Homeಮುಖಪುಟಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

- Advertisement -
- Advertisement -

1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಿಂದ ‘ಭಾರತ ರತ್ನ’ ಪ್ರಶಸ್ತಿ ಪಡೆದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು, “ಕೇಂದ್ರ ಸರ್ಕಾರವು ವಿಶ್ವದ ಅತ್ಯಂತ ಭಯಾನಕವಾಗಿದೆ.ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ” ಎಂದು ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ‘ದಿ ವೈರ್‌’ಗಾಗಿ ಕರಣ್ ಥಾಪರ್‌ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಅಮರ್ತ್ಯ ಸೇನ್ ಅವರು, “ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರನ್ನು ತುಂಬಾ ಅಸಹ್ಯಕರ ರೀತಿಯಲ್ಲಿ ನಡೆಸಿಕೊಳ್ಳುತ್ತದೆ. ಈ ಭಾರತ ಸರ್ಕಾರದ ದಾಖಲೆಯು ನಿಜವಾಗಿಯೂ ಭಯಾನಕವಾಗಿದೆ” ಎಂದರು.

“ಮೋದಿ ಸರ್ಕಾರವು ಮುಸ್ಲಿಮರನ್ನು ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಮತ್ತು ಸಂಸತ್ತಿನ ಎರಡೂ ಸದನಗಳಲ್ಲಿ ಯಾವುದೇ ಮುಸ್ಲಿಂ ಸಂಸದರನ್ನು ಹೊಂದಿಲ್ಲದಿರುವುದು ಸ್ವೀಕಾರಾರ್ಹವಲ್ಲದ ಅನಾಗರಿಕವಾಗಿರುವಂತಹದ್ದು. ಅನಾಗರಿಕ ಪದವು ನನ್ನ ನಾಲಿಗೆಗೆ ಬರುತ್ತದೆ ಏಕೆಂದರೆ ಅದು ಕೇವಲ ಅನ್ಯಾಯ ಮತ್ತು ತಪ್ಪುಗಳನ್ನು ಮಾಡುತ್ತಿಲ್ಲ. ಇದು ಜನರ ಜೀವನವನ್ನು ಸಂಪೂರ್ಣವಾಗಿ ಅಸ್ಥಿರಗೊಳಿಸುತ್ತಿದೆ ಮತ್ತು ಭಾರತದ ಸಂಸ್ಕೃತಿಯನ್ನು ಸೀಮಿತಗೊಳಿಸುತ್ತದೆ” ಎಂದು ಅವರು ಹೇಳಿದರು.

ಈ ವೇಳೆ ಪ್ರೊಫೆಸರ್ ಸೇನ್ ಅವರು, ಡಿಸೆಂಬರ್ 19 ರಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆಗೆ ಮಾಡಿದ ಹೇಳಿಕೆ ಕುರಿತು ಚರ್ಚಿಸಿದರು ಮತ್ತು ಆ ಬಗ್ಗೆ ವಿಸ್ತಾರವಾಗಿ ವಿವರಿಸಿದರು. “ಇದೀಗ ಭಾರತ ಸರ್ಕಾರ ಎನ್ನುವ ಪದ ಸಂಕುಚಿತ ಅರ್ಥದಲ್ಲಿ ‘ಕೋಮುವಾದಿ’ ಎಂದಾಗಿದೆ. ಈ ಸರ್ಕಾರ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ ಜೊತೆಗೆ ಇದು ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆಯನ್ನು ಪ್ರಚಾರ ಮಾಡುತ್ತಿದೆ ಎಂದರು.

“ಭಾರತವು ಯಾವಾಗಲೂ ಬಹು-ಜನಾಂಗೀಯ ದೇಶವಾಗಿದೆ,” ಮೋದಿ ಸರ್ಕಾರದ ಸಾಮುದಾಯಿಕ ಮತ್ತು ಬಹುಸಂಖ್ಯಾತ ನೀತಿಗಳು ಭಾರತವನ್ನು ಒಡೆಯುತ್ತವೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಇದು ದೇಶವನ್ನು ಧ್ವಂಸಗೊಳಿಸುವಂತಿದೆ. ಸಧ್ಯದ ದೇಶದ ಪರಿಸ್ಥಿತಿಯನ್ನು “ರಾಷ್ಟ್ರೀಯ ವಿಪತ್ತು” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಈ ವೇಳೆ ಸಂದರ್ಶಕರು, ಭಾರತದಲ್ಲಿ ಮುಸ್ಲಿಂ ವಿರೋಧಿ ಪೂರ್ವಾಗ್ರಹ ಬೆಳೆಯುತ್ತಿದೆ ಮತ್ತು ಮುಸ್ಲಿಮರು ಎರಡನೇ ದರ್ಜೆಯ ಪ್ರಜೆಗಳಾಗುತ್ತಿದ್ದಾರೆ ಎಂದು ನಂಬುತ್ತೀರಾ? ಈ ಬಗ್ಗೆ ಚಿಂತಿತರಾಗಿದ್ದೀರಾ? ಎಮದು ಕೇಳಿದಾಗ ಸೇನ್ ಅವರು, “ನಾನು ಈ ಬಗ್ಗೆ ಕೇವಲ ಚಿಂತಿಸುತ್ತಿಲ್ಲ, ವಿಭಿನ್ನತೆಯಲ್ಲಿ ಏಕತೆ ಹೊಂದಿರುವ ಈ ರಾಷ್ಟ್ರದಲ್ಲಿ ಇದ್ದಕ್ಕಿದ್ದಂತೆ ಪ್ರತ್ಯೇಕತೆ ತರುತ್ತಿರುವ ಬಗ್ಗೆ ನಾನು ಭಯಪಡುತ್ತೇನೆ. ಇದ್ದಕ್ಕಿದ್ದಂತೆ ದುರಂತದ ಪ್ರತ್ಯೇಕತೆಯ ಸ್ಥಿತಿಗೆ ಬರುತ್ತಿದೆಲ್ಲಾ” ಎಂದು ಆತಂಕ ವ್ಯಕ್ತಪಡಿಸಿದರು.

“ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದು ಮೂರ್ಖತನವಾಗಿದೆ. ಮುಸ್ಲಿಮರ ಮೇಲಿನ ಈ ದೌರ್ಜನ್ಯ ದೇಶದ ಇತಿಹಾಸ, ವರ್ತಮಾನದ ಅವಹೇಳನ ಮತ್ತು ಧ್ವಂಸಗೊಳಿಸುವುದಾಗಿದೆ. ನಮ್ಮ ದೇಶದ ಬಹುತ್ವವನ್ನು ದ್ವೇಷಿಸುವುದು ಬಹುದೊಡ್ಡ ಮೂರ್ಖತನವಾಗಿದೆ” ಎಂದು ಅವರು ಹೇಳಿದರು.

ಕ್ಯಾಬಿನೆಟ್ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಕೂಡ ಮುಸ್ಲಿಮರನ್ನು “ಟರ್ಮಿಟ್ಸ್” ಮತ್ತು “ಬಾಬರ್ ಕಿ ಔಲಾದ್” ಎಂದು ಕರೆಯುತ್ತಾರೆ ಎಂಬ ಅಂಶವನ್ನು ನೀವು ಹೇಗೆ ನೋಡುತ್ತೀರಿ ಎಂದು ಸಂದ‍ರ್ಶಕರು ಕೇಳಿದಾಗ, ಸೇನ್ ಅವರು, ‘ಅಬ್ಬಾ ಜಾನ್’ ಎಂದು ಉಲ್ಲೇಖಿಸಿ, ಪಾಕಿಸ್ತಾನಕ್ಕೆ ಹೋಗುವಂತೆ ಪದೇ ಪದೇ ಹೇಳುತ್ತಾರೆ ಇದು ಭಾರತೀಯ ರಾಷ್ಟ್ರದ ವಿಕೃತ ತಿಳುವಳಿಕೆಯ ಪ್ರತಿಬಿಂಬವಾಗಿದೆ. “ಮೋದಿ ಸರ್ಕಾರಕ್ಕೆ ರಾಷ್ಟ್ರ ಎಂದರೆ ಏನು ಎಂದು ಅರ್ಥವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಗಳಾದ ಐಎಎಸ್, ಐಎಫ್‌ಎಸ್, ಐಪಿಎಸ್, ಮತ್ತು ಸೇನೆಯಂತಹ ಸರ್ಕಾರಿ ಸೇವೆಗಳಲ್ಲಿ ಮುಸ್ಲಿಮರಿಗೆ ಕಡಿಮೆ ಪ್ರಾತಿನಿಧ್ಯ ಮತ್ತು ಸಂಸತ್ತಿನಲ್ಲಿ ಅವರ ಪ್ರಾತಿನಿಧ್ಯದ ಕೊರತೆಯ ಬಗ್ಗೆ ಸಂದರ್ಶಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೇನ್, “28 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮುಖ್ಯಮಂತ್ರಿಗಳು ಮತ್ತು 15 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮಂತ್ರಿಗಳಿಲ್ಲ. “15% ಮುಸ್ಲಿಮರು ಈ ದೇಶದ ಭಾಗವಾಗಿದ್ದಾರೆ ಅಷ್ಟೇ ಆದರೆ ಅವರಿಗೆ ತಮ್ಮ ಸ್ವಂತ ಹಕ್ಕುಗಳಿಲ್ಲ. ಬಹುಸಂಖ್ಯಾತರ ಜೊತೆ ಸಹಿಷ್ಣುತೆಯಿಂದ ಬದುಕುತ್ತಿದ್ದಾರೆ ಅಷ್ಟೇ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಭಾರತ ಸರ್ಕಾರವು ಇರಾನ್, ಅಫ್ಘಾನಿಸ್ತಾನ ಮತ್ತು ರಷ್ಯಾದಂತಹ ರಾಷ್ಟ್ರಗಳ ಸರ್ಕಾರಗಳೊಂದಿಗೆ ಹೋಲಿಸಿಕೊಂಡು ತಮ್ಮ ಶ್ರೇಷ್ಠತೆ ಬಗ್ಗೆ ಹೇಳಿಕೊಳ್ಳುವುದರ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಸೇನ್ ಅವರು, ಇತರ ಸರ್ಕಾರಗಳು ಕೆಟ್ಟದಾಗಿರಬಹುದು ಎಂಬ ಅಂಶವು ಭಾರತದ ಜನರಿಗೆ ದೊಡ್ಡ ಸಮಾಧಾನವಲ್ಲ ಎಂದು ಸೇನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...