Homeಮುಖಪುಟಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ: ಅಮರ್ತ್ಯ ಸೇನ್

- Advertisement -
- Advertisement -

1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಿಂದ ‘ಭಾರತ ರತ್ನ’ ಪ್ರಶಸ್ತಿ ಪಡೆದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು, “ಕೇಂದ್ರ ಸರ್ಕಾರವು ವಿಶ್ವದ ಅತ್ಯಂತ ಭಯಾನಕವಾಗಿದೆ.ಮೋದಿ ಸರ್ಕಾರ ಭಾರತದ ಬಹುತ್ವವನ್ನು ಧ್ವಂಸಗೊಳಿಸುತ್ತಿದೆ” ಎಂದು ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ‘ದಿ ವೈರ್‌’ಗಾಗಿ ಕರಣ್ ಥಾಪರ್‌ ನಡೆಸಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಅಮರ್ತ್ಯ ಸೇನ್ ಅವರು, “ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರನ್ನು ತುಂಬಾ ಅಸಹ್ಯಕರ ರೀತಿಯಲ್ಲಿ ನಡೆಸಿಕೊಳ್ಳುತ್ತದೆ. ಈ ಭಾರತ ಸರ್ಕಾರದ ದಾಖಲೆಯು ನಿಜವಾಗಿಯೂ ಭಯಾನಕವಾಗಿದೆ” ಎಂದರು.

“ಮೋದಿ ಸರ್ಕಾರವು ಮುಸ್ಲಿಮರನ್ನು ಕೆಟ್ಟ ರೀತಿಯಲ್ಲಿ ನಡೆಸಿಕೊಳ್ಳುತ್ತಿದೆ ಮತ್ತು ಸಂಸತ್ತಿನ ಎರಡೂ ಸದನಗಳಲ್ಲಿ ಯಾವುದೇ ಮುಸ್ಲಿಂ ಸಂಸದರನ್ನು ಹೊಂದಿಲ್ಲದಿರುವುದು ಸ್ವೀಕಾರಾರ್ಹವಲ್ಲದ ಅನಾಗರಿಕವಾಗಿರುವಂತಹದ್ದು. ಅನಾಗರಿಕ ಪದವು ನನ್ನ ನಾಲಿಗೆಗೆ ಬರುತ್ತದೆ ಏಕೆಂದರೆ ಅದು ಕೇವಲ ಅನ್ಯಾಯ ಮತ್ತು ತಪ್ಪುಗಳನ್ನು ಮಾಡುತ್ತಿಲ್ಲ. ಇದು ಜನರ ಜೀವನವನ್ನು ಸಂಪೂರ್ಣವಾಗಿ ಅಸ್ಥಿರಗೊಳಿಸುತ್ತಿದೆ ಮತ್ತು ಭಾರತದ ಸಂಸ್ಕೃತಿಯನ್ನು ಸೀಮಿತಗೊಳಿಸುತ್ತದೆ” ಎಂದು ಅವರು ಹೇಳಿದರು.

ಈ ವೇಳೆ ಪ್ರೊಫೆಸರ್ ಸೇನ್ ಅವರು, ಡಿಸೆಂಬರ್ 19 ರಂದು ಫ್ರೆಂಚ್ ಪತ್ರಿಕೆ ಲೆ ಮಾಂಡೆಗೆ ಮಾಡಿದ ಹೇಳಿಕೆ ಕುರಿತು ಚರ್ಚಿಸಿದರು ಮತ್ತು ಆ ಬಗ್ಗೆ ವಿಸ್ತಾರವಾಗಿ ವಿವರಿಸಿದರು. “ಇದೀಗ ಭಾರತ ಸರ್ಕಾರ ಎನ್ನುವ ಪದ ಸಂಕುಚಿತ ಅರ್ಥದಲ್ಲಿ ‘ಕೋಮುವಾದಿ’ ಎಂದಾಗಿದೆ. ಈ ಸರ್ಕಾರ ಮುಸ್ಲಿಮರ ಮೇಲೆ ದಾಳಿ ಮಾಡುತ್ತದೆ ಜೊತೆಗೆ ಇದು ಹಿಂದೂಗಳ ರಾಷ್ಟ್ರ ಎಂಬ ಕಲ್ಪನೆಯನ್ನು ಪ್ರಚಾರ ಮಾಡುತ್ತಿದೆ ಎಂದರು.

“ಭಾರತವು ಯಾವಾಗಲೂ ಬಹು-ಜನಾಂಗೀಯ ದೇಶವಾಗಿದೆ,” ಮೋದಿ ಸರ್ಕಾರದ ಸಾಮುದಾಯಿಕ ಮತ್ತು ಬಹುಸಂಖ್ಯಾತ ನೀತಿಗಳು ಭಾರತವನ್ನು ಒಡೆಯುತ್ತವೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಇದು ದೇಶವನ್ನು ಧ್ವಂಸಗೊಳಿಸುವಂತಿದೆ. ಸಧ್ಯದ ದೇಶದ ಪರಿಸ್ಥಿತಿಯನ್ನು “ರಾಷ್ಟ್ರೀಯ ವಿಪತ್ತು” ಎಂದು ಹೇಳಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ಈ ವೇಳೆ ಸಂದರ್ಶಕರು, ಭಾರತದಲ್ಲಿ ಮುಸ್ಲಿಂ ವಿರೋಧಿ ಪೂರ್ವಾಗ್ರಹ ಬೆಳೆಯುತ್ತಿದೆ ಮತ್ತು ಮುಸ್ಲಿಮರು ಎರಡನೇ ದರ್ಜೆಯ ಪ್ರಜೆಗಳಾಗುತ್ತಿದ್ದಾರೆ ಎಂದು ನಂಬುತ್ತೀರಾ? ಈ ಬಗ್ಗೆ ಚಿಂತಿತರಾಗಿದ್ದೀರಾ? ಎಮದು ಕೇಳಿದಾಗ ಸೇನ್ ಅವರು, “ನಾನು ಈ ಬಗ್ಗೆ ಕೇವಲ ಚಿಂತಿಸುತ್ತಿಲ್ಲ, ವಿಭಿನ್ನತೆಯಲ್ಲಿ ಏಕತೆ ಹೊಂದಿರುವ ಈ ರಾಷ್ಟ್ರದಲ್ಲಿ ಇದ್ದಕ್ಕಿದ್ದಂತೆ ಪ್ರತ್ಯೇಕತೆ ತರುತ್ತಿರುವ ಬಗ್ಗೆ ನಾನು ಭಯಪಡುತ್ತೇನೆ. ಇದ್ದಕ್ಕಿದ್ದಂತೆ ದುರಂತದ ಪ್ರತ್ಯೇಕತೆಯ ಸ್ಥಿತಿಗೆ ಬರುತ್ತಿದೆಲ್ಲಾ” ಎಂದು ಆತಂಕ ವ್ಯಕ್ತಪಡಿಸಿದರು.

“ಅಲ್ಪಸಂಖ್ಯಾತರನ್ನು ಕೆಟ್ಟದಾಗಿ ನಡೆಸಿಕೊಳ್ಳುವುದು ಮೂರ್ಖತನವಾಗಿದೆ. ಮುಸ್ಲಿಮರ ಮೇಲಿನ ಈ ದೌರ್ಜನ್ಯ ದೇಶದ ಇತಿಹಾಸ, ವರ್ತಮಾನದ ಅವಹೇಳನ ಮತ್ತು ಧ್ವಂಸಗೊಳಿಸುವುದಾಗಿದೆ. ನಮ್ಮ ದೇಶದ ಬಹುತ್ವವನ್ನು ದ್ವೇಷಿಸುವುದು ಬಹುದೊಡ್ಡ ಮೂರ್ಖತನವಾಗಿದೆ” ಎಂದು ಅವರು ಹೇಳಿದರು.

ಕ್ಯಾಬಿನೆಟ್ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಕೂಡ ಮುಸ್ಲಿಮರನ್ನು “ಟರ್ಮಿಟ್ಸ್” ಮತ್ತು “ಬಾಬರ್ ಕಿ ಔಲಾದ್” ಎಂದು ಕರೆಯುತ್ತಾರೆ ಎಂಬ ಅಂಶವನ್ನು ನೀವು ಹೇಗೆ ನೋಡುತ್ತೀರಿ ಎಂದು ಸಂದ‍ರ್ಶಕರು ಕೇಳಿದಾಗ, ಸೇನ್ ಅವರು, ‘ಅಬ್ಬಾ ಜಾನ್’ ಎಂದು ಉಲ್ಲೇಖಿಸಿ, ಪಾಕಿಸ್ತಾನಕ್ಕೆ ಹೋಗುವಂತೆ ಪದೇ ಪದೇ ಹೇಳುತ್ತಾರೆ ಇದು ಭಾರತೀಯ ರಾಷ್ಟ್ರದ ವಿಕೃತ ತಿಳುವಳಿಕೆಯ ಪ್ರತಿಬಿಂಬವಾಗಿದೆ. “ಮೋದಿ ಸರ್ಕಾರಕ್ಕೆ ರಾಷ್ಟ್ರ ಎಂದರೆ ಏನು ಎಂದು ಅರ್ಥವಾಗುತ್ತಿಲ್ಲ” ಎಂದು ಪ್ರತಿಕ್ರಿಯಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಸೇವೆಗಳಾದ ಐಎಎಸ್, ಐಎಫ್‌ಎಸ್, ಐಪಿಎಸ್, ಮತ್ತು ಸೇನೆಯಂತಹ ಸರ್ಕಾರಿ ಸೇವೆಗಳಲ್ಲಿ ಮುಸ್ಲಿಮರಿಗೆ ಕಡಿಮೆ ಪ್ರಾತಿನಿಧ್ಯ ಮತ್ತು ಸಂಸತ್ತಿನಲ್ಲಿ ಅವರ ಪ್ರಾತಿನಿಧ್ಯದ ಕೊರತೆಯ ಬಗ್ಗೆ ಸಂದರ್ಶಕರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೇನ್, “28 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮುಖ್ಯಮಂತ್ರಿಗಳು ಮತ್ತು 15 ರಾಜ್ಯಗಳಲ್ಲಿ ಯಾವುದೇ ಮುಸ್ಲಿಂ ಮಂತ್ರಿಗಳಿಲ್ಲ. “15% ಮುಸ್ಲಿಮರು ಈ ದೇಶದ ಭಾಗವಾಗಿದ್ದಾರೆ ಅಷ್ಟೇ ಆದರೆ ಅವರಿಗೆ ತಮ್ಮ ಸ್ವಂತ ಹಕ್ಕುಗಳಿಲ್ಲ. ಬಹುಸಂಖ್ಯಾತರ ಜೊತೆ ಸಹಿಷ್ಣುತೆಯಿಂದ ಬದುಕುತ್ತಿದ್ದಾರೆ ಅಷ್ಟೇ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತುತ ಭಾರತ ಸರ್ಕಾರವು ಇರಾನ್, ಅಫ್ಘಾನಿಸ್ತಾನ ಮತ್ತು ರಷ್ಯಾದಂತಹ ರಾಷ್ಟ್ರಗಳ ಸರ್ಕಾರಗಳೊಂದಿಗೆ ಹೋಲಿಸಿಕೊಂಡು ತಮ್ಮ ಶ್ರೇಷ್ಠತೆ ಬಗ್ಗೆ ಹೇಳಿಕೊಳ್ಳುವುದರ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದಾಗ, ಸೇನ್ ಅವರು, ಇತರ ಸರ್ಕಾರಗಳು ಕೆಟ್ಟದಾಗಿರಬಹುದು ಎಂಬ ಅಂಶವು ಭಾರತದ ಜನರಿಗೆ ದೊಡ್ಡ ಸಮಾಧಾನವಲ್ಲ ಎಂದು ಸೇನ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...