Homeಮುಖಪುಟಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

- Advertisement -
- Advertisement -

1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಿಂದ ‘ಭಾರತ ರತ್ನ’ ಪ್ರಶಸ್ತಿ ಪಡೆದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು, “ಕೇಂದ್ರ ಸರ್ಕಾರವು ವಿಶ್ವದ ಅತ್ಯಂತ ಭಯಾನಕವಾಗಿದೆ.ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ” ಎಂದು ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ‘ದಿ ವೈರ್‌’ಗಾಗಿ ಕರಣ್ ಥಾಪರ್‌ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಅಮರ್ತ್ಯ ಸೇನ್ ಅವರು, “ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರನ್ನು ತುಂಬಾ ಅಸಹ್ಯಕರ ರೀತಿಯಲ್ಲಿ ನಡೆಸಿಕೊಳ್ಳುತ್ತದೆ. ಈ ಭಾರತ ಸರ್ಕಾರದ ದಾಖಲೆಯು ನಿಜವಾಗಿಯೂ ಭಯಾನಕವಾಗಿದೆ” ಎಂದರು.

“ಮೋದಿ ಸರ್ಕಾರವು ಮುಸ್ಲಿಮರನ್ನು ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಮತ್ತು ಸಂಸತ್ತಿನ ಎರಡೂ ಸದನಗಳಲ್ಲಿ ಯಾವುದೇ ಮುಸ್ಲಿಂ ಸಂಸದರನ್ನು ಹೊಂದಿಲ್ಲದಿರುವುದು ಸ್ವೀಕಾರಾರ್ಹವಲ್ಲದ ಅನಾಗರಿಕವಾಗಿರುವಂತಹದ್ದು. ಅನಾಗರಿಕ ಪದವು ನನ್ನ ನಾಲಿಗೆಗೆ ಬರುತ್ತದೆ ಏಕೆಂದರೆ ಅದು ಕೇವಲ ಅನ್ಯಾಯ ಮತ್ತು ತಪ್ಪುಗಳನ್ನು ಮಾಡುತ್ತಿಲ್ಲ. ಇದು ಜನರ ಜೀವನವನ್ನು ಸಂಪೂರ್ಣವಾಗಿ ಅಸ್ಥಿರಗೊಳಿಸುತ್ತಿದೆ ಮತ್ತು ಭಾರತದ ಸಂಸ್ಕೃತಿಯನ್ನು ಸೀಮಿತಗೊಳಿಸುತ್ತದೆ” ಎಂದು ಅವರು ಹೇಳಿದರು.

ಈ ವೇಳೆ ಪ್ರೊಫೆಸರ್ ಸೇನ್ ಅವರು, ಡಿಸೆಂಬರ್ 19 ರಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆಗೆ ಮಾಡಿದ ಹೇಳಿಕೆ ಕುರಿತು ಚರ್ಚಿಸಿದರು ಮತ್ತು ಆ ಬಗ್ಗೆ ವಿಸ್ತಾರವಾಗಿ ವಿವರಿಸಿದರು. “ಇದೀಗ ಭಾರತ ಸರ್ಕಾರ ಎನ್ನುವ ಪದ ಸಂಕುಚಿತ ಅರ್ಥದಲ್ಲಿ ‘ಕೋಮುವಾದಿ’ ಎಂದಾಗಿದೆ. ಈ ಸರ್ಕಾರ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ ಜೊತೆಗೆ ಇದು ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆಯನ್ನು ಪ್ರಚಾರ ಮಾಡುತ್ತಿದೆ ಎಂದರು.

“ಭಾರತವು ಯಾವಾಗಲೂ ಬಹು-ಜನಾಂಗೀಯ ದೇಶವಾಗಿದೆ,” ಮೋದಿ ಸರ್ಕಾರದ ಸಾಮುದಾಯಿಕ ಮತ್ತು ಬಹುಸಂಖ್ಯಾತ ನೀತಿಗಳು ಭಾರತವನ್ನು ಒಡೆಯುತ್ತವೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಇದು ದೇಶವನ್ನು ಧ್ವಂಸಗೊಳಿಸುವಂತಿದೆ. ಸಧ್ಯದ ದೇಶದ ಪರಿಸ್ಥಿತಿಯನ್ನು “ರಾಷ್ಟ್ರೀಯ ವಿಪತ್ತು” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಈ ವೇಳೆ ಸಂದರ್ಶಕರು, ಭಾರತದಲ್ಲಿ ಮುಸ್ಲಿಂ ವಿರೋಧಿ ಪೂರ್ವಾಗ್ರಹ ಬೆಳೆಯುತ್ತಿದೆ ಮತ್ತು ಮುಸ್ಲಿಮರು ಎರಡನೇ ದರ್ಜೆಯ ಪ್ರಜೆಗಳಾಗುತ್ತಿದ್ದಾರೆ ಎಂದು ನಂಬುತ್ತೀರಾ? ಈ ಬಗ್ಗೆ ಚಿಂತಿತರಾಗಿದ್ದೀರಾ? ಎಮದು ಕೇಳಿದಾಗ ಸೇನ್ ಅವರು, “ನಾನು ಈ ಬಗ್ಗೆ ಕೇವಲ ಚಿಂತಿಸುತ್ತಿಲ್ಲ, ವಿಭಿನ್ನತೆಯಲ್ಲಿ ಏಕತೆ ಹೊಂದಿರುವ ಈ ರಾಷ್ಟ್ರದಲ್ಲಿ ಇದ್ದಕ್ಕಿದ್ದಂತೆ ಪ್ರತ್ಯೇಕತೆ ತರುತ್ತಿರುವ ಬಗ್ಗೆ ನಾನು ಭಯಪಡುತ್ತೇನೆ. ಇದ್ದಕ್ಕಿದ್ದಂತೆ ದುರಂತದ ಪ್ರತ್ಯೇಕತೆಯ ಸ್ಥಿತಿಗೆ ಬರುತ್ತಿದೆಲ್ಲಾ” ಎಂದು ಆತಂಕ ವ್ಯಕ್ತಪಡಿಸಿದರು.

“ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದು ಮೂರ್ಖತನವಾಗಿದೆ. ಮುಸ್ಲಿಮರ ಮೇಲಿನ ಈ ದೌರ್ಜನ್ಯ ದೇಶದ ಇತಿಹಾಸ, ವರ್ತಮಾನದ ಅವಹೇಳನ ಮತ್ತು ಧ್ವಂಸಗೊಳಿಸುವುದಾಗಿದೆ. ನಮ್ಮ ದೇಶದ ಬಹುತ್ವವನ್ನು ದ್ವೇಷಿಸುವುದು ಬಹುದೊಡ್ಡ ಮೂರ್ಖತನವಾಗಿದೆ” ಎಂದು ಅವರು ಹೇಳಿದರು.

ಕ್ಯಾಬಿನೆಟ್ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಕೂಡ ಮುಸ್ಲಿಮರನ್ನು “ಟರ್ಮಿಟ್ಸ್” ಮತ್ತು “ಬಾಬರ್ ಕಿ ಔಲಾದ್” ಎಂದು ಕರೆಯುತ್ತಾರೆ ಎಂಬ ಅಂಶವನ್ನು ನೀವು ಹೇಗೆ ನೋಡುತ್ತೀರಿ ಎಂದು ಸಂದ‍ರ್ಶಕರು ಕೇಳಿದಾಗ, ಸೇನ್ ಅವರು, ‘ಅಬ್ಬಾ ಜಾನ್’ ಎಂದು ಉಲ್ಲೇಖಿಸಿ, ಪಾಕಿಸ್ತಾನಕ್ಕೆ ಹೋಗುವಂತೆ ಪದೇ ಪದೇ ಹೇಳುತ್ತಾರೆ ಇದು ಭಾರತೀಯ ರಾಷ್ಟ್ರದ ವಿಕೃತ ತಿಳುವಳಿಕೆಯ ಪ್ರತಿಬಿಂಬವಾಗಿದೆ. “ಮೋದಿ ಸರ್ಕಾರಕ್ಕೆ ರಾಷ್ಟ್ರ ಎಂದರೆ ಏನು ಎಂದು ಅರ್ಥವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಗಳಾದ ಐಎಎಸ್, ಐಎಫ್‌ಎಸ್, ಐಪಿಎಸ್, ಮತ್ತು ಸೇನೆಯಂತಹ ಸರ್ಕಾರಿ ಸೇವೆಗಳಲ್ಲಿ ಮುಸ್ಲಿಮರಿಗೆ ಕಡಿಮೆ ಪ್ರಾತಿನಿಧ್ಯ ಮತ್ತು ಸಂಸತ್ತಿನಲ್ಲಿ ಅವರ ಪ್ರಾತಿನಿಧ್ಯದ ಕೊರತೆಯ ಬಗ್ಗೆ ಸಂದರ್ಶಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೇನ್, “28 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮುಖ್ಯಮಂತ್ರಿಗಳು ಮತ್ತು 15 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮಂತ್ರಿಗಳಿಲ್ಲ. “15% ಮುಸ್ಲಿಮರು ಈ ದೇಶದ ಭಾಗವಾಗಿದ್ದಾರೆ ಅಷ್ಟೇ ಆದರೆ ಅವರಿಗೆ ತಮ್ಮ ಸ್ವಂತ ಹಕ್ಕುಗಳಿಲ್ಲ. ಬಹುಸಂಖ್ಯಾತರ ಜೊತೆ ಸಹಿಷ್ಣುತೆಯಿಂದ ಬದುಕುತ್ತಿದ್ದಾರೆ ಅಷ್ಟೇ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಭಾರತ ಸರ್ಕಾರವು ಇರಾನ್, ಅಫ್ಘಾನಿಸ್ತಾನ ಮತ್ತು ರಷ್ಯಾದಂತಹ ರಾಷ್ಟ್ರಗಳ ಸರ್ಕಾರಗಳೊಂದಿಗೆ ಹೋಲಿಸಿಕೊಂಡು ತಮ್ಮ ಶ್ರೇಷ್ಠತೆ ಬಗ್ಗೆ ಹೇಳಿಕೊಳ್ಳುವುದರ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಸೇನ್ ಅವರು, ಇತರ ಸರ್ಕಾರಗಳು ಕೆಟ್ಟದಾಗಿರಬಹುದು ಎಂಬ ಅಂಶವು ಭಾರತದ ಜನರಿಗೆ ದೊಡ್ಡ ಸಮಾಧಾನವಲ್ಲ ಎಂದು ಸೇನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...