Homeಮುಖಪುಟಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಇಂದಿನ ಪತ್ರಿಕೆಗಳಲ್ಲಿ ಬಂದ ವರದಿಯಲ್ಲಿ ೧೪ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ ಎಂದು ಹೇಳಲಾಗಿದೆ. ಆದರೆ ಶಿವಸುಂದರ್‌ ಅವರು ಅದು ಸುಳ್ಳು ಎನ್ನುತ್ತಿದ್ದಾರೆ.

- Advertisement -
- Advertisement -

ನಿನ್ನೆ ಮೋದಿ ಸರ್ಕಾರ ರೈತರ 14 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (MSP) ಯನ್ನು ಘೋಷಿಸಿದೆ. ಹಾಗೂ ಈ ಮೂಲಕ ಕೋವಿಡ್ ಕಷ್ಟದ ಕಾಲದಲ್ಲಿ ರೈತರ ಆದಾಯ ದ್ವಿಗುಣಗೊಳಿಸಿ ರೈತರನ್ನು ಕಾಪಾಡಲಾಗಿದೆ ಎಂದು ಮೋದಿ ಸರ್ಕಾರ ಘೋಷಿಸಿದೆ.

ಆದರೆ ಮೋದಿ ಸರ್ಕಾರ ಘೋಷಿರುವ MSP ದರಗಳು, ಹೆಚ್ಚಾಗಿರುವುದಿರಲಿ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ ಎಂದು ಚಿಂತಕ ಶಿವಸುಂದರ್‌ ಟೀಕಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ರೈತರ ಆದಾಯ ದ್ವಿಗುಣಗೊಳ್ಳುವುದಿರಲಿ ಕನಿಷ್ಟ ಸ್ಥಿರವಾಗಿರಬೇಕೆಂದರೂ ರೈತನ ಉತ್ಪಾದಕ ವೆಚ್ಚಕ್ಕೆ ೧.೫ ಪಟ್ಟು ಹೆಚ್ಚು ಬೆಲೆಯನ್ನು ಒದಗಿಸಬೇಕು. ಆದರೆ ಆ ಉತ್ಪಾದಕ ವೆಚ್ಚವನ್ನು ಲೆಕ್ಕ ಹಾಕುವಾಗ ಸ್ವಾಮಿನಾಥನ್ ವರದಿಯ ಪ್ರಕಾರ ರೈತನ ಇತರ ಮೂಲಭೂತ ಸರಕು ವೆಚ್ಚಗಳ ಜೊತೆಗೆ ಭೂಮಿಯ ಸವಕಳಿ ವೆಚ್ಚ ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಸೇರಿಸಿಕೊಳ್ಳಬೇಕು. ಅದನ್ನೇ C-2 ಉತ್ಪಾದಕ ವೆಚ್ಚ ಎಂದು ಕರೆಯುತ್ತಾರೆ.

ಸ್ವಾಮಿನಾಥನ್ ವರದಿಯ ಪ್ರಕಾರ ರೈತರ ಆದಾಯ ಸ್ಥಿರವಾಗಬೇಕೆಂದರೂ ಸರ್ಕಾರ ಕೊಡುವ ಎಂಎಸ್‌ಪಿ ದರ ಈ C-2 ವೆಚ್ಚಕ್ಕಿಂತ ಎರಡು ಪಟ್ಟು ಹೆಚ್ಚಿರಬೇಕಿತ್ತು. ಆದರೆ ಮೋದಿ ಸರ್ಕಾರ ರೈತರ ಉತ್ಪಾದನಾ ವೆಚ್ಚವನ್ನು ಲೆಕ್ಕಹಾಕುವಾಗ C-2 ಆಧರಿಸಿ ಲೆಕ್ಕಾಚಾರ ಮಾಡುವುದಿಲ್ಲ. ಅದು ರೈತ ಒಳಸುರಿಗಳಿಗೆ ಅಂದರೆ ಬೀಜ, ಗೊಬ್ಬರ, ಕೂಲಿ…ಇತ್ಯಾದಿಗಳನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಸ್ವಾಮಿನಾಥನ್ ವರದಿಯಂತೆ ಭೂಮಿಯ ಸವಕಳಿ, ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಲೆಕ್ಕಕ್ಕೇ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಮೋದಿ ಸರ್ಕಾರ MSP ಯ ಹೆಸರಿನಲ್ಲಿ ರೈತರಿಗೆ ದೊಡ್ಡ ಮೋಸವನ್ನೇ ಮಾಡುತ್ತಾ ಬರುತ್ತಿದೆ ಎಂದು ಶಿವಸುಂದರ್‌ ತಿಳಿಸಿದ್ದಾರೆ.

ಈ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲಾ ಬಗೆಯ ಉತ್ಪಾದನ ಹಾಗೂ ಸರಬರಾಜು ಮತ್ತು ಸಂಗ್ರಹ ವೆಚ್ಚ ಹೆಚ್ಚಿರುವುದರಿಂದ ಈ ಬಾರಿಯಾದರೂ ಮೋದಿ ಸರ್ಕಾರ ನೈಜ ದರದಲ್ಲಿ MSP ದರವನ್ನು ಹೆಚ್ಚಿಸಿ ರೈತರ ಕಷ್ಟಗಳನ್ನು ಸ್ವಲ್ಪವಾದರೂ ಕಡಿಮೆಮಾಡಬಹುದಿತ್ತು. ಆದರೆ ಮೋದಿ ಸರ್ಕಾರ MSP ದರವನ್ನು ಹೆಚ್ಚು ಮಾಡುವುದಕ್ಕಿಂತ ಸುಳ್ಳುಗಳನ್ನು ಹೆಚ್ಚು ಹೇಳುತ್ತಾ ರೈತರನ್ನು ಮೋಸ ಮಾಡುತ್ತಿದೆ ಎಂದಿದ್ದಾರೆ.

ಎಂಬುದು ಕೆಳಗಿನ ಪಟ್ಟಿಯನ್ನು ನೋಡಿದರೆ ಸ್ಪಷ್ಟವಾಗಿ ಅರ್ಥವಾಗುತ್ತದೆ:

 

2019-20 ರ ಸಾಲಿನಲ್ಲಿ ಸರಾಸರಿ ಹಣದುಬ್ಬರ ದರ ಶೇ.4.5- 5 ಇತ್ತು. ಅಂದರೆ ಕಳೆದ ವರ್ಷ ದ 100 ರೂ. ನ ಮೌಲ್ಯ ಈ ವರ್ಷ ದ 105 ರೂ. ಎಂದರ್ಥ.. ಅಂದರೆ ಈ ವರ್ಷ 105 ರೂ. ಕೊಟ್ಟರೂ ಅದು 5 ರೂ. ಹೆಚ್ಚಾದಂತಲ್ಲ. ಏಕೆಂದರೆ ಶೇ.5ರ ಹಣದುಬ್ಬರವನ್ನು ಲೆಕ್ಕಕ್ಕೆ ತೆಗೆದುಕೊಂಡಾಗ ಈ ವರ್ಷದ 105 ರೂ.ನ ನಿಜವಾದ ಮೌಲ್ಯ ಕಳೆದ ವರ್ಷ ದ 100 ರೂ.ಮಾತ್ರ..

ಹೀಗಾಗಿ ಈ ವರ್ಷ ಘೋಷಿಸಿರುವ MSP ದರ ಹೋದ ವರ್ಷದ ದರಕ್ಕಿಂತ ಕನಿಷ್ಟ ಶೇ.5ಕ್ಕಿಂತ ಹೆಚ್ಚಿದ್ದರೆ ಮಾತ್ರ ಈ ವರ್ಷ ಹೆಚ್ಚಿಗೆ ದರ ಕೊಡಲಾಗಿದೆ ಎಂದರ್ಥ….. MSP ದರ ಹೆಚ್ಚಳವು ಹೋದವರ್ಷಕ್ಕಿಂತ ಶೇ.5 ಕ್ಕಿಂತ ಕಡಿಮೆ ಇದೆ ಎಂದರೆ ಸಾರಾಂಶದಲ್ಲಿ ಹೋದವರ್ಷ ಕೊಟ್ಟಷ್ಟು ಕೂಡಾ ಈ ವರ್ಷ ಕೊಟ್ಟಿಲ್ಲ ಎಂದರ್ಥ…

ಹಾಗಾಗಿ ಮೋದಿ ಸರ್ಕಾರವು ಈ ವರ್ಷ ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆ ಕಳೆದ ವರ್ಷಕ್ಕಿಂತ ಕಡಿಮೆಯಿದೆ. ಈಗಾದರೆ ರೈತರ ಕಥೆಯೇನು?


ಇದನ್ನೂ ಓದಿ: ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!! ಶಿವಸುಂದರ್ ಬರೆಯುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....