Homeಮುಖಪುಟಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ

ಫ್ಯಾಕ್ಟ್ ಚೆಕಿಂಗ್‌ ಮಾಡಲು ಏಜೆನ್ಸಿಗಳಿಗೆ ಟೆಂಡರ್‌ ಕರೆದ ಕೇಂದ್ರ ಸರ್ಕಾರ

- Advertisement -
- Advertisement -

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಉದ್ಯಮ (CPSI) ಮತ್ತು ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (BECIL)ಗಳು ಸಾಮಾಜಿಕ ಜಾಲತಾಣದಲ್ಲಿ “ಫ್ಯಾಕ್ಟ್ ಚೆಕ್‌ ಮತ್ತು ಸುಳ್ಳು ಮಾಹಿತಿ ಪತ್ತೆ” ಗೆ ಸಂಬಂಧಿಸಿದ “ಪರಿಹಾರ ಮತ್ತು ಸೇವೆಗಳನ್ನು” ಒದಗಿಸಲು ಸಂಶೋಧನಾ ಏಜೆನ್ಸಿಗಳಿಗೆ ಟೆಂಡರ್ ಆಹ್ವಾನಿಸಿವೆ.

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು ತಡೆಗಟ್ಟಲು ಟೆಂಡರ್‌ ಕರೆದಿದ್ದು, ಬಿಡ್ಡಿಂಗ್‌ ಸಂಸ್ಥೆಗಳು “ಸುಳ್ಳು ಸುದ್ದಿಗಳ ಹಿಂದಿರಿರುವ ಪ್ರಮುಖ ಪ್ರಭಾವಿಗಳನ್ನು ಪತ್ತೆಹಚ್ಚಿ, ಅವರ ಲೊಕೇಷನ್‌ ಅನ್ನು ಹುಡಕಲು ಸಮರ್ಥವಾಗಿರಬೇಕು.” ಎಂದು BECIL ಹೇಳಿದೆ.

ಸರ್ಕಾರವು ಅಕ್ರಮ ಕಣ್ಗಾವಲಿಗಾಗಿ ಮಾರ್ಗಗಳನ್ನು ಹುಡುಕುತ್ತಿದೆ. ಇದು ‘ಮಾಟಗಾತಿ ಬೇಟೆ’ ಇದ್ದಂತೆ ಎಂದು ಸೈಬರ್ ಕಾನೂನು ಮತ್ತು ಇತರ ಸುಳ್ಳು ಸುದ್ದಿಗಳನ್ನು ಬರ್ಸ್ಟ್ ಮಾಡುವ ತಜ್ಞರು ಹೇಳಿದ್ಧಾರೆ.

“ಯಾವುದು ಸುಳ್ಳು ಸುದ್ದಿ ಎಂದು ನಮಗೆ ತಿಳಿಯದಿದ್ದಲ್ಲಿ, ಟೆಂಡರ್‌ ಪಡೆದವನು ಸುಳ್ಳು ಯಾವುದು, ಸತ್ಯ ಏನು? ಎಂಬುದನ್ನು ಹೇಗೆ ಗುರುತಿಸುತ್ತಾರೆ. ನಿಖರವಾಗಿ ಏನು ಗುರುತಿಸಬೇಕು ಮತ್ತು ಯಾವುದನ್ನು ಪರಿಶೀಲಿಸಬೇಕು? ಎಂಬುದನ್ನು ಹೇಗೆ ಕಂಡುಕೊಳ್ಳುತ್ತಾರೆ. ಇದು ಕಾನೂನು ಬಾಹಿತವಾಗಿ ಮತ್ತು ಅನೈತಿಕ ಕಣ್ಗಾವಲಿಗೆ ಸರ್ಕಾರ ಸುಲಭವಾದ ಮಾರ್ಗವನ್ನು ಹುಡುಕಿಕೊಂಡಿದೆ” ಎಂದು ವಕೀಲರಾದ ಸಲ್ಮಾನ್ ವಾರಿಸ್ ಹೇಳಿದ್ದಾರೆ.

ಸುಳ್ಳು ಸುದ್ದಿ ಅಥವಾ ತಪ್ಪು ಮಾಹಿತಿಯ ಬಗ್ಗೆ ಯಾವುದಾದರೂ ವ್ಯಾಖ್ಯಾನಕ್ಕೆ ಬಂದಿದ್ದೀರಾ? ಮೇ. 13 ರಂದು ಕರೆದಿರುವ ಟೆಂಡರ್‌ಗಾಗಿ ಯಾರಾದರೂ ಬಿಡ್‌ ಮಾಡಿದ್ದಾರಾ? ಎಂದು ಕೇಳಲಾಗಿರುವ ಪ್ರಶ್ನೆಗೆ ಬಿಇಸಿಎಲ್‌ ಪ್ರತಿಕ್ರಿಯಿಸಿಲ್ಲ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಇತ್ತೀಚೆಗೆ ಮಾಹಿತಿ ತಂತ್ರಜ್ಞಾನ ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಸಾಮಾಜಿಕ ಮಾಧ್ಯಮ ನಿಯಮಗಳು 2020 ರ ಮಾರ್ಗಸೂಚಿಗಳ ಕರಡನ್ನು ಏಪ್ರಿಲ್‌ ವೇಳೆಗೆ ಬಿಡುಗಡೆಗೊಳಿಲಾಗುವುದು ಎಂದು ಹೇಳಿತ್ತು. ಆದರೆ, ನಿಯಮಗಳ ಅಂತಿಮ ಕರಡು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ವಾಟ್ಸಾಪ್‌ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಅಪಹರಣ ಮತ್ತು ಕಳ್ಳಸಾಗಾಣಿಕೆಗಳ ಬಗ್ಗೆ ಪೋಷಕರಿಗೆ ಎಚ್ಚರಿಕೆ ನೀಡುವ ಪೋಸ್ಟ್‌ಗಳು ಹರಿದಾಡಿದ್ದವು. ಅಲ್ಲದೆ, ಈ ವರ್ಷದ ಫೆಬ್ರವರಿಯಲ್ಲಿ ಹಿಂಸಾಚಾರವನ್ನು ಹರಡಲು ವಾಟ್ಸಾಪ್‌ ದುರ್ಬಳಕೆಯಾಗಿದೆ. ಎರಡು ಸಮುದಾಯಗಳ ನಡುವೆ ಗಲಬೆ, ಹಿಂಸಾಚಾರ, ದ್ವೇಷವನ್ನು ಹರಡುವಂತಹ ಪಠ್ಯಗಳು, ಆಡಿಯೋಗಳು ಮತ್ತು ವಿಡಿಯೋಗಳು ವಾಟ್ಸಾಪ್‌ನಲ್ಲಿ ಹರಿದಾಡಿವೆ. ಇವುಗಳಲ್ಲಿ ಕೆಲವು ಹಳೆಯವು ಹಾಗೂ ಅಂದಿನ ಘಟನೆಗೆ ಸಂಬಂಧವೇ ಇಲ್ಲದಂತವುಗಳಾಗಿದೆ.

ಭಾರತದಲ್ಲಿ ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳ ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವು ಫೇಕ್‌ ನ್ಯೂಸ್‌ಗಳನ್ನು ತಡೆಗಟ್ಟುವಲ್ಲಿ ವಿಫಲವಾಗಿವೆ ಎಂದು ಟೀಕೆಗೆ ಒಳಗಾಗಿವೆ. ಟ್ವಿಟರ್‌ ಇತ್ತೀಚೆಗೆ ಸುಳ್ಳು ಸುದ್ದಿಗಳ ವಿರುದ್ಧ ಲೇಬಲ್‌ ಹಾಕಲು ಆರಂಭಿಸಿದೆ. ಆದರೆ, ಹೆಚ್ಚಿನ ಬಳಕೆದಾರರಿರುವದರಿಂದ ಎಲ್ಲಾ ರೀತಿಯ ಫೇಕ್‌ನ್ಯೂಸ್‌ಗಳನ್ನು ತಡೆಗಟ್ಟಲು ಸಾಧ್ಯವಾಗದಿರಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಇದಲ್ಲದೆ, ವೈರಲ್‌ ಅದ ಫೇಕ್‌ ಪೋಸ್ಟ್‌ಗಳ ಹಿಂದಿರುವ ಪ್ರಭಾವಶಾಲಿಗಳನ್ನು ಗುರುತಿಸುವುದು ಸಹ ಸುಲಭವಲ್ಲ. ಪ್ರಭಾವಿಯನ್ನು ಗುರುತಿಸುವುದರ ಜೊತೆಗೆ ಸುಳ್ಳು ಮಾಹಿತಿ ಭೌಗೋಳಿಕ ಸ್ಥಳದ ವಿಶ್ಲೇಷಣೆ ಮಾಡಬೇಕು. ಬಿತ್ತರಿಸಿದ ಪೇಜ್‌ಗಳು ಹಾಗೂ ವಿಡಿಯೋಗಳ ಡೇಟಾವನ್ನು ವರ್ಗೀಕರಿಸಲು ಸಮರ್ಥವಾಗಿರಬೇಕು ಎಂದು ಟೆಂಡರ್‌ನಲ್ಲಿ ಆದೇಶಿಸಲಾಗಿದೆ. ಇಂತಹ “ಡೇಟಾ ವರ್ಗೀಕರಣ ಮತ್ತು ಕ್ಲಸ್ಟರಿಂಗ್”ಗಾಗಿ ಕೃತಕ ಬುದ್ಧಿಮತ್ತೆಯ ಬಳಕೆಯನ್ನು ಟೆಂಡರ್ ಪ್ರಸ್ತಾಪಿಸುತ್ತದೆ. ಆದರೆ, ಅದು ಅಷ್ಟು ಸುಲಭವೂ ಸಾಧ್ಯವೂ ಅಲ್ಲ ಎಂದು ಫ್ಯಾಕ್ಟ್-ಚೆಕಿಂಗ್ ಪ್ಲಾಟ್‌ಫಾರ್ಮ್‌ನ ಸಹ-ಸಂಸ್ಥಾಪಕ ಸಿಹ್ನಾ ಹೇಳುತ್ತಾರೆ.

“ಜಾಗೃತಿ ಅಭಿಯಾನದ ಮೂಲಕ, ಜನರಿಗೆ ಹೇಗೆ ಸತ್ಯವನ್ನು ಪರಿಶೀಲಿಸಬೇಕೆಂದು ಕಲಿಸುವುದು ಫೇಕ್‌ ನ್ಯೂಸ್‌ಗಳನ್ನು ತಡೆಯುವ ಒಂದು ಉತ್ತಮ ಮಾರ್ಗವಾಗಿದೆ. ಟ್ವಿಟರ್ ಮತ್ತು ಫೇಸ್‌ಬುಕ್‌ನಂತಹ ಪ್ಲ್ಯಾಟ್‌ಫಾರ್ಮ್‌ಗಳು ಹಳೆಯ ವೀಡಿಯೊಗಳು ಮತ್ತು ಫೋಟೋಗಳನ್ನು ಮರುಬಳಕೆ ಮಾಡುವ ಹಕ್ಕು ನಿರಾಕರಣೆಗಳನ್ನು ಒದಗಿಸಬಲ್ಲವು” ಎಂದು ಸಿನ್ಹಾ ಹೇಳುತ್ತಾರೆ.

“ಭಾರತದಲ್ಲಿ ಅತೀ ಹೆಚ್ಚು ಫೇಕ್‌ ನ್ಯೂಸ್‌ಗಳನ್ನು ಬಿಜೆಪಿ ಮತ್ತು ಆರೆಸ್ಸೆಸ್‌ನ ಐಟಿ ಸೆಲ್‌ಗಳೇ ಹರಡುತ್ತಿವೆ. ಅದರಲ್ಲೂ 2014 ರಲ್ಲಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಮುಸ್ಲಿಂ ವಿರೋಧಿ, ದಲಿತ ವಿರೋಧಿ ಪೇಕ್‌ನ್ಯೂಸ್‌ಗಳನ್ನು ಹೆಚ್ಚಾಗಿ ಬಿಜೆಪಿಯ ನಾನಾ ಬ್ರಾಂಚ್‌ಗಳು ಹರಡುತ್ತಿವೆ. ಕರ್ನಾಟಕದಲ್ಲಿಯೂ ವಿಕ್ರಮ್ ಹೆಗಡೆ ಸಂಪಾದಕನಾಗಿರುವ ಪೋಸ್ಟ್‌ಕಾರ್ಡ್‌ ಫೇಕ್‌ನ್ಯೂಸ್‌ ತಯಾರಿಸಲೇ ಇರುವ ಕರ್ನಾಟಕದ ಕಾರ್ಖಾನೆಯಾಗಿದೆ.” ಎಂದು ಸಾಮಾಜಿಕ ಜಾಲತಾಣ ಪರಿಣಿತರಾದ ಅನಿಲ್ ಕುಮಾರ್‌ ಅಭಿಪ್ರಾಯ ಪಡುತ್ತಾರೆ.

ಸಾಮಾಜಿಕ ಜಾಲತಾಣದ ಮೇಲೆ ಹಿಡಿತ ಸಾಧಿಸುವ ಹಾಗೂ ಬಳಕೆದಾರರನ್ನು ಕಂಟ್ರೋಲ್‌ ಮಾಡುವ ಉದ್ದೇಶದಿಂದ ಇಂತಹ ಹೊಸ ಗೇಮ್‌ಪ್ಲಾನ್‌ ಮಾಡಲು ಸರ್ಕಾರ ಮುಂದಾಗಿದೆ, ಹಾಗಾಗಿ ಇದು ಒಂದು ದೊಡ್ಡ ವ್ಯಂಗ್ಯವಾಗಿದೆ, ಎಂದು ಅನಿಲ್ ಅವರು ಹೇಳುತ್ತಾರೆ.


ಓದಿ: ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...