Homeಮುಖಪುಟಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

- Advertisement -
- Advertisement -

ರೈತ ಆಂದೋಲನಕ್ಕೆ ನೆರವು ನೀಡಿದವರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಒಬ್ಬ ಹೋಟೆಲ್ ಮಾಲೀಕ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕೆ ಅವರ ಮೇಲೆ ಇಡಿ ದಾಳಿ ಮಾಡಲಾಗಿದೆ. ಇದು ರಾಜ್ಯ ಆಳುವ ಲಕ್ಷಣವೇ? ಇವರು ಅಧಿಕಾರಕ್ಕೆ ಬರಲು ಕಾರಣರಾದ ನಾವು ನೀವು ಈ ಕುರಿತು ಯೋಚಿಸಬೇಕು? ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್ ಕರೆ ನೀಡಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರ್ಕಾರ ಮೊದಲು ಎಂಎಸ್‌ಪಿ ಕೊಡುತ್ತೇವೆ, ಖಾಸಗಿ ಮಂಡಿಗಳ ವಿರುದ್ಧ, ಗುತ್ತಿಗೆ ಕೃಷಿ ಪದ್ದತಿ ವಿರುದ್ಧ ಮಾತನಾಡಿದರು. ಎಪಿಎಂಪಿ ಬಲಪಡಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರು. ಆದರೆ ಇಂದು ಅದಕ್ಕೆ ಬೆನ್ನು ತಿರುಗಿಸಿ ರೈತರ ವಿರುದ್ಧ ಸಮರ ಹೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಜಾತಂತ್ರ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆಯೆಂದು ಹೇಳಲಾಗುತ್ತಿದೆ. ಆದರೆ ಫ್ಯಾಸಿಸ್ಟರು ಯಾವ ರೀತಿ ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ. ಗೌರಿ ಲಂಕೇಶ್‌ರವರನ್ನು ಗುಂಡು ಹೊಡೆದು ಹತ್ಯೆ ಮಾಡಲಾಯಿತು. ಅವರು ಯಾವ ತಪ್ಪು ಮಾಡಿದ್ದರು? ಅನ್ಯಾಯದ ವಿರುದ್ಧವಾಗಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಮಾತನಾಡುವುದು ತಪ್ಪೇ? ಏನು ತಪ್ಪಿತ್ತು ಎಂದು ದಿಶಾರವಿಯೆಂಬ ಪುಟ್ಟು ಹುಡುಗಿಯನ್ನು ಬಂಧಿಸಿ ಹಿಂಸಿಸಲಾಯಿತು? ಇಂದು ಪೊಲೀಸರನ್ನು ಮತ್ತು ಸಂಘಪರಿವಾರದ ಗೂಂಡಾಗಳನ್ನು ಮುಂದಿಟ್ಟುಕೊಂಡು ಆಂದೋಲನವನ್ನು ದಮನಿಸುತ್ತಿರುವುದನ್ನು ದೇಶವೇ ನೋಡುತ್ತಿದೆ ಎಂದರು.

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ. ಶತಮಾನಗಳಿಂದ ನಾವು ಧರ್ಮದ ಗುಲಾಮರಾಗಿ ಬದುಕಿದ್ದೇವೆ, ಇಂದು ಮತ್ತೆ ಅದೇ ಧರ್ಮದ ಗುಲಾಮಗಿರಿಗೆ ತಳ್ಳಲಾಗುತ್ತಿದೆ. ಈ ಸರ್ಕಾರ ರಾಮಮಂದಿರದ ಅಜೆಂಡಾ ಇಟ್ಟುಕೊಂಡಿದೆ. ನಮ್ಮ ದೇಶದಲ್ಲಿ ಮಂದಿರಗಳು ಮುಂಚೆಯೇ ಇದ್ದವು. ಹಾಗಾಗಿ ರಾಮಮಂದಿರ ಒಂದು ಪಕ್ಷದ ಅಜೆಂಡಾವಾಗಬೇಕಿಲ್ಲ ಬದಲಿಗೆ ಬಡವರ, ಜನಸಾಮಾನ್ಯರ ಅಭಿವೃದ್ದಿ, ಯುವಜನರಿಗೆ ಉದ್ಯೋಗ, ರೈತರಿಗೆ ನ್ಯಾಯ ಎಂಬುದು ಅಜೆಂಡಾವಾಗಬೇಕಿದೆ. ಆದರೆ ಅವರ ಬಳಿ ಅದಿಲ್ಲ. ರಾಮಮಂದಿರ ಕಟ್ಟಲು ಇವರು ಬೇಕಾಗಿಲ್ಲ. ರಾಮ ಯಾರಪ್ಪನ ಆಸ್ತಿಯಲ್ಲ, ರಾಮ ಈ ದೇಶದ ಜನರ ಹೃದಯದಲ್ಲಿದ್ದಾನೆ. ರೈತರು-ಕಾರ್ಮಿಕರು ರಾಮನನ್ನು ಹುಡುಕಲು ಮಂದಿರಕ್ಕೆ ಹೋಗಬೇಕಾಗಿಲ್ಲ, ಹೊಲದಲ್ಲಿ ಮತ್ತು ಇತರೆಡೆ ದುಡಿಯುವ ರೈತ ಕಾರ್ಮಿಕರು ಬೆಳಿಗ್ಗೆಯಿಂದ ಸಂಜೆಯವರೆಗೆ ರಾಮನ ಜೊತೆಗಿರುತ್ತಾರೆ. ಅವರ ರಾಮ ಅವರ ದುಡಿಮೆಯಲ್ಲಿದ್ದಾನೆ, ಅವರ ಶ್ರಮದಲ್ಲಿದ್ದಾನೆ, ಅವರ ಬೆವರಿನಲ್ಲಿದ್ದಾನೆ ಮತ್ತು ಅವರ ಹೃದಯದಲ್ಲಿದ್ದಾನೆ ಮತ್ತು ಅವರಿಗಾಗಿ ರಾಮನ ಹೆಸರಿನಲ್ಲಿ ಜನರನ್ನು ಒಡೆದು ಆಳಬೇಕಾಗಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದರು.

ಈ ಆಂದೋಲನ ಮೂರು ಕರಾಳ ಕಾನೂನುಗಳ ರದ್ಧತಿಗೆ ಮತ್ತು ಎಂಎಸ್‌ಪಿ ಜಾರಿಗಾಗಿ ಆರಂಭವಾಯಿತು. ಆದರೆ ಇಂದು ಅದು ಅಷ್ಟಕ್ಕೆ ಸೀಮಿತವಾಗದೆ ಎಲ್ಲಾ ಜನವರ್ಗಗಳ ಆಂದೋಲನವಾಗಿ ಮಾರ್ಪಟ್ಟಿದೆ. ರೈತರು-ಕಾರ್ಮಿಕರು-ದಲಿತರು ಮತ್ತುಎಲ್ಲಾ ಶೋಷಿತರ ಹೋರಾಟವಾಗಿ ಮಾರ್ಪಟ್ಟಿದೆ. ಇದು ಸುಧೀರ್ಘ ಹೋರಾಟವಾಗಲಿದೆ. ನೀವು ದೆಹಲಿತನಕ ಬರಲು ಸಾಧ್ಯವಾಗದಿರಬಹುದು. ಹಾಗಾಗಿ ಇಲ್ಲಿರುವ ರೈತರು ಕಾರ್ಮಿಕರು ಸೇರಿ ಬೆಂಗಳೂರನ್ನೇ ದೆಹಲಿ ಮಾಡಬೇಕಾಗಿದೆ. ಉತ್ತರ ಭಾರತದ ರೈತರು ದೆಹಲಿಯಲ್ಲಿ ಯಾವ ರೀತಿ ಸುತ್ತುವರಿದಿದ್ದಾರೋ, ಅದೇ ರೀತಿ ಬೆಂಗಳೂರನ್ನು ಕರ್ನಾಟಕದ ಎಲ್ಲಾ ರೈತ-ಕಾರ್ಮಿಕರು ಮುತ್ತಿಗೆ ಹಾಕಿ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ಯುದುವೀರ್ ಸಿಂಗ್ ಮನವಿ ಮಾಡಿದರು.

ಇದು ಒಂದು ದಿನದ ಹೋರಾಟ ಮತ್ತು ಭಾಷಣಕ್ಕೆ ಸೀಮಿತವಾಗಬಾರದು. ಇಲ್ಲಿ ಒಂದು ಖಾಯಂ ಹೋರಾಟದ ಟೆಂಟ್ ಹಾಕಬೇಕು. ನಾನು ಕರ್ನಾಟಕಕ್ಕೆ ಹಲವಾರು ಬಂದಿದ್ದೇನೆ. ಪ್ರೊ.ನಂಜುಂಡಸ್ವಾಮಿಯವರೊಂದಿಗೆ ಹೋರಾಟ ನಡೆಸಿದ್ದೇವೆ. ಇದು ಪವಿತ್ರ ಜಾಗವಾಗಿದ್ದು, ಶೋಷಣೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಲ್ಲಿ ನೀವು ಸುದೀರ್ಘ ಹೋರಾಟ ನಡೆಸುವ ಮೂಲಕ ಬೆಂಗಳೂರಿನಿಂದ ದೇಶಕ್ಕೆ ಉತ್ತಮ ಸಂದೇಶ ನೀಡುತ್ತಿರಿ ಎಂದು ನಂಬಿದ್ದೇನೆ ಎಂದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...