Homeಮುಖಪುಟಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

- Advertisement -
- Advertisement -

ರೈತ ಆಂದೋಲನಕ್ಕೆ ನೆರವು ನೀಡಿದವರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಒಬ್ಬ ಹೋಟೆಲ್ ಮಾಲೀಕ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕೆ ಅವರ ಮೇಲೆ ಇಡಿ ದಾಳಿ ಮಾಡಲಾಗಿದೆ. ಇದು ರಾಜ್ಯ ಆಳುವ ಲಕ್ಷಣವೇ? ಇವರು ಅಧಿಕಾರಕ್ಕೆ ಬರಲು ಕಾರಣರಾದ ನಾವು ನೀವು ಈ ಕುರಿತು ಯೋಚಿಸಬೇಕು? ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್ ಕರೆ ನೀಡಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರ್ಕಾರ ಮೊದಲು ಎಂಎಸ್‌ಪಿ ಕೊಡುತ್ತೇವೆ, ಖಾಸಗಿ ಮಂಡಿಗಳ ವಿರುದ್ಧ, ಗುತ್ತಿಗೆ ಕೃಷಿ ಪದ್ದತಿ ವಿರುದ್ಧ ಮಾತನಾಡಿದರು. ಎಪಿಎಂಪಿ ಬಲಪಡಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರು. ಆದರೆ ಇಂದು ಅದಕ್ಕೆ ಬೆನ್ನು ತಿರುಗಿಸಿ ರೈತರ ವಿರುದ್ಧ ಸಮರ ಹೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಜಾತಂತ್ರ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆಯೆಂದು ಹೇಳಲಾಗುತ್ತಿದೆ. ಆದರೆ ಫ್ಯಾಸಿಸ್ಟರು ಯಾವ ರೀತಿ ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ. ಗೌರಿ ಲಂಕೇಶ್‌ರವರನ್ನು ಗುಂಡು ಹೊಡೆದು ಹತ್ಯೆ ಮಾಡಲಾಯಿತು. ಅವರು ಯಾವ ತಪ್ಪು ಮಾಡಿದ್ದರು? ಅನ್ಯಾಯದ ವಿರುದ್ಧವಾಗಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಮಾತನಾಡುವುದು ತಪ್ಪೇ? ಏನು ತಪ್ಪಿತ್ತು ಎಂದು ದಿಶಾರವಿಯೆಂಬ ಪುಟ್ಟು ಹುಡುಗಿಯನ್ನು ಬಂಧಿಸಿ ಹಿಂಸಿಸಲಾಯಿತು? ಇಂದು ಪೊಲೀಸರನ್ನು ಮತ್ತು ಸಂಘಪರಿವಾರದ ಗೂಂಡಾಗಳನ್ನು ಮುಂದಿಟ್ಟುಕೊಂಡು ಆಂದೋಲನವನ್ನು ದಮನಿಸುತ್ತಿರುವುದನ್ನು ದೇಶವೇ ನೋಡುತ್ತಿದೆ ಎಂದರು.

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ. ಶತಮಾನಗಳಿಂದ ನಾವು ಧರ್ಮದ ಗುಲಾಮರಾಗಿ ಬದುಕಿದ್ದೇವೆ, ಇಂದು ಮತ್ತೆ ಅದೇ ಧರ್ಮದ ಗುಲಾಮಗಿರಿಗೆ ತಳ್ಳಲಾಗುತ್ತಿದೆ. ಈ ಸರ್ಕಾರ ರಾಮಮಂದಿರದ ಅಜೆಂಡಾ ಇಟ್ಟುಕೊಂಡಿದೆ. ನಮ್ಮ ದೇಶದಲ್ಲಿ ಮಂದಿರಗಳು ಮುಂಚೆಯೇ ಇದ್ದವು. ಹಾಗಾಗಿ ರಾಮಮಂದಿರ ಒಂದು ಪಕ್ಷದ ಅಜೆಂಡಾವಾಗಬೇಕಿಲ್ಲ ಬದಲಿಗೆ ಬಡವರ, ಜನಸಾಮಾನ್ಯರ ಅಭಿವೃದ್ದಿ, ಯುವಜನರಿಗೆ ಉದ್ಯೋಗ, ರೈತರಿಗೆ ನ್ಯಾಯ ಎಂಬುದು ಅಜೆಂಡಾವಾಗಬೇಕಿದೆ. ಆದರೆ ಅವರ ಬಳಿ ಅದಿಲ್ಲ. ರಾಮಮಂದಿರ ಕಟ್ಟಲು ಇವರು ಬೇಕಾಗಿಲ್ಲ. ರಾಮ ಯಾರಪ್ಪನ ಆಸ್ತಿಯಲ್ಲ, ರಾಮ ಈ ದೇಶದ ಜನರ ಹೃದಯದಲ್ಲಿದ್ದಾನೆ. ರೈತರು-ಕಾರ್ಮಿಕರು ರಾಮನನ್ನು ಹುಡುಕಲು ಮಂದಿರಕ್ಕೆ ಹೋಗಬೇಕಾಗಿಲ್ಲ, ಹೊಲದಲ್ಲಿ ಮತ್ತು ಇತರೆಡೆ ದುಡಿಯುವ ರೈತ ಕಾರ್ಮಿಕರು ಬೆಳಿಗ್ಗೆಯಿಂದ ಸಂಜೆಯವರೆಗೆ ರಾಮನ ಜೊತೆಗಿರುತ್ತಾರೆ. ಅವರ ರಾಮ ಅವರ ದುಡಿಮೆಯಲ್ಲಿದ್ದಾನೆ, ಅವರ ಶ್ರಮದಲ್ಲಿದ್ದಾನೆ, ಅವರ ಬೆವರಿನಲ್ಲಿದ್ದಾನೆ ಮತ್ತು ಅವರ ಹೃದಯದಲ್ಲಿದ್ದಾನೆ ಮತ್ತು ಅವರಿಗಾಗಿ ರಾಮನ ಹೆಸರಿನಲ್ಲಿ ಜನರನ್ನು ಒಡೆದು ಆಳಬೇಕಾಗಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದರು.

ಈ ಆಂದೋಲನ ಮೂರು ಕರಾಳ ಕಾನೂನುಗಳ ರದ್ಧತಿಗೆ ಮತ್ತು ಎಂಎಸ್‌ಪಿ ಜಾರಿಗಾಗಿ ಆರಂಭವಾಯಿತು. ಆದರೆ ಇಂದು ಅದು ಅಷ್ಟಕ್ಕೆ ಸೀಮಿತವಾಗದೆ ಎಲ್ಲಾ ಜನವರ್ಗಗಳ ಆಂದೋಲನವಾಗಿ ಮಾರ್ಪಟ್ಟಿದೆ. ರೈತರು-ಕಾರ್ಮಿಕರು-ದಲಿತರು ಮತ್ತುಎಲ್ಲಾ ಶೋಷಿತರ ಹೋರಾಟವಾಗಿ ಮಾರ್ಪಟ್ಟಿದೆ. ಇದು ಸುಧೀರ್ಘ ಹೋರಾಟವಾಗಲಿದೆ. ನೀವು ದೆಹಲಿತನಕ ಬರಲು ಸಾಧ್ಯವಾಗದಿರಬಹುದು. ಹಾಗಾಗಿ ಇಲ್ಲಿರುವ ರೈತರು ಕಾರ್ಮಿಕರು ಸೇರಿ ಬೆಂಗಳೂರನ್ನೇ ದೆಹಲಿ ಮಾಡಬೇಕಾಗಿದೆ. ಉತ್ತರ ಭಾರತದ ರೈತರು ದೆಹಲಿಯಲ್ಲಿ ಯಾವ ರೀತಿ ಸುತ್ತುವರಿದಿದ್ದಾರೋ, ಅದೇ ರೀತಿ ಬೆಂಗಳೂರನ್ನು ಕರ್ನಾಟಕದ ಎಲ್ಲಾ ರೈತ-ಕಾರ್ಮಿಕರು ಮುತ್ತಿಗೆ ಹಾಕಿ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ಯುದುವೀರ್ ಸಿಂಗ್ ಮನವಿ ಮಾಡಿದರು.

ಇದು ಒಂದು ದಿನದ ಹೋರಾಟ ಮತ್ತು ಭಾಷಣಕ್ಕೆ ಸೀಮಿತವಾಗಬಾರದು. ಇಲ್ಲಿ ಒಂದು ಖಾಯಂ ಹೋರಾಟದ ಟೆಂಟ್ ಹಾಕಬೇಕು. ನಾನು ಕರ್ನಾಟಕಕ್ಕೆ ಹಲವಾರು ಬಂದಿದ್ದೇನೆ. ಪ್ರೊ.ನಂಜುಂಡಸ್ವಾಮಿಯವರೊಂದಿಗೆ ಹೋರಾಟ ನಡೆಸಿದ್ದೇವೆ. ಇದು ಪವಿತ್ರ ಜಾಗವಾಗಿದ್ದು, ಶೋಷಣೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಲ್ಲಿ ನೀವು ಸುದೀರ್ಘ ಹೋರಾಟ ನಡೆಸುವ ಮೂಲಕ ಬೆಂಗಳೂರಿನಿಂದ ದೇಶಕ್ಕೆ ಉತ್ತಮ ಸಂದೇಶ ನೀಡುತ್ತಿರಿ ಎಂದು ನಂಬಿದ್ದೇನೆ ಎಂದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...