Homeಮುಖಪುಟ‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

- Advertisement -
- Advertisement -

“ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಎಂಎಸ್‌ಪಿಯ ಫುಲ್ ಫಾರ್ಮ್ ಗೊತ್ತಿಲ್ಲ” ಎಂದು ಕಾಂಗ್ರೆಸ್ ವಕ್ತಾರ ಗುರುದೀಪ್‌ ಸಿಂಗ್ ಸಪ್ಪಲ್ ಟ್ವೀಟ್ ಮಾಡಿದ್ದಾರೆ.

‘ವಿವಾದಿತ ಕೃಷಿಕಾಯ್ದೆಗಳ ರದ್ದು ಮಸೂದೆ’ಯ ಪ್ರತಿ ಇದೆಂದು ಟ್ವೀಟ್ ಮಾಡಿರುವ ಅವರು, “ಎಂಎಸ್‌ಪಿ- ಮಿನಿಮನ್‌ ಸಪೋರ್ಟ್ ಪ್ರೈಸ್‌ (ಕನಿಷ್ಠ ಬೆಂಬಲ ಬೆಲೆ) ಎಂಬುದನ್ನು ಮಿನಿಮನ್‌ ಸೇಲ್‌ ಪ್ರೈಸ್‌ (ಕನಿಷ್ಠ ಮಾರಾಟ ಬೆಲೆ) ಎಂದು ಕರೆಯಲಾಗಿದೆ” ಎಂದು ಆರೋಪಿಸಿದ್ದಾರೆ.

“ಇಷ್ಟು ಮಹತ್ವದ ಮಸೂದೆಯ ವಿಷಯದಲ್ಲೂ ಎಂತಹ ಅಸಮರ್ಥತೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ರೈತರಿಗೆ ಹಲವು ಸವಲತ್ತುಗಳನ್ನು ನೀಡಿದೆ ಎಂದು ಸರ್ಕಾರ ನೀಡಿರುವ ಸಾಲು ಸಾಲು ಪಟ್ಟಿಯಲ್ಲಿ ಎಂಎಸ್‌ಪಿಯನ್ನೂ ಸೇರಿಸಲಾಗಿದೆ. ಆದರೆ ಎಂಎಸ್‌ಪಿ- ಎಂದರೆ ಮಿನಿಮಮ್ ಸೇಲ್ಸ್‌ ಪ್ರೈಸ್ ಎಂದು ತಿಳಿಸಲಾಗಿದೆ”

“2014ರ ನಂತರ ಕೃಷಿ ಇಲಾಖೆಗೆ ಮೀಸಲಿಡಲಾಗುತ್ತಿರುವ ಬಜೆಟ್ ಐದು ಪಟ್ಟು ಹೆಚ್ಚಾಗಿದೆ. ಈ ವರ್ಷ 123 ಲಕ್ಷ ಕೋಟಿ ರೂ.ಗಳನ್ನು ವಿವಿಧ ಯೋಜನೆಗಳಿಗೆ, ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗಿದೆ…”

“ಮಣ್ಣಿನ ಫಲವತ್ತತೆ ಕಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 23 ಕೋಟಿ ರೈತರಿಗೆ ಕಾರ್ಡ್ ವಿತರಿಸಲಾಗಿದೆ. 106 ಲಕ್ಷ ಕೋಟಿ ರೂ.ಗಳನ್ನು 11 ಕೋಟಿ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ….” ಹೀಗೆ ರೈತರಿಗೆ ಹಲವು ರೀತಿಯ ಸಹಾಯ ಮಾಡಿರುವುದಾಗಿ ಸರ್ಕಾರ ಬಿಂಬಿಸಿಕೊಂಡಿದೆ.

ಎಂಎಸ್‌ಪಿ ಕುರಿತು ಹೇಳುತ್ತಾ, “ಮೊದಲ ಬಾರಿಗೆ ಕನಿಷ್ಠ ಮಾರಾಟ ಬೆಲೆಯನ್ನು ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ನಿಗದಿಪಡಿಸಲಾಗಿದೆ” ಎಂದು ತಿಳಿಸಿಲಾಗಿದೆ. ಕನಿಷ್ಠ ಬೆಂಬಲ ಬೆಲೆ ಎಂಬುದನ್ನು, ಕನಿಷ್ಠ ಮಾರಾಟ ಬೆಲೆ ಎಂದು ಬರೆದಿರುವುದು ಸರ್ಕಾರದ ನಿರ್ಲಕ್ಷತನವನ್ನು ಎತ್ತಿಹಿಡಿದಿದೆ ಎಂದು ಟ್ವಿಟರ್‌ ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುರುದೀಪ್ ಸಿಂಗ್ ಸಪ್ಪಾಲ್‌ ಮತ್ತೊಂದು ಟ್ವೀಟ್‌ನಲ್ಲಿ ಬಜೆಟ್‌ ಕುರಿತಂತೆ ಸರ್ಕಾರ ಸುಳ್ಳು ಹೇಳಿದೆ ಎಂದು ಆರೋಪಿಸಿದ್ದಾರೆ.

“123 ಲಕ್ಷ ಕೋಟಿ ರೂ.ಗಳನ್ನು ಕೃಷಿ ಸಂಬಂಧಿತ ಯೋಜನೆಗಳಿಗೆ ಖರ್ಚು ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಆದರೆ ಸತ್ಯವೇನೆಂದರೆ ಈ ವರ್ಷದ ಭಾರತದ ಬಜೆಟ್ ₹34.8 ಸಾವಿರ ಕೋಟಿ ಮಾತ್ರ. 106 ಲಕ್ಷ ಕೋಟಿ ರೂ.ಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ ಎನ್ನಲಾಗಿದೆ. ವಾಸ್ತವದಲ್ಲಿ 1.57 ಕೋಟಿ ರೂ.ಗಳನ್ನು ಮಾತ್ರ ಈವರೆಗೆ ಪಿಎಂ-ಕಿಸಾನ್‌ ಯೋಜನೆಯಡಿ ವರ್ಗಾವಣೆ ಮಾಡಲಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ


ಕೃಷಿ ಕಾಯ್ದೆಗಳ ವಾಪಸ್‌ ಮಸೂದೆ ಅಂಗೀಕಾರ

ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಅಧಿವೇಶನಗಳಲ್ಲಿ ಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಯನ್ನು ಅಂಗೀಕರಿಸಲಾಗಿದೆ. ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ ಶುರುವಾಗಿದೆ. ರೈತರು ಪರಸ್ಪರ ಹೂವಿನ ಮಳೆಗೆರೆಯುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಸಿಂಘು ಗಡಿಯಲ್ಲಿ ಯುವ ರೈತರು ಟ್ರಾಕ್ಟರ್ ಪರೇಡ್ ನಡೆಸುವ ಮೂಲಕ, ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ ಇಂದು ಕೂಡ ನೂರಾರು ರೈತರು ಸಿಂಘು ಗಡಿಗೆ ಬಂದು ಹೋರಾಟದ ಸಾಗರ ಸೇರಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರವಾಗಿ ಮತ್ತು ಭದ್ರವಾಗಿ ಅಲ್ಲೆ ನೆಲೆಯೂರಿ ಚಳವಳಿಗೆ ನಾನಾ ರೀತಿಯಲ್ಲಿ ಕೊಡುಗೆ ನೀಡಿರುವ ಹಲವಾರು ಹೋರಾಟಗಾರರಿಗೆ ಅಭಿನಂದನೆ ಮತ್ತು ಸನ್ಮಾನ ಕಾರ್ಯಕ್ರಮ ಸಹ ನಡೆಯುತ್ತಿದೆ. ಒಂದು ವರ್ಷದಿಂದ ಎಲ್ಲಿಗೂ ಹೋಗದೆ ನಿರಂತರವಾಗಿ ಚಳವಳಿ ಕಣದಲ್ಲಿದ್ದವರಿಗೆ ಸಿಹಿ ತಿನಿಸಿ, ಅವರಿಗೆ ಪುಷ್ಪಾರ್ಚನೆ ಮಾಡಿ ಅಭಿನಂದಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನಾನಿರತ ರೈತರ ಚಪ್ಪಲಿ ಹೊಲಿದುಕೊಟ್ಟು ಸೇವೆ ನೀಡಿದ ಯುವಕನಿಗೆ ರೈತರೆಲ್ಲರೂ ಹೂವಿನ ಮಳೆಗೈದು ಅಭಿನಂದನೆ ಸಲ್ಲಿಸಿದ್ದಾರೆ. ಸಿಂಘು ಗಡಿಯಲ್ಲಿ ರೈತ ಮಹಿಳೆಯರು ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯ ಭಾಗವಾಗಿದ್ದಾರೆ. ನೂರಾರು ಮಹಿಳೆಯರು ಪರಸ್ಪರ ಹೂವಿನ ಮಳೆಗರೆದಿದ್ದಾರೆ. ಇನ್ನೊಂದೆಡೆ ಸಿಂಘು ಗಡಿಯಲ್ಲಿ ಪಂಜಾಬ್‌ನ 32 ರೈತ ಸಂಘದ ಮುಖಂಡರು ಸೇರಿ ಸಭೆ ನಡೆಸಿದ್ದಾರೆ.. ಚಳವಳಿಯ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕರಾದ ಡಾ.ದರ್ಶನ್ ಪಾಲ್ ಸಹ ಪಾಲ್ಗೊಂಡಿದ್ದರು.

ಟಿಕ್ರಿ ಗಡಿಯಲ್ಲಿ ಸಾವಿರಾರು ರೈತರು ಎಂಎಸ್‌ಪಿ ಖಾತ್ರಿ ಕಾನೂನಿಗಾಗಿ ಹೋರಾಟ ಮುಂದುವರೆಸಿದ್ದಾರೆ. ಸರ್ಕಾರದ ರದ್ದತಿ ಕ್ರಮದ ಬಗ್ಗೆ ಮಾತನಾಡಿದ ರಾಕೇಶ್ ಟಿಕಾಯತ್, ರೈತರ ಆಂದೋಲನ ಮುಂದುವರಿಯುತ್ತದೆ. “ಕೃಷಿ ಕಾನೂನು ರದ್ದತಿ ಮಸೂದೆಯು ಆಂದೋಲನದ ಸಮಯದಲ್ಲಿ ಮಡಿದ 750 ರೈತರಿಗೆ ಶ್ರದ್ಧಾಂಜಲಿಯಾಗಿದೆ. ನಮಗಿನ್ನು MSP (ಕನಿಷ್ಠ ಬೆಂಬಲ ಬೆಲೆ) ಖಾತ್ರಿಯ ಕಾನೂನು ಜಾರಿಯಾಗಿಲ್ಲ. ಎಂಎಸ್ಪಿ ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ’’ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಸಂಸ್ಕೃತಿ, ಸಮಾಜದ ದ್ವಿಮುಖ ನೀತಿ ತೆರದಿಟ್ಟ ಅಕ್ಕಯ್ ಪದ್ಮಶಾಲಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...