Homeಮುಖಪುಟಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಕನಿಷ್ಟ ಬೆಂಬಲ ಬೆಲೆ (MSP) ಬಗ್ಗೆ ಸುಳ್ಳು ಹೇಳಿತೇ ಮೋದಿ ಸರ್ಕಾರ!?

ಇಂದಿನ ಪತ್ರಿಕೆಗಳಲ್ಲಿ ಬಂದ ವರದಿಯಲ್ಲಿ ೧೪ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದೆ ಎಂದು ಹೇಳಲಾಗಿದೆ. ಆದರೆ ಶಿವಸುಂದರ್‌ ಅವರು ಅದು ಸುಳ್ಳು ಎನ್ನುತ್ತಿದ್ದಾರೆ.

- Advertisement -
- Advertisement -

ನಿನ್ನೆ ಮೋದಿ ಸರ್ಕಾರ ರೈತರ 14 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (MSP) ಯನ್ನು ಘೋಷಿಸಿದೆ. ಹಾಗೂ ಈ ಮೂಲಕ ಕೋವಿಡ್ ಕಷ್ಟದ ಕಾಲದಲ್ಲಿ ರೈತರ ಆದಾಯ ದ್ವಿಗುಣಗೊಳಿಸಿ ರೈತರನ್ನು ಕಾಪಾಡಲಾಗಿದೆ ಎಂದು ಮೋದಿ ಸರ್ಕಾರ ಘೋಷಿಸಿದೆ.

ಆದರೆ ಮೋದಿ ಸರ್ಕಾರ ಘೋಷಿರುವ MSP ದರಗಳು, ಹೆಚ್ಚಾಗಿರುವುದಿರಲಿ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ ಎಂದು ಚಿಂತಕ ಶಿವಸುಂದರ್‌ ಟೀಕಿಸಿದ್ದಾರೆ.

ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ರೈತರ ಆದಾಯ ದ್ವಿಗುಣಗೊಳ್ಳುವುದಿರಲಿ ಕನಿಷ್ಟ ಸ್ಥಿರವಾಗಿರಬೇಕೆಂದರೂ ರೈತನ ಉತ್ಪಾದಕ ವೆಚ್ಚಕ್ಕೆ ೧.೫ ಪಟ್ಟು ಹೆಚ್ಚು ಬೆಲೆಯನ್ನು ಒದಗಿಸಬೇಕು. ಆದರೆ ಆ ಉತ್ಪಾದಕ ವೆಚ್ಚವನ್ನು ಲೆಕ್ಕ ಹಾಕುವಾಗ ಸ್ವಾಮಿನಾಥನ್ ವರದಿಯ ಪ್ರಕಾರ ರೈತನ ಇತರ ಮೂಲಭೂತ ಸರಕು ವೆಚ್ಚಗಳ ಜೊತೆಗೆ ಭೂಮಿಯ ಸವಕಳಿ ವೆಚ್ಚ ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಸೇರಿಸಿಕೊಳ್ಳಬೇಕು. ಅದನ್ನೇ C-2 ಉತ್ಪಾದಕ ವೆಚ್ಚ ಎಂದು ಕರೆಯುತ್ತಾರೆ.

ಸ್ವಾಮಿನಾಥನ್ ವರದಿಯ ಪ್ರಕಾರ ರೈತರ ಆದಾಯ ಸ್ಥಿರವಾಗಬೇಕೆಂದರೂ ಸರ್ಕಾರ ಕೊಡುವ ಎಂಎಸ್‌ಪಿ ದರ ಈ C-2 ವೆಚ್ಚಕ್ಕಿಂತ ಎರಡು ಪಟ್ಟು ಹೆಚ್ಚಿರಬೇಕಿತ್ತು. ಆದರೆ ಮೋದಿ ಸರ್ಕಾರ ರೈತರ ಉತ್ಪಾದನಾ ವೆಚ್ಚವನ್ನು ಲೆಕ್ಕಹಾಕುವಾಗ C-2 ಆಧರಿಸಿ ಲೆಕ್ಕಾಚಾರ ಮಾಡುವುದಿಲ್ಲ. ಅದು ರೈತ ಒಳಸುರಿಗಳಿಗೆ ಅಂದರೆ ಬೀಜ, ಗೊಬ್ಬರ, ಕೂಲಿ…ಇತ್ಯಾದಿಗಳನ್ನು ಮಾತ್ರ ಲೆಕ್ಕಕ್ಕೆ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಸ್ವಾಮಿನಾಥನ್ ವರದಿಯಂತೆ ಭೂಮಿಯ ಸವಕಳಿ, ಹಾಗೂ ರೈತ ಹೂಡುವ ಬಂಡವಾಳದ ಮೇಲಿನ ಬಡ್ಡಿಯನ್ನು ಲೆಕ್ಕಕ್ಕೇ ತೆಗೆದುಕೊಳ್ಳುವುದಿಲ್ಲ. ಹೀಗಾಗಿ ಮೋದಿ ಸರ್ಕಾರ MSP ಯ ಹೆಸರಿನಲ್ಲಿ ರೈತರಿಗೆ ದೊಡ್ಡ ಮೋಸವನ್ನೇ ಮಾಡುತ್ತಾ ಬರುತ್ತಿದೆ ಎಂದು ಶಿವಸುಂದರ್‌ ತಿಳಿಸಿದ್ದಾರೆ.

ಈ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲಾ ಬಗೆಯ ಉತ್ಪಾದನ ಹಾಗೂ ಸರಬರಾಜು ಮತ್ತು ಸಂಗ್ರಹ ವೆಚ್ಚ ಹೆಚ್ಚಿರುವುದರಿಂದ ಈ ಬಾರಿಯಾದರೂ ಮೋದಿ ಸರ್ಕಾರ ನೈಜ ದರದಲ್ಲಿ MSP ದರವನ್ನು ಹೆಚ್ಚಿಸಿ ರೈತರ ಕಷ್ಟಗಳನ್ನು ಸ್ವಲ್ಪವಾದರೂ ಕಡಿಮೆಮಾಡಬಹುದಿತ್ತು. ಆದರೆ ಮೋದಿ ಸರ್ಕಾರ MSP ದರವನ್ನು ಹೆಚ್ಚು ಮಾಡುವುದಕ್ಕಿಂತ ಸುಳ್ಳುಗಳನ್ನು ಹೆಚ್ಚು ಹೇಳುತ್ತಾ ರೈತರನ್ನು ಮೋಸ ಮಾಡುತ್ತಿದೆ ಎಂದಿದ್ದಾರೆ.

ಎಂಬುದು ಕೆಳಗಿನ ಪಟ್ಟಿಯನ್ನು ನೋಡಿದರೆ ಸ್ಪಷ್ಟವಾಗಿ ಅರ್ಥವಾಗುತ್ತದೆ:

 

2019-20 ರ ಸಾಲಿನಲ್ಲಿ ಸರಾಸರಿ ಹಣದುಬ್ಬರ ದರ ಶೇ.4.5- 5 ಇತ್ತು. ಅಂದರೆ ಕಳೆದ ವರ್ಷ ದ 100 ರೂ. ನ ಮೌಲ್ಯ ಈ ವರ್ಷ ದ 105 ರೂ. ಎಂದರ್ಥ.. ಅಂದರೆ ಈ ವರ್ಷ 105 ರೂ. ಕೊಟ್ಟರೂ ಅದು 5 ರೂ. ಹೆಚ್ಚಾದಂತಲ್ಲ. ಏಕೆಂದರೆ ಶೇ.5ರ ಹಣದುಬ್ಬರವನ್ನು ಲೆಕ್ಕಕ್ಕೆ ತೆಗೆದುಕೊಂಡಾಗ ಈ ವರ್ಷದ 105 ರೂ.ನ ನಿಜವಾದ ಮೌಲ್ಯ ಕಳೆದ ವರ್ಷ ದ 100 ರೂ.ಮಾತ್ರ..

ಹೀಗಾಗಿ ಈ ವರ್ಷ ಘೋಷಿಸಿರುವ MSP ದರ ಹೋದ ವರ್ಷದ ದರಕ್ಕಿಂತ ಕನಿಷ್ಟ ಶೇ.5ಕ್ಕಿಂತ ಹೆಚ್ಚಿದ್ದರೆ ಮಾತ್ರ ಈ ವರ್ಷ ಹೆಚ್ಚಿಗೆ ದರ ಕೊಡಲಾಗಿದೆ ಎಂದರ್ಥ….. MSP ದರ ಹೆಚ್ಚಳವು ಹೋದವರ್ಷಕ್ಕಿಂತ ಶೇ.5 ಕ್ಕಿಂತ ಕಡಿಮೆ ಇದೆ ಎಂದರೆ ಸಾರಾಂಶದಲ್ಲಿ ಹೋದವರ್ಷ ಕೊಟ್ಟಷ್ಟು ಕೂಡಾ ಈ ವರ್ಷ ಕೊಟ್ಟಿಲ್ಲ ಎಂದರ್ಥ…

ಹಾಗಾಗಿ ಮೋದಿ ಸರ್ಕಾರವು ಈ ವರ್ಷ ಘೋಷಿಸಿರುವ ಕನಿಷ್ಟ ಬೆಂಬಲ ಬೆಲೆ ಕಳೆದ ವರ್ಷಕ್ಕಿಂತ ಕಡಿಮೆಯಿದೆ. ಈಗಾದರೆ ರೈತರ ಕಥೆಯೇನು?


ಇದನ್ನೂ ಓದಿ: ಆಪ್ ಗುಜರಾತ್ ಕೋರ್ಟ್ ಕಾ ಭಿ ಕ್ರೋನಾಲಜಿ ಸಮಜ್ ಲೀಜಿಯೇ….!! ಶಿವಸುಂದರ್ ಬರೆಯುತ್ತಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...