Homeಮುಖಪುಟಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

- Advertisement -
- Advertisement -

1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಿಂದ ‘ಭಾರತ ರತ್ನ’ ಪ್ರಶಸ್ತಿ ಪಡೆದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು, “ಕೇಂದ್ರ ಸರ್ಕಾರವು ವಿಶ್ವದ ಅತ್ಯಂತ ಭಯಾನಕವಾಗಿದೆ.ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ” ಎಂದು ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ‘ದಿ ವೈರ್‌’ಗಾಗಿ ಕರಣ್ ಥಾಪರ್‌ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಅಮರ್ತ್ಯ ಸೇನ್ ಅವರು, “ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರನ್ನು ತುಂಬಾ ಅಸಹ್ಯಕರ ರೀತಿಯಲ್ಲಿ ನಡೆಸಿಕೊಳ್ಳುತ್ತದೆ. ಈ ಭಾರತ ಸರ್ಕಾರದ ದಾಖಲೆಯು ನಿಜವಾಗಿಯೂ ಭಯಾನಕವಾಗಿದೆ” ಎಂದರು.

“ಮೋದಿ ಸರ್ಕಾರವು ಮುಸ್ಲಿಮರನ್ನು ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಮತ್ತು ಸಂಸತ್ತಿನ ಎರಡೂ ಸದನಗಳಲ್ಲಿ ಯಾವುದೇ ಮುಸ್ಲಿಂ ಸಂಸದರನ್ನು ಹೊಂದಿಲ್ಲದಿರುವುದು ಸ್ವೀಕಾರಾರ್ಹವಲ್ಲದ ಅನಾಗರಿಕವಾಗಿರುವಂತಹದ್ದು. ಅನಾಗರಿಕ ಪದವು ನನ್ನ ನಾಲಿಗೆಗೆ ಬರುತ್ತದೆ ಏಕೆಂದರೆ ಅದು ಕೇವಲ ಅನ್ಯಾಯ ಮತ್ತು ತಪ್ಪುಗಳನ್ನು ಮಾಡುತ್ತಿಲ್ಲ. ಇದು ಜನರ ಜೀವನವನ್ನು ಸಂಪೂರ್ಣವಾಗಿ ಅಸ್ಥಿರಗೊಳಿಸುತ್ತಿದೆ ಮತ್ತು ಭಾರತದ ಸಂಸ್ಕೃತಿಯನ್ನು ಸೀಮಿತಗೊಳಿಸುತ್ತದೆ” ಎಂದು ಅವರು ಹೇಳಿದರು.

ಈ ವೇಳೆ ಪ್ರೊಫೆಸರ್ ಸೇನ್ ಅವರು, ಡಿಸೆಂಬರ್ 19 ರಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆಗೆ ಮಾಡಿದ ಹೇಳಿಕೆ ಕುರಿತು ಚರ್ಚಿಸಿದರು ಮತ್ತು ಆ ಬಗ್ಗೆ ವಿಸ್ತಾರವಾಗಿ ವಿವರಿಸಿದರು. “ಇದೀಗ ಭಾರತ ಸರ್ಕಾರ ಎನ್ನುವ ಪದ ಸಂಕುಚಿತ ಅರ್ಥದಲ್ಲಿ ‘ಕೋಮುವಾದಿ’ ಎಂದಾಗಿದೆ. ಈ ಸರ್ಕಾರ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ ಜೊತೆಗೆ ಇದು ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆಯನ್ನು ಪ್ರಚಾರ ಮಾಡುತ್ತಿದೆ ಎಂದರು.

“ಭಾರತವು ಯಾವಾಗಲೂ ಬಹು-ಜನಾಂಗೀಯ ದೇಶವಾಗಿದೆ,” ಮೋದಿ ಸರ್ಕಾರದ ಸಾಮುದಾಯಿಕ ಮತ್ತು ಬಹುಸಂಖ್ಯಾತ ನೀತಿಗಳು ಭಾರತವನ್ನು ಒಡೆಯುತ್ತವೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಇದು ದೇಶವನ್ನು ಧ್ವಂಸಗೊಳಿಸುವಂತಿದೆ. ಸಧ್ಯದ ದೇಶದ ಪರಿಸ್ಥಿತಿಯನ್ನು “ರಾಷ್ಟ್ರೀಯ ವಿಪತ್ತು” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಈ ವೇಳೆ ಸಂದರ್ಶಕರು, ಭಾರತದಲ್ಲಿ ಮುಸ್ಲಿಂ ವಿರೋಧಿ ಪೂರ್ವಾಗ್ರಹ ಬೆಳೆಯುತ್ತಿದೆ ಮತ್ತು ಮುಸ್ಲಿಮರು ಎರಡನೇ ದರ್ಜೆಯ ಪ್ರಜೆಗಳಾಗುತ್ತಿದ್ದಾರೆ ಎಂದು ನಂಬುತ್ತೀರಾ? ಈ ಬಗ್ಗೆ ಚಿಂತಿತರಾಗಿದ್ದೀರಾ? ಎಮದು ಕೇಳಿದಾಗ ಸೇನ್ ಅವರು, “ನಾನು ಈ ಬಗ್ಗೆ ಕೇವಲ ಚಿಂತಿಸುತ್ತಿಲ್ಲ, ವಿಭಿನ್ನತೆಯಲ್ಲಿ ಏಕತೆ ಹೊಂದಿರುವ ಈ ರಾಷ್ಟ್ರದಲ್ಲಿ ಇದ್ದಕ್ಕಿದ್ದಂತೆ ಪ್ರತ್ಯೇಕತೆ ತರುತ್ತಿರುವ ಬಗ್ಗೆ ನಾನು ಭಯಪಡುತ್ತೇನೆ. ಇದ್ದಕ್ಕಿದ್ದಂತೆ ದುರಂತದ ಪ್ರತ್ಯೇಕತೆಯ ಸ್ಥಿತಿಗೆ ಬರುತ್ತಿದೆಲ್ಲಾ” ಎಂದು ಆತಂಕ ವ್ಯಕ್ತಪಡಿಸಿದರು.

“ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದು ಮೂರ್ಖತನವಾಗಿದೆ. ಮುಸ್ಲಿಮರ ಮೇಲಿನ ಈ ದೌರ್ಜನ್ಯ ದೇಶದ ಇತಿಹಾಸ, ವರ್ತಮಾನದ ಅವಹೇಳನ ಮತ್ತು ಧ್ವಂಸಗೊಳಿಸುವುದಾಗಿದೆ. ನಮ್ಮ ದೇಶದ ಬಹುತ್ವವನ್ನು ದ್ವೇಷಿಸುವುದು ಬಹುದೊಡ್ಡ ಮೂರ್ಖತನವಾಗಿದೆ” ಎಂದು ಅವರು ಹೇಳಿದರು.

ಕ್ಯಾಬಿನೆಟ್ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಕೂಡ ಮುಸ್ಲಿಮರನ್ನು “ಟರ್ಮಿಟ್ಸ್” ಮತ್ತು “ಬಾಬರ್ ಕಿ ಔಲಾದ್” ಎಂದು ಕರೆಯುತ್ತಾರೆ ಎಂಬ ಅಂಶವನ್ನು ನೀವು ಹೇಗೆ ನೋಡುತ್ತೀರಿ ಎಂದು ಸಂದ‍ರ್ಶಕರು ಕೇಳಿದಾಗ, ಸೇನ್ ಅವರು, ‘ಅಬ್ಬಾ ಜಾನ್’ ಎಂದು ಉಲ್ಲೇಖಿಸಿ, ಪಾಕಿಸ್ತಾನಕ್ಕೆ ಹೋಗುವಂತೆ ಪದೇ ಪದೇ ಹೇಳುತ್ತಾರೆ ಇದು ಭಾರತೀಯ ರಾಷ್ಟ್ರದ ವಿಕೃತ ತಿಳುವಳಿಕೆಯ ಪ್ರತಿಬಿಂಬವಾಗಿದೆ. “ಮೋದಿ ಸರ್ಕಾರಕ್ಕೆ ರಾಷ್ಟ್ರ ಎಂದರೆ ಏನು ಎಂದು ಅರ್ಥವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಗಳಾದ ಐಎಎಸ್, ಐಎಫ್‌ಎಸ್, ಐಪಿಎಸ್, ಮತ್ತು ಸೇನೆಯಂತಹ ಸರ್ಕಾರಿ ಸೇವೆಗಳಲ್ಲಿ ಮುಸ್ಲಿಮರಿಗೆ ಕಡಿಮೆ ಪ್ರಾತಿನಿಧ್ಯ ಮತ್ತು ಸಂಸತ್ತಿನಲ್ಲಿ ಅವರ ಪ್ರಾತಿನಿಧ್ಯದ ಕೊರತೆಯ ಬಗ್ಗೆ ಸಂದರ್ಶಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೇನ್, “28 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮುಖ್ಯಮಂತ್ರಿಗಳು ಮತ್ತು 15 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮಂತ್ರಿಗಳಿಲ್ಲ. “15% ಮುಸ್ಲಿಮರು ಈ ದೇಶದ ಭಾಗವಾಗಿದ್ದಾರೆ ಅಷ್ಟೇ ಆದರೆ ಅವರಿಗೆ ತಮ್ಮ ಸ್ವಂತ ಹಕ್ಕುಗಳಿಲ್ಲ. ಬಹುಸಂಖ್ಯಾತರ ಜೊತೆ ಸಹಿಷ್ಣುತೆಯಿಂದ ಬದುಕುತ್ತಿದ್ದಾರೆ ಅಷ್ಟೇ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಭಾರತ ಸರ್ಕಾರವು ಇರಾನ್, ಅಫ್ಘಾನಿಸ್ತಾನ ಮತ್ತು ರಷ್ಯಾದಂತಹ ರಾಷ್ಟ್ರಗಳ ಸರ್ಕಾರಗಳೊಂದಿಗೆ ಹೋಲಿಸಿಕೊಂಡು ತಮ್ಮ ಶ್ರೇಷ್ಠತೆ ಬಗ್ಗೆ ಹೇಳಿಕೊಳ್ಳುವುದರ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಸೇನ್ ಅವರು, ಇತರ ಸರ್ಕಾರಗಳು ಕೆಟ್ಟದಾಗಿರಬಹುದು ಎಂಬ ಅಂಶವು ಭಾರತದ ಜನರಿಗೆ ದೊಡ್ಡ ಸಮಾಧಾನವಲ್ಲ ಎಂದು ಸೇನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...