Homeಮುಖಪುಟಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ

ಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ

- Advertisement -
- Advertisement -

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಉದ್ಯಮ (CPSI) ಮತ್ತು ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ಗಳು ಸಾಮಾಜಿಕ ಜಾಲತಾಣದಲ್ಲಿ “ಫ್ಯಾಕ್ಟ್ ಚೆಕ್‌ ಮತ್ತು ಸುಳ್ಳು ಮಾಹಿತಿ ಪತ್ತೆ” ಗೆ ಸಂಬಂಧಿಸಿದ “ಪರಿಹಾರ ಮತ್ತು ಸೇವೆಗಳನ್ನು” ಒದಗಿಸಲು ಸಂಶೋಧನಾ ಏಜೆನ್ಸಿಗಳಿಗೆ ಟೆಂಡರ್ ಆಹ್ವಾನಿಸಿವೆ.

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು ತಡೆಗಟ್ಟಲು ಟೆಂಡರ್‌ ಕರೆದಿದ್ದು, ಬಿಡ್ಡಿಂಗ್‌ ಸಂಸ್ಥೆಗಳು “ಸುಳ್ಳು ಸುದ್ದಿಗಳ ಹಿಂದಿರಿರುವ ಪ್ರಮುಖ ಪ್ರಭಾವಿಗಳನ್ನು ಪತ್ತೆಹಚ್ಚಿ, ಅವರ ಲೊಕೇಷನ್‌ ಅನ್ನು ಹುಡಕಲು ಸಮರ್ಥವಾಗಿರಬೇಕು.” ಎಂದು BECIL ಹೇಳಿದೆ.

ಸರ್ಕಾರವು ಅಕ್ರಮ ಕಣ್ಗಾವಲಿಗಾಗಿ ಮಾರ್ಗಗಳನ್ನು ಹುಡುಕುತ್ತಿದೆ. ಇದು ‘ಮಾಟಗಾತಿ ಬೇಟೆ’ ಇದ್ದಂತೆ ಎಂದು ಸೈಬರ್ ಕಾನೂನು ಮತ್ತು ಇತರ ಸುಳ್ಳು ಸುದ್ದಿಗಳನ್ನು ಬರ್ಸ್ಟ್ ಮಾಡುವ ತಜ್ಞರು ಹೇಳಿದ್ಧಾರೆ.

“ಯಾವುದು ಸುಳ್ಳು ಸುದ್ದಿ ಎಂದು ನಮಗೆ ತಿಳಿಯದಿದ್ದಲ್ಲಿ, ಟೆಂಡರ್‌ ಪಡೆದವನು ಸುಳ್ಳು ಯಾವುದು, ಸತ್ಯ ಏನು? ಎಂಬುದನ್ನು ಹೇಗೆ ಗುರುತಿಸುತ್ತಾರೆ. ನಿಖರವಾಗಿ ಏನು ಗುರುತಿಸಬೇಕು ಮತ್ತು ಯಾವುದನ್ನು ಪರಿಶೀಲಿಸಬೇಕು? ಎಂಬುದನ್ನು ಹೇಗೆ ಕಂಡುಕೊಳ್ಳುತ್ತಾರೆ. ಇದು ಕಾನೂನು ಬಾಹಿತವಾಗಿ ಮತ್ತು ಅನೈತಿಕ ಕಣ್ಗಾವಲಿಗೆ ಸರ್ಕಾರ ಸುಲಭವಾದ ಮಾರ್ಗವನ್ನು ಹುಡುಕಿಕೊಂಡಿದೆ” ಎಂದು ವಕೀಲರಾದ ಸಲ್ಮಾನ್ ವಾರಿಸ್ ಹೇಳಿದ್ದಾರೆ.

ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿಯ ಬಗ್ಗೆ ಯಾವುದಾದರೂ ವ್ಯಾಖ್ಯಾನಕ್ಕೆ ಬಂದಿದ್ದೀರಾ? ಮೇ. 13 ರಂದು ಕರೆದಿರುವ ಟೆಂಡರ್‌ಗಾಗಿ ಯಾರಾದರೂ ಬಿಡ್‌ ಮಾಡಿದ್ದಾರಾ? ಎಂದು ಕೇಳಲಾಗಿರುವ ಪ್ರಶ್ನೆಗೆ ಬಿಇಸಿಎಲ್‌ ಪ್ರತಿಕ್ರಿಯಿಸಿಲ್ಲ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಸಾಮಾಜಿಕ ಮಾಧ್ಯಮ ನಿಯಮಗಳು 2020 ರ ಮಾರ್ಗಸೂಚಿಗಳ ಕರಡನ್ನು ಏಪ್ರಿಲ್‌ ವೇಳೆಗೆ ಬಿಡುಗಡೆಗೊಳಿಲಾಗುವುದು ಎಂದು ಹೇಳಿತ್ತು. ಆದರೆ, ನಿಯಮಗಳ ಅಂತಿಮ ಕರಡು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ವಾಟ್ಸಾಪ್‌ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣ ಮತ್ತು ಕಳ್ಳಸಾಗಾಣಿಕೆಗಳ ಬಗ್ಗೆ ಪೋಷಕರಿಗೆ ಎಚ್ಚರಿಕೆ ನೀಡುವ ಪೋಸ್ಟ್‌ಗಳು ಹರಿದಾಡಿದ್ದವು. ಅಲ್ಲದೆ, ಈ ವರ್ಷದ ಫೆಬ್ರವರಿಯಲ್ಲಿ ಹಿಂಸಾಚಾರವನ್ನು ಹರಡಲು ವಾಟ್ಸಾಪ್‌ ದುರ್ಬಳಕೆಯಾಗಿದೆ. ಎರಡು ಸಮುದಾಯಗಳ ನಡುವೆ ಗಲಬೆ, ಹಿಂಸಾಚಾರ, ದ್ವೇಷವನ್ನು ಹರಡುವಂತಹ ಪಠ್ಯಗಳು, ಆಡಿಯೋಗಳು ಮತ್ತು ವಿಡಿಯೋಗಳು ವಾಟ್ಸಾಪ್‌ನಲ್ಲಿ ಹರಿದಾಡಿವೆ. ಇವುಗಳಲ್ಲಿ ಕೆಲವು ಹಳೆಯವು ಹಾಗೂ ಅಂದಿನ ಘಟನೆಗೆ ಸಂಬಂಧವೇ ಇಲ್ಲದಂತವುಗಳಾಗಿದೆ.

ಭಾರತದಲ್ಲಿ ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳ ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವು ಫೇಕ್‌ ನ್ಯೂಸ್‌ಗಳನ್ನು ತಡೆಗಟ್ಟುವಲ್ಲಿ ವಿಫಲವಾಗಿವೆ ಎಂದು ಟೀಕೆಗೆ ಒಳಗಾಗಿವೆ. ಟ್ವಿಟರ್‌ ಇತ್ತೀಚೆಗೆ ಸುಳ್ಳು ಸುದ್ದಿಗಳ ವಿರುದ್ಧ ಲೇಬಲ್‌ ಹಾಕಲು ಆರಂಭಿಸಿದೆ. ಆದರೆ, ಹೆಚ್ಚಿನ ಬಳಕೆದಾರರಿರುವದರಿಂದ ಎಲ್ಲಾ ರೀತಿಯ ಫೇಕ್‌ನ್ಯೂಸ್‌ಗಳನ್ನು ತಡೆಗಟ್ಟಲು ಸಾಧ್ಯವಾಗದಿರಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಇದಲ್ಲದೆ, ವೈರಲ್‌ ಅದ ಫೇಕ್‌ ಪೋಸ್ಟ್‌ಗಳ ಹಿಂದಿರುವ ಪ್ರಭಾವಶಾಲಿಗಳನ್ನು ಗುರುತಿಸುವುದು ಸಹ ಸುಲಭವಲ್ಲ. ಪ್ರಭಾವಿಯನ್ನು ಗುರುತಿಸುವುದರ ಜೊತೆಗೆ ಸುಳ್ಳು ಮಾಹಿತಿ ಭೌಗೋಳಿಕ ಸ್ಥಳದ ವಿಶ್ಲೇಷಣೆ ಮಾಡಬೇಕು. ಬಿತ್ತರಿಸಿದ ಪೇಜ್‌ಗಳು ಹಾಗೂ ವಿಡಿಯೋಗಳ ಡೇಟಾವನ್ನು ವರ್ಗೀಕರಿಸಲು ಸಮರ್ಥವಾಗಿರಬೇಕು ಎಂದು ಟೆಂಡರ್‌ನಲ್ಲಿ ಆದೇಶಿಸಲಾಗಿದೆ. ಇಂತಹ “ಡೇಟಾ ವರ್ಗೀಕರಣ ಮತ್ತು ಕ್ಲಸ್ಟರಿಂಗ್”ಗಾಗಿ ಕೃತಕ ಬುದ್ಧಿಮತ್ತೆಯ ಬಳಕೆಯನ್ನು ಟೆಂಡರ್ ಪ್ರಸ್ತಾಪಿಸುತ್ತದೆ. ಆದರೆ, ಅದು ಅಷ್ಟು ಸುಲಭವೂ ಸಾಧ್ಯವೂ ಅಲ್ಲ ಎಂದು ಫ್ಯಾಕ್ಟ್-ಚೆಕಿಂಗ್ ಪ್ಲಾಟ್‌ಫಾರ್ಮ್‌ನ ಸಹ-ಸಂಸ್ಥಾಪಕ ಸಿಹ್ನಾ ಹೇಳುತ್ತಾರೆ.

“ಜಾಗೃತಿ ಅಭಿಯಾನದ ಮೂಲಕ, ಜನರಿಗೆ ಹೇಗೆ ಸತ್ಯವನ್ನು ಪರಿಶೀಲಿಸಬೇಕೆಂದು ಕಲಿಸುವುದು ಫೇಕ್‌ ನ್ಯೂಸ್‌ಗಳನ್ನು ತಡೆಯುವ ಒಂದು ಉತ್ತಮ ಮಾರ್ಗವಾಗಿದೆ. ಟ್ವಿಟರ್ ಮತ್ತು ಫೇಸ್‌ಬುಕ್‌ನಂತಹ ಪ್ಲ್ಯಾಟ್‌ಫಾರ್ಮ್‌ಗಳು ಹಳೆಯ ವೀಡಿಯೊಗಳು ಮತ್ತು ಫೋಟೋಗಳನ್ನು ಮರುಬಳಕೆ ಮಾಡುವ ಹಕ್ಕು ನಿರಾಕರಣೆಗಳನ್ನು ಒದಗಿಸಬಲ್ಲವು” ಎಂದು ಸಿನ್ಹಾ ಹೇಳುತ್ತಾರೆ.

“ಭಾರತದಲ್ಲಿ ಅತೀ ಹೆಚ್ಚು ಫೇಕ್‌ ನ್ಯೂಸ್‌ಗಳನ್ನು ಬಿಜೆಪಿ ಮತ್ತು ಆರೆಸ್ಸೆಸ್‌ನ ಐಟಿ ಸೆಲ್‌ಗಳೇ ಹರಡುತ್ತಿವೆ. ಅದರಲ್ಲೂ 2014 ರಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಮುಸ್ಲಿಂ ವಿರೋಧಿ, ದಲಿತ ವಿರೋಧಿ ಪೇಕ್‌ನ್ಯೂಸ್‌ಗಳನ್ನು ಹೆಚ್ಚಾಗಿ ಬಿಜೆಪಿಯ ನಾನಾ ಬ್ರಾಂಚ್‌ಗಳು ಹರಡುತ್ತಿವೆ. ಕರ್ನಾಟಕದಲ್ಲಿಯೂ ವಿಕ್ರಮ್ ಹೆಗಡೆ ಸಂಪಾದಕನಾಗಿರುವ ಪೋಸ್ಟ್‌ಕಾರ್ಡ್‌ ಫೇಕ್‌ನ್ಯೂಸ್‌ ತಯಾರಿಸಲೇ ಇರುವ ಕರ್ನಾಟಕದ ಕಾರ್ಖಾನೆಯಾಗಿದೆ.” ಎಂದು ಸಾಮಾಜಿಕ ಜಾಲತಾಣ ಪರಿಣಿತರಾದ ಅನಿಲ್ ಕುಮಾರ್‌ ಅಭಿಪ್ರಾಯ ಪಡುತ್ತಾರೆ.

ಸಾಮಾಜಿಕ ಜಾಲತಾಣದ ಮೇಲೆ ಹಿಡಿತ ಸಾಧಿಸುವ ಹಾಗೂ ಬಳಕೆದಾರರನ್ನು ಕಂಟ್ರೋಲ್‌ ಮಾಡುವ ಉದ್ದೇಶದಿಂದ ಇಂತಹ ಹೊಸ ಗೇಮ್‌ಪ್ಲಾನ್‌ ಮಾಡಲು ಸರ್ಕಾರ ಮುಂದಾಗಿದೆ, ಹಾಗಾಗಿ ಇದು ಒಂದು ದೊಡ್ಡ ವ್ಯಂಗ್ಯವಾಗಿದೆ, ಎಂದು ಅನಿಲ್ ಅವರು ಹೇಳುತ್ತಾರೆ.


ಓದಿ: ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...