Homeಮುಖಪುಟ114 ಕೋಟಿ ವೀಕ್ಷಕರನ್ನು ಹೊಂದಿರುವ 8 ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ನಿಷೇಧಿಸಿದ ಮೋದಿ ಸರ್ಕಾರ

114 ಕೋಟಿ ವೀಕ್ಷಕರನ್ನು ಹೊಂದಿರುವ 8 ಯೂಟ್ಯೂಬ್ ಸುದ್ದಿ ಚಾನೆಲ್‌ಗಳನ್ನು ನಿಷೇಧಿಸಿದ ಮೋದಿ ಸರ್ಕಾರ

- Advertisement -
- Advertisement -

ತಪ್ಪು ಮಾಹಿತಿ ಹರಡುತ್ತಿದೆ ಎಂದು ಆರೋಪಿಸಿ ಒಟ್ಟು 114 ಕೋಟಿಗೂ ಹೆಚ್ಚು ವೀಕ್ಷಕರನ್ನು ಹೊಂದಿದ್ದ ಎಂಟು ಯೂಟ್ಯೂಬ್ ಚಾನೆಲ್‌ಗಳನ್ನು ಒಕ್ಕೂಟ ಸರ್ಕಾರವು ನಿಷೇಧಿಸಿದೆ. ನಿಷೇಧಿಸಿದ ಒಟ್ಟು ಚಾನೆಲ್‌ಗಳಲ್ಲಿ ಏಳು ಭಾರತದ್ದಾಗಿದ್ದು, ಒಂದು ಪಾಕಿಸ್ತಾನದ್ದಾಗಿದೆ. “ನಿರ್ಬಂಧಿಸಲ್ಪಟ್ಟ ಚಾನಲ್‌ಗಳು ನಕಲಿ ಮತ್ತು ಭಾರತ ವಿರೋಧಿ ವಿಷಯಗಳ ಮೂಲಕ ಹಣಗಳಿಸಲಾಗುತ್ತಿದೆ” ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಚಾನೆಲ್‌ಗಳು ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯನ್ನು ಹರಡುತ್ತಿವೆ ಎಂದು ಸರ್ಕಾರ ಹೇಳಿದೆ. “ರಾಷ್ಟ್ರೀಯ ಭದ್ರತೆ ಮತ್ತು ವಿದೇಶಿ ರಾಜ್ಯಗಳೊಂದಿಗೆ ಭಾರತದ ಸ್ನೇಹ ಸಂಬಂಧಗಳ ದೃಷ್ಟಿಕೋನದಿಂದ ಚಾನೆಲ್‌ಗಳ ವಿಷಯವು ಸಂಪೂರ್ಣವಾಗಿ ಸುಳ್ಳು ಮತ್ತು ಸೂಕ್ಷ್ಮವಾಗಿದೆ” ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೋಕತಂತ್ರ ಟಿವಿ, U&V TV, AM ರಜ್ವಿ, ಗೌರವಶಾಲಿ ಪವನ್ ಮಿಥಿಲಾಂಚಲ್, SeeTop5TH, Sarkari Update, Sab Kuch Dekho ನಿಷೇಧಕ್ಕೆ ಒಳಗಾಗಿರುವ ಏಳು ಭಾರತೀಯ ಯೂಟ್ಯೂಬ್ ಚಾನೆಲ್‌ಗಳಾಗಿವೆ.  ಪಾಕಿಸ್ತಾನ ಮೂಲದ ‘ನ್ಯೂಸ್ ಕಿ ದುನ್ಯಾ’ ಚಾನೆಲ್ ಅನ್ನು ಕೂಡಾ ನಿರ್ಬಂಧಿಸಲಾಗಿದೆ. ಸುಮಾರು 85 ಲಕ್ಷ ಬಳಕೆದಾರರು ಈ ಚಾನೆಲ್‌ಗಳಿಗೆ ಚಂದಾದಾರರಾಗಿದ್ದಾರೆ. ಇದಲ್ಲದೇ ಒಂದು ಫೇಸ್ ಬುಕ್ ಖಾತೆ ಮತ್ತು ಎರಡು ಫೇಸ್ ಬುಕ್ ಪೋಸ್ಟ್‌ಗಳನ್ನು ಕೂಡಾ ಬ್ಲಾಕ್ ಮಾಡಲಾಗಿದೆ.

ಇದನ್ನೂ ಓದಿ: ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

“ಬಳಕೆದಾರರನ್ನು ತಪ್ಪುದಾರಿಗೆ ಎಳೆಯಲು ಭಾರತ ಮೂಲದ ಚಾನೆಲ್‌ಗಳು ನಕಲಿ ಮತ್ತು ಸಂವೇದನಾಶೀಲ ಥಂಬ್‌ನೇಲ್‌ಗಳು, ಸುದ್ದಿ ನಿರೂಪಕರ ಚಿತ್ರಗಳು ಮತ್ತು ಕೆಲವು ಟಿವಿ ಸುದ್ದಿ ವಾಹಿನಿಗಳ ಲೋಗೋಗಳನ್ನು ಬಳಸುತ್ತಿರುವುದನ್ನು ಗಮನಿಸಲಾಗಿದೆ” ಎಂದು ಸರ್ಕಾರ ಹೇಳಿದೆ.

“ಸಚಿವಾಲಯದಿಂದ ನಿರ್ಬಂಧಿಸಲಾದ ಎಲ್ಲಾ ಯೂಟ್ಯೂಬ್ ಚಾನೆಲ್‌ಗಳು ತಮ್ಮ ವೀಡಿಯೊಗಳಲ್ಲಿ ಕೋಮು ಸೌಹಾರ್ದತೆ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭಾರತದ ವಿದೇಶಿ ಸಂಬಂಧಗಳಿಗೆ ಹಾನಿಕಾರಕವಾದ ಸುಳ್ಳು ವಿಷಯವನ್ನು ಹೊಂದಿರುವ ಜಾಹೀರಾತುಗಳನ್ನು ಪ್ರದರ್ಶಿಸುತ್ತಿವೆ” ಎಂದು ಸಚಿವಾಲಯ ಒತ್ತಿಹೇಳಿದೆ.

ಕಳೆದ ಡಿಸೆಂಬರ್‌ನಿಂದ ಒಕ್ಕೂಟ ಸರ್ಕಾರವು ಯೂಟ್ಯೂಬ್‌ನಲ್ಲಿನ 102 ಚಾನಲ್‌ಗಳು ಮತ್ತು ಹಲವಾರು ಇತರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದೆ.

ಇದನ್ನೂ ಓದಿ: ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

“ಭಾರತ ಸರ್ಕಾರವು ಅಧಿಕೃತ, ವಿಶ್ವಾಸಾರ್ಹ ಮತ್ತು ಸುರಕ್ಷಿತ ಆನ್‌ಲೈನ್ ಸುದ್ದಿ ಮಾಧ್ಯಮ ಪರಿಸರವನ್ನು ಖಾತ್ರಿಪಡಿಸಿಕೊಳ್ಳಲು ಬದ್ಧವಾಗಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಗಳನ್ನು ತಡೆಯುತ್ತದೆ” ಎಂದು ಒಕ್ಕೂಟ ಸರ್ಕಾರ ಆದೇಶದಲ್ಲಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...