Homeಮುಖಪುಟರೈಲು ಸುರಂಗ ನಿರ್ಮಿಸಲು ಚೀನಾ ಕಂಪೆನಿಗೆ ಗುತ್ತಿಗೆ ನೀಡಿದ ’ಆತ್ಮನಿರ್ಭರ್‌’ ಮೋದಿ ಸರ್ಕಾರ!

ರೈಲು ಸುರಂಗ ನಿರ್ಮಿಸಲು ಚೀನಾ ಕಂಪೆನಿಗೆ ಗುತ್ತಿಗೆ ನೀಡಿದ ’ಆತ್ಮನಿರ್ಭರ್‌’ ಮೋದಿ ಸರ್ಕಾರ!

- Advertisement -
- Advertisement -

ಕಳೆದ ವರ್ಷ ಗಾಲ್ವಾನ್ ಹಿಂಸಾಚಾರ ನಂತರ ಹಲವಾರು ಚೀನಿ ಮೊಬೈಲ್ ಅಪ್ಲಿಕೇಶನ್‌‌ಗಳನ್ನು ನಿಷೇಧ ಮಾಡಿದ್ದ ಮೋದಿ ಸರ್ಕಾರ, ಚೀನಾ ದೇಶಕ್ಕೆ ಸರಿಯಾದ ಪಾಠ ಕಲಿಸಿದ್ದೇವೆ ಎಂದು ಬೀಗಿದ್ದು ವ್ಯಾಪಕ ಅಪಹಾಸ್ಯಕ್ಕೆ ಗುರಿಯಾಗಿತ್ತು. ವೋಕಲ್ ಲೋಕಲ್, ಆತ್ಮನಿರ್ಭರ ಭಾರತ, ಮೇಕ್‌ ಇನ್‌ ಇಂಡಿಯಾ ಮೂಲಕ ಕೂಡಾ ಹಲವಾರು ಘೋಷಣೆಗಳನ್ನು ಮಾಡಿತ್ತು. ಆದರೆ ಇದೀಗ ದೆಹಲಿ- ಮೀರತ್‌ ರ್‍ಯಾಪಿಡ್‌ ರೈಲು ಯೋಜನೆಯಡಿ 5.6 ಕಿಲೋಮೀಟರ್‌ ಸುರಂಗಮಾರ್ಗ ಕಾಮಗಾರಿಯನ್ನು ನ್ಯಾಶನಲ್ ಕ್ಯಾಪಿಟಲ್ ರಿಜನಲ್ ಟ್ರಾನ್ಸ್‌‌ಪೋರ್ಟ್ ಕಾರ್ಪೊರೇಶನ್‌(NCRTC) ಚೀನಾ ಮೂಲದ ಕಂಪೆನಿಗೆ ನೀಡಿದೆ.

NCRTC ಯಲ್ಲಿ ಕೇಂದ್ರ ಸರ್ಕಾರಕ್ಕೆ 50% ಪಾಲಿದೆ. ಉಳಿದಂತೆ 50% ಪಾಲು 12.5% ದಂತೆ ದೆಹಲಿ, ರಾಜಸ್ಥಾನ, ಹರಿಯಾಣ, ಹಾಗೂ ಉತ್ತರ ಪ್ರದೇಶದ ಸರ್ಕಾರಗಳು ಹೊಂದಿದೆ. ಇದೀಗ NCRTC ಯು ನ್ಯೂ ಅಶೋಕ ನಗರದಿಂದ ಸಾಹಿಬಾಬಾದ್‌ವರೆಗಿನ 5.6 ಕಿಲೋ ಮೀಟರ್‌ ಸುರಂಗಮಾರ್ಗ ನಿಮಿಸುವ ಕಾಮಗಾರಿಯನ್ನು ಚೀನಾ ಮೂಲದ ಶಾಂಘೈ ಟನೆಲ್ ಇಂಜಿನಿಯರಿಂಗ್ ಕಂಪೆನಿ ಲಿಮಿಟೆಡ್‌‌ಗೆ ನೀಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧಗಳು ಎದ್ದಿದ್ದು ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: ಅಮೆರಿಕವನ್ನು ಹಿಂದಿಕ್ಕಲಿದೆ ಚೀನಾ ಆರ್ಥಿಕತೆ; ಯಾಕೆ ಗೊತ್ತೇ?

ಗಾರ್ಗೀ ಕಶ್ಯಪ್ ಅವರು, “ದೆಹಲಿ-ಮೀರತ್ ರೈಲು ಯೋಜನೆಯ 5.6 ಕಿಲೋಮೀಟರ್ ಸುರಂಗ ಮಾರ್ಗ ನಿರ್ಮಿಸುವ ಒಪ್ಪಂದವನ್ನು ಚೀನಾ ಸಂಸ್ಥೆ ಗೆದ್ದಿದೆ. ಇದು ಆತ್ಮನಿರ್ಭಾರ ಭಾರತ್. ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧ ಮಾಡಿ” ಎಂದು ವ್ಯಂಗ್ಯವಾಡಿದ್ದಾರೆ.

ರಾಘುವೀರ್‌ ಅವರು, “ನೀವು ಬಾಯ್ಕಾಟ್‌ ಅಭಿಯಾನದೊಂದಿಗೆ ಕಾರ್ಯನಿರತವಾಗಿದ್ದಾಗ, ನರೇಂದ್ರ ಮೋದಿ ಸರ್ಕಾರ 30 ಸಾವಿರ ಕೋಟಿ ಮೌಲ್ಯದ ಯೋಜನೆಯನ್ನು ಚೀನಾಗೆ ಹಸ್ತಾಂತರಿಸಿದೆ. ಮೊದಲು ಗಾಲ್ವನ್ ಕಣಿವೆಯ ಭೂಮಿಯನ್ನು ಉಡುಗೊರೆಯಾಗಿ ನೀಡಿ, ಇದೀಗ ಸುರಂಗ ಮಾರ್ಗ ನಿರ್ಮಿಸಲು ಆಹ್ವಾನಿಸಿದ್ದಾರೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಗಾಲ್ವಾನ್ ಸಂಘರ್ಷ ಚೀನಾದ ಪೂರ್ವ ಯೋಜಿತ ಕೃತ್ಯ: ಅಮೆರಿಕಾ ವರದಿ

ವೆಂಕಟ್ ಬಂಡಾರಿ ಅವರು, “ರೈಲು ಗುತ್ತಿಗೆಯನ್ನು ಚೀನಾ ಸಂಸ್ಥೆಗೆ ನೀಡಿದ ನಂತರ, ಸೇಡು ತೀರಿಸಲು ಚೀನೀ ಆಟಿಕೆ ರೈಲನ್ನು ಸರ್ಕಾರ ನಿಷೇಧಿಸುತ್ತದೆ. ಮೂರ್ಖ ಭಕ್ತರು ಮೂರ್ಖ ಸರ್ಕಾರವನ್ನು ಬೆಂಬಲಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...