Homeಮುಖಪುಟಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

- Advertisement -
- Advertisement -

ರೈತ ಆಂದೋಲನಕ್ಕೆ ನೆರವು ನೀಡಿದವರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಒಬ್ಬ ಹೋಟೆಲ್ ಮಾಲೀಕ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕೆ ಅವರ ಮೇಲೆ ಇಡಿ ದಾಳಿ ಮಾಡಲಾಗಿದೆ. ಇದು ರಾಜ್ಯ ಆಳುವ ಲಕ್ಷಣವೇ? ಇವರು ಅಧಿಕಾರಕ್ಕೆ ಬರಲು ಕಾರಣರಾದ ನಾವು ನೀವು ಈ ಕುರಿತು ಯೋಚಿಸಬೇಕು? ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್ ಕರೆ ನೀಡಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರ್ಕಾರ ಮೊದಲು ಎಂಎಸ್‌ಪಿ ಕೊಡುತ್ತೇವೆ, ಖಾಸಗಿ ಮಂಡಿಗಳ ವಿರುದ್ಧ, ಗುತ್ತಿಗೆ ಕೃಷಿ ಪದ್ದತಿ ವಿರುದ್ಧ ಮಾತನಾಡಿದರು. ಎಪಿಎಂಪಿ ಬಲಪಡಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರು. ಆದರೆ ಇಂದು ಅದಕ್ಕೆ ಬೆನ್ನು ತಿರುಗಿಸಿ ರೈತರ ವಿರುದ್ಧ ಸಮರ ಹೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಜಾತಂತ್ರ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆಯೆಂದು ಹೇಳಲಾಗುತ್ತಿದೆ. ಆದರೆ ಫ್ಯಾಸಿಸ್ಟರು ಯಾವ ರೀತಿ ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ. ಗೌರಿ ಲಂಕೇಶ್‌ರವರನ್ನು ಗುಂಡು ಹೊಡೆದು ಹತ್ಯೆ ಮಾಡಲಾಯಿತು. ಅವರು ಯಾವ ತಪ್ಪು ಮಾಡಿದ್ದರು? ಅನ್ಯಾಯದ ವಿರುದ್ಧವಾಗಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಮಾತನಾಡುವುದು ತಪ್ಪೇ? ಏನು ತಪ್ಪಿತ್ತು ಎಂದು ದಿಶಾರವಿಯೆಂಬ ಪುಟ್ಟು ಹುಡುಗಿಯನ್ನು ಬಂಧಿಸಿ ಹಿಂಸಿಸಲಾಯಿತು? ಇಂದು ಪೊಲೀಸರನ್ನು ಮತ್ತು ಸಂಘಪರಿವಾರದ ಗೂಂಡಾಗಳನ್ನು ಮುಂದಿಟ್ಟುಕೊಂಡು ಆಂದೋಲನವನ್ನು ದಮನಿಸುತ್ತಿರುವುದನ್ನು ದೇಶವೇ ನೋಡುತ್ತಿದೆ ಎಂದರು.

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ. ಶತಮಾನಗಳಿಂದ ನಾವು ಧರ್ಮದ ಗುಲಾಮರಾಗಿ ಬದುಕಿದ್ದೇವೆ, ಇಂದು ಮತ್ತೆ ಅದೇ ಧರ್ಮದ ಗುಲಾಮಗಿರಿಗೆ ತಳ್ಳಲಾಗುತ್ತಿದೆ. ಈ ಸರ್ಕಾರ ರಾಮಮಂದಿರದ ಅಜೆಂಡಾ ಇಟ್ಟುಕೊಂಡಿದೆ. ನಮ್ಮ ದೇಶದಲ್ಲಿ ಮಂದಿರಗಳು ಮುಂಚೆಯೇ ಇದ್ದವು. ಹಾಗಾಗಿ ರಾಮಮಂದಿರ ಒಂದು ಪಕ್ಷದ ಅಜೆಂಡಾವಾಗಬೇಕಿಲ್ಲ ಬದಲಿಗೆ ಬಡವರ, ಜನಸಾಮಾನ್ಯರ ಅಭಿವೃದ್ದಿ, ಯುವಜನರಿಗೆ ಉದ್ಯೋಗ, ರೈತರಿಗೆ ನ್ಯಾಯ ಎಂಬುದು ಅಜೆಂಡಾವಾಗಬೇಕಿದೆ. ಆದರೆ ಅವರ ಬಳಿ ಅದಿಲ್ಲ. ರಾಮಮಂದಿರ ಕಟ್ಟಲು ಇವರು ಬೇಕಾಗಿಲ್ಲ. ರಾಮ ಯಾರಪ್ಪನ ಆಸ್ತಿಯಲ್ಲ, ರಾಮ ಈ ದೇಶದ ಜನರ ಹೃದಯದಲ್ಲಿದ್ದಾನೆ. ರೈತರು-ಕಾರ್ಮಿಕರು ರಾಮನನ್ನು ಹುಡುಕಲು ಮಂದಿರಕ್ಕೆ ಹೋಗಬೇಕಾಗಿಲ್ಲ, ಹೊಲದಲ್ಲಿ ಮತ್ತು ಇತರೆಡೆ ದುಡಿಯುವ ರೈತ ಕಾರ್ಮಿಕರು ಬೆಳಿಗ್ಗೆಯಿಂದ ಸಂಜೆಯವರೆಗೆ ರಾಮನ ಜೊತೆಗಿರುತ್ತಾರೆ. ಅವರ ರಾಮ ಅವರ ದುಡಿಮೆಯಲ್ಲಿದ್ದಾನೆ, ಅವರ ಶ್ರಮದಲ್ಲಿದ್ದಾನೆ, ಅವರ ಬೆವರಿನಲ್ಲಿದ್ದಾನೆ ಮತ್ತು ಅವರ ಹೃದಯದಲ್ಲಿದ್ದಾನೆ ಮತ್ತು ಅವರಿಗಾಗಿ ರಾಮನ ಹೆಸರಿನಲ್ಲಿ ಜನರನ್ನು ಒಡೆದು ಆಳಬೇಕಾಗಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದರು.

ಈ ಆಂದೋಲನ ಮೂರು ಕರಾಳ ಕಾನೂನುಗಳ ರದ್ಧತಿಗೆ ಮತ್ತು ಎಂಎಸ್‌ಪಿ ಜಾರಿಗಾಗಿ ಆರಂಭವಾಯಿತು. ಆದರೆ ಇಂದು ಅದು ಅಷ್ಟಕ್ಕೆ ಸೀಮಿತವಾಗದೆ ಎಲ್ಲಾ ಜನವರ್ಗಗಳ ಆಂದೋಲನವಾಗಿ ಮಾರ್ಪಟ್ಟಿದೆ. ರೈತರು-ಕಾರ್ಮಿಕರು-ದಲಿತರು ಮತ್ತುಎಲ್ಲಾ ಶೋಷಿತರ ಹೋರಾಟವಾಗಿ ಮಾರ್ಪಟ್ಟಿದೆ. ಇದು ಸುಧೀರ್ಘ ಹೋರಾಟವಾಗಲಿದೆ. ನೀವು ದೆಹಲಿತನಕ ಬರಲು ಸಾಧ್ಯವಾಗದಿರಬಹುದು. ಹಾಗಾಗಿ ಇಲ್ಲಿರುವ ರೈತರು ಕಾರ್ಮಿಕರು ಸೇರಿ ಬೆಂಗಳೂರನ್ನೇ ದೆಹಲಿ ಮಾಡಬೇಕಾಗಿದೆ. ಉತ್ತರ ಭಾರತದ ರೈತರು ದೆಹಲಿಯಲ್ಲಿ ಯಾವ ರೀತಿ ಸುತ್ತುವರಿದಿದ್ದಾರೋ, ಅದೇ ರೀತಿ ಬೆಂಗಳೂರನ್ನು ಕರ್ನಾಟಕದ ಎಲ್ಲಾ ರೈತ-ಕಾರ್ಮಿಕರು ಮುತ್ತಿಗೆ ಹಾಕಿ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ಯುದುವೀರ್ ಸಿಂಗ್ ಮನವಿ ಮಾಡಿದರು.

ಇದು ಒಂದು ದಿನದ ಹೋರಾಟ ಮತ್ತು ಭಾಷಣಕ್ಕೆ ಸೀಮಿತವಾಗಬಾರದು. ಇಲ್ಲಿ ಒಂದು ಖಾಯಂ ಹೋರಾಟದ ಟೆಂಟ್ ಹಾಕಬೇಕು. ನಾನು ಕರ್ನಾಟಕಕ್ಕೆ ಹಲವಾರು ಬಂದಿದ್ದೇನೆ. ಪ್ರೊ.ನಂಜುಂಡಸ್ವಾಮಿಯವರೊಂದಿಗೆ ಹೋರಾಟ ನಡೆಸಿದ್ದೇವೆ. ಇದು ಪವಿತ್ರ ಜಾಗವಾಗಿದ್ದು, ಶೋಷಣೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಲ್ಲಿ ನೀವು ಸುದೀರ್ಘ ಹೋರಾಟ ನಡೆಸುವ ಮೂಲಕ ಬೆಂಗಳೂರಿನಿಂದ ದೇಶಕ್ಕೆ ಉತ್ತಮ ಸಂದೇಶ ನೀಡುತ್ತಿರಿ ಎಂದು ನಂಬಿದ್ದೇನೆ ಎಂದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...