Homeಮುಖಪುಟಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಇಂದಿನ ಪತ್ರಿಕೆಗಳಲ್ಲಿ ಬಂದ ವರದಿಯಲ್ಲಿ ೧೪ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ ಎಂದು ಹೇಳಲಾಗಿದೆ. ಆದರೆ ಶಿವಸುಂದರ್‌ ಅವರು ಅದು ಸುಳ್ಳು ಎನ್ನುತ್ತಿದ್ದಾರೆ.

- Advertisement -
- Advertisement -

ನಿನ್ನೆ ಮೋದಿ ಸರ್ಕಾರ ರೈತರ 14 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (MSP) ಯನ್ನು ಘೋಷಿಸಿದೆ. ಹಾಗೂ ಈ ಮೂಲಕ ಕೋವಿಡ್ ಕಷ್ಟದ ಕಾಲದಲ್ಲಿ ರೈತರ ಆದಾಯ ದ್ವಿಗುಣಗೊಳಿಸಿ ರೈತರನ್ನು ಕಾಪಾಡಲಾಗಿದೆ ಎಂದು ಮೋದಿ ಸರ್ಕಾರ ಘೋಷಿಸಿದೆ.

ಆದರೆ ಮೋದಿ ಸರ್ಕಾರ ಘೋಷಿರುವ MSP ದರಗಳು, ಹೆಚ್ಚಾಗಿರುವುದಿರಲಿ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ ಎಂದು ಚಿಂತಕ ಶಿವಸುಂದರ್‌ ಟೀಕಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ರೈತರ ಆದಾಯ ದ್ವಿಗುಣಗೊಳ್ಳುವುದಿರಲಿ ಕನಿಷ್ಟ ಸ್ಥಿರವಾಗಿರಬೇಕೆಂದರೂ ರೈತನ ಉತ್ಪಾದಕ ವೆಚ್ಚಕ್ಕೆ ೧.೫ ಪಟ್ಟು ಹೆಚ್ಚು ಬೆಲೆಯನ್ನು ಒದಗಿಸಬೇಕು. ಆದರೆ ಆ ಉತ್ಪಾದಕ ವೆಚ್ಚವನ್ನು ಲೆಕ್ಕ ಹಾಕುವಾಗ ಸ್ವಾಮಿನಾಥನ್ ವರದಿಯ ಪ್ರಕಾರ ರೈತನ ಇತರ ಮೂಲಭೂತ ಸರಕು ವೆಚ್ಚಗಳ ಜೊತೆಗೆ ಭೂಮಿಯ ಸವಕಳಿ ವೆಚ್ಚ ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಸೇರಿಸಿಕೊಳ್ಳಬೇಕು. ಅದನ್ನೇ C-2 ಉತ್ಪಾದಕ ವೆಚ್ಚ ಎಂದು ಕರೆಯುತ್ತಾರೆ.

ಸ್ವಾಮಿನಾಥನ್ ವರದಿಯ ಪ್ರಕಾರ ರೈತರ ಆದಾಯ ಸ್ಥಿರವಾಗಬೇಕೆಂದರೂ ಸರ್ಕಾರ ಕೊಡುವ ಎಂಎಸ್‌ಪಿ ದರ ಈ C-2 ವೆಚ್ಚಕ್ಕಿಂತ ಎರಡು ಪಟ್ಟು ಹೆಚ್ಚಿರಬೇಕಿತ್ತು. ಆದರೆ ಮೋದಿ ಸರ್ಕಾರ ರೈತರ ಉತ್ಪಾದನಾ ವೆಚ್ಚವನ್ನು ಲೆಕ್ಕಹಾಕುವಾಗ C-2 ಆಧರಿಸಿ ಲೆಕ್ಕಾಚಾರ ಮಾಡುವುದಿಲ್ಲ. ಅದು ರೈತ ಒಳಸುರಿಗಳಿಗೆ ಅಂದರೆ ಬೀಜ, ಗೊಬ್ಬರ, ಕೂಲಿ…ಇತ್ಯಾದಿಗಳನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಸ್ವಾಮಿನಾಥನ್ ವರದಿಯಂತೆ ಭೂಮಿಯ ಸವಕಳಿ, ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಲೆಕ್ಕಕ್ಕೇ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಮೋದಿ ಸರ್ಕಾರ MSP ಯ ಹೆಸರಿನಲ್ಲಿ ರೈತರಿಗೆ ದೊಡ್ಡ ಮೋಸವನ್ನೇ ಮಾಡುತ್ತಾ ಬರುತ್ತಿದೆ ಎಂದು ಶಿವಸುಂದರ್‌ ತಿಳಿಸಿದ್ದಾರೆ.

ಈ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲಾ ಬಗೆಯ ಉತ್ಪಾದನ ಹಾಗೂ ಸರಬರಾಜು ಮತ್ತು ಸಂಗ್ರಹ ವೆಚ್ಚ ಹೆಚ್ಚಿರುವುದರಿಂದ ಈ ಬಾರಿಯಾದರೂ ಮೋದಿ ಸರ್ಕಾರ ನೈಜ ದರದಲ್ಲಿ MSP ದರವನ್ನು ಹೆಚ್ಚಿಸಿ ರೈತರ ಕಷ್ಟಗಳನ್ನು ಸ್ವಲ್ಪವಾದರೂ ಕಡಿಮೆಮಾಡಬಹುದಿತ್ತು. ಆದರೆ ಮೋದಿ ಸರ್ಕಾರ MSP ದರವನ್ನು ಹೆಚ್ಚು ಮಾಡುವುದಕ್ಕಿಂತ ಸುಳ್ಳುಗಳನ್ನು ಹೆಚ್ಚು ಹೇಳುತ್ತಾ ರೈತರನ್ನು ಮೋಸ ಮಾಡುತ್ತಿದೆ ಎಂದಿದ್ದಾರೆ.

ಎಂಬುದು ಕೆಳಗಿನ ಪಟ್ಟಿಯನ್ನು ನೋಡಿದರೆ ಸ್ಪಷ್ಟವಾಗಿ ಅರ್ಥವಾಗುತ್ತದೆ:

 

2019-20 ರ ಸಾಲಿನಲ್ಲಿ ಸರಾಸರಿ ಹಣದುಬ್ಬರ ದರ ಶೇ.4.5- 5 ಇತ್ತು. ಅಂದರೆ ಕಳೆದ ವರ್ಷ ದ 100 ರೂ. ನ ಮೌಲ್ಯ ಈ ವರ್ಷ ದ 105 ರೂ. ಎಂದರ್ಥ.. ಅಂದರೆ ಈ ವರ್ಷ 105 ರೂ. ಕೊಟ್ಟರೂ ಅದು 5 ರೂ. ಹೆಚ್ಚಾದಂತಲ್ಲ. ಏಕೆಂದರೆ ಶೇ.5ರ ಹಣದುಬ್ಬರವನ್ನು ಲೆಕ್ಕಕ್ಕೆ ತೆಗೆದುಕೊಂಡಾಗ ಈ ವರ್ಷದ 105 ರೂ.ನ ನಿಜವಾದ ಮೌಲ್ಯ ಕಳೆದ ವರ್ಷ ದ 100 ರೂ.ಮಾತ್ರ..

ಹೀಗಾಗಿ ಈ ವರ್ಷ ಘೋಷಿಸಿರುವ MSP ದರ ಹೋದ ವರ್ಷದ ದರಕ್ಕಿಂತ ಕನಿಷ್ಟ ಶೇ.5ಕ್ಕಿಂತ ಹೆಚ್ಚಿದ್ದರೆ ಮಾತ್ರ ಈ ವರ್ಷ ಹೆಚ್ಚಿಗೆ ದರ ಕೊಡಲಾಗಿದೆ ಎಂದರ್ಥ….. MSP ದರ ಹೆಚ್ಚಳವು ಹೋದವರ್ಷಕ್ಕಿಂತ ಶೇ.5 ಕ್ಕಿಂತ ಕಡಿಮೆ ಇದೆ ಎಂದರೆ ಸಾರಾಂಶದಲ್ಲಿ ಹೋದವರ್ಷ ಕೊಟ್ಟಷ್ಟು ಕೂಡಾ ಈ ವರ್ಷ ಕೊಟ್ಟಿಲ್ಲ ಎಂದರ್ಥ…

ಹಾಗಾಗಿ ಮೋದಿ ಸರ್ಕಾರವು ಈ ವರ್ಷ ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆ ಕಳೆದ ವರ್ಷಕ್ಕಿಂತ ಕಡಿಮೆಯಿದೆ. ಈಗಾದರೆ ರೈತರ ಕಥೆಯೇನು?


ಇದನ್ನೂ ಓದಿ: ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!! ಶಿವಸುಂದರ್ ಬರೆಯುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...