Homeಮುಖಪುಟಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

- Advertisement -
- Advertisement -

1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಿಂದ ‘ಭಾರತ ರತ್ನ’ ಪ್ರಶಸ್ತಿ ಪಡೆದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು, “ಕೇಂದ್ರ ಸರ್ಕಾರವು ವಿಶ್ವದ ಅತ್ಯಂತ ಭಯಾನಕವಾಗಿದೆ.ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ” ಎಂದು ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ‘ದಿ ವೈರ್‌’ಗಾಗಿ ಕರಣ್ ಥಾಪರ್‌ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಅಮರ್ತ್ಯ ಸೇನ್ ಅವರು, “ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರನ್ನು ತುಂಬಾ ಅಸಹ್ಯಕರ ರೀತಿಯಲ್ಲಿ ನಡೆಸಿಕೊಳ್ಳುತ್ತದೆ. ಈ ಭಾರತ ಸರ್ಕಾರದ ದಾಖಲೆಯು ನಿಜವಾಗಿಯೂ ಭಯಾನಕವಾಗಿದೆ” ಎಂದರು.

“ಮೋದಿ ಸರ್ಕಾರವು ಮುಸ್ಲಿಮರನ್ನು ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಮತ್ತು ಸಂಸತ್ತಿನ ಎರಡೂ ಸದನಗಳಲ್ಲಿ ಯಾವುದೇ ಮುಸ್ಲಿಂ ಸಂಸದರನ್ನು ಹೊಂದಿಲ್ಲದಿರುವುದು ಸ್ವೀಕಾರಾರ್ಹವಲ್ಲದ ಅನಾಗರಿಕವಾಗಿರುವಂತಹದ್ದು. ಅನಾಗರಿಕ ಪದವು ನನ್ನ ನಾಲಿಗೆಗೆ ಬರುತ್ತದೆ ಏಕೆಂದರೆ ಅದು ಕೇವಲ ಅನ್ಯಾಯ ಮತ್ತು ತಪ್ಪುಗಳನ್ನು ಮಾಡುತ್ತಿಲ್ಲ. ಇದು ಜನರ ಜೀವನವನ್ನು ಸಂಪೂರ್ಣವಾಗಿ ಅಸ್ಥಿರಗೊಳಿಸುತ್ತಿದೆ ಮತ್ತು ಭಾರತದ ಸಂಸ್ಕೃತಿಯನ್ನು ಸೀಮಿತಗೊಳಿಸುತ್ತದೆ” ಎಂದು ಅವರು ಹೇಳಿದರು.

ಈ ವೇಳೆ ಪ್ರೊಫೆಸರ್ ಸೇನ್ ಅವರು, ಡಿಸೆಂಬರ್ 19 ರಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆಗೆ ಮಾಡಿದ ಹೇಳಿಕೆ ಕುರಿತು ಚರ್ಚಿಸಿದರು ಮತ್ತು ಆ ಬಗ್ಗೆ ವಿಸ್ತಾರವಾಗಿ ವಿವರಿಸಿದರು. “ಇದೀಗ ಭಾರತ ಸರ್ಕಾರ ಎನ್ನುವ ಪದ ಸಂಕುಚಿತ ಅರ್ಥದಲ್ಲಿ ‘ಕೋಮುವಾದಿ’ ಎಂದಾಗಿದೆ. ಈ ಸರ್ಕಾರ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ ಜೊತೆಗೆ ಇದು ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆಯನ್ನು ಪ್ರಚಾರ ಮಾಡುತ್ತಿದೆ ಎಂದರು.

“ಭಾರತವು ಯಾವಾಗಲೂ ಬಹು-ಜನಾಂಗೀಯ ದೇಶವಾಗಿದೆ,” ಮೋದಿ ಸರ್ಕಾರದ ಸಾಮುದಾಯಿಕ ಮತ್ತು ಬಹುಸಂಖ್ಯಾತ ನೀತಿಗಳು ಭಾರತವನ್ನು ಒಡೆಯುತ್ತವೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಇದು ದೇಶವನ್ನು ಧ್ವಂಸಗೊಳಿಸುವಂತಿದೆ. ಸಧ್ಯದ ದೇಶದ ಪರಿಸ್ಥಿತಿಯನ್ನು “ರಾಷ್ಟ್ರೀಯ ವಿಪತ್ತು” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಈ ವೇಳೆ ಸಂದರ್ಶಕರು, ಭಾರತದಲ್ಲಿ ಮುಸ್ಲಿಂ ವಿರೋಧಿ ಪೂರ್ವಾಗ್ರಹ ಬೆಳೆಯುತ್ತಿದೆ ಮತ್ತು ಮುಸ್ಲಿಮರು ಎರಡನೇ ದರ್ಜೆಯ ಪ್ರಜೆಗಳಾಗುತ್ತಿದ್ದಾರೆ ಎಂದು ನಂಬುತ್ತೀರಾ? ಈ ಬಗ್ಗೆ ಚಿಂತಿತರಾಗಿದ್ದೀರಾ? ಎಮದು ಕೇಳಿದಾಗ ಸೇನ್ ಅವರು, “ನಾನು ಈ ಬಗ್ಗೆ ಕೇವಲ ಚಿಂತಿಸುತ್ತಿಲ್ಲ, ವಿಭಿನ್ನತೆಯಲ್ಲಿ ಏಕತೆ ಹೊಂದಿರುವ ಈ ರಾಷ್ಟ್ರದಲ್ಲಿ ಇದ್ದಕ್ಕಿದ್ದಂತೆ ಪ್ರತ್ಯೇಕತೆ ತರುತ್ತಿರುವ ಬಗ್ಗೆ ನಾನು ಭಯಪಡುತ್ತೇನೆ. ಇದ್ದಕ್ಕಿದ್ದಂತೆ ದುರಂತದ ಪ್ರತ್ಯೇಕತೆಯ ಸ್ಥಿತಿಗೆ ಬರುತ್ತಿದೆಲ್ಲಾ” ಎಂದು ಆತಂಕ ವ್ಯಕ್ತಪಡಿಸಿದರು.

“ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದು ಮೂರ್ಖತನವಾಗಿದೆ. ಮುಸ್ಲಿಮರ ಮೇಲಿನ ಈ ದೌರ್ಜನ್ಯ ದೇಶದ ಇತಿಹಾಸ, ವರ್ತಮಾನದ ಅವಹೇಳನ ಮತ್ತು ಧ್ವಂಸಗೊಳಿಸುವುದಾಗಿದೆ. ನಮ್ಮ ದೇಶದ ಬಹುತ್ವವನ್ನು ದ್ವೇಷಿಸುವುದು ಬಹುದೊಡ್ಡ ಮೂರ್ಖತನವಾಗಿದೆ” ಎಂದು ಅವರು ಹೇಳಿದರು.

ಕ್ಯಾಬಿನೆಟ್ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಕೂಡ ಮುಸ್ಲಿಮರನ್ನು “ಟರ್ಮಿಟ್ಸ್” ಮತ್ತು “ಬಾಬರ್ ಕಿ ಔಲಾದ್” ಎಂದು ಕರೆಯುತ್ತಾರೆ ಎಂಬ ಅಂಶವನ್ನು ನೀವು ಹೇಗೆ ನೋಡುತ್ತೀರಿ ಎಂದು ಸಂದ‍ರ್ಶಕರು ಕೇಳಿದಾಗ, ಸೇನ್ ಅವರು, ‘ಅಬ್ಬಾ ಜಾನ್’ ಎಂದು ಉಲ್ಲೇಖಿಸಿ, ಪಾಕಿಸ್ತಾನಕ್ಕೆ ಹೋಗುವಂತೆ ಪದೇ ಪದೇ ಹೇಳುತ್ತಾರೆ ಇದು ಭಾರತೀಯ ರಾಷ್ಟ್ರದ ವಿಕೃತ ತಿಳುವಳಿಕೆಯ ಪ್ರತಿಬಿಂಬವಾಗಿದೆ. “ಮೋದಿ ಸರ್ಕಾರಕ್ಕೆ ರಾಷ್ಟ್ರ ಎಂದರೆ ಏನು ಎಂದು ಅರ್ಥವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಗಳಾದ ಐಎಎಸ್, ಐಎಫ್‌ಎಸ್, ಐಪಿಎಸ್, ಮತ್ತು ಸೇನೆಯಂತಹ ಸರ್ಕಾರಿ ಸೇವೆಗಳಲ್ಲಿ ಮುಸ್ಲಿಮರಿಗೆ ಕಡಿಮೆ ಪ್ರಾತಿನಿಧ್ಯ ಮತ್ತು ಸಂಸತ್ತಿನಲ್ಲಿ ಅವರ ಪ್ರಾತಿನಿಧ್ಯದ ಕೊರತೆಯ ಬಗ್ಗೆ ಸಂದರ್ಶಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೇನ್, “28 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮುಖ್ಯಮಂತ್ರಿಗಳು ಮತ್ತು 15 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮಂತ್ರಿಗಳಿಲ್ಲ. “15% ಮುಸ್ಲಿಮರು ಈ ದೇಶದ ಭಾಗವಾಗಿದ್ದಾರೆ ಅಷ್ಟೇ ಆದರೆ ಅವರಿಗೆ ತಮ್ಮ ಸ್ವಂತ ಹಕ್ಕುಗಳಿಲ್ಲ. ಬಹುಸಂಖ್ಯಾತರ ಜೊತೆ ಸಹಿಷ್ಣುತೆಯಿಂದ ಬದುಕುತ್ತಿದ್ದಾರೆ ಅಷ್ಟೇ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಭಾರತ ಸರ್ಕಾರವು ಇರಾನ್, ಅಫ್ಘಾನಿಸ್ತಾನ ಮತ್ತು ರಷ್ಯಾದಂತಹ ರಾಷ್ಟ್ರಗಳ ಸರ್ಕಾರಗಳೊಂದಿಗೆ ಹೋಲಿಸಿಕೊಂಡು ತಮ್ಮ ಶ್ರೇಷ್ಠತೆ ಬಗ್ಗೆ ಹೇಳಿಕೊಳ್ಳುವುದರ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಸೇನ್ ಅವರು, ಇತರ ಸರ್ಕಾರಗಳು ಕೆಟ್ಟದಾಗಿರಬಹುದು ಎಂಬ ಅಂಶವು ಭಾರತದ ಜನರಿಗೆ ದೊಡ್ಡ ಸಮಾಧಾನವಲ್ಲ ಎಂದು ಸೇನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...