Homeಮುಖಪುಟರೈಲು ಸುರಂಗ ನಿರ್ಮಿಸಲು ಚೀನಾ ಕಂಪೆನಿಗೆ ಗುತ್ತಿಗೆ ನೀಡಿದ ’ಆತ್ಮನಿರ್ಭರ್‌’ ಮೋದಿ ಸರ್ಕಾರ!

ರೈಲು ಸುರಂಗ ನಿರ್ಮಿಸಲು ಚೀನಾ ಕಂಪೆನಿಗೆ ಗುತ್ತಿಗೆ ನೀಡಿದ ’ಆತ್ಮನಿರ್ಭರ್‌’ ಮೋದಿ ಸರ್ಕಾರ!

- Advertisement -
- Advertisement -

ಕಳೆದ ವರ್ಷ ಗಾಲ್ವಾನ್ ಹಿಂಸಾಚಾರ ನಂತರ ಹಲವಾರು ಚೀನಿ ಮೊಬೈಲ್ ಅಪ್ಲಿಕೇಶನ್‌‌ಗಳನ್ನು ನಿಷೇಧ ಮಾಡಿದ್ದ ಮೋದಿ ಸರ್ಕಾರ, ಚೀನಾ ದೇಶಕ್ಕೆ ಸರಿಯಾದ ಪಾಠ ಕಲಿಸಿದ್ದೇವೆ ಎಂದು ಬೀಗಿದ್ದು ವ್ಯಾಪಕ ಅಪಹಾಸ್ಯಕ್ಕೆ ಗುರಿಯಾಗಿತ್ತು. ವೋಕಲ್ ಲೋಕಲ್, ಆತ್ಮನಿರ್ಭರ ಭಾರತ, ಮೇಕ್‌ ಇನ್‌ ಇಂಡಿಯಾ ಮೂಲಕ ಕೂಡಾ ಹಲವಾರು ಘೋಷಣೆಗಳನ್ನು ಮಾಡಿತ್ತು. ಆದರೆ ಇದೀಗ ದೆಹಲಿ- ಮೀರತ್‌ ರ್‍ಯಾಪಿಡ್‌ ರೈಲು ಯೋಜನೆಯಡಿ 5.6 ಕಿಲೋಮೀಟರ್‌ ಸುರಂಗಮಾರ್ಗ ಕಾಮಗಾರಿಯನ್ನು ನ್ಯಾಶನಲ್ ಕ್ಯಾಪಿಟಲ್ ರಿಜನಲ್ ಟ್ರಾನ್ಸ್‌‌ಪೋರ್ಟ್ ಕಾರ್ಪೊರೇಶನ್‌(NCRTC) ಚೀನಾ ಮೂಲದ ಕಂಪೆನಿಗೆ ನೀಡಿದೆ.

NCRTC ಯಲ್ಲಿ ಕೇಂದ್ರ ಸರ್ಕಾರಕ್ಕೆ 50% ಪಾಲಿದೆ. ಉಳಿದಂತೆ 50% ಪಾಲು 12.5% ದಂತೆ ದೆಹಲಿ, ರಾಜಸ್ಥಾನ, ಹರಿಯಾಣ, ಹಾಗೂ ಉತ್ತರ ಪ್ರದೇಶದ ಸರ್ಕಾರಗಳು ಹೊಂದಿದೆ. ಇದೀಗ NCRTC ಯು ನ್ಯೂ ಅಶೋಕ ನಗರದಿಂದ ಸಾಹಿಬಾಬಾದ್‌ವರೆಗಿನ 5.6 ಕಿಲೋ ಮೀಟರ್‌ ಸುರಂಗಮಾರ್ಗ ನಿಮಿಸುವ ಕಾಮಗಾರಿಯನ್ನು ಚೀನಾ ಮೂಲದ ಶಾಂಘೈ ಟನೆಲ್ ಇಂಜಿನಿಯರಿಂಗ್ ಕಂಪೆನಿ ಲಿಮಿಟೆಡ್‌‌ಗೆ ನೀಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧಗಳು ಎದ್ದಿದ್ದು ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: ಅಮೆರಿಕವನ್ನು ಹಿಂದಿಕ್ಕಲಿದೆ ಚೀನಾ ಆರ್ಥಿಕತೆ; ಯಾಕೆ ಗೊತ್ತೇ?

ಗಾರ್ಗೀ ಕಶ್ಯಪ್ ಅವರು, “ದೆಹಲಿ-ಮೀರತ್ ರೈಲು ಯೋಜನೆಯ 5.6 ಕಿಲೋಮೀಟರ್ ಸುರಂಗ ಮಾರ್ಗ ನಿರ್ಮಿಸುವ ಒಪ್ಪಂದವನ್ನು ಚೀನಾ ಸಂಸ್ಥೆ ಗೆದ್ದಿದೆ. ಇದು ಆತ್ಮನಿರ್ಭಾರ ಭಾರತ್. ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧ ಮಾಡಿ” ಎಂದು ವ್ಯಂಗ್ಯವಾಡಿದ್ದಾರೆ.

ರಾಘುವೀರ್‌ ಅವರು, “ನೀವು ಬಾಯ್ಕಾಟ್‌ ಅಭಿಯಾನದೊಂದಿಗೆ ಕಾರ್ಯನಿರತವಾಗಿದ್ದಾಗ, ನರೇಂದ್ರ ಮೋದಿ ಸರ್ಕಾರ 30 ಸಾವಿರ ಕೋಟಿ ಮೌಲ್ಯದ ಯೋಜನೆಯನ್ನು ಚೀನಾಗೆ ಹಸ್ತಾಂತರಿಸಿದೆ. ಮೊದಲು ಗಾಲ್ವನ್ ಕಣಿವೆಯ ಭೂಮಿಯನ್ನು ಉಡುಗೊರೆಯಾಗಿ ನೀಡಿ, ಇದೀಗ ಸುರಂಗ ಮಾರ್ಗ ನಿರ್ಮಿಸಲು ಆಹ್ವಾನಿಸಿದ್ದಾರೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಗಾಲ್ವಾನ್ ಸಂಘರ್ಷ ಚೀನಾದ ಪೂರ್ವ ಯೋಜಿತ ಕೃತ್ಯ: ಅಮೆರಿಕಾ ವರದಿ

ವೆಂಕಟ್ ಬಂಡಾರಿ ಅವರು, “ರೈಲು ಗುತ್ತಿಗೆಯನ್ನು ಚೀನಾ ಸಂಸ್ಥೆಗೆ ನೀಡಿದ ನಂತರ, ಸೇಡು ತೀರಿಸಲು ಚೀನೀ ಆಟಿಕೆ ರೈಲನ್ನು ಸರ್ಕಾರ ನಿಷೇಧಿಸುತ್ತದೆ. ಮೂರ್ಖ ಭಕ್ತರು ಮೂರ್ಖ ಸರ್ಕಾರವನ್ನು ಬೆಂಬಲಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚೀನಾ ನಮ್ಮ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ ಎಂಬುದು ಸ್ಪಷ್ಟ: ಮೋಹನ್ ಭಾಗವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...