Homeಮುಖಪುಟಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

- Advertisement -
- Advertisement -

ರೈತ ಆಂದೋಲನಕ್ಕೆ ನೆರವು ನೀಡಿದವರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಒಬ್ಬ ಹೋಟೆಲ್ ಮಾಲೀಕ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕೆ ಅವರ ಮೇಲೆ ಇಡಿ ದಾಳಿ ಮಾಡಲಾಗಿದೆ. ಇದು ರಾಜ್ಯ ಆಳುವ ಲಕ್ಷಣವೇ? ಇವರು ಅಧಿಕಾರಕ್ಕೆ ಬರಲು ಕಾರಣರಾದ ನಾವು ನೀವು ಈ ಕುರಿತು ಯೋಚಿಸಬೇಕು? ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್ ಕರೆ ನೀಡಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರ್ಕಾರ ಮೊದಲು ಎಂಎಸ್‌ಪಿ ಕೊಡುತ್ತೇವೆ, ಖಾಸಗಿ ಮಂಡಿಗಳ ವಿರುದ್ಧ, ಗುತ್ತಿಗೆ ಕೃಷಿ ಪದ್ದತಿ ವಿರುದ್ಧ ಮಾತನಾಡಿದರು. ಎಪಿಎಂಪಿ ಬಲಪಡಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರು. ಆದರೆ ಇಂದು ಅದಕ್ಕೆ ಬೆನ್ನು ತಿರುಗಿಸಿ ರೈತರ ವಿರುದ್ಧ ಸಮರ ಹೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಜಾತಂತ್ರ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆಯೆಂದು ಹೇಳಲಾಗುತ್ತಿದೆ. ಆದರೆ ಫ್ಯಾಸಿಸ್ಟರು ಯಾವ ರೀತಿ ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ. ಗೌರಿ ಲಂಕೇಶ್‌ರವರನ್ನು ಗುಂಡು ಹೊಡೆದು ಹತ್ಯೆ ಮಾಡಲಾಯಿತು. ಅವರು ಯಾವ ತಪ್ಪು ಮಾಡಿದ್ದರು? ಅನ್ಯಾಯದ ವಿರುದ್ಧವಾಗಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಮಾತನಾಡುವುದು ತಪ್ಪೇ? ಏನು ತಪ್ಪಿತ್ತು ಎಂದು ದಿಶಾರವಿಯೆಂಬ ಪುಟ್ಟು ಹುಡುಗಿಯನ್ನು ಬಂಧಿಸಿ ಹಿಂಸಿಸಲಾಯಿತು? ಇಂದು ಪೊಲೀಸರನ್ನು ಮತ್ತು ಸಂಘಪರಿವಾರದ ಗೂಂಡಾಗಳನ್ನು ಮುಂದಿಟ್ಟುಕೊಂಡು ಆಂದೋಲನವನ್ನು ದಮನಿಸುತ್ತಿರುವುದನ್ನು ದೇಶವೇ ನೋಡುತ್ತಿದೆ ಎಂದರು.

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ. ಶತಮಾನಗಳಿಂದ ನಾವು ಧರ್ಮದ ಗುಲಾಮರಾಗಿ ಬದುಕಿದ್ದೇವೆ, ಇಂದು ಮತ್ತೆ ಅದೇ ಧರ್ಮದ ಗುಲಾಮಗಿರಿಗೆ ತಳ್ಳಲಾಗುತ್ತಿದೆ. ಈ ಸರ್ಕಾರ ರಾಮಮಂದಿರದ ಅಜೆಂಡಾ ಇಟ್ಟುಕೊಂಡಿದೆ. ನಮ್ಮ ದೇಶದಲ್ಲಿ ಮಂದಿರಗಳು ಮುಂಚೆಯೇ ಇದ್ದವು. ಹಾಗಾಗಿ ರಾಮಮಂದಿರ ಒಂದು ಪಕ್ಷದ ಅಜೆಂಡಾವಾಗಬೇಕಿಲ್ಲ ಬದಲಿಗೆ ಬಡವರ, ಜನಸಾಮಾನ್ಯರ ಅಭಿವೃದ್ದಿ, ಯುವಜನರಿಗೆ ಉದ್ಯೋಗ, ರೈತರಿಗೆ ನ್ಯಾಯ ಎಂಬುದು ಅಜೆಂಡಾವಾಗಬೇಕಿದೆ. ಆದರೆ ಅವರ ಬಳಿ ಅದಿಲ್ಲ. ರಾಮಮಂದಿರ ಕಟ್ಟಲು ಇವರು ಬೇಕಾಗಿಲ್ಲ. ರಾಮ ಯಾರಪ್ಪನ ಆಸ್ತಿಯಲ್ಲ, ರಾಮ ಈ ದೇಶದ ಜನರ ಹೃದಯದಲ್ಲಿದ್ದಾನೆ. ರೈತರು-ಕಾರ್ಮಿಕರು ರಾಮನನ್ನು ಹುಡುಕಲು ಮಂದಿರಕ್ಕೆ ಹೋಗಬೇಕಾಗಿಲ್ಲ, ಹೊಲದಲ್ಲಿ ಮತ್ತು ಇತರೆಡೆ ದುಡಿಯುವ ರೈತ ಕಾರ್ಮಿಕರು ಬೆಳಿಗ್ಗೆಯಿಂದ ಸಂಜೆಯವರೆಗೆ ರಾಮನ ಜೊತೆಗಿರುತ್ತಾರೆ. ಅವರ ರಾಮ ಅವರ ದುಡಿಮೆಯಲ್ಲಿದ್ದಾನೆ, ಅವರ ಶ್ರಮದಲ್ಲಿದ್ದಾನೆ, ಅವರ ಬೆವರಿನಲ್ಲಿದ್ದಾನೆ ಮತ್ತು ಅವರ ಹೃದಯದಲ್ಲಿದ್ದಾನೆ ಮತ್ತು ಅವರಿಗಾಗಿ ರಾಮನ ಹೆಸರಿನಲ್ಲಿ ಜನರನ್ನು ಒಡೆದು ಆಳಬೇಕಾಗಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದರು.

ಈ ಆಂದೋಲನ ಮೂರು ಕರಾಳ ಕಾನೂನುಗಳ ರದ್ಧತಿಗೆ ಮತ್ತು ಎಂಎಸ್‌ಪಿ ಜಾರಿಗಾಗಿ ಆರಂಭವಾಯಿತು. ಆದರೆ ಇಂದು ಅದು ಅಷ್ಟಕ್ಕೆ ಸೀಮಿತವಾಗದೆ ಎಲ್ಲಾ ಜನವರ್ಗಗಳ ಆಂದೋಲನವಾಗಿ ಮಾರ್ಪಟ್ಟಿದೆ. ರೈತರು-ಕಾರ್ಮಿಕರು-ದಲಿತರು ಮತ್ತುಎಲ್ಲಾ ಶೋಷಿತರ ಹೋರಾಟವಾಗಿ ಮಾರ್ಪಟ್ಟಿದೆ. ಇದು ಸುಧೀರ್ಘ ಹೋರಾಟವಾಗಲಿದೆ. ನೀವು ದೆಹಲಿತನಕ ಬರಲು ಸಾಧ್ಯವಾಗದಿರಬಹುದು. ಹಾಗಾಗಿ ಇಲ್ಲಿರುವ ರೈತರು ಕಾರ್ಮಿಕರು ಸೇರಿ ಬೆಂಗಳೂರನ್ನೇ ದೆಹಲಿ ಮಾಡಬೇಕಾಗಿದೆ. ಉತ್ತರ ಭಾರತದ ರೈತರು ದೆಹಲಿಯಲ್ಲಿ ಯಾವ ರೀತಿ ಸುತ್ತುವರಿದಿದ್ದಾರೋ, ಅದೇ ರೀತಿ ಬೆಂಗಳೂರನ್ನು ಕರ್ನಾಟಕದ ಎಲ್ಲಾ ರೈತ-ಕಾರ್ಮಿಕರು ಮುತ್ತಿಗೆ ಹಾಕಿ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ಯುದುವೀರ್ ಸಿಂಗ್ ಮನವಿ ಮಾಡಿದರು.

ಇದು ಒಂದು ದಿನದ ಹೋರಾಟ ಮತ್ತು ಭಾಷಣಕ್ಕೆ ಸೀಮಿತವಾಗಬಾರದು. ಇಲ್ಲಿ ಒಂದು ಖಾಯಂ ಹೋರಾಟದ ಟೆಂಟ್ ಹಾಕಬೇಕು. ನಾನು ಕರ್ನಾಟಕಕ್ಕೆ ಹಲವಾರು ಬಂದಿದ್ದೇನೆ. ಪ್ರೊ.ನಂಜುಂಡಸ್ವಾಮಿಯವರೊಂದಿಗೆ ಹೋರಾಟ ನಡೆಸಿದ್ದೇವೆ. ಇದು ಪವಿತ್ರ ಜಾಗವಾಗಿದ್ದು, ಶೋಷಣೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಲ್ಲಿ ನೀವು ಸುದೀರ್ಘ ಹೋರಾಟ ನಡೆಸುವ ಮೂಲಕ ಬೆಂಗಳೂರಿನಿಂದ ದೇಶಕ್ಕೆ ಉತ್ತಮ ಸಂದೇಶ ನೀಡುತ್ತಿರಿ ಎಂದು ನಂಬಿದ್ದೇನೆ ಎಂದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...