Homeಮುಖಪುಟಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಇಂದಿನ ಪತ್ರಿಕೆಗಳಲ್ಲಿ ಬಂದ ವರದಿಯಲ್ಲಿ ೧೪ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ ಎಂದು ಹೇಳಲಾಗಿದೆ. ಆದರೆ ಶಿವಸುಂದರ್‌ ಅವರು ಅದು ಸುಳ್ಳು ಎನ್ನುತ್ತಿದ್ದಾರೆ.

- Advertisement -
- Advertisement -

ನಿನ್ನೆ ಮೋದಿ ಸರ್ಕಾರ ರೈತರ 14 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (MSP) ಯನ್ನು ಘೋಷಿಸಿದೆ. ಹಾಗೂ ಈ ಮೂಲಕ ಕೋವಿಡ್ ಕಷ್ಟದ ಕಾಲದಲ್ಲಿ ರೈತರ ಆದಾಯ ದ್ವಿಗುಣಗೊಳಿಸಿ ರೈತರನ್ನು ಕಾಪಾಡಲಾಗಿದೆ ಎಂದು ಮೋದಿ ಸರ್ಕಾರ ಘೋಷಿಸಿದೆ.

ಆದರೆ ಮೋದಿ ಸರ್ಕಾರ ಘೋಷಿರುವ MSP ದರಗಳು, ಹೆಚ್ಚಾಗಿರುವುದಿರಲಿ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ ಎಂದು ಚಿಂತಕ ಶಿವಸುಂದರ್‌ ಟೀಕಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ರೈತರ ಆದಾಯ ದ್ವಿಗುಣಗೊಳ್ಳುವುದಿರಲಿ ಕನಿಷ್ಟ ಸ್ಥಿರವಾಗಿರಬೇಕೆಂದರೂ ರೈತನ ಉತ್ಪಾದಕ ವೆಚ್ಚಕ್ಕೆ ೧.೫ ಪಟ್ಟು ಹೆಚ್ಚು ಬೆಲೆಯನ್ನು ಒದಗಿಸಬೇಕು. ಆದರೆ ಆ ಉತ್ಪಾದಕ ವೆಚ್ಚವನ್ನು ಲೆಕ್ಕ ಹಾಕುವಾಗ ಸ್ವಾಮಿನಾಥನ್ ವರದಿಯ ಪ್ರಕಾರ ರೈತನ ಇತರ ಮೂಲಭೂತ ಸರಕು ವೆಚ್ಚಗಳ ಜೊತೆಗೆ ಭೂಮಿಯ ಸವಕಳಿ ವೆಚ್ಚ ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಸೇರಿಸಿಕೊಳ್ಳಬೇಕು. ಅದನ್ನೇ C-2 ಉತ್ಪಾದಕ ವೆಚ್ಚ ಎಂದು ಕರೆಯುತ್ತಾರೆ.

ಸ್ವಾಮಿನಾಥನ್ ವರದಿಯ ಪ್ರಕಾರ ರೈತರ ಆದಾಯ ಸ್ಥಿರವಾಗಬೇಕೆಂದರೂ ಸರ್ಕಾರ ಕೊಡುವ ಎಂಎಸ್‌ಪಿ ದರ ಈ C-2 ವೆಚ್ಚಕ್ಕಿಂತ ಎರಡು ಪಟ್ಟು ಹೆಚ್ಚಿರಬೇಕಿತ್ತು. ಆದರೆ ಮೋದಿ ಸರ್ಕಾರ ರೈತರ ಉತ್ಪಾದನಾ ವೆಚ್ಚವನ್ನು ಲೆಕ್ಕಹಾಕುವಾಗ C-2 ಆಧರಿಸಿ ಲೆಕ್ಕಾಚಾರ ಮಾಡುವುದಿಲ್ಲ. ಅದು ರೈತ ಒಳಸುರಿಗಳಿಗೆ ಅಂದರೆ ಬೀಜ, ಗೊಬ್ಬರ, ಕೂಲಿ…ಇತ್ಯಾದಿಗಳನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಸ್ವಾಮಿನಾಥನ್ ವರದಿಯಂತೆ ಭೂಮಿಯ ಸವಕಳಿ, ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಲೆಕ್ಕಕ್ಕೇ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಮೋದಿ ಸರ್ಕಾರ MSP ಯ ಹೆಸರಿನಲ್ಲಿ ರೈತರಿಗೆ ದೊಡ್ಡ ಮೋಸವನ್ನೇ ಮಾಡುತ್ತಾ ಬರುತ್ತಿದೆ ಎಂದು ಶಿವಸುಂದರ್‌ ತಿಳಿಸಿದ್ದಾರೆ.

ಈ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲಾ ಬಗೆಯ ಉತ್ಪಾದನ ಹಾಗೂ ಸರಬರಾಜು ಮತ್ತು ಸಂಗ್ರಹ ವೆಚ್ಚ ಹೆಚ್ಚಿರುವುದರಿಂದ ಈ ಬಾರಿಯಾದರೂ ಮೋದಿ ಸರ್ಕಾರ ನೈಜ ದರದಲ್ಲಿ MSP ದರವನ್ನು ಹೆಚ್ಚಿಸಿ ರೈತರ ಕಷ್ಟಗಳನ್ನು ಸ್ವಲ್ಪವಾದರೂ ಕಡಿಮೆಮಾಡಬಹುದಿತ್ತು. ಆದರೆ ಮೋದಿ ಸರ್ಕಾರ MSP ದರವನ್ನು ಹೆಚ್ಚು ಮಾಡುವುದಕ್ಕಿಂತ ಸುಳ್ಳುಗಳನ್ನು ಹೆಚ್ಚು ಹೇಳುತ್ತಾ ರೈತರನ್ನು ಮೋಸ ಮಾಡುತ್ತಿದೆ ಎಂದಿದ್ದಾರೆ.

ಎಂಬುದು ಕೆಳಗಿನ ಪಟ್ಟಿಯನ್ನು ನೋಡಿದರೆ ಸ್ಪಷ್ಟವಾಗಿ ಅರ್ಥವಾಗುತ್ತದೆ:

 

2019-20 ರ ಸಾಲಿನಲ್ಲಿ ಸರಾಸರಿ ಹಣದುಬ್ಬರ ದರ ಶೇ.4.5- 5 ಇತ್ತು. ಅಂದರೆ ಕಳೆದ ವರ್ಷ ದ 100 ರೂ. ನ ಮೌಲ್ಯ ಈ ವರ್ಷ ದ 105 ರೂ. ಎಂದರ್ಥ.. ಅಂದರೆ ಈ ವರ್ಷ 105 ರೂ. ಕೊಟ್ಟರೂ ಅದು 5 ರೂ. ಹೆಚ್ಚಾದಂತಲ್ಲ. ಏಕೆಂದರೆ ಶೇ.5ರ ಹಣದುಬ್ಬರವನ್ನು ಲೆಕ್ಕಕ್ಕೆ ತೆಗೆದುಕೊಂಡಾಗ ಈ ವರ್ಷದ 105 ರೂ.ನ ನಿಜವಾದ ಮೌಲ್ಯ ಕಳೆದ ವರ್ಷ ದ 100 ರೂ.ಮಾತ್ರ..

ಹೀಗಾಗಿ ಈ ವರ್ಷ ಘೋಷಿಸಿರುವ MSP ದರ ಹೋದ ವರ್ಷದ ದರಕ್ಕಿಂತ ಕನಿಷ್ಟ ಶೇ.5ಕ್ಕಿಂತ ಹೆಚ್ಚಿದ್ದರೆ ಮಾತ್ರ ಈ ವರ್ಷ ಹೆಚ್ಚಿಗೆ ದರ ಕೊಡಲಾಗಿದೆ ಎಂದರ್ಥ….. MSP ದರ ಹೆಚ್ಚಳವು ಹೋದವರ್ಷಕ್ಕಿಂತ ಶೇ.5 ಕ್ಕಿಂತ ಕಡಿಮೆ ಇದೆ ಎಂದರೆ ಸಾರಾಂಶದಲ್ಲಿ ಹೋದವರ್ಷ ಕೊಟ್ಟಷ್ಟು ಕೂಡಾ ಈ ವರ್ಷ ಕೊಟ್ಟಿಲ್ಲ ಎಂದರ್ಥ…

ಹಾಗಾಗಿ ಮೋದಿ ಸರ್ಕಾರವು ಈ ವರ್ಷ ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆ ಕಳೆದ ವರ್ಷಕ್ಕಿಂತ ಕಡಿಮೆಯಿದೆ. ಈಗಾದರೆ ರೈತರ ಕಥೆಯೇನು?


ಇದನ್ನೂ ಓದಿ: ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!! ಶಿವಸುಂದರ್ ಬರೆಯುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...