Homeಮುಖಪುಟ‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

‘ಮೋದಿ ಸರ್ಕಾರಕ್ಕೆ ಎಂಎಸ್‌ಪಿ ಫುಲ್ ಫಾರ್ಮ್ ಗೊತ್ತಿಲ್ಲ!’

- Advertisement -
- Advertisement -

“ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಎಂಎಸ್‌ಪಿಯ ಫುಲ್ ಫಾರ್ಮ್ ಗೊತ್ತಿಲ್ಲ” ಎಂದು ಕಾಂಗ್ರೆಸ್ ವಕ್ತಾರ ಗುರುದೀಪ್‌ ಸಿಂಗ್ ಸಪ್ಪಲ್ ಟ್ವೀಟ್ ಮಾಡಿದ್ದಾರೆ.

‘ವಿವಾದಿತ ಕೃಷಿಕಾಯ್ದೆಗಳ ರದ್ದು ಮಸೂದೆ’ಯ ಪ್ರತಿ ಇದೆಂದು ಟ್ವೀಟ್ ಮಾಡಿರುವ ಅವರು, “ಎಂಎಸ್‌ಪಿ- ಮಿನಿಮನ್‌ ಸಪೋರ್ಟ್ ಪ್ರೈಸ್‌ (ಕನಿಷ್ಠ ಬೆಂಬಲ ಬೆಲೆ) ಎಂಬುದನ್ನು ಮಿನಿಮನ್‌ ಸೇಲ್‌ ಪ್ರೈಸ್‌ (ಕನಿಷ್ಠ ಮಾರಾಟ ಬೆಲೆ) ಎಂದು ಕರೆಯಲಾಗಿದೆ” ಎಂದು ಆರೋಪಿಸಿದ್ದಾರೆ.

“ಇಷ್ಟು ಮಹತ್ವದ ಮಸೂದೆಯ ವಿಷಯದಲ್ಲೂ ಎಂತಹ ಅಸಮರ್ಥತೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ರೈತರಿಗೆ ಹಲವು ಸವಲತ್ತುಗಳನ್ನು ನೀಡಿದೆ ಎಂದು ಸರ್ಕಾರ ನೀಡಿರುವ ಸಾಲು ಸಾಲು ಪಟ್ಟಿಯಲ್ಲಿ ಎಂಎಸ್‌ಪಿಯನ್ನೂ ಸೇರಿಸಲಾಗಿದೆ. ಆದರೆ ಎಂಎಸ್‌ಪಿ- ಎಂದರೆ ಮಿನಿಮಮ್ ಸೇಲ್ಸ್‌ ಪ್ರೈಸ್ ಎಂದು ತಿಳಿಸಲಾಗಿದೆ”

“2014ರ ನಂತರ ಕೃಷಿ ಇಲಾಖೆಗೆ ಮೀಸಲಿಡಲಾಗುತ್ತಿರುವ ಬಜೆಟ್ ಐದು ಪಟ್ಟು ಹೆಚ್ಚಾಗಿದೆ. ಈ ವರ್ಷ 123 ಲಕ್ಷ ಕೋಟಿ ರೂ.ಗಳನ್ನು ವಿವಿಧ ಯೋಜನೆಗಳಿಗೆ, ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗಿದೆ…”

“ಮಣ್ಣಿನ ಫಲವತ್ತತೆ ಕಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 23 ಕೋಟಿ ರೈತರಿಗೆ ಕಾರ್ಡ್ ವಿತರಿಸಲಾಗಿದೆ. 106 ಲಕ್ಷ ಕೋಟಿ ರೂ.ಗಳನ್ನು 11 ಕೋಟಿ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ….” ಹೀಗೆ ರೈತರಿಗೆ ಹಲವು ರೀತಿಯ ಸಹಾಯ ಮಾಡಿರುವುದಾಗಿ ಸರ್ಕಾರ ಬಿಂಬಿಸಿಕೊಂಡಿದೆ.

ಎಂಎಸ್‌ಪಿ ಕುರಿತು ಹೇಳುತ್ತಾ, “ಮೊದಲ ಬಾರಿಗೆ ಕನಿಷ್ಠ ಮಾರಾಟ ಬೆಲೆಯನ್ನು ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ನಿಗದಿಪಡಿಸಲಾಗಿದೆ” ಎಂದು ತಿಳಿಸಿಲಾಗಿದೆ. ಕನಿಷ್ಠ ಬೆಂಬಲ ಬೆಲೆ ಎಂಬುದನ್ನು, ಕನಿಷ್ಠ ಮಾರಾಟ ಬೆಲೆ ಎಂದು ಬರೆದಿರುವುದು ಸರ್ಕಾರದ ನಿರ್ಲಕ್ಷತನವನ್ನು ಎತ್ತಿಹಿಡಿದಿದೆ ಎಂದು ಟ್ವಿಟರ್‌ ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುರುದೀಪ್ ಸಿಂಗ್ ಸಪ್ಪಾಲ್‌ ಮತ್ತೊಂದು ಟ್ವೀಟ್‌ನಲ್ಲಿ ಬಜೆಟ್‌ ಕುರಿತಂತೆ ಸರ್ಕಾರ ಸುಳ್ಳು ಹೇಳಿದೆ ಎಂದು ಆರೋಪಿಸಿದ್ದಾರೆ.

“123 ಲಕ್ಷ ಕೋಟಿ ರೂ.ಗಳನ್ನು ಕೃಷಿ ಸಂಬಂಧಿತ ಯೋಜನೆಗಳಿಗೆ ಖರ್ಚು ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಆದರೆ ಸತ್ಯವೇನೆಂದರೆ ಈ ವರ್ಷದ ಭಾರತದ ಬಜೆಟ್ ₹34.8 ಸಾವಿರ ಕೋಟಿ ಮಾತ್ರ. 106 ಲಕ್ಷ ಕೋಟಿ ರೂ.ಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ ಎನ್ನಲಾಗಿದೆ. ವಾಸ್ತವದಲ್ಲಿ 1.57 ಕೋಟಿ ರೂ.ಗಳನ್ನು ಮಾತ್ರ ಈವರೆಗೆ ಪಿಎಂ-ಕಿಸಾನ್‌ ಯೋಜನೆಯಡಿ ವರ್ಗಾವಣೆ ಮಾಡಲಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ


ಕೃಷಿ ಕಾಯ್ದೆಗಳ ವಾಪಸ್‌ ಮಸೂದೆ ಅಂಗೀಕಾರ

ಸೋಮವಾರ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಅಧಿವೇಶನಗಳಲ್ಲಿ ಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಯನ್ನು ಅಂಗೀಕರಿಸಲಾಗಿದೆ. ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ ಶುರುವಾಗಿದೆ. ರೈತರು ಪರಸ್ಪರ ಹೂವಿನ ಮಳೆಗೆರೆಯುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಸಿಂಘು ಗಡಿಯಲ್ಲಿ ಯುವ ರೈತರು ಟ್ರಾಕ್ಟರ್ ಪರೇಡ್ ನಡೆಸುವ ಮೂಲಕ, ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ ಇಂದು ಕೂಡ ನೂರಾರು ರೈತರು ಸಿಂಘು ಗಡಿಗೆ ಬಂದು ಹೋರಾಟದ ಸಾಗರ ಸೇರಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ನಿರಂತರವಾಗಿ ಮತ್ತು ಭದ್ರವಾಗಿ ಅಲ್ಲೆ ನೆಲೆಯೂರಿ ಚಳವಳಿಗೆ ನಾನಾ ರೀತಿಯಲ್ಲಿ ಕೊಡುಗೆ ನೀಡಿರುವ ಹಲವಾರು ಹೋರಾಟಗಾರರಿಗೆ ಅಭಿನಂದನೆ ಮತ್ತು ಸನ್ಮಾನ ಕಾರ್ಯಕ್ರಮ ಸಹ ನಡೆಯುತ್ತಿದೆ. ಒಂದು ವರ್ಷದಿಂದ ಎಲ್ಲಿಗೂ ಹೋಗದೆ ನಿರಂತರವಾಗಿ ಚಳವಳಿ ಕಣದಲ್ಲಿದ್ದವರಿಗೆ ಸಿಹಿ ತಿನಿಸಿ, ಅವರಿಗೆ ಪುಷ್ಪಾರ್ಚನೆ ಮಾಡಿ ಅಭಿನಂದಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನಾನಿರತ ರೈತರ ಚಪ್ಪಲಿ ಹೊಲಿದುಕೊಟ್ಟು ಸೇವೆ ನೀಡಿದ ಯುವಕನಿಗೆ ರೈತರೆಲ್ಲರೂ ಹೂವಿನ ಮಳೆಗೈದು ಅಭಿನಂದನೆ ಸಲ್ಲಿಸಿದ್ದಾರೆ. ಸಿಂಘು ಗಡಿಯಲ್ಲಿ ರೈತ ಮಹಿಳೆಯರು ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯ ಭಾಗವಾಗಿದ್ದಾರೆ. ನೂರಾರು ಮಹಿಳೆಯರು ಪರಸ್ಪರ ಹೂವಿನ ಮಳೆಗರೆದಿದ್ದಾರೆ. ಇನ್ನೊಂದೆಡೆ ಸಿಂಘು ಗಡಿಯಲ್ಲಿ ಪಂಜಾಬ್‌ನ 32 ರೈತ ಸಂಘದ ಮುಖಂಡರು ಸೇರಿ ಸಭೆ ನಡೆಸಿದ್ದಾರೆ.. ಚಳವಳಿಯ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕರಾದ ಡಾ.ದರ್ಶನ್ ಪಾಲ್ ಸಹ ಪಾಲ್ಗೊಂಡಿದ್ದರು.

ಟಿಕ್ರಿ ಗಡಿಯಲ್ಲಿ ಸಾವಿರಾರು ರೈತರು ಎಂಎಸ್‌ಪಿ ಖಾತ್ರಿ ಕಾನೂನಿಗಾಗಿ ಹೋರಾಟ ಮುಂದುವರೆಸಿದ್ದಾರೆ. ಸರ್ಕಾರದ ರದ್ದತಿ ಕ್ರಮದ ಬಗ್ಗೆ ಮಾತನಾಡಿದ ರಾಕೇಶ್ ಟಿಕಾಯತ್, ರೈತರ ಆಂದೋಲನ ಮುಂದುವರಿಯುತ್ತದೆ. “ಕೃಷಿ ಕಾನೂನು ರದ್ದತಿ ಮಸೂದೆಯು ಆಂದೋಲನದ ಸಮಯದಲ್ಲಿ ಮಡಿದ 750 ರೈತರಿಗೆ ಶ್ರದ್ಧಾಂಜಲಿಯಾಗಿದೆ. ನಮಗಿನ್ನು MSP (ಕನಿಷ್ಠ ಬೆಂಬಲ ಬೆಲೆ) ಖಾತ್ರಿಯ ಕಾನೂನು ಜಾರಿಯಾಗಿಲ್ಲ. ಎಂಎಸ್ಪಿ ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ’’ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಸಂಸ್ಕೃತಿ, ಸಮಾಜದ ದ್ವಿಮುಖ ನೀತಿ ತೆರದಿಟ್ಟ ಅಕ್ಕಯ್ ಪದ್ಮಶಾಲಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...