Homeಮುಖಪುಟಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಇಂದಿನ ಪತ್ರಿಕೆಗಳಲ್ಲಿ ಬಂದ ವರದಿಯಲ್ಲಿ ೧೪ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ ಎಂದು ಹೇಳಲಾಗಿದೆ. ಆದರೆ ಶಿವಸುಂದರ್‌ ಅವರು ಅದು ಸುಳ್ಳು ಎನ್ನುತ್ತಿದ್ದಾರೆ.

- Advertisement -
- Advertisement -

ನಿನ್ನೆ ಮೋದಿ ಸರ್ಕಾರ ರೈತರ 14 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (MSP) ಯನ್ನು ಘೋಷಿಸಿದೆ. ಹಾಗೂ ಈ ಮೂಲಕ ಕೋವಿಡ್ ಕಷ್ಟದ ಕಾಲದಲ್ಲಿ ರೈತರ ಆದಾಯ ದ್ವಿಗುಣಗೊಳಿಸಿ ರೈತರನ್ನು ಕಾಪಾಡಲಾಗಿದೆ ಎಂದು ಮೋದಿ ಸರ್ಕಾರ ಘೋಷಿಸಿದೆ.

ಆದರೆ ಮೋದಿ ಸರ್ಕಾರ ಘೋಷಿರುವ MSP ದರಗಳು, ಹೆಚ್ಚಾಗಿರುವುದಿರಲಿ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ ಎಂದು ಚಿಂತಕ ಶಿವಸುಂದರ್‌ ಟೀಕಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ರೈತರ ಆದಾಯ ದ್ವಿಗುಣಗೊಳ್ಳುವುದಿರಲಿ ಕನಿಷ್ಟ ಸ್ಥಿರವಾಗಿರಬೇಕೆಂದರೂ ರೈತನ ಉತ್ಪಾದಕ ವೆಚ್ಚಕ್ಕೆ ೧.೫ ಪಟ್ಟು ಹೆಚ್ಚು ಬೆಲೆಯನ್ನು ಒದಗಿಸಬೇಕು. ಆದರೆ ಆ ಉತ್ಪಾದಕ ವೆಚ್ಚವನ್ನು ಲೆಕ್ಕ ಹಾಕುವಾಗ ಸ್ವಾಮಿನಾಥನ್ ವರದಿಯ ಪ್ರಕಾರ ರೈತನ ಇತರ ಮೂಲಭೂತ ಸರಕು ವೆಚ್ಚಗಳ ಜೊತೆಗೆ ಭೂಮಿಯ ಸವಕಳಿ ವೆಚ್ಚ ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಸೇರಿಸಿಕೊಳ್ಳಬೇಕು. ಅದನ್ನೇ C-2 ಉತ್ಪಾದಕ ವೆಚ್ಚ ಎಂದು ಕರೆಯುತ್ತಾರೆ.

ಸ್ವಾಮಿನಾಥನ್ ವರದಿಯ ಪ್ರಕಾರ ರೈತರ ಆದಾಯ ಸ್ಥಿರವಾಗಬೇಕೆಂದರೂ ಸರ್ಕಾರ ಕೊಡುವ ಎಂಎಸ್‌ಪಿ ದರ ಈ C-2 ವೆಚ್ಚಕ್ಕಿಂತ ಎರಡು ಪಟ್ಟು ಹೆಚ್ಚಿರಬೇಕಿತ್ತು. ಆದರೆ ಮೋದಿ ಸರ್ಕಾರ ರೈತರ ಉತ್ಪಾದನಾ ವೆಚ್ಚವನ್ನು ಲೆಕ್ಕಹಾಕುವಾಗ C-2 ಆಧರಿಸಿ ಲೆಕ್ಕಾಚಾರ ಮಾಡುವುದಿಲ್ಲ. ಅದು ರೈತ ಒಳಸುರಿಗಳಿಗೆ ಅಂದರೆ ಬೀಜ, ಗೊಬ್ಬರ, ಕೂಲಿ…ಇತ್ಯಾದಿಗಳನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಸ್ವಾಮಿನಾಥನ್ ವರದಿಯಂತೆ ಭೂಮಿಯ ಸವಕಳಿ, ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಲೆಕ್ಕಕ್ಕೇ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಮೋದಿ ಸರ್ಕಾರ MSP ಯ ಹೆಸರಿನಲ್ಲಿ ರೈತರಿಗೆ ದೊಡ್ಡ ಮೋಸವನ್ನೇ ಮಾಡುತ್ತಾ ಬರುತ್ತಿದೆ ಎಂದು ಶಿವಸುಂದರ್‌ ತಿಳಿಸಿದ್ದಾರೆ.

ಈ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲಾ ಬಗೆಯ ಉತ್ಪಾದನ ಹಾಗೂ ಸರಬರಾಜು ಮತ್ತು ಸಂಗ್ರಹ ವೆಚ್ಚ ಹೆಚ್ಚಿರುವುದರಿಂದ ಈ ಬಾರಿಯಾದರೂ ಮೋದಿ ಸರ್ಕಾರ ನೈಜ ದರದಲ್ಲಿ MSP ದರವನ್ನು ಹೆಚ್ಚಿಸಿ ರೈತರ ಕಷ್ಟಗಳನ್ನು ಸ್ವಲ್ಪವಾದರೂ ಕಡಿಮೆಮಾಡಬಹುದಿತ್ತು. ಆದರೆ ಮೋದಿ ಸರ್ಕಾರ MSP ದರವನ್ನು ಹೆಚ್ಚು ಮಾಡುವುದಕ್ಕಿಂತ ಸುಳ್ಳುಗಳನ್ನು ಹೆಚ್ಚು ಹೇಳುತ್ತಾ ರೈತರನ್ನು ಮೋಸ ಮಾಡುತ್ತಿದೆ ಎಂದಿದ್ದಾರೆ.

ಎಂಬುದು ಕೆಳಗಿನ ಪಟ್ಟಿಯನ್ನು ನೋಡಿದರೆ ಸ್ಪಷ್ಟವಾಗಿ ಅರ್ಥವಾಗುತ್ತದೆ:

 

2019-20 ರ ಸಾಲಿನಲ್ಲಿ ಸರಾಸರಿ ಹಣದುಬ್ಬರ ದರ ಶೇ.4.5- 5 ಇತ್ತು. ಅಂದರೆ ಕಳೆದ ವರ್ಷ ದ 100 ರೂ. ನ ಮೌಲ್ಯ ಈ ವರ್ಷ ದ 105 ರೂ. ಎಂದರ್ಥ.. ಅಂದರೆ ಈ ವರ್ಷ 105 ರೂ. ಕೊಟ್ಟರೂ ಅದು 5 ರೂ. ಹೆಚ್ಚಾದಂತಲ್ಲ. ಏಕೆಂದರೆ ಶೇ.5ರ ಹಣದುಬ್ಬರವನ್ನು ಲೆಕ್ಕಕ್ಕೆ ತೆಗೆದುಕೊಂಡಾಗ ಈ ವರ್ಷದ 105 ರೂ.ನ ನಿಜವಾದ ಮೌಲ್ಯ ಕಳೆದ ವರ್ಷ ದ 100 ರೂ.ಮಾತ್ರ..

ಹೀಗಾಗಿ ಈ ವರ್ಷ ಘೋಷಿಸಿರುವ MSP ದರ ಹೋದ ವರ್ಷದ ದರಕ್ಕಿಂತ ಕನಿಷ್ಟ ಶೇ.5ಕ್ಕಿಂತ ಹೆಚ್ಚಿದ್ದರೆ ಮಾತ್ರ ಈ ವರ್ಷ ಹೆಚ್ಚಿಗೆ ದರ ಕೊಡಲಾಗಿದೆ ಎಂದರ್ಥ….. MSP ದರ ಹೆಚ್ಚಳವು ಹೋದವರ್ಷಕ್ಕಿಂತ ಶೇ.5 ಕ್ಕಿಂತ ಕಡಿಮೆ ಇದೆ ಎಂದರೆ ಸಾರಾಂಶದಲ್ಲಿ ಹೋದವರ್ಷ ಕೊಟ್ಟಷ್ಟು ಕೂಡಾ ಈ ವರ್ಷ ಕೊಟ್ಟಿಲ್ಲ ಎಂದರ್ಥ…

ಹಾಗಾಗಿ ಮೋದಿ ಸರ್ಕಾರವು ಈ ವರ್ಷ ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆ ಕಳೆದ ವರ್ಷಕ್ಕಿಂತ ಕಡಿಮೆಯಿದೆ. ಈಗಾದರೆ ರೈತರ ಕಥೆಯೇನು?


ಇದನ್ನೂ ಓದಿ: ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!! ಶಿವಸುಂದರ್ ಬರೆಯುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...