Homeಮುಖಪುಟಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

- Advertisement -
- Advertisement -

ರೈತ ಆಂದೋಲನಕ್ಕೆ ನೆರವು ನೀಡಿದವರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಒಬ್ಬ ಹೋಟೆಲ್ ಮಾಲೀಕ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕೆ ಅವರ ಮೇಲೆ ಇಡಿ ದಾಳಿ ಮಾಡಲಾಗಿದೆ. ಇದು ರಾಜ್ಯ ಆಳುವ ಲಕ್ಷಣವೇ? ಇವರು ಅಧಿಕಾರಕ್ಕೆ ಬರಲು ಕಾರಣರಾದ ನಾವು ನೀವು ಈ ಕುರಿತು ಯೋಚಿಸಬೇಕು? ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್ ಕರೆ ನೀಡಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರ್ಕಾರ ಮೊದಲು ಎಂಎಸ್‌ಪಿ ಕೊಡುತ್ತೇವೆ, ಖಾಸಗಿ ಮಂಡಿಗಳ ವಿರುದ್ಧ, ಗುತ್ತಿಗೆ ಕೃಷಿ ಪದ್ದತಿ ವಿರುದ್ಧ ಮಾತನಾಡಿದರು. ಎಪಿಎಂಪಿ ಬಲಪಡಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರು. ಆದರೆ ಇಂದು ಅದಕ್ಕೆ ಬೆನ್ನು ತಿರುಗಿಸಿ ರೈತರ ವಿರುದ್ಧ ಸಮರ ಹೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಜಾತಂತ್ರ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆಯೆಂದು ಹೇಳಲಾಗುತ್ತಿದೆ. ಆದರೆ ಫ್ಯಾಸಿಸ್ಟರು ಯಾವ ರೀತಿ ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ. ಗೌರಿ ಲಂಕೇಶ್‌ರವರನ್ನು ಗುಂಡು ಹೊಡೆದು ಹತ್ಯೆ ಮಾಡಲಾಯಿತು. ಅವರು ಯಾವ ತಪ್ಪು ಮಾಡಿದ್ದರು? ಅನ್ಯಾಯದ ವಿರುದ್ಧವಾಗಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಮಾತನಾಡುವುದು ತಪ್ಪೇ? ಏನು ತಪ್ಪಿತ್ತು ಎಂದು ದಿಶಾರವಿಯೆಂಬ ಪುಟ್ಟು ಹುಡುಗಿಯನ್ನು ಬಂಧಿಸಿ ಹಿಂಸಿಸಲಾಯಿತು? ಇಂದು ಪೊಲೀಸರನ್ನು ಮತ್ತು ಸಂಘಪರಿವಾರದ ಗೂಂಡಾಗಳನ್ನು ಮುಂದಿಟ್ಟುಕೊಂಡು ಆಂದೋಲನವನ್ನು ದಮನಿಸುತ್ತಿರುವುದನ್ನು ದೇಶವೇ ನೋಡುತ್ತಿದೆ ಎಂದರು.

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ. ಶತಮಾನಗಳಿಂದ ನಾವು ಧರ್ಮದ ಗುಲಾಮರಾಗಿ ಬದುಕಿದ್ದೇವೆ, ಇಂದು ಮತ್ತೆ ಅದೇ ಧರ್ಮದ ಗುಲಾಮಗಿರಿಗೆ ತಳ್ಳಲಾಗುತ್ತಿದೆ. ಈ ಸರ್ಕಾರ ರಾಮಮಂದಿರದ ಅಜೆಂಡಾ ಇಟ್ಟುಕೊಂಡಿದೆ. ನಮ್ಮ ದೇಶದಲ್ಲಿ ಮಂದಿರಗಳು ಮುಂಚೆಯೇ ಇದ್ದವು. ಹಾಗಾಗಿ ರಾಮಮಂದಿರ ಒಂದು ಪಕ್ಷದ ಅಜೆಂಡಾವಾಗಬೇಕಿಲ್ಲ ಬದಲಿಗೆ ಬಡವರ, ಜನಸಾಮಾನ್ಯರ ಅಭಿವೃದ್ದಿ, ಯುವಜನರಿಗೆ ಉದ್ಯೋಗ, ರೈತರಿಗೆ ನ್ಯಾಯ ಎಂಬುದು ಅಜೆಂಡಾವಾಗಬೇಕಿದೆ. ಆದರೆ ಅವರ ಬಳಿ ಅದಿಲ್ಲ. ರಾಮಮಂದಿರ ಕಟ್ಟಲು ಇವರು ಬೇಕಾಗಿಲ್ಲ. ರಾಮ ಯಾರಪ್ಪನ ಆಸ್ತಿಯಲ್ಲ, ರಾಮ ಈ ದೇಶದ ಜನರ ಹೃದಯದಲ್ಲಿದ್ದಾನೆ. ರೈತರು-ಕಾರ್ಮಿಕರು ರಾಮನನ್ನು ಹುಡುಕಲು ಮಂದಿರಕ್ಕೆ ಹೋಗಬೇಕಾಗಿಲ್ಲ, ಹೊಲದಲ್ಲಿ ಮತ್ತು ಇತರೆಡೆ ದುಡಿಯುವ ರೈತ ಕಾರ್ಮಿಕರು ಬೆಳಿಗ್ಗೆಯಿಂದ ಸಂಜೆಯವರೆಗೆ ರಾಮನ ಜೊತೆಗಿರುತ್ತಾರೆ. ಅವರ ರಾಮ ಅವರ ದುಡಿಮೆಯಲ್ಲಿದ್ದಾನೆ, ಅವರ ಶ್ರಮದಲ್ಲಿದ್ದಾನೆ, ಅವರ ಬೆವರಿನಲ್ಲಿದ್ದಾನೆ ಮತ್ತು ಅವರ ಹೃದಯದಲ್ಲಿದ್ದಾನೆ ಮತ್ತು ಅವರಿಗಾಗಿ ರಾಮನ ಹೆಸರಿನಲ್ಲಿ ಜನರನ್ನು ಒಡೆದು ಆಳಬೇಕಾಗಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದರು.

ಈ ಆಂದೋಲನ ಮೂರು ಕರಾಳ ಕಾನೂನುಗಳ ರದ್ಧತಿಗೆ ಮತ್ತು ಎಂಎಸ್‌ಪಿ ಜಾರಿಗಾಗಿ ಆರಂಭವಾಯಿತು. ಆದರೆ ಇಂದು ಅದು ಅಷ್ಟಕ್ಕೆ ಸೀಮಿತವಾಗದೆ ಎಲ್ಲಾ ಜನವರ್ಗಗಳ ಆಂದೋಲನವಾಗಿ ಮಾರ್ಪಟ್ಟಿದೆ. ರೈತರು-ಕಾರ್ಮಿಕರು-ದಲಿತರು ಮತ್ತುಎಲ್ಲಾ ಶೋಷಿತರ ಹೋರಾಟವಾಗಿ ಮಾರ್ಪಟ್ಟಿದೆ. ಇದು ಸುಧೀರ್ಘ ಹೋರಾಟವಾಗಲಿದೆ. ನೀವು ದೆಹಲಿತನಕ ಬರಲು ಸಾಧ್ಯವಾಗದಿರಬಹುದು. ಹಾಗಾಗಿ ಇಲ್ಲಿರುವ ರೈತರು ಕಾರ್ಮಿಕರು ಸೇರಿ ಬೆಂಗಳೂರನ್ನೇ ದೆಹಲಿ ಮಾಡಬೇಕಾಗಿದೆ. ಉತ್ತರ ಭಾರತದ ರೈತರು ದೆಹಲಿಯಲ್ಲಿ ಯಾವ ರೀತಿ ಸುತ್ತುವರಿದಿದ್ದಾರೋ, ಅದೇ ರೀತಿ ಬೆಂಗಳೂರನ್ನು ಕರ್ನಾಟಕದ ಎಲ್ಲಾ ರೈತ-ಕಾರ್ಮಿಕರು ಮುತ್ತಿಗೆ ಹಾಕಿ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ಯುದುವೀರ್ ಸಿಂಗ್ ಮನವಿ ಮಾಡಿದರು.

ಇದು ಒಂದು ದಿನದ ಹೋರಾಟ ಮತ್ತು ಭಾಷಣಕ್ಕೆ ಸೀಮಿತವಾಗಬಾರದು. ಇಲ್ಲಿ ಒಂದು ಖಾಯಂ ಹೋರಾಟದ ಟೆಂಟ್ ಹಾಕಬೇಕು. ನಾನು ಕರ್ನಾಟಕಕ್ಕೆ ಹಲವಾರು ಬಂದಿದ್ದೇನೆ. ಪ್ರೊ.ನಂಜುಂಡಸ್ವಾಮಿಯವರೊಂದಿಗೆ ಹೋರಾಟ ನಡೆಸಿದ್ದೇವೆ. ಇದು ಪವಿತ್ರ ಜಾಗವಾಗಿದ್ದು, ಶೋಷಣೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಲ್ಲಿ ನೀವು ಸುದೀರ್ಘ ಹೋರಾಟ ನಡೆಸುವ ಮೂಲಕ ಬೆಂಗಳೂರಿನಿಂದ ದೇಶಕ್ಕೆ ಉತ್ತಮ ಸಂದೇಶ ನೀಡುತ್ತಿರಿ ಎಂದು ನಂಬಿದ್ದೇನೆ ಎಂದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...