Homeಮುಖಪುಟ‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

- Advertisement -
- Advertisement -

“ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಎಂಎಸ್‌ಪಿಯ ಫುಲ್ ಫಾರ್ಮ್ ಗೊತ್ತಿಲ್ಲ” ಎಂದು ಕಾಂಗ್ರೆಸ್ ವಕ್ತಾರ ಗುರುದೀಪ್‌ ಸಿಂಗ್ ಸಪ್ಪಲ್ ಟ್ವೀಟ್ ಮಾಡಿದ್ದಾರೆ.

‘ವಿವಾದಿತ ಕೃಷಿಕಾಯ್ದೆಗಳ ರದ್ದು ಮಸೂದೆ’ಯ ಪ್ರತಿ ಇದೆಂದು ಟ್ವೀಟ್ ಮಾಡಿರುವ ಅವರು, “ಎಂಎಸ್‌ಪಿ- ಮಿನಿಮನ್‌ ಸಪೋರ್ಟ್ ಪ್ರೈಸ್‌ (ಕನಿಷ್ಠ ಬೆಂಬಲ ಬೆಲೆ) ಎಂಬುದನ್ನು ಮಿನಿಮನ್‌ ಸೇಲ್‌ ಪ್ರೈಸ್‌ (ಕನಿಷ್ಠ ಮಾರಾಟ ಬೆಲೆ) ಎಂದು ಕರೆಯಲಾಗಿದೆ” ಎಂದು ಆರೋಪಿಸಿದ್ದಾರೆ.

“ಇಷ್ಟು ಮಹತ್ವದ ಮಸೂದೆಯ ವಿಷಯದಲ್ಲೂ ಎಂತಹ ಅಸಮರ್ಥತೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ರೈತರಿಗೆ ಹಲವು ಸವಲತ್ತುಗಳನ್ನು ನೀಡಿದೆ ಎಂದು ಸರ್ಕಾರ ನೀಡಿರುವ ಸಾಲು ಸಾಲು ಪಟ್ಟಿಯಲ್ಲಿ ಎಂಎಸ್‌ಪಿಯನ್ನೂ ಸೇರಿಸಲಾಗಿದೆ. ಆದರೆ ಎಂಎಸ್‌ಪಿ- ಎಂದರೆ ಮಿನಿಮಮ್ ಸೇಲ್ಸ್‌ ಪ್ರೈಸ್ ಎಂದು ತಿಳಿಸಲಾಗಿದೆ”

“2014ರ ನಂತರ ಕೃಷಿ ಇಲಾಖೆಗೆ ಮೀಸಲಿಡಲಾಗುತ್ತಿರುವ ಬಜೆಟ್ ಐದು ಪಟ್ಟು ಹೆಚ್ಚಾಗಿದೆ. ಈ ವರ್ಷ 123 ಲಕ್ಷ ಕೋಟಿ ರೂ.ಗಳನ್ನು ವಿವಿಧ ಯೋಜನೆಗಳಿಗೆ, ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗಿದೆ…”

“ಮಣ್ಣಿನ ಫಲವತ್ತತೆ ಕಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 23 ಕೋಟಿ ರೈತರಿಗೆ ಕಾರ್ಡ್ ವಿತರಿಸಲಾಗಿದೆ. 106 ಲಕ್ಷ ಕೋಟಿ ರೂ.ಗಳನ್ನು 11 ಕೋಟಿ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ….” ಹೀಗೆ ರೈತರಿಗೆ ಹಲವು ರೀತಿಯ ಸಹಾಯ ಮಾಡಿರುವುದಾಗಿ ಸರ್ಕಾರ ಬಿಂಬಿಸಿಕೊಂಡಿದೆ.

ಎಂಎಸ್‌ಪಿ ಕುರಿತು ಹೇಳುತ್ತಾ, “ಮೊದಲ ಬಾರಿಗೆ ಕನಿಷ್ಠ ಮಾರಾಟ ಬೆಲೆಯನ್ನು ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ನಿಗದಿಪಡಿಸಲಾಗಿದೆ” ಎಂದು ತಿಳಿಸಿಲಾಗಿದೆ. ಕನಿಷ್ಠ ಬೆಂಬಲ ಬೆಲೆ ಎಂಬುದನ್ನು, ಕನಿಷ್ಠ ಮಾರಾಟ ಬೆಲೆ ಎಂದು ಬರೆದಿರುವುದು ಸರ್ಕಾರದ ನಿರ್ಲಕ್ಷತನವನ್ನು ಎತ್ತಿಹಿಡಿದಿದೆ ಎಂದು ಟ್ವಿಟರ್‌ ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುರುದೀಪ್ ಸಿಂಗ್ ಸಪ್ಪಾಲ್‌ ಮತ್ತೊಂದು ಟ್ವೀಟ್‌ನಲ್ಲಿ ಬಜೆಟ್‌ ಕುರಿತಂತೆ ಸರ್ಕಾರ ಸುಳ್ಳು ಹೇಳಿದೆ ಎಂದು ಆರೋಪಿಸಿದ್ದಾರೆ.

“123 ಲಕ್ಷ ಕೋಟಿ ರೂ.ಗಳನ್ನು ಕೃಷಿ ಸಂಬಂಧಿತ ಯೋಜನೆಗಳಿಗೆ ಖರ್ಚು ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಆದರೆ ಸತ್ಯವೇನೆಂದರೆ ಈ ವರ್ಷದ ಭಾರತದ ಬಜೆಟ್ ₹34.8 ಸಾವಿರ ಕೋಟಿ ಮಾತ್ರ. 106 ಲಕ್ಷ ಕೋಟಿ ರೂ.ಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ ಎನ್ನಲಾಗಿದೆ. ವಾಸ್ತವದಲ್ಲಿ 1.57 ಕೋಟಿ ರೂ.ಗಳನ್ನು ಮಾತ್ರ ಈವರೆಗೆ ಪಿಎಂ-ಕಿಸಾನ್‌ ಯೋಜನೆಯಡಿ ವರ್ಗಾವಣೆ ಮಾಡಲಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ


ಕೃಷಿ ಕಾಯ್ದೆಗಳ ವಾಪಸ್‌ ಮಸೂದೆ ಅಂಗೀಕಾರ

ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಅಧಿವೇಶನಗಳಲ್ಲಿ ಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಯನ್ನು ಅಂಗೀಕರಿಸಲಾಗಿದೆ. ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ ಶುರುವಾಗಿದೆ. ರೈತರು ಪರಸ್ಪರ ಹೂವಿನ ಮಳೆಗೆರೆಯುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಸಿಂಘು ಗಡಿಯಲ್ಲಿ ಯುವ ರೈತರು ಟ್ರಾಕ್ಟರ್ ಪರೇಡ್ ನಡೆಸುವ ಮೂಲಕ, ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ ಇಂದು ಕೂಡ ನೂರಾರು ರೈತರು ಸಿಂಘು ಗಡಿಗೆ ಬಂದು ಹೋರಾಟದ ಸಾಗರ ಸೇರಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರವಾಗಿ ಮತ್ತು ಭದ್ರವಾಗಿ ಅಲ್ಲೆ ನೆಲೆಯೂರಿ ಚಳವಳಿಗೆ ನಾನಾ ರೀತಿಯಲ್ಲಿ ಕೊಡುಗೆ ನೀಡಿರುವ ಹಲವಾರು ಹೋರಾಟಗಾರರಿಗೆ ಅಭಿನಂದನೆ ಮತ್ತು ಸನ್ಮಾನ ಕಾರ್ಯಕ್ರಮ ಸಹ ನಡೆಯುತ್ತಿದೆ. ಒಂದು ವರ್ಷದಿಂದ ಎಲ್ಲಿಗೂ ಹೋಗದೆ ನಿರಂತರವಾಗಿ ಚಳವಳಿ ಕಣದಲ್ಲಿದ್ದವರಿಗೆ ಸಿಹಿ ತಿನಿಸಿ, ಅವರಿಗೆ ಪುಷ್ಪಾರ್ಚನೆ ಮಾಡಿ ಅಭಿನಂದಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನಾನಿರತ ರೈತರ ಚಪ್ಪಲಿ ಹೊಲಿದುಕೊಟ್ಟು ಸೇವೆ ನೀಡಿದ ಯುವಕನಿಗೆ ರೈತರೆಲ್ಲರೂ ಹೂವಿನ ಮಳೆಗೈದು ಅಭಿನಂದನೆ ಸಲ್ಲಿಸಿದ್ದಾರೆ. ಸಿಂಘು ಗಡಿಯಲ್ಲಿ ರೈತ ಮಹಿಳೆಯರು ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯ ಭಾಗವಾಗಿದ್ದಾರೆ. ನೂರಾರು ಮಹಿಳೆಯರು ಪರಸ್ಪರ ಹೂವಿನ ಮಳೆಗರೆದಿದ್ದಾರೆ. ಇನ್ನೊಂದೆಡೆ ಸಿಂಘು ಗಡಿಯಲ್ಲಿ ಪಂಜಾಬ್‌ನ 32 ರೈತ ಸಂಘದ ಮುಖಂಡರು ಸೇರಿ ಸಭೆ ನಡೆಸಿದ್ದಾರೆ.. ಚಳವಳಿಯ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕರಾದ ಡಾ.ದರ್ಶನ್ ಪಾಲ್ ಸಹ ಪಾಲ್ಗೊಂಡಿದ್ದರು.

ಟಿಕ್ರಿ ಗಡಿಯಲ್ಲಿ ಸಾವಿರಾರು ರೈತರು ಎಂಎಸ್‌ಪಿ ಖಾತ್ರಿ ಕಾನೂನಿಗಾಗಿ ಹೋರಾಟ ಮುಂದುವರೆಸಿದ್ದಾರೆ. ಸರ್ಕಾರದ ರದ್ದತಿ ಕ್ರಮದ ಬಗ್ಗೆ ಮಾತನಾಡಿದ ರಾಕೇಶ್ ಟಿಕಾಯತ್, ರೈತರ ಆಂದೋಲನ ಮುಂದುವರಿಯುತ್ತದೆ. “ಕೃಷಿ ಕಾನೂನು ರದ್ದತಿ ಮಸೂದೆಯು ಆಂದೋಲನದ ಸಮಯದಲ್ಲಿ ಮಡಿದ 750 ರೈತರಿಗೆ ಶ್ರದ್ಧಾಂಜಲಿಯಾಗಿದೆ. ನಮಗಿನ್ನು MSP (ಕನಿಷ್ಠ ಬೆಂಬಲ ಬೆಲೆ) ಖಾತ್ರಿಯ ಕಾನೂನು ಜಾರಿಯಾಗಿಲ್ಲ. ಎಂಎಸ್ಪಿ ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ’’ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಸಂಸ್ಕೃತಿ, ಸಮಾಜದ ದ್ವಿಮುಖ ನೀತಿ ತೆರದಿಟ್ಟ ಅಕ್ಕಯ್ ಪದ್ಮಶಾಲಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...