Homeಮುಖಪುಟಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

- Advertisement -
- Advertisement -

1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಿಂದ ‘ಭಾರತ ರತ್ನ’ ಪ್ರಶಸ್ತಿ ಪಡೆದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು, “ಕೇಂದ್ರ ಸರ್ಕಾರವು ವಿಶ್ವದ ಅತ್ಯಂತ ಭಯಾನಕವಾಗಿದೆ.ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ” ಎಂದು ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ‘ದಿ ವೈರ್‌’ಗಾಗಿ ಕರಣ್ ಥಾಪರ್‌ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಅಮರ್ತ್ಯ ಸೇನ್ ಅವರು, “ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರನ್ನು ತುಂಬಾ ಅಸಹ್ಯಕರ ರೀತಿಯಲ್ಲಿ ನಡೆಸಿಕೊಳ್ಳುತ್ತದೆ. ಈ ಭಾರತ ಸರ್ಕಾರದ ದಾಖಲೆಯು ನಿಜವಾಗಿಯೂ ಭಯಾನಕವಾಗಿದೆ” ಎಂದರು.

“ಮೋದಿ ಸರ್ಕಾರವು ಮುಸ್ಲಿಮರನ್ನು ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಮತ್ತು ಸಂಸತ್ತಿನ ಎರಡೂ ಸದನಗಳಲ್ಲಿ ಯಾವುದೇ ಮುಸ್ಲಿಂ ಸಂಸದರನ್ನು ಹೊಂದಿಲ್ಲದಿರುವುದು ಸ್ವೀಕಾರಾರ್ಹವಲ್ಲದ ಅನಾಗರಿಕವಾಗಿರುವಂತಹದ್ದು. ಅನಾಗರಿಕ ಪದವು ನನ್ನ ನಾಲಿಗೆಗೆ ಬರುತ್ತದೆ ಏಕೆಂದರೆ ಅದು ಕೇವಲ ಅನ್ಯಾಯ ಮತ್ತು ತಪ್ಪುಗಳನ್ನು ಮಾಡುತ್ತಿಲ್ಲ. ಇದು ಜನರ ಜೀವನವನ್ನು ಸಂಪೂರ್ಣವಾಗಿ ಅಸ್ಥಿರಗೊಳಿಸುತ್ತಿದೆ ಮತ್ತು ಭಾರತದ ಸಂಸ್ಕೃತಿಯನ್ನು ಸೀಮಿತಗೊಳಿಸುತ್ತದೆ” ಎಂದು ಅವರು ಹೇಳಿದರು.

ಈ ವೇಳೆ ಪ್ರೊಫೆಸರ್ ಸೇನ್ ಅವರು, ಡಿಸೆಂಬರ್ 19 ರಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆಗೆ ಮಾಡಿದ ಹೇಳಿಕೆ ಕುರಿತು ಚರ್ಚಿಸಿದರು ಮತ್ತು ಆ ಬಗ್ಗೆ ವಿಸ್ತಾರವಾಗಿ ವಿವರಿಸಿದರು. “ಇದೀಗ ಭಾರತ ಸರ್ಕಾರ ಎನ್ನುವ ಪದ ಸಂಕುಚಿತ ಅರ್ಥದಲ್ಲಿ ‘ಕೋಮುವಾದಿ’ ಎಂದಾಗಿದೆ. ಈ ಸರ್ಕಾರ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ ಜೊತೆಗೆ ಇದು ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆಯನ್ನು ಪ್ರಚಾರ ಮಾಡುತ್ತಿದೆ ಎಂದರು.

“ಭಾರತವು ಯಾವಾಗಲೂ ಬಹು-ಜನಾಂಗೀಯ ದೇಶವಾಗಿದೆ,” ಮೋದಿ ಸರ್ಕಾರದ ಸಾಮುದಾಯಿಕ ಮತ್ತು ಬಹುಸಂಖ್ಯಾತ ನೀತಿಗಳು ಭಾರತವನ್ನು ಒಡೆಯುತ್ತವೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಇದು ದೇಶವನ್ನು ಧ್ವಂಸಗೊಳಿಸುವಂತಿದೆ. ಸಧ್ಯದ ದೇಶದ ಪರಿಸ್ಥಿತಿಯನ್ನು “ರಾಷ್ಟ್ರೀಯ ವಿಪತ್ತು” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಈ ವೇಳೆ ಸಂದರ್ಶಕರು, ಭಾರತದಲ್ಲಿ ಮುಸ್ಲಿಂ ವಿರೋಧಿ ಪೂರ್ವಾಗ್ರಹ ಬೆಳೆಯುತ್ತಿದೆ ಮತ್ತು ಮುಸ್ಲಿಮರು ಎರಡನೇ ದರ್ಜೆಯ ಪ್ರಜೆಗಳಾಗುತ್ತಿದ್ದಾರೆ ಎಂದು ನಂಬುತ್ತೀರಾ? ಈ ಬಗ್ಗೆ ಚಿಂತಿತರಾಗಿದ್ದೀರಾ? ಎಮದು ಕೇಳಿದಾಗ ಸೇನ್ ಅವರು, “ನಾನು ಈ ಬಗ್ಗೆ ಕೇವಲ ಚಿಂತಿಸುತ್ತಿಲ್ಲ, ವಿಭಿನ್ನತೆಯಲ್ಲಿ ಏಕತೆ ಹೊಂದಿರುವ ಈ ರಾಷ್ಟ್ರದಲ್ಲಿ ಇದ್ದಕ್ಕಿದ್ದಂತೆ ಪ್ರತ್ಯೇಕತೆ ತರುತ್ತಿರುವ ಬಗ್ಗೆ ನಾನು ಭಯಪಡುತ್ತೇನೆ. ಇದ್ದಕ್ಕಿದ್ದಂತೆ ದುರಂತದ ಪ್ರತ್ಯೇಕತೆಯ ಸ್ಥಿತಿಗೆ ಬರುತ್ತಿದೆಲ್ಲಾ” ಎಂದು ಆತಂಕ ವ್ಯಕ್ತಪಡಿಸಿದರು.

“ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದು ಮೂರ್ಖತನವಾಗಿದೆ. ಮುಸ್ಲಿಮರ ಮೇಲಿನ ಈ ದೌರ್ಜನ್ಯ ದೇಶದ ಇತಿಹಾಸ, ವರ್ತಮಾನದ ಅವಹೇಳನ ಮತ್ತು ಧ್ವಂಸಗೊಳಿಸುವುದಾಗಿದೆ. ನಮ್ಮ ದೇಶದ ಬಹುತ್ವವನ್ನು ದ್ವೇಷಿಸುವುದು ಬಹುದೊಡ್ಡ ಮೂರ್ಖತನವಾಗಿದೆ” ಎಂದು ಅವರು ಹೇಳಿದರು.

ಕ್ಯಾಬಿನೆಟ್ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಕೂಡ ಮುಸ್ಲಿಮರನ್ನು “ಟರ್ಮಿಟ್ಸ್” ಮತ್ತು “ಬಾಬರ್ ಕಿ ಔಲಾದ್” ಎಂದು ಕರೆಯುತ್ತಾರೆ ಎಂಬ ಅಂಶವನ್ನು ನೀವು ಹೇಗೆ ನೋಡುತ್ತೀರಿ ಎಂದು ಸಂದ‍ರ್ಶಕರು ಕೇಳಿದಾಗ, ಸೇನ್ ಅವರು, ‘ಅಬ್ಬಾ ಜಾನ್’ ಎಂದು ಉಲ್ಲೇಖಿಸಿ, ಪಾಕಿಸ್ತಾನಕ್ಕೆ ಹೋಗುವಂತೆ ಪದೇ ಪದೇ ಹೇಳುತ್ತಾರೆ ಇದು ಭಾರತೀಯ ರಾಷ್ಟ್ರದ ವಿಕೃತ ತಿಳುವಳಿಕೆಯ ಪ್ರತಿಬಿಂಬವಾಗಿದೆ. “ಮೋದಿ ಸರ್ಕಾರಕ್ಕೆ ರಾಷ್ಟ್ರ ಎಂದರೆ ಏನು ಎಂದು ಅರ್ಥವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಗಳಾದ ಐಎಎಸ್, ಐಎಫ್‌ಎಸ್, ಐಪಿಎಸ್, ಮತ್ತು ಸೇನೆಯಂತಹ ಸರ್ಕಾರಿ ಸೇವೆಗಳಲ್ಲಿ ಮುಸ್ಲಿಮರಿಗೆ ಕಡಿಮೆ ಪ್ರಾತಿನಿಧ್ಯ ಮತ್ತು ಸಂಸತ್ತಿನಲ್ಲಿ ಅವರ ಪ್ರಾತಿನಿಧ್ಯದ ಕೊರತೆಯ ಬಗ್ಗೆ ಸಂದರ್ಶಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೇನ್, “28 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮುಖ್ಯಮಂತ್ರಿಗಳು ಮತ್ತು 15 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮಂತ್ರಿಗಳಿಲ್ಲ. “15% ಮುಸ್ಲಿಮರು ಈ ದೇಶದ ಭಾಗವಾಗಿದ್ದಾರೆ ಅಷ್ಟೇ ಆದರೆ ಅವರಿಗೆ ತಮ್ಮ ಸ್ವಂತ ಹಕ್ಕುಗಳಿಲ್ಲ. ಬಹುಸಂಖ್ಯಾತರ ಜೊತೆ ಸಹಿಷ್ಣುತೆಯಿಂದ ಬದುಕುತ್ತಿದ್ದಾರೆ ಅಷ್ಟೇ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಭಾರತ ಸರ್ಕಾರವು ಇರಾನ್, ಅಫ್ಘಾನಿಸ್ತಾನ ಮತ್ತು ರಷ್ಯಾದಂತಹ ರಾಷ್ಟ್ರಗಳ ಸರ್ಕಾರಗಳೊಂದಿಗೆ ಹೋಲಿಸಿಕೊಂಡು ತಮ್ಮ ಶ್ರೇಷ್ಠತೆ ಬಗ್ಗೆ ಹೇಳಿಕೊಳ್ಳುವುದರ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಸೇನ್ ಅವರು, ಇತರ ಸರ್ಕಾರಗಳು ಕೆಟ್ಟದಾಗಿರಬಹುದು ಎಂಬ ಅಂಶವು ಭಾರತದ ಜನರಿಗೆ ದೊಡ್ಡ ಸಮಾಧಾನವಲ್ಲ ಎಂದು ಸೇನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...