Homeಮುಖಪುಟ‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

- Advertisement -
- Advertisement -

“ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಎಂಎಸ್‌ಪಿಯ ಫುಲ್ ಫಾರ್ಮ್ ಗೊತ್ತಿಲ್ಲ” ಎಂದು ಕಾಂಗ್ರೆಸ್ ವಕ್ತಾರ ಗುರುದೀಪ್‌ ಸಿಂಗ್ ಸಪ್ಪಲ್ ಟ್ವೀಟ್ ಮಾಡಿದ್ದಾರೆ.

‘ವಿವಾದಿತ ಕೃಷಿಕಾಯ್ದೆಗಳ ರದ್ದು ಮಸೂದೆ’ಯ ಪ್ರತಿ ಇದೆಂದು ಟ್ವೀಟ್ ಮಾಡಿರುವ ಅವರು, “ಎಂಎಸ್‌ಪಿ- ಮಿನಿಮನ್‌ ಸಪೋರ್ಟ್ ಪ್ರೈಸ್‌ (ಕನಿಷ್ಠ ಬೆಂಬಲ ಬೆಲೆ) ಎಂಬುದನ್ನು ಮಿನಿಮನ್‌ ಸೇಲ್‌ ಪ್ರೈಸ್‌ (ಕನಿಷ್ಠ ಮಾರಾಟ ಬೆಲೆ) ಎಂದು ಕರೆಯಲಾಗಿದೆ” ಎಂದು ಆರೋಪಿಸಿದ್ದಾರೆ.

“ಇಷ್ಟು ಮಹತ್ವದ ಮಸೂದೆಯ ವಿಷಯದಲ್ಲೂ ಎಂತಹ ಅಸಮರ್ಥತೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ರೈತರಿಗೆ ಹಲವು ಸವಲತ್ತುಗಳನ್ನು ನೀಡಿದೆ ಎಂದು ಸರ್ಕಾರ ನೀಡಿರುವ ಸಾಲು ಸಾಲು ಪಟ್ಟಿಯಲ್ಲಿ ಎಂಎಸ್‌ಪಿಯನ್ನೂ ಸೇರಿಸಲಾಗಿದೆ. ಆದರೆ ಎಂಎಸ್‌ಪಿ- ಎಂದರೆ ಮಿನಿಮಮ್ ಸೇಲ್ಸ್‌ ಪ್ರೈಸ್ ಎಂದು ತಿಳಿಸಲಾಗಿದೆ”

“2014ರ ನಂತರ ಕೃಷಿ ಇಲಾಖೆಗೆ ಮೀಸಲಿಡಲಾಗುತ್ತಿರುವ ಬಜೆಟ್ ಐದು ಪಟ್ಟು ಹೆಚ್ಚಾಗಿದೆ. ಈ ವರ್ಷ 123 ಲಕ್ಷ ಕೋಟಿ ರೂ.ಗಳನ್ನು ವಿವಿಧ ಯೋಜನೆಗಳಿಗೆ, ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗಿದೆ…”

“ಮಣ್ಣಿನ ಫಲವತ್ತತೆ ಕಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 23 ಕೋಟಿ ರೈತರಿಗೆ ಕಾರ್ಡ್ ವಿತರಿಸಲಾಗಿದೆ. 106 ಲಕ್ಷ ಕೋಟಿ ರೂ.ಗಳನ್ನು 11 ಕೋಟಿ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ….” ಹೀಗೆ ರೈತರಿಗೆ ಹಲವು ರೀತಿಯ ಸಹಾಯ ಮಾಡಿರುವುದಾಗಿ ಸರ್ಕಾರ ಬಿಂಬಿಸಿಕೊಂಡಿದೆ.

ಎಂಎಸ್‌ಪಿ ಕುರಿತು ಹೇಳುತ್ತಾ, “ಮೊದಲ ಬಾರಿಗೆ ಕನಿಷ್ಠ ಮಾರಾಟ ಬೆಲೆಯನ್ನು ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ನಿಗದಿಪಡಿಸಲಾಗಿದೆ” ಎಂದು ತಿಳಿಸಿಲಾಗಿದೆ. ಕನಿಷ್ಠ ಬೆಂಬಲ ಬೆಲೆ ಎಂಬುದನ್ನು, ಕನಿಷ್ಠ ಮಾರಾಟ ಬೆಲೆ ಎಂದು ಬರೆದಿರುವುದು ಸರ್ಕಾರದ ನಿರ್ಲಕ್ಷತನವನ್ನು ಎತ್ತಿಹಿಡಿದಿದೆ ಎಂದು ಟ್ವಿಟರ್‌ ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುರುದೀಪ್ ಸಿಂಗ್ ಸಪ್ಪಾಲ್‌ ಮತ್ತೊಂದು ಟ್ವೀಟ್‌ನಲ್ಲಿ ಬಜೆಟ್‌ ಕುರಿತಂತೆ ಸರ್ಕಾರ ಸುಳ್ಳು ಹೇಳಿದೆ ಎಂದು ಆರೋಪಿಸಿದ್ದಾರೆ.

“123 ಲಕ್ಷ ಕೋಟಿ ರೂ.ಗಳನ್ನು ಕೃಷಿ ಸಂಬಂಧಿತ ಯೋಜನೆಗಳಿಗೆ ಖರ್ಚು ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಆದರೆ ಸತ್ಯವೇನೆಂದರೆ ಈ ವರ್ಷದ ಭಾರತದ ಬಜೆಟ್ ₹34.8 ಸಾವಿರ ಕೋಟಿ ಮಾತ್ರ. 106 ಲಕ್ಷ ಕೋಟಿ ರೂ.ಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ ಎನ್ನಲಾಗಿದೆ. ವಾಸ್ತವದಲ್ಲಿ 1.57 ಕೋಟಿ ರೂ.ಗಳನ್ನು ಮಾತ್ರ ಈವರೆಗೆ ಪಿಎಂ-ಕಿಸಾನ್‌ ಯೋಜನೆಯಡಿ ವರ್ಗಾವಣೆ ಮಾಡಲಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ


ಕೃಷಿ ಕಾಯ್ದೆಗಳ ವಾಪಸ್‌ ಮಸೂದೆ ಅಂಗೀಕಾರ

ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಅಧಿವೇಶನಗಳಲ್ಲಿ ಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಯನ್ನು ಅಂಗೀಕರಿಸಲಾಗಿದೆ. ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ ಶುರುವಾಗಿದೆ. ರೈತರು ಪರಸ್ಪರ ಹೂವಿನ ಮಳೆಗೆರೆಯುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಸಿಂಘು ಗಡಿಯಲ್ಲಿ ಯುವ ರೈತರು ಟ್ರಾಕ್ಟರ್ ಪರೇಡ್ ನಡೆಸುವ ಮೂಲಕ, ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ ಇಂದು ಕೂಡ ನೂರಾರು ರೈತರು ಸಿಂಘು ಗಡಿಗೆ ಬಂದು ಹೋರಾಟದ ಸಾಗರ ಸೇರಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರವಾಗಿ ಮತ್ತು ಭದ್ರವಾಗಿ ಅಲ್ಲೆ ನೆಲೆಯೂರಿ ಚಳವಳಿಗೆ ನಾನಾ ರೀತಿಯಲ್ಲಿ ಕೊಡುಗೆ ನೀಡಿರುವ ಹಲವಾರು ಹೋರಾಟಗಾರರಿಗೆ ಅಭಿನಂದನೆ ಮತ್ತು ಸನ್ಮಾನ ಕಾರ್ಯಕ್ರಮ ಸಹ ನಡೆಯುತ್ತಿದೆ. ಒಂದು ವರ್ಷದಿಂದ ಎಲ್ಲಿಗೂ ಹೋಗದೆ ನಿರಂತರವಾಗಿ ಚಳವಳಿ ಕಣದಲ್ಲಿದ್ದವರಿಗೆ ಸಿಹಿ ತಿನಿಸಿ, ಅವರಿಗೆ ಪುಷ್ಪಾರ್ಚನೆ ಮಾಡಿ ಅಭಿನಂದಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನಾನಿರತ ರೈತರ ಚಪ್ಪಲಿ ಹೊಲಿದುಕೊಟ್ಟು ಸೇವೆ ನೀಡಿದ ಯುವಕನಿಗೆ ರೈತರೆಲ್ಲರೂ ಹೂವಿನ ಮಳೆಗೈದು ಅಭಿನಂದನೆ ಸಲ್ಲಿಸಿದ್ದಾರೆ. ಸಿಂಘು ಗಡಿಯಲ್ಲಿ ರೈತ ಮಹಿಳೆಯರು ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯ ಭಾಗವಾಗಿದ್ದಾರೆ. ನೂರಾರು ಮಹಿಳೆಯರು ಪರಸ್ಪರ ಹೂವಿನ ಮಳೆಗರೆದಿದ್ದಾರೆ. ಇನ್ನೊಂದೆಡೆ ಸಿಂಘು ಗಡಿಯಲ್ಲಿ ಪಂಜಾಬ್‌ನ 32 ರೈತ ಸಂಘದ ಮುಖಂಡರು ಸೇರಿ ಸಭೆ ನಡೆಸಿದ್ದಾರೆ.. ಚಳವಳಿಯ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕರಾದ ಡಾ.ದರ್ಶನ್ ಪಾಲ್ ಸಹ ಪಾಲ್ಗೊಂಡಿದ್ದರು.

ಟಿಕ್ರಿ ಗಡಿಯಲ್ಲಿ ಸಾವಿರಾರು ರೈತರು ಎಂಎಸ್‌ಪಿ ಖಾತ್ರಿ ಕಾನೂನಿಗಾಗಿ ಹೋರಾಟ ಮುಂದುವರೆಸಿದ್ದಾರೆ. ಸರ್ಕಾರದ ರದ್ದತಿ ಕ್ರಮದ ಬಗ್ಗೆ ಮಾತನಾಡಿದ ರಾಕೇಶ್ ಟಿಕಾಯತ್, ರೈತರ ಆಂದೋಲನ ಮುಂದುವರಿಯುತ್ತದೆ. “ಕೃಷಿ ಕಾನೂನು ರದ್ದತಿ ಮಸೂದೆಯು ಆಂದೋಲನದ ಸಮಯದಲ್ಲಿ ಮಡಿದ 750 ರೈತರಿಗೆ ಶ್ರದ್ಧಾಂಜಲಿಯಾಗಿದೆ. ನಮಗಿನ್ನು MSP (ಕನಿಷ್ಠ ಬೆಂಬಲ ಬೆಲೆ) ಖಾತ್ರಿಯ ಕಾನೂನು ಜಾರಿಯಾಗಿಲ್ಲ. ಎಂಎಸ್ಪಿ ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ’’ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಸಂಸ್ಕೃತಿ, ಸಮಾಜದ ದ್ವಿಮುಖ ನೀತಿ ತೆರದಿಟ್ಟ ಅಕ್ಕಯ್ ಪದ್ಮಶಾಲಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...