Homeಮುಖಪುಟಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

- Advertisement -
- Advertisement -

1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಿಂದ ‘ಭಾರತ ರತ್ನ’ ಪ್ರಶಸ್ತಿ ಪಡೆದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು, “ಕೇಂದ್ರ ಸರ್ಕಾರವು ವಿಶ್ವದ ಅತ್ಯಂತ ಭಯಾನಕವಾಗಿದೆ.ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ” ಎಂದು ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ‘ದಿ ವೈರ್‌’ಗಾಗಿ ಕರಣ್ ಥಾಪರ್‌ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಅಮರ್ತ್ಯ ಸೇನ್ ಅವರು, “ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರನ್ನು ತುಂಬಾ ಅಸಹ್ಯಕರ ರೀತಿಯಲ್ಲಿ ನಡೆಸಿಕೊಳ್ಳುತ್ತದೆ. ಈ ಭಾರತ ಸರ್ಕಾರದ ದಾಖಲೆಯು ನಿಜವಾಗಿಯೂ ಭಯಾನಕವಾಗಿದೆ” ಎಂದರು.

“ಮೋದಿ ಸರ್ಕಾರವು ಮುಸ್ಲಿಮರನ್ನು ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಮತ್ತು ಸಂಸತ್ತಿನ ಎರಡೂ ಸದನಗಳಲ್ಲಿ ಯಾವುದೇ ಮುಸ್ಲಿಂ ಸಂಸದರನ್ನು ಹೊಂದಿಲ್ಲದಿರುವುದು ಸ್ವೀಕಾರಾರ್ಹವಲ್ಲದ ಅನಾಗರಿಕವಾಗಿರುವಂತಹದ್ದು. ಅನಾಗರಿಕ ಪದವು ನನ್ನ ನಾಲಿಗೆಗೆ ಬರುತ್ತದೆ ಏಕೆಂದರೆ ಅದು ಕೇವಲ ಅನ್ಯಾಯ ಮತ್ತು ತಪ್ಪುಗಳನ್ನು ಮಾಡುತ್ತಿಲ್ಲ. ಇದು ಜನರ ಜೀವನವನ್ನು ಸಂಪೂರ್ಣವಾಗಿ ಅಸ್ಥಿರಗೊಳಿಸುತ್ತಿದೆ ಮತ್ತು ಭಾರತದ ಸಂಸ್ಕೃತಿಯನ್ನು ಸೀಮಿತಗೊಳಿಸುತ್ತದೆ” ಎಂದು ಅವರು ಹೇಳಿದರು.

ಈ ವೇಳೆ ಪ್ರೊಫೆಸರ್ ಸೇನ್ ಅವರು, ಡಿಸೆಂಬರ್ 19 ರಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆಗೆ ಮಾಡಿದ ಹೇಳಿಕೆ ಕುರಿತು ಚರ್ಚಿಸಿದರು ಮತ್ತು ಆ ಬಗ್ಗೆ ವಿಸ್ತಾರವಾಗಿ ವಿವರಿಸಿದರು. “ಇದೀಗ ಭಾರತ ಸರ್ಕಾರ ಎನ್ನುವ ಪದ ಸಂಕುಚಿತ ಅರ್ಥದಲ್ಲಿ ‘ಕೋಮುವಾದಿ’ ಎಂದಾಗಿದೆ. ಈ ಸರ್ಕಾರ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ ಜೊತೆಗೆ ಇದು ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆಯನ್ನು ಪ್ರಚಾರ ಮಾಡುತ್ತಿದೆ ಎಂದರು.

“ಭಾರತವು ಯಾವಾಗಲೂ ಬಹು-ಜನಾಂಗೀಯ ದೇಶವಾಗಿದೆ,” ಮೋದಿ ಸರ್ಕಾರದ ಸಾಮುದಾಯಿಕ ಮತ್ತು ಬಹುಸಂಖ್ಯಾತ ನೀತಿಗಳು ಭಾರತವನ್ನು ಒಡೆಯುತ್ತವೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಇದು ದೇಶವನ್ನು ಧ್ವಂಸಗೊಳಿಸುವಂತಿದೆ. ಸಧ್ಯದ ದೇಶದ ಪರಿಸ್ಥಿತಿಯನ್ನು “ರಾಷ್ಟ್ರೀಯ ವಿಪತ್ತು” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಈ ವೇಳೆ ಸಂದರ್ಶಕರು, ಭಾರತದಲ್ಲಿ ಮುಸ್ಲಿಂ ವಿರೋಧಿ ಪೂರ್ವಾಗ್ರಹ ಬೆಳೆಯುತ್ತಿದೆ ಮತ್ತು ಮುಸ್ಲಿಮರು ಎರಡನೇ ದರ್ಜೆಯ ಪ್ರಜೆಗಳಾಗುತ್ತಿದ್ದಾರೆ ಎಂದು ನಂಬುತ್ತೀರಾ? ಈ ಬಗ್ಗೆ ಚಿಂತಿತರಾಗಿದ್ದೀರಾ? ಎಮದು ಕೇಳಿದಾಗ ಸೇನ್ ಅವರು, “ನಾನು ಈ ಬಗ್ಗೆ ಕೇವಲ ಚಿಂತಿಸುತ್ತಿಲ್ಲ, ವಿಭಿನ್ನತೆಯಲ್ಲಿ ಏಕತೆ ಹೊಂದಿರುವ ಈ ರಾಷ್ಟ್ರದಲ್ಲಿ ಇದ್ದಕ್ಕಿದ್ದಂತೆ ಪ್ರತ್ಯೇಕತೆ ತರುತ್ತಿರುವ ಬಗ್ಗೆ ನಾನು ಭಯಪಡುತ್ತೇನೆ. ಇದ್ದಕ್ಕಿದ್ದಂತೆ ದುರಂತದ ಪ್ರತ್ಯೇಕತೆಯ ಸ್ಥಿತಿಗೆ ಬರುತ್ತಿದೆಲ್ಲಾ” ಎಂದು ಆತಂಕ ವ್ಯಕ್ತಪಡಿಸಿದರು.

“ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದು ಮೂರ್ಖತನವಾಗಿದೆ. ಮುಸ್ಲಿಮರ ಮೇಲಿನ ಈ ದೌರ್ಜನ್ಯ ದೇಶದ ಇತಿಹಾಸ, ವರ್ತಮಾನದ ಅವಹೇಳನ ಮತ್ತು ಧ್ವಂಸಗೊಳಿಸುವುದಾಗಿದೆ. ನಮ್ಮ ದೇಶದ ಬಹುತ್ವವನ್ನು ದ್ವೇಷಿಸುವುದು ಬಹುದೊಡ್ಡ ಮೂರ್ಖತನವಾಗಿದೆ” ಎಂದು ಅವರು ಹೇಳಿದರು.

ಕ್ಯಾಬಿನೆಟ್ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಕೂಡ ಮುಸ್ಲಿಮರನ್ನು “ಟರ್ಮಿಟ್ಸ್” ಮತ್ತು “ಬಾಬರ್ ಕಿ ಔಲಾದ್” ಎಂದು ಕರೆಯುತ್ತಾರೆ ಎಂಬ ಅಂಶವನ್ನು ನೀವು ಹೇಗೆ ನೋಡುತ್ತೀರಿ ಎಂದು ಸಂದ‍ರ್ಶಕರು ಕೇಳಿದಾಗ, ಸೇನ್ ಅವರು, ‘ಅಬ್ಬಾ ಜಾನ್’ ಎಂದು ಉಲ್ಲೇಖಿಸಿ, ಪಾಕಿಸ್ತಾನಕ್ಕೆ ಹೋಗುವಂತೆ ಪದೇ ಪದೇ ಹೇಳುತ್ತಾರೆ ಇದು ಭಾರತೀಯ ರಾಷ್ಟ್ರದ ವಿಕೃತ ತಿಳುವಳಿಕೆಯ ಪ್ರತಿಬಿಂಬವಾಗಿದೆ. “ಮೋದಿ ಸರ್ಕಾರಕ್ಕೆ ರಾಷ್ಟ್ರ ಎಂದರೆ ಏನು ಎಂದು ಅರ್ಥವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಗಳಾದ ಐಎಎಸ್, ಐಎಫ್‌ಎಸ್, ಐಪಿಎಸ್, ಮತ್ತು ಸೇನೆಯಂತಹ ಸರ್ಕಾರಿ ಸೇವೆಗಳಲ್ಲಿ ಮುಸ್ಲಿಮರಿಗೆ ಕಡಿಮೆ ಪ್ರಾತಿನಿಧ್ಯ ಮತ್ತು ಸಂಸತ್ತಿನಲ್ಲಿ ಅವರ ಪ್ರಾತಿನಿಧ್ಯದ ಕೊರತೆಯ ಬಗ್ಗೆ ಸಂದರ್ಶಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೇನ್, “28 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮುಖ್ಯಮಂತ್ರಿಗಳು ಮತ್ತು 15 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮಂತ್ರಿಗಳಿಲ್ಲ. “15% ಮುಸ್ಲಿಮರು ಈ ದೇಶದ ಭಾಗವಾಗಿದ್ದಾರೆ ಅಷ್ಟೇ ಆದರೆ ಅವರಿಗೆ ತಮ್ಮ ಸ್ವಂತ ಹಕ್ಕುಗಳಿಲ್ಲ. ಬಹುಸಂಖ್ಯಾತರ ಜೊತೆ ಸಹಿಷ್ಣುತೆಯಿಂದ ಬದುಕುತ್ತಿದ್ದಾರೆ ಅಷ್ಟೇ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಭಾರತ ಸರ್ಕಾರವು ಇರಾನ್, ಅಫ್ಘಾನಿಸ್ತಾನ ಮತ್ತು ರಷ್ಯಾದಂತಹ ರಾಷ್ಟ್ರಗಳ ಸರ್ಕಾರಗಳೊಂದಿಗೆ ಹೋಲಿಸಿಕೊಂಡು ತಮ್ಮ ಶ್ರೇಷ್ಠತೆ ಬಗ್ಗೆ ಹೇಳಿಕೊಳ್ಳುವುದರ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಸೇನ್ ಅವರು, ಇತರ ಸರ್ಕಾರಗಳು ಕೆಟ್ಟದಾಗಿರಬಹುದು ಎಂಬ ಅಂಶವು ಭಾರತದ ಜನರಿಗೆ ದೊಡ್ಡ ಸಮಾಧಾನವಲ್ಲ ಎಂದು ಸೇನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...