Homeಮುಖಪುಟಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

- Advertisement -
- Advertisement -

ರೈತ ಆಂದೋಲನಕ್ಕೆ ನೆರವು ನೀಡಿದವರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಒಬ್ಬ ಹೋಟೆಲ್ ಮಾಲೀಕ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕೆ ಅವರ ಮೇಲೆ ಇಡಿ ದಾಳಿ ಮಾಡಲಾಗಿದೆ. ಇದು ರಾಜ್ಯ ಆಳುವ ಲಕ್ಷಣವೇ? ಇವರು ಅಧಿಕಾರಕ್ಕೆ ಬರಲು ಕಾರಣರಾದ ನಾವು ನೀವು ಈ ಕುರಿತು ಯೋಚಿಸಬೇಕು? ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್ ಕರೆ ನೀಡಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರ್ಕಾರ ಮೊದಲು ಎಂಎಸ್‌ಪಿ ಕೊಡುತ್ತೇವೆ, ಖಾಸಗಿ ಮಂಡಿಗಳ ವಿರುದ್ಧ, ಗುತ್ತಿಗೆ ಕೃಷಿ ಪದ್ದತಿ ವಿರುದ್ಧ ಮಾತನಾಡಿದರು. ಎಪಿಎಂಪಿ ಬಲಪಡಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರು. ಆದರೆ ಇಂದು ಅದಕ್ಕೆ ಬೆನ್ನು ತಿರುಗಿಸಿ ರೈತರ ವಿರುದ್ಧ ಸಮರ ಹೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಜಾತಂತ್ರ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆಯೆಂದು ಹೇಳಲಾಗುತ್ತಿದೆ. ಆದರೆ ಫ್ಯಾಸಿಸ್ಟರು ಯಾವ ರೀತಿ ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ. ಗೌರಿ ಲಂಕೇಶ್‌ರವರನ್ನು ಗುಂಡು ಹೊಡೆದು ಹತ್ಯೆ ಮಾಡಲಾಯಿತು. ಅವರು ಯಾವ ತಪ್ಪು ಮಾಡಿದ್ದರು? ಅನ್ಯಾಯದ ವಿರುದ್ಧವಾಗಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಮಾತನಾಡುವುದು ತಪ್ಪೇ? ಏನು ತಪ್ಪಿತ್ತು ಎಂದು ದಿಶಾರವಿಯೆಂಬ ಪುಟ್ಟು ಹುಡುಗಿಯನ್ನು ಬಂಧಿಸಿ ಹಿಂಸಿಸಲಾಯಿತು? ಇಂದು ಪೊಲೀಸರನ್ನು ಮತ್ತು ಸಂಘಪರಿವಾರದ ಗೂಂಡಾಗಳನ್ನು ಮುಂದಿಟ್ಟುಕೊಂಡು ಆಂದೋಲನವನ್ನು ದಮನಿಸುತ್ತಿರುವುದನ್ನು ದೇಶವೇ ನೋಡುತ್ತಿದೆ ಎಂದರು.

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ. ಶತಮಾನಗಳಿಂದ ನಾವು ಧರ್ಮದ ಗುಲಾಮರಾಗಿ ಬದುಕಿದ್ದೇವೆ, ಇಂದು ಮತ್ತೆ ಅದೇ ಧರ್ಮದ ಗುಲಾಮಗಿರಿಗೆ ತಳ್ಳಲಾಗುತ್ತಿದೆ. ಈ ಸರ್ಕಾರ ರಾಮಮಂದಿರದ ಅಜೆಂಡಾ ಇಟ್ಟುಕೊಂಡಿದೆ. ನಮ್ಮ ದೇಶದಲ್ಲಿ ಮಂದಿರಗಳು ಮುಂಚೆಯೇ ಇದ್ದವು. ಹಾಗಾಗಿ ರಾಮಮಂದಿರ ಒಂದು ಪಕ್ಷದ ಅಜೆಂಡಾವಾಗಬೇಕಿಲ್ಲ ಬದಲಿಗೆ ಬಡವರ, ಜನಸಾಮಾನ್ಯರ ಅಭಿವೃದ್ದಿ, ಯುವಜನರಿಗೆ ಉದ್ಯೋಗ, ರೈತರಿಗೆ ನ್ಯಾಯ ಎಂಬುದು ಅಜೆಂಡಾವಾಗಬೇಕಿದೆ. ಆದರೆ ಅವರ ಬಳಿ ಅದಿಲ್ಲ. ರಾಮಮಂದಿರ ಕಟ್ಟಲು ಇವರು ಬೇಕಾಗಿಲ್ಲ. ರಾಮ ಯಾರಪ್ಪನ ಆಸ್ತಿಯಲ್ಲ, ರಾಮ ಈ ದೇಶದ ಜನರ ಹೃದಯದಲ್ಲಿದ್ದಾನೆ. ರೈತರು-ಕಾರ್ಮಿಕರು ರಾಮನನ್ನು ಹುಡುಕಲು ಮಂದಿರಕ್ಕೆ ಹೋಗಬೇಕಾಗಿಲ್ಲ, ಹೊಲದಲ್ಲಿ ಮತ್ತು ಇತರೆಡೆ ದುಡಿಯುವ ರೈತ ಕಾರ್ಮಿಕರು ಬೆಳಿಗ್ಗೆಯಿಂದ ಸಂಜೆಯವರೆಗೆ ರಾಮನ ಜೊತೆಗಿರುತ್ತಾರೆ. ಅವರ ರಾಮ ಅವರ ದುಡಿಮೆಯಲ್ಲಿದ್ದಾನೆ, ಅವರ ಶ್ರಮದಲ್ಲಿದ್ದಾನೆ, ಅವರ ಬೆವರಿನಲ್ಲಿದ್ದಾನೆ ಮತ್ತು ಅವರ ಹೃದಯದಲ್ಲಿದ್ದಾನೆ ಮತ್ತು ಅವರಿಗಾಗಿ ರಾಮನ ಹೆಸರಿನಲ್ಲಿ ಜನರನ್ನು ಒಡೆದು ಆಳಬೇಕಾಗಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದರು.

ಈ ಆಂದೋಲನ ಮೂರು ಕರಾಳ ಕಾನೂನುಗಳ ರದ್ಧತಿಗೆ ಮತ್ತು ಎಂಎಸ್‌ಪಿ ಜಾರಿಗಾಗಿ ಆರಂಭವಾಯಿತು. ಆದರೆ ಇಂದು ಅದು ಅಷ್ಟಕ್ಕೆ ಸೀಮಿತವಾಗದೆ ಎಲ್ಲಾ ಜನವರ್ಗಗಳ ಆಂದೋಲನವಾಗಿ ಮಾರ್ಪಟ್ಟಿದೆ. ರೈತರು-ಕಾರ್ಮಿಕರು-ದಲಿತರು ಮತ್ತುಎಲ್ಲಾ ಶೋಷಿತರ ಹೋರಾಟವಾಗಿ ಮಾರ್ಪಟ್ಟಿದೆ. ಇದು ಸುಧೀರ್ಘ ಹೋರಾಟವಾಗಲಿದೆ. ನೀವು ದೆಹಲಿತನಕ ಬರಲು ಸಾಧ್ಯವಾಗದಿರಬಹುದು. ಹಾಗಾಗಿ ಇಲ್ಲಿರುವ ರೈತರು ಕಾರ್ಮಿಕರು ಸೇರಿ ಬೆಂಗಳೂರನ್ನೇ ದೆಹಲಿ ಮಾಡಬೇಕಾಗಿದೆ. ಉತ್ತರ ಭಾರತದ ರೈತರು ದೆಹಲಿಯಲ್ಲಿ ಯಾವ ರೀತಿ ಸುತ್ತುವರಿದಿದ್ದಾರೋ, ಅದೇ ರೀತಿ ಬೆಂಗಳೂರನ್ನು ಕರ್ನಾಟಕದ ಎಲ್ಲಾ ರೈತ-ಕಾರ್ಮಿಕರು ಮುತ್ತಿಗೆ ಹಾಕಿ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ಯುದುವೀರ್ ಸಿಂಗ್ ಮನವಿ ಮಾಡಿದರು.

ಇದು ಒಂದು ದಿನದ ಹೋರಾಟ ಮತ್ತು ಭಾಷಣಕ್ಕೆ ಸೀಮಿತವಾಗಬಾರದು. ಇಲ್ಲಿ ಒಂದು ಖಾಯಂ ಹೋರಾಟದ ಟೆಂಟ್ ಹಾಕಬೇಕು. ನಾನು ಕರ್ನಾಟಕಕ್ಕೆ ಹಲವಾರು ಬಂದಿದ್ದೇನೆ. ಪ್ರೊ.ನಂಜುಂಡಸ್ವಾಮಿಯವರೊಂದಿಗೆ ಹೋರಾಟ ನಡೆಸಿದ್ದೇವೆ. ಇದು ಪವಿತ್ರ ಜಾಗವಾಗಿದ್ದು, ಶೋಷಣೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಲ್ಲಿ ನೀವು ಸುದೀರ್ಘ ಹೋರಾಟ ನಡೆಸುವ ಮೂಲಕ ಬೆಂಗಳೂರಿನಿಂದ ದೇಶಕ್ಕೆ ಉತ್ತಮ ಸಂದೇಶ ನೀಡುತ್ತಿರಿ ಎಂದು ನಂಬಿದ್ದೇನೆ ಎಂದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...