Homeಮುಖಪುಟಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

- Advertisement -
- Advertisement -

ರೈತ ಆಂದೋಲನಕ್ಕೆ ನೆರವು ನೀಡಿದವರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಒಬ್ಬ ಹೋಟೆಲ್ ಮಾಲೀಕ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕೆ ಅವರ ಮೇಲೆ ಇಡಿ ದಾಳಿ ಮಾಡಲಾಗಿದೆ. ಇದು ರಾಜ್ಯ ಆಳುವ ಲಕ್ಷಣವೇ? ಇವರು ಅಧಿಕಾರಕ್ಕೆ ಬರಲು ಕಾರಣರಾದ ನಾವು ನೀವು ಈ ಕುರಿತು ಯೋಚಿಸಬೇಕು? ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್ ಕರೆ ನೀಡಿದರು.

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರ್ಕಾರ ಮೊದಲು ಎಂಎಸ್‌ಪಿ ಕೊಡುತ್ತೇವೆ, ಖಾಸಗಿ ಮಂಡಿಗಳ ವಿರುದ್ಧ, ಗುತ್ತಿಗೆ ಕೃಷಿ ಪದ್ದತಿ ವಿರುದ್ಧ ಮಾತನಾಡಿದರು. ಎಪಿಎಂಪಿ ಬಲಪಡಿಸುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದರು. ಆದರೆ ಇಂದು ಅದಕ್ಕೆ ಬೆನ್ನು ತಿರುಗಿಸಿ ರೈತರ ವಿರುದ್ಧ ಸಮರ ಹೂಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ದೇಶದಲ್ಲಿ ಪ್ರಜಾತಂತ್ರ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆಯೆಂದು ಹೇಳಲಾಗುತ್ತಿದೆ. ಆದರೆ ಫ್ಯಾಸಿಸ್ಟರು ಯಾವ ರೀತಿ ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದು ಕರ್ನಾಟಕದ ಜನರಿಗೆ ತಿಳಿದಿದೆ. ಗೌರಿ ಲಂಕೇಶ್‌ರವರನ್ನು ಗುಂಡು ಹೊಡೆದು ಹತ್ಯೆ ಮಾಡಲಾಯಿತು. ಅವರು ಯಾವ ತಪ್ಪು ಮಾಡಿದ್ದರು? ಅನ್ಯಾಯದ ವಿರುದ್ಧವಾಗಿ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಮಾತನಾಡುವುದು ತಪ್ಪೇ? ಏನು ತಪ್ಪಿತ್ತು ಎಂದು ದಿಶಾರವಿಯೆಂಬ ಪುಟ್ಟು ಹುಡುಗಿಯನ್ನು ಬಂಧಿಸಿ ಹಿಂಸಿಸಲಾಯಿತು? ಇಂದು ಪೊಲೀಸರನ್ನು ಮತ್ತು ಸಂಘಪರಿವಾರದ ಗೂಂಡಾಗಳನ್ನು ಮುಂದಿಟ್ಟುಕೊಂಡು ಆಂದೋಲನವನ್ನು ದಮನಿಸುತ್ತಿರುವುದನ್ನು ದೇಶವೇ ನೋಡುತ್ತಿದೆ ಎಂದರು.

ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ. ಶತಮಾನಗಳಿಂದ ನಾವು ಧರ್ಮದ ಗುಲಾಮರಾಗಿ ಬದುಕಿದ್ದೇವೆ, ಇಂದು ಮತ್ತೆ ಅದೇ ಧರ್ಮದ ಗುಲಾಮಗಿರಿಗೆ ತಳ್ಳಲಾಗುತ್ತಿದೆ. ಈ ಸರ್ಕಾರ ರಾಮಮಂದಿರದ ಅಜೆಂಡಾ ಇಟ್ಟುಕೊಂಡಿದೆ. ನಮ್ಮ ದೇಶದಲ್ಲಿ ಮಂದಿರಗಳು ಮುಂಚೆಯೇ ಇದ್ದವು. ಹಾಗಾಗಿ ರಾಮಮಂದಿರ ಒಂದು ಪಕ್ಷದ ಅಜೆಂಡಾವಾಗಬೇಕಿಲ್ಲ ಬದಲಿಗೆ ಬಡವರ, ಜನಸಾಮಾನ್ಯರ ಅಭಿವೃದ್ದಿ, ಯುವಜನರಿಗೆ ಉದ್ಯೋಗ, ರೈತರಿಗೆ ನ್ಯಾಯ ಎಂಬುದು ಅಜೆಂಡಾವಾಗಬೇಕಿದೆ. ಆದರೆ ಅವರ ಬಳಿ ಅದಿಲ್ಲ. ರಾಮಮಂದಿರ ಕಟ್ಟಲು ಇವರು ಬೇಕಾಗಿಲ್ಲ. ರಾಮ ಯಾರಪ್ಪನ ಆಸ್ತಿಯಲ್ಲ, ರಾಮ ಈ ದೇಶದ ಜನರ ಹೃದಯದಲ್ಲಿದ್ದಾನೆ. ರೈತರು-ಕಾರ್ಮಿಕರು ರಾಮನನ್ನು ಹುಡುಕಲು ಮಂದಿರಕ್ಕೆ ಹೋಗಬೇಕಾಗಿಲ್ಲ, ಹೊಲದಲ್ಲಿ ಮತ್ತು ಇತರೆಡೆ ದುಡಿಯುವ ರೈತ ಕಾರ್ಮಿಕರು ಬೆಳಿಗ್ಗೆಯಿಂದ ಸಂಜೆಯವರೆಗೆ ರಾಮನ ಜೊತೆಗಿರುತ್ತಾರೆ. ಅವರ ರಾಮ ಅವರ ದುಡಿಮೆಯಲ್ಲಿದ್ದಾನೆ, ಅವರ ಶ್ರಮದಲ್ಲಿದ್ದಾನೆ, ಅವರ ಬೆವರಿನಲ್ಲಿದ್ದಾನೆ ಮತ್ತು ಅವರ ಹೃದಯದಲ್ಲಿದ್ದಾನೆ ಮತ್ತು ಅವರಿಗಾಗಿ ರಾಮನ ಹೆಸರಿನಲ್ಲಿ ಜನರನ್ನು ಒಡೆದು ಆಳಬೇಕಾಗಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದರು.

ಈ ಆಂದೋಲನ ಮೂರು ಕರಾಳ ಕಾನೂನುಗಳ ರದ್ಧತಿಗೆ ಮತ್ತು ಎಂಎಸ್‌ಪಿ ಜಾರಿಗಾಗಿ ಆರಂಭವಾಯಿತು. ಆದರೆ ಇಂದು ಅದು ಅಷ್ಟಕ್ಕೆ ಸೀಮಿತವಾಗದೆ ಎಲ್ಲಾ ಜನವರ್ಗಗಳ ಆಂದೋಲನವಾಗಿ ಮಾರ್ಪಟ್ಟಿದೆ. ರೈತರು-ಕಾರ್ಮಿಕರು-ದಲಿತರು ಮತ್ತುಎಲ್ಲಾ ಶೋಷಿತರ ಹೋರಾಟವಾಗಿ ಮಾರ್ಪಟ್ಟಿದೆ. ಇದು ಸುಧೀರ್ಘ ಹೋರಾಟವಾಗಲಿದೆ. ನೀವು ದೆಹಲಿತನಕ ಬರಲು ಸಾಧ್ಯವಾಗದಿರಬಹುದು. ಹಾಗಾಗಿ ಇಲ್ಲಿರುವ ರೈತರು ಕಾರ್ಮಿಕರು ಸೇರಿ ಬೆಂಗಳೂರನ್ನೇ ದೆಹಲಿ ಮಾಡಬೇಕಾಗಿದೆ. ಉತ್ತರ ಭಾರತದ ರೈತರು ದೆಹಲಿಯಲ್ಲಿ ಯಾವ ರೀತಿ ಸುತ್ತುವರಿದಿದ್ದಾರೋ, ಅದೇ ರೀತಿ ಬೆಂಗಳೂರನ್ನು ಕರ್ನಾಟಕದ ಎಲ್ಲಾ ರೈತ-ಕಾರ್ಮಿಕರು ಮುತ್ತಿಗೆ ಹಾಕಿ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ಯುದುವೀರ್ ಸಿಂಗ್ ಮನವಿ ಮಾಡಿದರು.

ಇದು ಒಂದು ದಿನದ ಹೋರಾಟ ಮತ್ತು ಭಾಷಣಕ್ಕೆ ಸೀಮಿತವಾಗಬಾರದು. ಇಲ್ಲಿ ಒಂದು ಖಾಯಂ ಹೋರಾಟದ ಟೆಂಟ್ ಹಾಕಬೇಕು. ನಾನು ಕರ್ನಾಟಕಕ್ಕೆ ಹಲವಾರು ಬಂದಿದ್ದೇನೆ. ಪ್ರೊ.ನಂಜುಂಡಸ್ವಾಮಿಯವರೊಂದಿಗೆ ಹೋರಾಟ ನಡೆಸಿದ್ದೇವೆ. ಇದು ಪವಿತ್ರ ಜಾಗವಾಗಿದ್ದು, ಶೋಷಣೆ ವಿರುದ್ಧದ ಹೋರಾಟಕ್ಕೆ ಸಾಕ್ಷಿಯಾಗಿದೆ. ಇಲ್ಲಿ ನೀವು ಸುದೀರ್ಘ ಹೋರಾಟ ನಡೆಸುವ ಮೂಲಕ ಬೆಂಗಳೂರಿನಿಂದ ದೇಶಕ್ಕೆ ಉತ್ತಮ ಸಂದೇಶ ನೀಡುತ್ತಿರಿ ಎಂದು ನಂಬಿದ್ದೇನೆ ಎಂದರು.

ಇಂದಿನ ಹೋರಾಟದಲ್ಲಿ ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...