Homeಮುಖಪುಟ‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

- Advertisement -
- Advertisement -

“ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಎಂಎಸ್‌ಪಿಯ ಫುಲ್ ಫಾರ್ಮ್ ಗೊತ್ತಿಲ್ಲ” ಎಂದು ಕಾಂಗ್ರೆಸ್ ವಕ್ತಾರ ಗುರುದೀಪ್‌ ಸಿಂಗ್ ಸಪ್ಪಲ್ ಟ್ವೀಟ್ ಮಾಡಿದ್ದಾರೆ.

‘ವಿವಾದಿತ ಕೃಷಿಕಾಯ್ದೆಗಳ ರದ್ದು ಮಸೂದೆ’ಯ ಪ್ರತಿ ಇದೆಂದು ಟ್ವೀಟ್ ಮಾಡಿರುವ ಅವರು, “ಎಂಎಸ್‌ಪಿ- ಮಿನಿಮನ್‌ ಸಪೋರ್ಟ್ ಪ್ರೈಸ್‌ (ಕನಿಷ್ಠ ಬೆಂಬಲ ಬೆಲೆ) ಎಂಬುದನ್ನು ಮಿನಿಮನ್‌ ಸೇಲ್‌ ಪ್ರೈಸ್‌ (ಕನಿಷ್ಠ ಮಾರಾಟ ಬೆಲೆ) ಎಂದು ಕರೆಯಲಾಗಿದೆ” ಎಂದು ಆರೋಪಿಸಿದ್ದಾರೆ.

“ಇಷ್ಟು ಮಹತ್ವದ ಮಸೂದೆಯ ವಿಷಯದಲ್ಲೂ ಎಂತಹ ಅಸಮರ್ಥತೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ರೈತರಿಗೆ ಹಲವು ಸವಲತ್ತುಗಳನ್ನು ನೀಡಿದೆ ಎಂದು ಸರ್ಕಾರ ನೀಡಿರುವ ಸಾಲು ಸಾಲು ಪಟ್ಟಿಯಲ್ಲಿ ಎಂಎಸ್‌ಪಿಯನ್ನೂ ಸೇರಿಸಲಾಗಿದೆ. ಆದರೆ ಎಂಎಸ್‌ಪಿ- ಎಂದರೆ ಮಿನಿಮಮ್ ಸೇಲ್ಸ್‌ ಪ್ರೈಸ್ ಎಂದು ತಿಳಿಸಲಾಗಿದೆ”

“2014ರ ನಂತರ ಕೃಷಿ ಇಲಾಖೆಗೆ ಮೀಸಲಿಡಲಾಗುತ್ತಿರುವ ಬಜೆಟ್ ಐದು ಪಟ್ಟು ಹೆಚ್ಚಾಗಿದೆ. ಈ ವರ್ಷ 123 ಲಕ್ಷ ಕೋಟಿ ರೂ.ಗಳನ್ನು ವಿವಿಧ ಯೋಜನೆಗಳಿಗೆ, ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗಿದೆ…”

“ಮಣ್ಣಿನ ಫಲವತ್ತತೆ ಕಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 23 ಕೋಟಿ ರೈತರಿಗೆ ಕಾರ್ಡ್ ವಿತರಿಸಲಾಗಿದೆ. 106 ಲಕ್ಷ ಕೋಟಿ ರೂ.ಗಳನ್ನು 11 ಕೋಟಿ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ….” ಹೀಗೆ ರೈತರಿಗೆ ಹಲವು ರೀತಿಯ ಸಹಾಯ ಮಾಡಿರುವುದಾಗಿ ಸರ್ಕಾರ ಬಿಂಬಿಸಿಕೊಂಡಿದೆ.

ಎಂಎಸ್‌ಪಿ ಕುರಿತು ಹೇಳುತ್ತಾ, “ಮೊದಲ ಬಾರಿಗೆ ಕನಿಷ್ಠ ಮಾರಾಟ ಬೆಲೆಯನ್ನು ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ನಿಗದಿಪಡಿಸಲಾಗಿದೆ” ಎಂದು ತಿಳಿಸಿಲಾಗಿದೆ. ಕನಿಷ್ಠ ಬೆಂಬಲ ಬೆಲೆ ಎಂಬುದನ್ನು, ಕನಿಷ್ಠ ಮಾರಾಟ ಬೆಲೆ ಎಂದು ಬರೆದಿರುವುದು ಸರ್ಕಾರದ ನಿರ್ಲಕ್ಷತನವನ್ನು ಎತ್ತಿಹಿಡಿದಿದೆ ಎಂದು ಟ್ವಿಟರ್‌ ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುರುದೀಪ್ ಸಿಂಗ್ ಸಪ್ಪಾಲ್‌ ಮತ್ತೊಂದು ಟ್ವೀಟ್‌ನಲ್ಲಿ ಬಜೆಟ್‌ ಕುರಿತಂತೆ ಸರ್ಕಾರ ಸುಳ್ಳು ಹೇಳಿದೆ ಎಂದು ಆರೋಪಿಸಿದ್ದಾರೆ.

“123 ಲಕ್ಷ ಕೋಟಿ ರೂ.ಗಳನ್ನು ಕೃಷಿ ಸಂಬಂಧಿತ ಯೋಜನೆಗಳಿಗೆ ಖರ್ಚು ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಆದರೆ ಸತ್ಯವೇನೆಂದರೆ ಈ ವರ್ಷದ ಭಾರತದ ಬಜೆಟ್ ₹34.8 ಸಾವಿರ ಕೋಟಿ ಮಾತ್ರ. 106 ಲಕ್ಷ ಕೋಟಿ ರೂ.ಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ ಎನ್ನಲಾಗಿದೆ. ವಾಸ್ತವದಲ್ಲಿ 1.57 ಕೋಟಿ ರೂ.ಗಳನ್ನು ಮಾತ್ರ ಈವರೆಗೆ ಪಿಎಂ-ಕಿಸಾನ್‌ ಯೋಜನೆಯಡಿ ವರ್ಗಾವಣೆ ಮಾಡಲಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ


ಕೃಷಿ ಕಾಯ್ದೆಗಳ ವಾಪಸ್‌ ಮಸೂದೆ ಅಂಗೀಕಾರ

ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಅಧಿವೇಶನಗಳಲ್ಲಿ ಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಯನ್ನು ಅಂಗೀಕರಿಸಲಾಗಿದೆ. ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ ಶುರುವಾಗಿದೆ. ರೈತರು ಪರಸ್ಪರ ಹೂವಿನ ಮಳೆಗೆರೆಯುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಸಿಂಘು ಗಡಿಯಲ್ಲಿ ಯುವ ರೈತರು ಟ್ರಾಕ್ಟರ್ ಪರೇಡ್ ನಡೆಸುವ ಮೂಲಕ, ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ ಇಂದು ಕೂಡ ನೂರಾರು ರೈತರು ಸಿಂಘು ಗಡಿಗೆ ಬಂದು ಹೋರಾಟದ ಸಾಗರ ಸೇರಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರವಾಗಿ ಮತ್ತು ಭದ್ರವಾಗಿ ಅಲ್ಲೆ ನೆಲೆಯೂರಿ ಚಳವಳಿಗೆ ನಾನಾ ರೀತಿಯಲ್ಲಿ ಕೊಡುಗೆ ನೀಡಿರುವ ಹಲವಾರು ಹೋರಾಟಗಾರರಿಗೆ ಅಭಿನಂದನೆ ಮತ್ತು ಸನ್ಮಾನ ಕಾರ್ಯಕ್ರಮ ಸಹ ನಡೆಯುತ್ತಿದೆ. ಒಂದು ವರ್ಷದಿಂದ ಎಲ್ಲಿಗೂ ಹೋಗದೆ ನಿರಂತರವಾಗಿ ಚಳವಳಿ ಕಣದಲ್ಲಿದ್ದವರಿಗೆ ಸಿಹಿ ತಿನಿಸಿ, ಅವರಿಗೆ ಪುಷ್ಪಾರ್ಚನೆ ಮಾಡಿ ಅಭಿನಂದಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನಾನಿರತ ರೈತರ ಚಪ್ಪಲಿ ಹೊಲಿದುಕೊಟ್ಟು ಸೇವೆ ನೀಡಿದ ಯುವಕನಿಗೆ ರೈತರೆಲ್ಲರೂ ಹೂವಿನ ಮಳೆಗೈದು ಅಭಿನಂದನೆ ಸಲ್ಲಿಸಿದ್ದಾರೆ. ಸಿಂಘು ಗಡಿಯಲ್ಲಿ ರೈತ ಮಹಿಳೆಯರು ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯ ಭಾಗವಾಗಿದ್ದಾರೆ. ನೂರಾರು ಮಹಿಳೆಯರು ಪರಸ್ಪರ ಹೂವಿನ ಮಳೆಗರೆದಿದ್ದಾರೆ. ಇನ್ನೊಂದೆಡೆ ಸಿಂಘು ಗಡಿಯಲ್ಲಿ ಪಂಜಾಬ್‌ನ 32 ರೈತ ಸಂಘದ ಮುಖಂಡರು ಸೇರಿ ಸಭೆ ನಡೆಸಿದ್ದಾರೆ.. ಚಳವಳಿಯ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕರಾದ ಡಾ.ದರ್ಶನ್ ಪಾಲ್ ಸಹ ಪಾಲ್ಗೊಂಡಿದ್ದರು.

ಟಿಕ್ರಿ ಗಡಿಯಲ್ಲಿ ಸಾವಿರಾರು ರೈತರು ಎಂಎಸ್‌ಪಿ ಖಾತ್ರಿ ಕಾನೂನಿಗಾಗಿ ಹೋರಾಟ ಮುಂದುವರೆಸಿದ್ದಾರೆ. ಸರ್ಕಾರದ ರದ್ದತಿ ಕ್ರಮದ ಬಗ್ಗೆ ಮಾತನಾಡಿದ ರಾಕೇಶ್ ಟಿಕಾಯತ್, ರೈತರ ಆಂದೋಲನ ಮುಂದುವರಿಯುತ್ತದೆ. “ಕೃಷಿ ಕಾನೂನು ರದ್ದತಿ ಮಸೂದೆಯು ಆಂದೋಲನದ ಸಮಯದಲ್ಲಿ ಮಡಿದ 750 ರೈತರಿಗೆ ಶ್ರದ್ಧಾಂಜಲಿಯಾಗಿದೆ. ನಮಗಿನ್ನು MSP (ಕನಿಷ್ಠ ಬೆಂಬಲ ಬೆಲೆ) ಖಾತ್ರಿಯ ಕಾನೂನು ಜಾರಿಯಾಗಿಲ್ಲ. ಎಂಎಸ್ಪಿ ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ’’ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಸಂಸ್ಕೃತಿ, ಸಮಾಜದ ದ್ವಿಮುಖ ನೀತಿ ತೆರದಿಟ್ಟ ಅಕ್ಕಯ್ ಪದ್ಮಶಾಲಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...