Homeಮುಖಪುಟಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ

ಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ

- Advertisement -
- Advertisement -

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಉದ್ಯಮ (CPSI) ಮತ್ತು ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ಗಳು ಸಾಮಾಜಿಕ ಜಾಲತಾಣದಲ್ಲಿ “ಫ್ಯಾಕ್ಟ್ ಚೆಕ್‌ ಮತ್ತು ಸುಳ್ಳು ಮಾಹಿತಿ ಪತ್ತೆ” ಗೆ ಸಂಬಂಧಿಸಿದ “ಪರಿಹಾರ ಮತ್ತು ಸೇವೆಗಳನ್ನು” ಒದಗಿಸಲು ಸಂಶೋಧನಾ ಏಜೆನ್ಸಿಗಳಿಗೆ ಟೆಂಡರ್ ಆಹ್ವಾನಿಸಿವೆ.

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು ತಡೆಗಟ್ಟಲು ಟೆಂಡರ್‌ ಕರೆದಿದ್ದು, ಬಿಡ್ಡಿಂಗ್‌ ಸಂಸ್ಥೆಗಳು “ಸುಳ್ಳು ಸುದ್ದಿಗಳ ಹಿಂದಿರಿರುವ ಪ್ರಮುಖ ಪ್ರಭಾವಿಗಳನ್ನು ಪತ್ತೆಹಚ್ಚಿ, ಅವರ ಲೊಕೇಷನ್‌ ಅನ್ನು ಹುಡಕಲು ಸಮರ್ಥವಾಗಿರಬೇಕು.” ಎಂದು BECIL ಹೇಳಿದೆ.

ಸರ್ಕಾರವು ಅಕ್ರಮ ಕಣ್ಗಾವಲಿಗಾಗಿ ಮಾರ್ಗಗಳನ್ನು ಹುಡುಕುತ್ತಿದೆ. ಇದು ‘ಮಾಟಗಾತಿ ಬೇಟೆ’ ಇದ್ದಂತೆ ಎಂದು ಸೈಬರ್ ಕಾನೂನು ಮತ್ತು ಇತರ ಸುಳ್ಳು ಸುದ್ದಿಗಳನ್ನು ಬರ್ಸ್ಟ್ ಮಾಡುವ ತಜ್ಞರು ಹೇಳಿದ್ಧಾರೆ.

“ಯಾವುದು ಸುಳ್ಳು ಸುದ್ದಿ ಎಂದು ನಮಗೆ ತಿಳಿಯದಿದ್ದಲ್ಲಿ, ಟೆಂಡರ್‌ ಪಡೆದವನು ಸುಳ್ಳು ಯಾವುದು, ಸತ್ಯ ಏನು? ಎಂಬುದನ್ನು ಹೇಗೆ ಗುರುತಿಸುತ್ತಾರೆ. ನಿಖರವಾಗಿ ಏನು ಗುರುತಿಸಬೇಕು ಮತ್ತು ಯಾವುದನ್ನು ಪರಿಶೀಲಿಸಬೇಕು? ಎಂಬುದನ್ನು ಹೇಗೆ ಕಂಡುಕೊಳ್ಳುತ್ತಾರೆ. ಇದು ಕಾನೂನು ಬಾಹಿತವಾಗಿ ಮತ್ತು ಅನೈತಿಕ ಕಣ್ಗಾವಲಿಗೆ ಸರ್ಕಾರ ಸುಲಭವಾದ ಮಾರ್ಗವನ್ನು ಹುಡುಕಿಕೊಂಡಿದೆ” ಎಂದು ವಕೀಲರಾದ ಸಲ್ಮಾನ್ ವಾರಿಸ್ ಹೇಳಿದ್ದಾರೆ.

ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿಯ ಬಗ್ಗೆ ಯಾವುದಾದರೂ ವ್ಯಾಖ್ಯಾನಕ್ಕೆ ಬಂದಿದ್ದೀರಾ? ಮೇ. 13 ರಂದು ಕರೆದಿರುವ ಟೆಂಡರ್‌ಗಾಗಿ ಯಾರಾದರೂ ಬಿಡ್‌ ಮಾಡಿದ್ದಾರಾ? ಎಂದು ಕೇಳಲಾಗಿರುವ ಪ್ರಶ್ನೆಗೆ ಬಿಇಸಿಎಲ್‌ ಪ್ರತಿಕ್ರಿಯಿಸಿಲ್ಲ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಸಾಮಾಜಿಕ ಮಾಧ್ಯಮ ನಿಯಮಗಳು 2020 ರ ಮಾರ್ಗಸೂಚಿಗಳ ಕರಡನ್ನು ಏಪ್ರಿಲ್‌ ವೇಳೆಗೆ ಬಿಡುಗಡೆಗೊಳಿಲಾಗುವುದು ಎಂದು ಹೇಳಿತ್ತು. ಆದರೆ, ನಿಯಮಗಳ ಅಂತಿಮ ಕರಡು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ವಾಟ್ಸಾಪ್‌ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣ ಮತ್ತು ಕಳ್ಳಸಾಗಾಣಿಕೆಗಳ ಬಗ್ಗೆ ಪೋಷಕರಿಗೆ ಎಚ್ಚರಿಕೆ ನೀಡುವ ಪೋಸ್ಟ್‌ಗಳು ಹರಿದಾಡಿದ್ದವು. ಅಲ್ಲದೆ, ಈ ವರ್ಷದ ಫೆಬ್ರವರಿಯಲ್ಲಿ ಹಿಂಸಾಚಾರವನ್ನು ಹರಡಲು ವಾಟ್ಸಾಪ್‌ ದುರ್ಬಳಕೆಯಾಗಿದೆ. ಎರಡು ಸಮುದಾಯಗಳ ನಡುವೆ ಗಲಬೆ, ಹಿಂಸಾಚಾರ, ದ್ವೇಷವನ್ನು ಹರಡುವಂತಹ ಪಠ್ಯಗಳು, ಆಡಿಯೋಗಳು ಮತ್ತು ವಿಡಿಯೋಗಳು ವಾಟ್ಸಾಪ್‌ನಲ್ಲಿ ಹರಿದಾಡಿವೆ. ಇವುಗಳಲ್ಲಿ ಕೆಲವು ಹಳೆಯವು ಹಾಗೂ ಅಂದಿನ ಘಟನೆಗೆ ಸಂಬಂಧವೇ ಇಲ್ಲದಂತವುಗಳಾಗಿದೆ.

ಭಾರತದಲ್ಲಿ ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳ ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವು ಫೇಕ್‌ ನ್ಯೂಸ್‌ಗಳನ್ನು ತಡೆಗಟ್ಟುವಲ್ಲಿ ವಿಫಲವಾಗಿವೆ ಎಂದು ಟೀಕೆಗೆ ಒಳಗಾಗಿವೆ. ಟ್ವಿಟರ್‌ ಇತ್ತೀಚೆಗೆ ಸುಳ್ಳು ಸುದ್ದಿಗಳ ವಿರುದ್ಧ ಲೇಬಲ್‌ ಹಾಕಲು ಆರಂಭಿಸಿದೆ. ಆದರೆ, ಹೆಚ್ಚಿನ ಬಳಕೆದಾರರಿರುವದರಿಂದ ಎಲ್ಲಾ ರೀತಿಯ ಫೇಕ್‌ನ್ಯೂಸ್‌ಗಳನ್ನು ತಡೆಗಟ್ಟಲು ಸಾಧ್ಯವಾಗದಿರಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಇದಲ್ಲದೆ, ವೈರಲ್‌ ಅದ ಫೇಕ್‌ ಪೋಸ್ಟ್‌ಗಳ ಹಿಂದಿರುವ ಪ್ರಭಾವಶಾಲಿಗಳನ್ನು ಗುರುತಿಸುವುದು ಸಹ ಸುಲಭವಲ್ಲ. ಪ್ರಭಾವಿಯನ್ನು ಗುರುತಿಸುವುದರ ಜೊತೆಗೆ ಸುಳ್ಳು ಮಾಹಿತಿ ಭೌಗೋಳಿಕ ಸ್ಥಳದ ವಿಶ್ಲೇಷಣೆ ಮಾಡಬೇಕು. ಬಿತ್ತರಿಸಿದ ಪೇಜ್‌ಗಳು ಹಾಗೂ ವಿಡಿಯೋಗಳ ಡೇಟಾವನ್ನು ವರ್ಗೀಕರಿಸಲು ಸಮರ್ಥವಾಗಿರಬೇಕು ಎಂದು ಟೆಂಡರ್‌ನಲ್ಲಿ ಆದೇಶಿಸಲಾಗಿದೆ. ಇಂತಹ “ಡೇಟಾ ವರ್ಗೀಕರಣ ಮತ್ತು ಕ್ಲಸ್ಟರಿಂಗ್”ಗಾಗಿ ಕೃತಕ ಬುದ್ಧಿಮತ್ತೆಯ ಬಳಕೆಯನ್ನು ಟೆಂಡರ್ ಪ್ರಸ್ತಾಪಿಸುತ್ತದೆ. ಆದರೆ, ಅದು ಅಷ್ಟು ಸುಲಭವೂ ಸಾಧ್ಯವೂ ಅಲ್ಲ ಎಂದು ಫ್ಯಾಕ್ಟ್-ಚೆಕಿಂಗ್ ಪ್ಲಾಟ್‌ಫಾರ್ಮ್‌ನ ಸಹ-ಸಂಸ್ಥಾಪಕ ಸಿಹ್ನಾ ಹೇಳುತ್ತಾರೆ.

“ಜಾಗೃತಿ ಅಭಿಯಾನದ ಮೂಲಕ, ಜನರಿಗೆ ಹೇಗೆ ಸತ್ಯವನ್ನು ಪರಿಶೀಲಿಸಬೇಕೆಂದು ಕಲಿಸುವುದು ಫೇಕ್‌ ನ್ಯೂಸ್‌ಗಳನ್ನು ತಡೆಯುವ ಒಂದು ಉತ್ತಮ ಮಾರ್ಗವಾಗಿದೆ. ಟ್ವಿಟರ್ ಮತ್ತು ಫೇಸ್‌ಬುಕ್‌ನಂತಹ ಪ್ಲ್ಯಾಟ್‌ಫಾರ್ಮ್‌ಗಳು ಹಳೆಯ ವೀಡಿಯೊಗಳು ಮತ್ತು ಫೋಟೋಗಳನ್ನು ಮರುಬಳಕೆ ಮಾಡುವ ಹಕ್ಕು ನಿರಾಕರಣೆಗಳನ್ನು ಒದಗಿಸಬಲ್ಲವು” ಎಂದು ಸಿನ್ಹಾ ಹೇಳುತ್ತಾರೆ.

“ಭಾರತದಲ್ಲಿ ಅತೀ ಹೆಚ್ಚು ಫೇಕ್‌ ನ್ಯೂಸ್‌ಗಳನ್ನು ಬಿಜೆಪಿ ಮತ್ತು ಆರೆಸ್ಸೆಸ್‌ನ ಐಟಿ ಸೆಲ್‌ಗಳೇ ಹರಡುತ್ತಿವೆ. ಅದರಲ್ಲೂ 2014 ರಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಮುಸ್ಲಿಂ ವಿರೋಧಿ, ದಲಿತ ವಿರೋಧಿ ಪೇಕ್‌ನ್ಯೂಸ್‌ಗಳನ್ನು ಹೆಚ್ಚಾಗಿ ಬಿಜೆಪಿಯ ನಾನಾ ಬ್ರಾಂಚ್‌ಗಳು ಹರಡುತ್ತಿವೆ. ಕರ್ನಾಟಕದಲ್ಲಿಯೂ ವಿಕ್ರಮ್ ಹೆಗಡೆ ಸಂಪಾದಕನಾಗಿರುವ ಪೋಸ್ಟ್‌ಕಾರ್ಡ್‌ ಫೇಕ್‌ನ್ಯೂಸ್‌ ತಯಾರಿಸಲೇ ಇರುವ ಕರ್ನಾಟಕದ ಕಾರ್ಖಾನೆಯಾಗಿದೆ.” ಎಂದು ಸಾಮಾಜಿಕ ಜಾಲತಾಣ ಪರಿಣಿತರಾದ ಅನಿಲ್ ಕುಮಾರ್‌ ಅಭಿಪ್ರಾಯ ಪಡುತ್ತಾರೆ.

ಸಾಮಾಜಿಕ ಜಾಲತಾಣದ ಮೇಲೆ ಹಿಡಿತ ಸಾಧಿಸುವ ಹಾಗೂ ಬಳಕೆದಾರರನ್ನು ಕಂಟ್ರೋಲ್‌ ಮಾಡುವ ಉದ್ದೇಶದಿಂದ ಇಂತಹ ಹೊಸ ಗೇಮ್‌ಪ್ಲಾನ್‌ ಮಾಡಲು ಸರ್ಕಾರ ಮುಂದಾಗಿದೆ, ಹಾಗಾಗಿ ಇದು ಒಂದು ದೊಡ್ಡ ವ್ಯಂಗ್ಯವಾಗಿದೆ, ಎಂದು ಅನಿಲ್ ಅವರು ಹೇಳುತ್ತಾರೆ.


ಓದಿ: ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...