Homeರಾಷ್ಟ್ರೀಯಹಿಂದೂಗಳಿಗೆ ‘ಅಲ್ಪಸಂಖ್ಯಾತ’ ಸ್ಥಾನಮಾನ ನೀಡಲು ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಮೋದಿ ಸರ್ಕಾರ

ಹಿಂದೂಗಳಿಗೆ ‘ಅಲ್ಪಸಂಖ್ಯಾತ’ ಸ್ಥಾನಮಾನ ನೀಡಲು ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಮೋದಿ ಸರ್ಕಾರ

- Advertisement -
- Advertisement -

ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ಒಕ್ಕೂಟ ಸರ್ಕಾರಕ್ಕೆ ಅಧಿಕಾರವಿದೆ ಮತ್ತು ಈ ನಿಟ್ಟಿನಲ್ಲಿ ಯಾವುದೇ ನಿರ್ಧಾರವನ್ನು ರಾಜ್ಯಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಚರ್ಚಿಸಿದ ನಂತರ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಹೊಸ ಅಫಿಡವಿಟ್‌ನಲ್ಲಿ, ಒಕ್ಕೂಟ ಸರ್ಕಾರವು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆ-1992 ರ ಸೆಕ್ಷನ್ 2C ಅಡಿಯಲ್ಲಿ ಆರು ಸಮುದಾಯಗಳನ್ನು ಅಲ್ಪಸಂಖ್ಯಾತ ಸಮುದಾಯಗಳೆಂದು ಸೂಚಿಸಿದೆ ಎಂದು ಸಚಿವಾಲಯ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಕೀಲ ಅಶ್ವಿನಿ ಉಪಾಧ್ಯಾಯ ಅವರ ಅರ್ಜಿಯ ಮೇರೆಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, “ಅರ್ಜಿಯಲ್ಲಿ ಒಳಗೊಂಡಿರುವ ಪ್ರಶ್ನೆಯು ದೇಶದಾದ್ಯಂತ ವ್ಯಾಪಕವಾದ ಪರಿಣಾಮಗಳನ್ನು ಬೀರಿದೆ. ಆದ್ದರಿಂದ ಮಧ್ಯಸ್ಥಗಾರರೊಂದಿಗೆ ವಿವರವಾದ ಚರ್ಚೆಯಿಲ್ಲದೆ ತೆಗೆದುಕೊಂಡ ಯಾವುದೇ ತೀರ್ಮಾನಗಳು ದೇಶದಾದ್ಯಂತ ಅನಿರೀಕ್ಷಿತ ತೊಡಕುಗಳು ಉಂಟಾಗಬಹುದು” ಎಂದು ಹೇಳಿದೆ.

ಇದನ್ನೂ ಓದಿ: ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಅಲ್ಪಸಂಖ್ಯಾತರು ಎಂದು ಗುರುತಿಸುವ ಅಧಿಕಾರ ಒಕ್ಕೂಟ ಸರ್ಕಾರಕ್ಕೆ ಇದೆಯಾದರೂ, ಈ ರೀತಿಯ ಅರ್ಜಿಗಳಲ್ಲಿ ಪ್ರಸ್ತಾಪಿಸಲಾದ ವಿಷಯಗಳಿಗೆ ಸಂಬಂಧಿಸಿದಂತೆ ಒಕ್ಕೂಟ ಸರ್ಕಾರ ರೂಪಿಸುವ ನಿಲುವನ್ನು ರಾಜ್ಯ ಸರ್ಕಾರಗಳು ಮತ್ತು ಇತರರೊಂದಿಗೆ ವ್ಯಾಪಕವಾದ ಸಮಾಲೋಚನೆಯ ನಂತರ ಅಂತಿಮಗೊಳಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

“ಇಂತಹ ಪ್ರಮುಖ ಸಮಸ್ಯೆಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಯಾವುದೇ ಅನಪೇಕ್ಷಿತ ತೊಡಕುಗಳನ್ನು ನಿವಾರಿಸುವ ಹಲವಾರು ಸಮಾಜಶಾಸ್ತ್ರೀಯ ಮತ್ತು ಇತರ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಒಕ್ಕೂಟ ಸರ್ಕಾರವು ಈ ನ್ಯಾಯಾಲಯದ ಮುಂದೆ ಪರಿಗಣಿತ ದೃಷ್ಟಿಕೋನವನ್ನು ಇರಿಸಲು ಸಾಧ್ಯವಾಗುತ್ತದೆ ಎಂದು ಇದು ಖಚಿತಪಡಿಸುತ್ತದೆ.

“ಇಂತಹ ಪ್ರಮುಖ ವಿಷಯಕ್ಕೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಯಾವುದೇ ಅನಿರೀಕ್ಷಿತ ತೊಡಕುಗಳನ್ನು ನಿವಾರಿಸುವ ಹಲವಾರು ಸಮಾಜಶಾಸ್ತ್ರೀಯ ಮತ್ತು ಇತರ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳುವ ಮೂಲಕ ಕೇಂದ್ರ ಸರ್ಕಾರವು ಈ ನ್ಯಾಯಾಲಯದ ಮುಂದೆ ಪರಿಗಣಿತ ದೃಷ್ಟಿಕೋನವನ್ನು ಇರಿಸಲು ಸಾಧ್ಯವಾಗುತ್ತದೆ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಕರೆ: ಲಿಂಗತ್ವ ಅಲ್ಪಸಂಖ್ಯಾತರಿಗೆ 1% ಮೀಸಲು

ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ, “ದೇಶದ 10 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ” ಎಂದು ವಾದಿಸಿದೆ. ಹೀಗಾಗಿ ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯು ಮನವಿ ಮಾಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಲು ಒಕ್ಕೂಟ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶಗಳನ್ನು ಸುಪ್ರೀಂಕೋರ್ಟ್‌ ನೀಡಿತ್ತು.

ಇಂತಹ ಪ್ರಮುಖ ಸಮಸ್ಯೆಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಯಾವುದೇ ಅನಿರೀಕ್ಷಿತ ತೊಡಕುಗಳನ್ನು ನಿವಾರಿಸುವ ಹಲವಾರು ಸಾಮಾಜಿಕ, ತಾರ್ಕಿಕ ಮತ್ತು ಇತರ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳುವ ಮೂಲಕ ಸುಪ್ರೀಂಕೋರ್ಟ್‌ ಮುಂದೆ ಪರಿಗಣಿತ ದೃಷ್ಟಿಕೋನವನ್ನು ಇರಿಸಲು ಸಾಧ್ಯವಾಗುತ್ತದೆ ಎಂದು ಸಚಿವಾಲಯವು ಖಚಿತಪಡಿಸಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಎಸ್‌ಪಿ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಅಲ್ಪಸಂಖ್ಯಾತರ ಮೇಲಗೈ

ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಇಂದು (ಮೇ 10) ವಿಚಾರಣೆಗೆ ಮುಂದೂಡಿದೆ. ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಮನವಿಯ ಬಗ್ಗೆ ತನ್ನ ನಿಲುವನ್ನು ದಾಖಲಿಸುವಂತೆ ಭಾರತ ಒಕ್ಕೂಟವನ್ನು ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...