Homeರಾಷ್ಟ್ರೀಯಹಿಂದೂಗಳಿಗೆ ‘ಅಲ್ಪಸಂಖ್ಯಾತ’ ಸ್ಥಾನಮಾನ ನೀಡಲು ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಮೋದಿ ಸರ್ಕಾರ

ಹಿಂದೂಗಳಿಗೆ ‘ಅಲ್ಪಸಂಖ್ಯಾತ’ ಸ್ಥಾನಮಾನ ನೀಡಲು ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಮೋದಿ ಸರ್ಕಾರ

- Advertisement -
- Advertisement -

ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ಒಕ್ಕೂಟ ಸರ್ಕಾರಕ್ಕೆ ಅಧಿಕಾರವಿದೆ ಮತ್ತು ಈ ನಿಟ್ಟಿನಲ್ಲಿ ಯಾವುದೇ ನಿರ್ಧಾರವನ್ನು ರಾಜ್ಯಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಚರ್ಚಿಸಿದ ನಂತರ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಹೊಸ ಅಫಿಡವಿಟ್‌ನಲ್ಲಿ, ಒಕ್ಕೂಟ ಸರ್ಕಾರವು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ ಕಾಯ್ದೆ-1992 ರ ಸೆಕ್ಷನ್ 2C ಅಡಿಯಲ್ಲಿ ಆರು ಸಮುದಾಯಗಳನ್ನು ಅಲ್ಪಸಂಖ್ಯಾತ ಸಮುದಾಯಗಳೆಂದು ಸೂಚಿಸಿದೆ ಎಂದು ಸಚಿವಾಲಯ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಕೀಲ ಅಶ್ವಿನಿ ಉಪಾಧ್ಯಾಯ ಅವರ ಅರ್ಜಿಯ ಮೇರೆಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, “ಅರ್ಜಿಯಲ್ಲಿ ಒಳಗೊಂಡಿರುವ ಪ್ರಶ್ನೆಯು ದೇಶದಾದ್ಯಂತ ವ್ಯಾಪಕವಾದ ಪರಿಣಾಮಗಳನ್ನು ಬೀರಿದೆ. ಆದ್ದರಿಂದ ಮಧ್ಯಸ್ಥಗಾರರೊಂದಿಗೆ ವಿವರವಾದ ಚರ್ಚೆಯಿಲ್ಲದೆ ತೆಗೆದುಕೊಂಡ ಯಾವುದೇ ತೀರ್ಮಾನಗಳು ದೇಶದಾದ್ಯಂತ ಅನಿರೀಕ್ಷಿತ ತೊಡಕುಗಳು ಉಂಟಾಗಬಹುದು” ಎಂದು ಹೇಳಿದೆ.

ಇದನ್ನೂ ಓದಿ: ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಅಲ್ಪಸಂಖ್ಯಾತರು ಎಂದು ಗುರುತಿಸುವ ಅಧಿಕಾರ ಒಕ್ಕೂಟ ಸರ್ಕಾರಕ್ಕೆ ಇದೆಯಾದರೂ, ಈ ರೀತಿಯ ಅರ್ಜಿಗಳಲ್ಲಿ ಪ್ರಸ್ತಾಪಿಸಲಾದ ವಿಷಯಗಳಿಗೆ ಸಂಬಂಧಿಸಿದಂತೆ ಒಕ್ಕೂಟ ಸರ್ಕಾರ ರೂಪಿಸುವ ನಿಲುವನ್ನು ರಾಜ್ಯ ಸರ್ಕಾರಗಳು ಮತ್ತು ಇತರರೊಂದಿಗೆ ವ್ಯಾಪಕವಾದ ಸಮಾಲೋಚನೆಯ ನಂತರ ಅಂತಿಮಗೊಳಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

“ಇಂತಹ ಪ್ರಮುಖ ಸಮಸ್ಯೆಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಯಾವುದೇ ಅನಪೇಕ್ಷಿತ ತೊಡಕುಗಳನ್ನು ನಿವಾರಿಸುವ ಹಲವಾರು ಸಮಾಜಶಾಸ್ತ್ರೀಯ ಮತ್ತು ಇತರ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಒಕ್ಕೂಟ ಸರ್ಕಾರವು ಈ ನ್ಯಾಯಾಲಯದ ಮುಂದೆ ಪರಿಗಣಿತ ದೃಷ್ಟಿಕೋನವನ್ನು ಇರಿಸಲು ಸಾಧ್ಯವಾಗುತ್ತದೆ ಎಂದು ಇದು ಖಚಿತಪಡಿಸುತ್ತದೆ.

“ಇಂತಹ ಪ್ರಮುಖ ವಿಷಯಕ್ಕೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಯಾವುದೇ ಅನಿರೀಕ್ಷಿತ ತೊಡಕುಗಳನ್ನು ನಿವಾರಿಸುವ ಹಲವಾರು ಸಮಾಜಶಾಸ್ತ್ರೀಯ ಮತ್ತು ಇತರ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳುವ ಮೂಲಕ ಕೇಂದ್ರ ಸರ್ಕಾರವು ಈ ನ್ಯಾಯಾಲಯದ ಮುಂದೆ ಪರಿಗಣಿತ ದೃಷ್ಟಿಕೋನವನ್ನು ಇರಿಸಲು ಸಾಧ್ಯವಾಗುತ್ತದೆ” ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಕರೆ: ಲಿಂಗತ್ವ ಅಲ್ಪಸಂಖ್ಯಾತರಿಗೆ 1% ಮೀಸಲು

ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ, “ದೇಶದ 10 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ” ಎಂದು ವಾದಿಸಿದೆ. ಹೀಗಾಗಿ ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯು ಮನವಿ ಮಾಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಲು ಒಕ್ಕೂಟ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶಗಳನ್ನು ಸುಪ್ರೀಂಕೋರ್ಟ್‌ ನೀಡಿತ್ತು.

ಇಂತಹ ಪ್ರಮುಖ ಸಮಸ್ಯೆಗೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಯಾವುದೇ ಅನಿರೀಕ್ಷಿತ ತೊಡಕುಗಳನ್ನು ನಿವಾರಿಸುವ ಹಲವಾರು ಸಾಮಾಜಿಕ, ತಾರ್ಕಿಕ ಮತ್ತು ಇತರ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳುವ ಮೂಲಕ ಸುಪ್ರೀಂಕೋರ್ಟ್‌ ಮುಂದೆ ಪರಿಗಣಿತ ದೃಷ್ಟಿಕೋನವನ್ನು ಇರಿಸಲು ಸಾಧ್ಯವಾಗುತ್ತದೆ ಎಂದು ಸಚಿವಾಲಯವು ಖಚಿತಪಡಿಸಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಎಸ್‌ಪಿ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಅಲ್ಪಸಂಖ್ಯಾತರ ಮೇಲಗೈ

ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಇಂದು (ಮೇ 10) ವಿಚಾರಣೆಗೆ ಮುಂದೂಡಿದೆ. ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಮನವಿಯ ಬಗ್ಗೆ ತನ್ನ ನಿಲುವನ್ನು ದಾಖಲಿಸುವಂತೆ ಭಾರತ ಒಕ್ಕೂಟವನ್ನು ಕೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...