Homeಮುಖಪುಟರೈಲು ಸುರಂಗ ನಿರ್ಮಿಸಲು ಚೀನಾ ಕಂಪೆನಿಗೆ ಗುತ್ತಿಗೆ ನೀಡಿದ ’ಆತ್ಮನಿರ್ಭರ್‌’ ಮೋದಿ ಸರ್ಕಾರ!

ರೈಲು ಸುರಂಗ ನಿರ್ಮಿಸಲು ಚೀನಾ ಕಂಪೆನಿಗೆ ಗುತ್ತಿಗೆ ನೀಡಿದ ’ಆತ್ಮನಿರ್ಭರ್‌’ ಮೋದಿ ಸರ್ಕಾರ!

- Advertisement -
- Advertisement -

ಕಳೆದ ವರ್ಷ ಗಾಲ್ವಾನ್ ಹಿಂಸಾಚಾರ ನಂತರ ಹಲವಾರು ಚೀನಿ ಮೊಬೈಲ್ ಅಪ್ಲಿಕೇಶನ್‌‌ಗಳನ್ನು ನಿಷೇಧ ಮಾಡಿದ್ದ ಮೋದಿ ಸರ್ಕಾರ, ಚೀನಾ ದೇಶಕ್ಕೆ ಸರಿಯಾದ ಪಾಠ ಕಲಿಸಿದ್ದೇವೆ ಎಂದು ಬೀಗಿದ್ದು ವ್ಯಾಪಕ ಅಪಹಾಸ್ಯಕ್ಕೆ ಗುರಿಯಾಗಿತ್ತು. ವೋಕಲ್ ಲೋಕಲ್, ಆತ್ಮನಿರ್ಭರ ಭಾರತ, ಮೇಕ್‌ ಇನ್‌ ಇಂಡಿಯಾ ಮೂಲಕ ಕೂಡಾ ಹಲವಾರು ಘೋಷಣೆಗಳನ್ನು ಮಾಡಿತ್ತು. ಆದರೆ ಇದೀಗ ದೆಹಲಿ- ಮೀರತ್‌ ರ್‍ಯಾಪಿಡ್‌ ರೈಲು ಯೋಜನೆಯಡಿ 5.6 ಕಿಲೋಮೀಟರ್‌ ಸುರಂಗಮಾರ್ಗ ಕಾಮಗಾರಿಯನ್ನು ನ್ಯಾಶನಲ್ ಕ್ಯಾಪಿಟಲ್ ರಿಜನಲ್ ಟ್ರಾನ್ಸ್‌‌ಪೋರ್ಟ್ ಕಾರ್ಪೊರೇಶನ್‌(NCRTC) ಚೀನಾ ಮೂಲದ ಕಂಪೆನಿಗೆ ನೀಡಿದೆ.

NCRTC ಯಲ್ಲಿ ಕೇಂದ್ರ ಸರ್ಕಾರಕ್ಕೆ 50% ಪಾಲಿದೆ. ಉಳಿದಂತೆ 50% ಪಾಲು 12.5% ದಂತೆ ದೆಹಲಿ, ರಾಜಸ್ಥಾನ, ಹರಿಯಾಣ, ಹಾಗೂ ಉತ್ತರ ಪ್ರದೇಶದ ಸರ್ಕಾರಗಳು ಹೊಂದಿದೆ. ಇದೀಗ NCRTC ಯು ನ್ಯೂ ಅಶೋಕ ನಗರದಿಂದ ಸಾಹಿಬಾಬಾದ್‌ವರೆಗಿನ 5.6 ಕಿಲೋ ಮೀಟರ್‌ ಸುರಂಗಮಾರ್ಗ ನಿಮಿಸುವ ಕಾಮಗಾರಿಯನ್ನು ಚೀನಾ ಮೂಲದ ಶಾಂಘೈ ಟನೆಲ್ ಇಂಜಿನಿಯರಿಂಗ್ ಕಂಪೆನಿ ಲಿಮಿಟೆಡ್‌‌ಗೆ ನೀಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧಗಳು ಎದ್ದಿದ್ದು ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: ಅಮೆರಿಕವನ್ನು ಹಿಂದಿಕ್ಕಲಿದೆ ಚೀನಾ ಆರ್ಥಿಕತೆ; ಯಾಕೆ ಗೊತ್ತೇ?

ಗಾರ್ಗೀ ಕಶ್ಯಪ್ ಅವರು, “ದೆಹಲಿ-ಮೀರತ್ ರೈಲು ಯೋಜನೆಯ 5.6 ಕಿಲೋಮೀಟರ್ ಸುರಂಗ ಮಾರ್ಗ ನಿರ್ಮಿಸುವ ಒಪ್ಪಂದವನ್ನು ಚೀನಾ ಸಂಸ್ಥೆ ಗೆದ್ದಿದೆ. ಇದು ಆತ್ಮನಿರ್ಭಾರ ಭಾರತ್. ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧ ಮಾಡಿ” ಎಂದು ವ್ಯಂಗ್ಯವಾಡಿದ್ದಾರೆ.

ರಾಘುವೀರ್‌ ಅವರು, “ನೀವು ಬಾಯ್ಕಾಟ್‌ ಅಭಿಯಾನದೊಂದಿಗೆ ಕಾರ್ಯನಿರತವಾಗಿದ್ದಾಗ, ನರೇಂದ್ರ ಮೋದಿ ಸರ್ಕಾರ 30 ಸಾವಿರ ಕೋಟಿ ಮೌಲ್ಯದ ಯೋಜನೆಯನ್ನು ಚೀನಾಗೆ ಹಸ್ತಾಂತರಿಸಿದೆ. ಮೊದಲು ಗಾಲ್ವನ್ ಕಣಿವೆಯ ಭೂಮಿಯನ್ನು ಉಡುಗೊರೆಯಾಗಿ ನೀಡಿ, ಇದೀಗ ಸುರಂಗ ಮಾರ್ಗ ನಿರ್ಮಿಸಲು ಆಹ್ವಾನಿಸಿದ್ದಾರೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಗಾಲ್ವಾನ್ ಸಂಘರ್ಷ ಚೀನಾದ ಪೂರ್ವ ಯೋಜಿತ ಕೃತ್ಯ: ಅಮೆರಿಕಾ ವರದಿ

ವೆಂಕಟ್ ಬಂಡಾರಿ ಅವರು, “ರೈಲು ಗುತ್ತಿಗೆಯನ್ನು ಚೀನಾ ಸಂಸ್ಥೆಗೆ ನೀಡಿದ ನಂತರ, ಸೇಡು ತೀರಿಸಲು ಚೀನೀ ಆಟಿಕೆ ರೈಲನ್ನು ಸರ್ಕಾರ ನಿಷೇಧಿಸುತ್ತದೆ. ಮೂರ್ಖ ಭಕ್ತರು ಮೂರ್ಖ ಸರ್ಕಾರವನ್ನು ಬೆಂಬಲಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...