Homeರಾಷ್ಟ್ರೀಯ2019 ರಿಂದ ಮಾಧ್ಯಮ ಜಾಹೀರಾತಿಗಾಗಿ ಬರೋಬ್ಬರಿ ₹900 ಕೋಟಿ ಖರ್ಚು ಮಾಡಿದ ಮೋದಿ ಸರ್ಕಾರ!

2019 ರಿಂದ ಮಾಧ್ಯಮ ಜಾಹೀರಾತಿಗಾಗಿ ಬರೋಬ್ಬರಿ ₹900 ಕೋಟಿ ಖರ್ಚು ಮಾಡಿದ ಮೋದಿ ಸರ್ಕಾರ!

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು 2019 ರಿಂದ ಪತ್ರಿಕೆಗಳು, ಟಿವಿ ಚಾನೆಲ್‌ಗಳು ಮತ್ತು ವೆಬ್ ಪೋರ್ಟಲ್‌ಗಳಲ್ಲಿ ಜಾಹೀರಾತುಗಳಿಗಾಗಿ 900 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಸಂಸದ ದಿಗ್ವಿಜಯ ಸಿಂಗ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ, ಮುದ್ರಣ, ದೂರದರ್ಶನ ಮತ್ತು ಆನ್‌ಲೈನ್ ಜಾಹೀರಾತುಗಳಿಗಾಗಿ ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ ಖರ್ಚು ಮಾಡಿದ ಹಣದ ವರ್ಷವಾರು ವಿವರವನ್ನು ಒದಗಿಸಿದ್ದಾರೆ.(ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟಿವಿ ಜಾಹೀರಾತುಗಳಿಗಾಗಿ ಸುಮಾರು 200 ಕೋಟಿ ರೂ. ವ್ಯಯಿಸಲಾಗಿದ್ದು, ಇದರಲ್ಲಿ 2019-20ರಲ್ಲಿ 270 ಚಾನೆಲ್‌ಗಳಿಗೆ 98.69 ಕೋಟಿ, 2021-21ರಲ್ಲಿ 318 ಚಾನೆಲ್‌ಗಳಿಗೆ 69.81 ಕೋಟಿ, 2021-22ರಲ್ಲಿ 265 ಚಾನೆಲ್‌ಗಳಿಗೆ 29.3 ಕೋಟಿ, ಉಳಿದಂತೆ 1.96 ಕೋಟಿ ರೂ.ಗಳನ್ನು ಪ್ರಸಕ್ತ ಹಣಕಾಸು ವರ್ಷದ ಜೂನ್ ತಿಂಗಳವರೆಗೆ ಖರ್ಚ ಮಾಡಲಾಗಿದೆ.

2019-20ರಲ್ಲಿ 5,326 ಪತ್ರಿಕೆಗಳಿಗೆ 295.05 ಕೋಟಿ ರೂಪಾಯಿಗಳನ್ನು ನೀಡುವುದರೊಂದಿಗೆ, ಮುದ್ರಣ ಜಾಹೀರಾತುಗಳ ಮೇಲೆ ಸರ್ಕಾರವು 690.83 ಕೋಟಿ ರೂ. ಖರ್ಚು ಮಾಡಿದೆ. 2021-22 ರಲ್ಲಿ, ಜಾಹೀರಾತು ಹಣವನ್ನು ಸ್ವೀಕರಿಸಿದ ಪೇಪರ್‌ಗಳ ಸಂಖ್ಯೆ 6,224 ಕ್ಕೆ ಏರಿದ್ದು, ಆದರೆ ಜಾಹಿರಾತಿಗೆ ಖರ್ಚು ಮಾಡಿದ ಮೊತ್ತವು 179.04 ಕೋಟಿಗೆ ಇಳಿದಿದೆ.

ಇದನ್ನೂ ಓದಿ: ಹರ್ಡ್-ಡೆಪ್ ಪ್ರಕರಣ; ಸಾಮಾಜಿಕ ಮಾಧ್ಯಮಗಳ ವಿಚಾರಣೆಯಲ್ಲಿ ಪುಟಿದೆದ್ದ ಮಹಿಳಾ ವಿರೋಧಿ ಧ್ವನಿ

2019 ರಿಂದ ಡಿಜಿಟಲ್ ಮಾಧ್ಯಮದಲ್ಲಿ ಜಾಹೀರಾತುಗಳಿಗಾಗಿ 20.58 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಹಣ ನೀಡಿದ ಟಿವಿ ಚಾನೆಲ್‌ಗಳು, ಪತ್ರಿಕೆಗಳು ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಪಟ್ಟಿ ಜಾಹೀರಾತು ನಿರ್ದೇಶನಾಲಯ ಮತ್ತು ದೃಶ್ಯ ಪ್ರಚಾರದ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...