Homeಮುಖಪುಟಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

- Advertisement -
- Advertisement -

ರೈತ ಆಂದೋಲನಕ್ಕೆ ನೆರವು ನೀಡಿದವರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಒಬ್ಬ ಹೋಟೆಲ್ ಮಾಲೀಕ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕೆ ಅವರ ಮೇಲೆ ಇಡಿ ದಾಳಿ ಮಾಡಲಾಗಿದೆ. ಇದು ರಾಜ್ಯ ಆಳುವ ಲಕ್ಷಣವೇ? ಇವರು ಅಧಿಕಾರಕ್ಕೆ ಬರಲು ಕಾರಣರಾದ ನಾವು ನೀವು ಈ ಕುರಿತು ಯೋಚಿಸಬೇಕು? ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್ ಕರೆ ನೀಡಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರ್ಕಾರ ಮೊದಲು ಎಂಎಸ್‌ಪಿ ಕೊಡುತ್ತೇವೆ, ಖಾಸಗಿ ಮಂಡಿಗಳ ವಿರುದ್ಧ, ಗುತ್ತಿಗೆ ಕೃಷಿ ಪದ್ದತಿ ವಿರುದ್ಧ ಮಾತನಾಡಿದರು. ಎಪಿಎಂಪಿ ಬಲಪಡಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರು. ಆದರೆ ಇಂದು ಅದಕ್ಕೆ ಬೆನ್ನು ತಿರುಗಿಸಿ ರೈತರ ವಿರುದ್ಧ ಸಮರ ಹೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಜಾತಂತ್ರ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆಯೆಂದು ಹೇಳಲಾಗುತ್ತಿದೆ. ಆದರೆ ಫ್ಯಾಸಿಸ್ಟರು ಯಾವ ರೀತಿ ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ. ಗೌರಿ ಲಂಕೇಶ್‌ರವರನ್ನು ಗುಂಡು ಹೊಡೆದು ಹತ್ಯೆ ಮಾಡಲಾಯಿತು. ಅವರು ಯಾವ ತಪ್ಪು ಮಾಡಿದ್ದರು? ಅನ್ಯಾಯದ ವಿರುದ್ಧವಾಗಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಮಾತನಾಡುವುದು ತಪ್ಪೇ? ಏನು ತಪ್ಪಿತ್ತು ಎಂದು ದಿಶಾರವಿಯೆಂಬ ಪುಟ್ಟು ಹುಡುಗಿಯನ್ನು ಬಂಧಿಸಿ ಹಿಂಸಿಸಲಾಯಿತು? ಇಂದು ಪೊಲೀಸರನ್ನು ಮತ್ತು ಸಂಘಪರಿವಾರದ ಗೂಂಡಾಗಳನ್ನು ಮುಂದಿಟ್ಟುಕೊಂಡು ಆಂದೋಲನವನ್ನು ದಮನಿಸುತ್ತಿರುವುದನ್ನು ದೇಶವೇ ನೋಡುತ್ತಿದೆ ಎಂದರು.

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ. ಶತಮಾನಗಳಿಂದ ನಾವು ಧರ್ಮದ ಗುಲಾಮರಾಗಿ ಬದುಕಿದ್ದೇವೆ, ಇಂದು ಮತ್ತೆ ಅದೇ ಧರ್ಮದ ಗುಲಾಮಗಿರಿಗೆ ತಳ್ಳಲಾಗುತ್ತಿದೆ. ಈ ಸರ್ಕಾರ ರಾಮಮಂದಿರದ ಅಜೆಂಡಾ ಇಟ್ಟುಕೊಂಡಿದೆ. ನಮ್ಮ ದೇಶದಲ್ಲಿ ಮಂದಿರಗಳು ಮುಂಚೆಯೇ ಇದ್ದವು. ಹಾಗಾಗಿ ರಾಮಮಂದಿರ ಒಂದು ಪಕ್ಷದ ಅಜೆಂಡಾವಾಗಬೇಕಿಲ್ಲ ಬದಲಿಗೆ ಬಡವರ, ಜನಸಾಮಾನ್ಯರ ಅಭಿವೃದ್ದಿ, ಯುವಜನರಿಗೆ ಉದ್ಯೋಗ, ರೈತರಿಗೆ ನ್ಯಾಯ ಎಂಬುದು ಅಜೆಂಡಾವಾಗಬೇಕಿದೆ. ಆದರೆ ಅವರ ಬಳಿ ಅದಿಲ್ಲ. ರಾಮಮಂದಿರ ಕಟ್ಟಲು ಇವರು ಬೇಕಾಗಿಲ್ಲ. ರಾಮ ಯಾರಪ್ಪನ ಆಸ್ತಿಯಲ್ಲ, ರಾಮ ಈ ದೇಶದ ಜನರ ಹೃದಯದಲ್ಲಿದ್ದಾನೆ. ರೈತರು-ಕಾರ್ಮಿಕರು ರಾಮನನ್ನು ಹುಡುಕಲು ಮಂದಿರಕ್ಕೆ ಹೋಗಬೇಕಾಗಿಲ್ಲ, ಹೊಲದಲ್ಲಿ ಮತ್ತು ಇತರೆಡೆ ದುಡಿಯುವ ರೈತ ಕಾರ್ಮಿಕರು ಬೆಳಿಗ್ಗೆಯಿಂದ ಸಂಜೆಯವರೆಗೆ ರಾಮನ ಜೊತೆಗಿರುತ್ತಾರೆ. ಅವರ ರಾಮ ಅವರ ದುಡಿಮೆಯಲ್ಲಿದ್ದಾನೆ, ಅವರ ಶ್ರಮದಲ್ಲಿದ್ದಾನೆ, ಅವರ ಬೆವರಿನಲ್ಲಿದ್ದಾನೆ ಮತ್ತು ಅವರ ಹೃದಯದಲ್ಲಿದ್ದಾನೆ ಮತ್ತು ಅವರಿಗಾಗಿ ರಾಮನ ಹೆಸರಿನಲ್ಲಿ ಜನರನ್ನು ಒಡೆದು ಆಳಬೇಕಾಗಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದರು.

ಈ ಆಂದೋಲನ ಮೂರು ಕರಾಳ ಕಾನೂನುಗಳ ರದ್ಧತಿಗೆ ಮತ್ತು ಎಂಎಸ್‌ಪಿ ಜಾರಿಗಾಗಿ ಆರಂಭವಾಯಿತು. ಆದರೆ ಇಂದು ಅದು ಅಷ್ಟಕ್ಕೆ ಸೀಮಿತವಾಗದೆ ಎಲ್ಲಾ ಜನವರ್ಗಗಳ ಆಂದೋಲನವಾಗಿ ಮಾರ್ಪಟ್ಟಿದೆ. ರೈತರು-ಕಾರ್ಮಿಕರು-ದಲಿತರು ಮತ್ತುಎಲ್ಲಾ ಶೋಷಿತರ ಹೋರಾಟವಾಗಿ ಮಾರ್ಪಟ್ಟಿದೆ. ಇದು ಸುಧೀರ್ಘ ಹೋರಾಟವಾಗಲಿದೆ. ನೀವು ದೆಹಲಿತನಕ ಬರಲು ಸಾಧ್ಯವಾಗದಿರಬಹುದು. ಹಾಗಾಗಿ ಇಲ್ಲಿರುವ ರೈತರು ಕಾರ್ಮಿಕರು ಸೇರಿ ಬೆಂಗಳೂರನ್ನೇ ದೆಹಲಿ ಮಾಡಬೇಕಾಗಿದೆ. ಉತ್ತರ ಭಾರತದ ರೈತರು ದೆಹಲಿಯಲ್ಲಿ ಯಾವ ರೀತಿ ಸುತ್ತುವರಿದಿದ್ದಾರೋ, ಅದೇ ರೀತಿ ಬೆಂಗಳೂರನ್ನು ಕರ್ನಾಟಕದ ಎಲ್ಲಾ ರೈತ-ಕಾರ್ಮಿಕರು ಮುತ್ತಿಗೆ ಹಾಕಿ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ಯುದುವೀರ್ ಸಿಂಗ್ ಮನವಿ ಮಾಡಿದರು.

ಇದು ಒಂದು ದಿನದ ಹೋರಾಟ ಮತ್ತು ಭಾಷಣಕ್ಕೆ ಸೀಮಿತವಾಗಬಾರದು. ಇಲ್ಲಿ ಒಂದು ಖಾಯಂ ಹೋರಾಟದ ಟೆಂಟ್ ಹಾಕಬೇಕು. ನಾನು ಕರ್ನಾಟಕಕ್ಕೆ ಹಲವಾರು ಬಂದಿದ್ದೇನೆ. ಪ್ರೊ.ನಂಜುಂಡಸ್ವಾಮಿಯವರೊಂದಿಗೆ ಹೋರಾಟ ನಡೆಸಿದ್ದೇವೆ. ಇದು ಪವಿತ್ರ ಜಾಗವಾಗಿದ್ದು, ಶೋಷಣೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಲ್ಲಿ ನೀವು ಸುದೀರ್ಘ ಹೋರಾಟ ನಡೆಸುವ ಮೂಲಕ ಬೆಂಗಳೂರಿನಿಂದ ದೇಶಕ್ಕೆ ಉತ್ತಮ ಸಂದೇಶ ನೀಡುತ್ತಿರಿ ಎಂದು ನಂಬಿದ್ದೇನೆ ಎಂದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...