ತು. ಆದರೆ ಮೋದಿ ಸರ್ಕಾರ ರೈತರ ಉತ್ಪಾದನಾ ವೆಚ್ಚವನ್ನು ಲೆಕ್ಕಹಾಕುವಾಗ C-2 ಆಧರಿಸಿ ಲೆಕ್ಕಾಚಾರ ಮಾಡುವುದಿಲ್ಲ. ಅದು ರೈತ ಒಳಸುರಿಗಳಿಗೆ ಅಂದರೆ ಬೀಜ, ಗೊಬ್ಬರ, ಕೂಲಿ…ಇತ್ಯಾದಿಗಳನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಸ್ವಾಮಿನಾಥನ್ ವರದಿಯಂತೆ ಭೂಮಿಯ ಸವಕಳಿ, ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಲೆಕ್ಕಕ್ಕೇ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಮೋದಿ ಸರ್ಕಾರ MSP ಯ ಹೆಸರಿನಲ್ಲಿ ರೈತರಿಗೆ ದೊಡ್ಡ ಮೋಸವನ್ನೇ ಮಾಡುತ್ತಾ ಬರುತ್ತಿದೆ ಎಂದು ಶಿವಸುಂದರ್‌ ತಿಳಿಸಿದ್ದಾರೆ.

ಈ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲಾ ಬಗೆಯ ಉತ್ಪಾದನ ಹಾಗೂ ಸರಬರಾಜು ಮತ್ತು ಸಂಗ್ರಹ ವೆಚ್ಚ ಹೆಚ್ಚಿರುವುದರಿಂದ ಈ ಬಾರಿಯಾದರೂ ಮೋದಿ ಸರ್ಕಾರ ನೈಜ ದರದಲ್ಲಿ MSP ದರವನ್ನು ಹೆಚ್ಚಿಸಿ ರೈತರ ಕಷ್ಟಗಳನ್ನು ಸ್ವಲ್ಪವಾದರೂ ಕಡಿಮೆಮಾಡಬಹುದಿತ್ತು. ಆದರೆ ಮೋದಿ ಸರ್ಕಾರ MSP ದರವನ್ನು ಹೆಚ್ಚು ಮಾಡುವುದಕ್ಕಿಂತ ಸುಳ್ಳುಗಳನ್ನು ಹೆಚ್ಚು ಹೇಳುತ್ತಾ ರೈತರನ್ನು ಮೋಸ ಮಾಡುತ್ತಿದೆ ಎಂದಿದ್ದಾರೆ.

ಎಂಬುದು ಕೆಳಗಿನ ಪಟ್ಟಿಯನ್ನು ನೋಡಿದರೆ ಸ್ಪಷ್ಟವಾಗಿ ಅರ್ಥವಾಗುತ್ತದೆ:

 

2019-20 ರ ಸಾಲಿನಲ್ಲಿ ಸರಾಸರಿ ಹಣದುಬ್ಬರ ದರ ಶೇ.4.5- 5 ಇತ್ತು. ಅಂದರೆ ಕಳೆದ ವರ್ಷ ದ 100 ರೂ. ನ ಮೌಲ್ಯ ಈ ವರ್ಷ ದ 105 ರೂ. ಎಂದರ್ಥ.. ಅಂದರೆ ಈ ವರ್ಷ 105 ರೂ. ಕೊಟ್ಟರೂ ಅದು 5 ರೂ. ಹೆಚ್ಚಾದಂತಲ್ಲ. ಏಕೆಂದರೆ ಶೇ.5ರ ಹಣದುಬ್ಬರವನ್ನು ಲೆಕ್ಕಕ್ಕೆ ತೆಗೆದುಕೊಂಡಾಗ ಈ ವರ್ಷದ 105 ರೂ.ನ ನಿಜವಾದ ಮೌಲ್ಯ ಕಳೆದ ವರ್ಷ ದ 100 ರೂ.ಮಾತ್ರ..

ಹೀಗಾಗಿ ಈ ವರ್ಷ ಘೋಷಿಸಿರುವ MSP ದರ ಹೋದ ವರ್ಷದ ದರಕ್ಕಿಂತ ಕನಿಷ್ಟ ಶೇ.5ಕ್ಕಿಂತ ಹೆಚ್ಚಿದ್ದರೆ ಮಾತ್ರ ಈ ವರ್ಷ ಹೆಚ್ಚಿಗೆ ದರ ಕೊಡಲಾಗಿದೆ ಎಂದರ್ಥ….. MSP ದರ ಹೆಚ್ಚಳವು ಹೋದವರ್ಷಕ್ಕಿಂತ ಶೇ.5 ಕ್ಕಿಂತ ಕಡಿಮೆ ಇದೆ ಎಂದರೆ ಸಾರಾಂಶದಲ್ಲಿ ಹೋದವರ್ಷ ಕೊಟ್ಟಷ್ಟು ಕೂಡಾ ಈ ವರ್ಷ ಕೊಟ್ಟಿಲ್ಲ ಎಂದರ್ಥ…

ಹಾಗಾಗಿ ಮೋದಿ ಸರ್ಕಾರವು ಈ ವರ್ಷ ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆ ಕಳೆದ ವರ್ಷಕ್ಕಿಂತ ಕಡಿಮೆಯಿದೆ. ಈಗಾದರೆ ರೈತರ ಕಥೆಯೇನು?


ಇದನ್ನೂ ಓದಿ: ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!! ಶಿವಸುಂದರ್ ಬರೆಯುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...