Homeಕರ್ನಾಟಕಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ : ಬಡಗಲಪುರ ನಾಗೇಂದ್ರ

ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್‌ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ : ಬಡಗಲಪುರ ನಾಗೇಂದ್ರ

ನಬಾರ್ಡ್ ನೀತಿ, ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ರೈತರಿಂದ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರ್ಕಾರದ ನೀತಿಗಳಿಂದಾಗಿ ನಬಾರ್ಡ್ ಸಾಲದ ಮೊತ್ತವನ್ನು ಕಡಿಮೆ ಮಾಡಲಾಗಿದೆ. ಇದು ಖಂಡನೀಯ. ರಾಜ್ಯ ಸರ್ಕಾರ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡದೇ ಮುಂದುವರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

ರೈತರಿಗೆ ನೀಡುವ ಸಾಲದ ಪ್ರಮಾಣ ಕಡಿತ ಮಾಡಿರುವ ನಬಾರ್ಡ್ ನೀತಿ ಖಂಡಿಸಿ ಹಾಗೂ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ ತಡೆಗಟ್ಟುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ (ಜ.29) ಆಯೋಜಿಸಿದ್ದ ರೈತರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ನಬಾರ್ಡ್‌ ರೈತರಿಗೆ ನೀಡುತ್ತಿದ್ದ ಸಾಲದ ಮೊತ್ತವನ್ನು ಕಡಿಮೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಸಾಲಿನಲ್ಲಿ ಕರ್ನಾಟಕಕ್ಕೆ ನೀಡುತ್ತಿದ್ದ ಸಾಲವನ್ನು ಶೇ.58ರಷ್ಟು ಕಡಿತಗೊಳಿಸಿದೆ. ಈ ಮೂಲಕ ಇಡೀ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿ ಕೃಷಿ ಕ್ಷೇತ್ರವನ್ನು ಸಂಪೂರ್ಣ ಕಾರ್ಪೋರೇಟ್‌ ಕಂಪನಿಗಳ ವಶಕ್ಕೆ ನೀಡಲು ಮೋದಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಹಕಾರಿ ಸಂಸ್ಥೆಗಳು ದೇಶದ ಬೆನ್ನೆಲುಬಾಗಿದೆ. ಗ್ರಾಮೀಣ ಪ್ರದೇಶದ ಆರ್ಥಿಕತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಹಾಲಿನ ಡೈರಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು. ಡಿಸಿಸಿ ಬ್ಯಾಂಕ್‌ಗಳ ಸಹಕಾರವೂ ಮಹತ್ವದ್ದಾಗಿದೆ. ಆದರೆ, ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನೂ ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜನರಿಗೆ ಸಮಸ್ಯೆ ಆಗುತ್ತಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಗ್ರಾಮೀಣ ಪ್ರದೇಶದ ಮಹಿಳೆಯರು, ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಎಸಗುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ಭೂ-ಸುಧಾರಣಾ ಕಾಯ್ದೆಯ ತಿದ್ದುಪಡಿಯನ್ನು ಹಿಂಪಡೆಯಬೇಕು. ಎಪಿಎಂಸಿ ಕಾಯ್ದೆಯನ್ನು ರೈತ ಸ್ನೇಹಿಯಾಗಿ ಮತ್ತಷ್ಟು ಬಲಪಡಿಸಬೇಕು. ಜಾನುವಾರು ಹತ್ಯೆ ನಿಷೇಧ ಸಂರಕ್ಷಣಾ ಕಾಯ್ದೆಯನ್ನು ರೈತರ ಹಿತದೃಷ್ಠಿಯಿಂದ ವಾಪಸ್ ಪಡೆಯಬೇಕು. ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಸಂಪರ್ಕ ಉಚಿತವಾಗಿರಬೇಕು. ಅಕ್ರಮ-ಸಕ್ರಮ ಹಾಗೂ ಹೊಸ ವಿದ್ಯುತ್ ಸಂಪರ್ಕಗಳಿಗೆ ರೈತರೇ ಪೂರ್ಣ ವೆಚ್ಚ ಭರಿಸುವ ನಿಯಮ ಜಾರಿಗೆ ಬಂದಿದೆ. ಅದನ್ನು ವಾಪಸ್ ಪಡೆದು ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ಸಂಪರ್ಕ ಕೊಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ರೈತ ಸಂಘದ ಸದಸ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ ಮಹದೇವಪ್ಪ ಅವರು ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಕೈಗೊಂಡ ನಿರ್ಣಯಗಳು 

  • ರೈತರಿಗೆ ಸಾಲ ಮಂಜೂರಾತಿಗೆ ಸಿಬಿಲ್ ಅಂಕಗಳನ್ನು ಮಾನದಂಡವಾಗಿ ಪರಿಗಣಿಸುವುದನ್ನು ಕೈಬಿಡಬೇಕು.
  • ಕೇಂದ್ರ ಸಚಿವರು ಹಾಗೂ ಸಂಸದರು ನಬಾರ್ಡ್ ಮೂಲಕ ನೀಡುತ್ತಿದ್ದ ಸಾಲದ ಮೊತ್ತವನ್ನು ಕಡಿತಗೊಳಿಸಿರುವುದರ ವಿರುದ್ದ ಸಂಸತ್‌ನಲ್ಲಿ ಧ್ವನಿ ಎತ್ತಬೇಕು.
  • ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿ, ಕಿರುಕುಳ ನಿಯಂತ್ರಿಸಲು ಕಾನೂನು ರೂಪಿಸಿದರೆ ಸಾಲದು. ರಾಜ್ಯ ಸರ್ಕಾರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಸಾಲ ವಸೂಲಿ ಹೆಸರಿನಲ್ಲಿ ನೀಡುವ ಕಿರುಕುಳ ತಪ್ಪಿಸಲು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಪ್ರಾರಂಭಿಸಬೇಕು.
  • ಋಣಮುಕ್ತ ಕಾಯ್ದೆಗೆ ಜೀವತುಂಬಿ ಕೇರಳ ಮಾದರಿಯಲ್ಲಿ ಜನಸ್ನೇಹಿ ಸರಳ ಸಾಲದ ನೀತಿಯನ್ನು ರೂಪಿಸಬೇಕು.

ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀಪಾಟಿಲ ಕಾರ್ಯಾಧ್ಯಕ್ಷ ಜಿ.ಎಂ ವೀರಸಂಗಯ್ಯ, ಎ.ಎಂ ಮಹೇಶ್ ಪ್ರಭು, ಪ್ರಧಾನ ಕಾರ್ಯದರ್ಶಿ ಎನ್‌.ವಸಂತಕುಮಾರ್, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಅಧ್ಯಕ್ಷ ನೂರ್ ಶ್ರೀಧರ್, ಹಿರಿಯ ಪತ್ರಕರ್ತ, ಹೋರಾಟಗಾರ ಇಂದೂಧರ ಹೊನ್ನಾಪುರ, ಶಾಸಕ ಬಿ.ಆರ್ ಪಾಟೀಲ್ ಸೇರಿದಂತೆ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಂತರ್ಜಲ ಮಟ್ಟ ಭಾರೀ ಕುಸಿತ; ಶೀಘ್ರದಲ್ಲೇ ನೀರಿನ ಬಿಕ್ಕಟ್ಟು ಎದುರಿಸಲಿದೆ ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....