Homeಮುಖಪುಟಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ

ಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ

- Advertisement -
- Advertisement -

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಉದ್ಯಮ (CPSI) ಮತ್ತು ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ಗಳು ಸಾಮಾಜಿಕ ಜಾಲತಾಣದಲ್ಲಿ “ಫ್ಯಾಕ್ಟ್ ಚೆಕ್‌ ಮತ್ತು ಸುಳ್ಳು ಮಾಹಿತಿ ಪತ್ತೆ” ಗೆ ಸಂಬಂಧಿಸಿದ “ಪರಿಹಾರ ಮತ್ತು ಸೇವೆಗಳನ್ನು” ಒದಗಿಸಲು ಸಂಶೋಧನಾ ಏಜೆನ್ಸಿಗಳಿಗೆ ಟೆಂಡರ್ ಆಹ್ವಾನಿಸಿವೆ.

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು ತಡೆಗಟ್ಟಲು ಟೆಂಡರ್‌ ಕರೆದಿದ್ದು, ಬಿಡ್ಡಿಂಗ್‌ ಸಂಸ್ಥೆಗಳು “ಸುಳ್ಳು ಸುದ್ದಿಗಳ ಹಿಂದಿರಿರುವ ಪ್ರಮುಖ ಪ್ರಭಾವಿಗಳನ್ನು ಪತ್ತೆಹಚ್ಚಿ, ಅವರ ಲೊಕೇಷನ್‌ ಅನ್ನು ಹುಡಕಲು ಸಮರ್ಥವಾಗಿರಬೇಕು.” ಎಂದು BECIL ಹೇಳಿದೆ.

ಸರ್ಕಾರವು ಅಕ್ರಮ ಕಣ್ಗಾವಲಿಗಾಗಿ ಮಾರ್ಗಗಳನ್ನು ಹುಡುಕುತ್ತಿದೆ. ಇದು ‘ಮಾಟಗಾತಿ ಬೇಟೆ’ ಇದ್ದಂತೆ ಎಂದು ಸೈಬರ್ ಕಾನೂನು ಮತ್ತು ಇತರ ಸುಳ್ಳು ಸುದ್ದಿಗಳನ್ನು ಬರ್ಸ್ಟ್ ಮಾಡುವ ತಜ್ಞರು ಹೇಳಿದ್ಧಾರೆ.

“ಯಾವುದು ಸುಳ್ಳು ಸುದ್ದಿ ಎಂದು ನಮಗೆ ತಿಳಿಯದಿದ್ದಲ್ಲಿ, ಟೆಂಡರ್‌ ಪಡೆದವನು ಸುಳ್ಳು ಯಾವುದು, ಸತ್ಯ ಏನು? ಎಂಬುದನ್ನು ಹೇಗೆ ಗುರುತಿಸುತ್ತಾರೆ. ನಿಖರವಾಗಿ ಏನು ಗುರುತಿಸಬೇಕು ಮತ್ತು ಯಾವುದನ್ನು ಪರಿಶೀಲಿಸಬೇಕು? ಎಂಬುದನ್ನು ಹೇಗೆ ಕಂಡುಕೊಳ್ಳುತ್ತಾರೆ. ಇದು ಕಾನೂನು ಬಾಹಿತವಾಗಿ ಮತ್ತು ಅನೈತಿಕ ಕಣ್ಗಾವಲಿಗೆ ಸರ್ಕಾರ ಸುಲಭವಾದ ಮಾರ್ಗವನ್ನು ಹುಡುಕಿಕೊಂಡಿದೆ” ಎಂದು ವಕೀಲರಾದ ಸಲ್ಮಾನ್ ವಾರಿಸ್ ಹೇಳಿದ್ದಾರೆ.

ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿಯ ಬಗ್ಗೆ ಯಾವುದಾದರೂ ವ್ಯಾಖ್ಯಾನಕ್ಕೆ ಬಂದಿದ್ದೀರಾ? ಮೇ. 13 ರಂದು ಕರೆದಿರುವ ಟೆಂಡರ್‌ಗಾಗಿ ಯಾರಾದರೂ ಬಿಡ್‌ ಮಾಡಿದ್ದಾರಾ? ಎಂದು ಕೇಳಲಾಗಿರುವ ಪ್ರಶ್ನೆಗೆ ಬಿಇಸಿಎಲ್‌ ಪ್ರತಿಕ್ರಿಯಿಸಿಲ್ಲ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಸಾಮಾಜಿಕ ಮಾಧ್ಯಮ ನಿಯಮಗಳು 2020 ರ ಮಾರ್ಗಸೂಚಿಗಳ ಕರಡನ್ನು ಏಪ್ರಿಲ್‌ ವೇಳೆಗೆ ಬಿಡುಗಡೆಗೊಳಿಲಾಗುವುದು ಎಂದು ಹೇಳಿತ್ತು. ಆದರೆ, ನಿಯಮಗಳ ಅಂತಿಮ ಕರಡು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ವಾಟ್ಸಾಪ್‌ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣ ಮತ್ತು ಕಳ್ಳಸಾಗಾಣಿಕೆಗಳ ಬಗ್ಗೆ ಪೋಷಕರಿಗೆ ಎಚ್ಚರಿಕೆ ನೀಡುವ ಪೋಸ್ಟ್‌ಗಳು ಹರಿದಾಡಿದ್ದವು. ಅಲ್ಲದೆ, ಈ ವರ್ಷದ ಫೆಬ್ರವರಿಯಲ್ಲಿ ಹಿಂಸಾಚಾರವನ್ನು ಹರಡಲು ವಾಟ್ಸಾಪ್‌ ದುರ್ಬಳಕೆಯಾಗಿದೆ. ಎರಡು ಸಮುದಾಯಗಳ ನಡುವೆ ಗಲಬೆ, ಹಿಂಸಾಚಾರ, ದ್ವೇಷವನ್ನು ಹರಡುವಂತಹ ಪಠ್ಯಗಳು, ಆಡಿಯೋಗಳು ಮತ್ತು ವಿಡಿಯೋಗಳು ವಾಟ್ಸಾಪ್‌ನಲ್ಲಿ ಹರಿದಾಡಿವೆ. ಇವುಗಳಲ್ಲಿ ಕೆಲವು ಹಳೆಯವು ಹಾಗೂ ಅಂದಿನ ಘಟನೆಗೆ ಸಂಬಂಧವೇ ಇಲ್ಲದಂತವುಗಳಾಗಿದೆ.

ಭಾರತದಲ್ಲಿ ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳ ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವು ಫೇಕ್‌ ನ್ಯೂಸ್‌ಗಳನ್ನು ತಡೆಗಟ್ಟುವಲ್ಲಿ ವಿಫಲವಾಗಿವೆ ಎಂದು ಟೀಕೆಗೆ ಒಳಗಾಗಿವೆ. ಟ್ವಿಟರ್‌ ಇತ್ತೀಚೆಗೆ ಸುಳ್ಳು ಸುದ್ದಿಗಳ ವಿರುದ್ಧ ಲೇಬಲ್‌ ಹಾಕಲು ಆರಂಭಿಸಿದೆ. ಆದರೆ, ಹೆಚ್ಚಿನ ಬಳಕೆದಾರರಿರುವದರಿಂದ ಎಲ್ಲಾ ರೀತಿಯ ಫೇಕ್‌ನ್ಯೂಸ್‌ಗಳನ್ನು ತಡೆಗಟ್ಟಲು ಸಾಧ್ಯವಾಗದಿರಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಇದಲ್ಲದೆ, ವೈರಲ್‌ ಅದ ಫೇಕ್‌ ಪೋಸ್ಟ್‌ಗಳ ಹಿಂದಿರುವ ಪ್ರಭಾವಶಾಲಿಗಳನ್ನು ಗುರುತಿಸುವುದು ಸಹ ಸುಲಭವಲ್ಲ. ಪ್ರಭಾವಿಯನ್ನು ಗುರುತಿಸುವುದರ ಜೊತೆಗೆ ಸುಳ್ಳು ಮಾಹಿತಿ ಭೌಗೋಳಿಕ ಸ್ಥಳದ ವಿಶ್ಲೇಷಣೆ ಮಾಡಬೇಕು. ಬಿತ್ತರಿಸಿದ ಪೇಜ್‌ಗಳು ಹಾಗೂ ವಿಡಿಯೋಗಳ ಡೇಟಾವನ್ನು ವರ್ಗೀಕರಿಸಲು ಸಮರ್ಥವಾಗಿರಬೇಕು ಎಂದು ಟೆಂಡರ್‌ನಲ್ಲಿ ಆದೇಶಿಸಲಾಗಿದೆ. ಇಂತಹ “ಡೇಟಾ ವರ್ಗೀಕರಣ ಮತ್ತು ಕ್ಲಸ್ಟರಿಂಗ್”ಗಾಗಿ ಕೃತಕ ಬುದ್ಧಿಮತ್ತೆಯ ಬಳಕೆಯನ್ನು ಟೆಂಡರ್ ಪ್ರಸ್ತಾಪಿಸುತ್ತದೆ. ಆದರೆ, ಅದು ಅಷ್ಟು ಸುಲಭವೂ ಸಾಧ್ಯವೂ ಅಲ್ಲ ಎಂದು ಫ್ಯಾಕ್ಟ್-ಚೆಕಿಂಗ್ ಪ್ಲಾಟ್‌ಫಾರ್ಮ್‌ನ ಸಹ-ಸಂಸ್ಥಾಪಕ ಸಿಹ್ನಾ ಹೇಳುತ್ತಾರೆ.

“ಜಾಗೃತಿ ಅಭಿಯಾನದ ಮೂಲಕ, ಜನರಿಗೆ ಹೇಗೆ ಸತ್ಯವನ್ನು ಪರಿಶೀಲಿಸಬೇಕೆಂದು ಕಲಿಸುವುದು ಫೇಕ್‌ ನ್ಯೂಸ್‌ಗಳನ್ನು ತಡೆಯುವ ಒಂದು ಉತ್ತಮ ಮಾರ್ಗವಾಗಿದೆ. ಟ್ವಿಟರ್ ಮತ್ತು ಫೇಸ್‌ಬುಕ್‌ನಂತಹ ಪ್ಲ್ಯಾಟ್‌ಫಾರ್ಮ್‌ಗಳು ಹಳೆಯ ವೀಡಿಯೊಗಳು ಮತ್ತು ಫೋಟೋಗಳನ್ನು ಮರುಬಳಕೆ ಮಾಡುವ ಹಕ್ಕು ನಿರಾಕರಣೆಗಳನ್ನು ಒದಗಿಸಬಲ್ಲವು” ಎಂದು ಸಿನ್ಹಾ ಹೇಳುತ್ತಾರೆ.

“ಭಾರತದಲ್ಲಿ ಅತೀ ಹೆಚ್ಚು ಫೇಕ್‌ ನ್ಯೂಸ್‌ಗಳನ್ನು ಬಿಜೆಪಿ ಮತ್ತು ಆರೆಸ್ಸೆಸ್‌ನ ಐಟಿ ಸೆಲ್‌ಗಳೇ ಹರಡುತ್ತಿವೆ. ಅದರಲ್ಲೂ 2014 ರಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಮುಸ್ಲಿಂ ವಿರೋಧಿ, ದಲಿತ ವಿರೋಧಿ ಪೇಕ್‌ನ್ಯೂಸ್‌ಗಳನ್ನು ಹೆಚ್ಚಾಗಿ ಬಿಜೆಪಿಯ ನಾನಾ ಬ್ರಾಂಚ್‌ಗಳು ಹರಡುತ್ತಿವೆ. ಕರ್ನಾಟಕದಲ್ಲಿಯೂ ವಿಕ್ರಮ್ ಹೆಗಡೆ ಸಂಪಾದಕನಾಗಿರುವ ಪೋಸ್ಟ್‌ಕಾರ್ಡ್‌ ಫೇಕ್‌ನ್ಯೂಸ್‌ ತಯಾರಿಸಲೇ ಇರುವ ಕರ್ನಾಟಕದ ಕಾರ್ಖಾನೆಯಾಗಿದೆ.” ಎಂದು ಸಾಮಾಜಿಕ ಜಾಲತಾಣ ಪರಿಣಿತರಾದ ಅನಿಲ್ ಕುಮಾರ್‌ ಅಭಿಪ್ರಾಯ ಪಡುತ್ತಾರೆ.

ಸಾಮಾಜಿಕ ಜಾಲತಾಣದ ಮೇಲೆ ಹಿಡಿತ ಸಾಧಿಸುವ ಹಾಗೂ ಬಳಕೆದಾರರನ್ನು ಕಂಟ್ರೋಲ್‌ ಮಾಡುವ ಉದ್ದೇಶದಿಂದ ಇಂತಹ ಹೊಸ ಗೇಮ್‌ಪ್ಲಾನ್‌ ಮಾಡಲು ಸರ್ಕಾರ ಮುಂದಾಗಿದೆ, ಹಾಗಾಗಿ ಇದು ಒಂದು ದೊಡ್ಡ ವ್ಯಂಗ್ಯವಾಗಿದೆ, ಎಂದು ಅನಿಲ್ ಅವರು ಹೇಳುತ್ತಾರೆ.


ಓದಿ: ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...